ಕನ್ನಡ ಭಾಷೆಯ ಬಗ್ಗೆ ಸದಭಿಮಾನವಿರಲಿ-ಎಂ.ನಾಸಿರುದ್ದೀನ್.

ನಗರದ ಡಯಟ್‌ನಲ್ಲಿ ಬುಧವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಚಿತ್ರದುರ್ಗ: ಸ್ವಾಭಿಮಾನಿ ಕನ್ನಡತನ ಮೈಗೂಡಿಸಿಕೊಳ್ಳಬೇಕು ಎಂದು ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು. ನಗರದ ಡಯಟ್‌ನಲ್ಲಿ ಬುಧವಾರ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾವು ಎಲ್ಲಾ ಭಾಷೆಗಳನ್ನು ಕಲಿಯಬೇಕು. ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. 2500 ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ, ಸಂಸ್ಕೃತಿ ಉಳಿಸುವಲ್ಲಿ ಕವಿಗಳ ಕೊಡುಗೆ ಅಪಾರವಾಗಿದೆ. ಭಾಷೆಯ ಬಗ್ಗೆ ದುರಭಿಮಾನ, ನಿರಭಿಮಾನ ಬೆಳೆಸಿಕೊಳ್ಳದೆ ಸದಭಿಮಾನ ಬೆಳೆಸಿಕೊಳ್ಳುವುದರ ಮೂಲಕ ನಿತ್ಯ ಜೀವನದಲ್ಲಿ ಕನ್ನಡವನ್ನು ಬಳಸುವ ಸಂಕಲ್ಪ ಮಾಡಬೇಕು ಎಂದರು. ಕನ್ನಡ ಕೇವಲ ನುಡಿಯಾಗಿರದೆ ಅದು ನಮ್ಮ ಹೃದಯದ ಭಾಷೆಯಾಗಿದೆ. ಭಾಷೆಯು ಬದುಕು, ಭಾವನೆ ರೂಪಿಸುವ ಜೀವನ ವಿಧಾನವಾಗಿದೆ ಎಂದು ತಿಳಿಸಿದರು.
ಹಿರಿಯ ಉಪನ್ಯಾಸಕರಾದ ಎಸ್.ಸಿ.ಪ್ರಸಾದ್, ಎಸ್.ಜ್ಞಾನೇಶ್ವರ, ಎಚ್.ಗಿರಿಜಾ, ಉಪನ್ಯಾಸಕರಾದ ಆರ್.ನಾಗರಾಜು, ಎಸ್.ಬಸವರಾಜು, ಕೆ.ಜಿ.ಪ್ರಶಾಂತ್, ಯು.ಸಿದ್ದೇಶಿ, ಸಿ.ಎಸ್.ಲೀಲಾವತಿ, ಎನ್.ರಾಘವೇಂದ್ರ, ಕನಕಮ್ಮ, ನಿತ್ಯಾನಂದ, ಎನ್. ಮಂಜುನಾಥ್, ತಾಂತ್ರಿಕ ಸಹಾಯಕರಾದ ಕೆ.ಆರ್.ಲೋಕೇಶ್, ಆರ್.ಲಿಂಗರಾಜು, ಕಚೇರಿ ಅಧೀಕ್ಷಕಿ ಗೀತಾ, ಪ್ರ.ದ.ಸಹಾಯಕ ಮಂಜುನಾಥ್, ದ್ವಿ.ದ.ಸಹಾಯಕ ಶಿವಕುಮಾರ್, ಪುಟಾಣಿ ಕೃತಿ ಎಲ್ ತೋಟದ್ ಮತ್ತಿತರರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1


Leave a Reply

Your email address will not be published. Required fields are marked *