ಎಸ್ಸೆನ್ ಸ್ಮಾರಕಕ್ಕೆ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಭೇಟಿ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಜು. 04 ನಗರದ ಸೀಬಾರದ ಬಳಿಯಲ್ಲಿನ ಎಸ್ಸೆನ್ ಸ್ಮಾರಕಕ್ಕೆ ಶುಕ್ರವಾರ ಶ್ರೀಶೈಲ ಪೀಠದ ಜಗದ್ಗುರು ಶ್ರೀ ಡಾ.ಚನ್ನಸಿದ್ದರಾಮ
ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಭೇಟಿ ನೀಡಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಶ್ರೀಗಳು ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪರವರ ತಮ್ಮ ಅಧಿಕಾರದ ಅವಧಿಯಲ್ಲಿ ಮಾಡಿದ ವಿವಿಧ
ಕಾರ್ಯಕ್ರಮಗಳ ಭಾವಚಿತ್ರವನ್ನು ವಿಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಎಸ್ಸೆನ್ ಸ್ಮಾರಕದ ಟ್ರಸ್ಟ್‍ನ ಗೌ.ಕಾರ್ಯದರ್ಶಿ ಹೆಚ್ ಹನುಮಂತಪ್ಪ, ಕೆ.ಇ.ಬಿ.ಷಣ್ಮುಖಪ್ಪ, ನಗರಾಭಿವೃದ್ದಿ
ಪ್ರಾಧಿಕಾರದ ಅಧ್ಯಕ್ಷ ಎಂ. ಕೆ.ತಾಜ್‍ಪೀರ್, ಪಂಚಮಸಾಲಿ ಸಮಾಜದ ಗುತ್ತಿನಾಡ್ ಪ್ರಕಾಶ್, ಹೇಮರೆಡ್ಡಿ ಮಲ್ಲಮ್ಮ ಸಮಾಜದ
ಕಾರ್ಯದರ್ಶಿ ಡಿ ಟಿ ಶಿವನಂಜಪ್ಪ, ಶಿವಶಿಂಪಿ ಸಮಾಜದ ಇ.ಎಸ್. ಜಯದೇವಮೂರ್ತಿ, ಸಾಹಿತಿ ನಿರಂಜನ ದೇವರಮನೆ,
ಬಸವರಾಜ ಶಾಸ್ತ್ರಿ, ವಿಶ್ವನಾಥ ಶಾಸ್ತ್ರಿ, ಪಂಚಪೀಠಗಳ ಪರಮಭಕ್ತ ಕೆ ಸಿರುದ್ರೇಶ್, ಗೌಳಿ ಸಮಾ ಜದ ಜಾಲಿಕಟ್ಟೆ ರುದ್ರಪ್ಪ,
ಲೋಕೇಶ್, ಬೃಹನ್ಮಠದ ಎಂ.ಜೆ.ರುದ್ರ ಮೂರ್ತಿ, ತವಂದಿ ರಾಜ, ಕೆ.ಸಿ. ಗುರು ಬಸವರಾಜು, ಸಿಬಾರದ ಸುತ್ತಮುತ್ತಲಿನ ಭಕ್ತರು
ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *