ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಶರದ್, ಚಾಂದ್ರ ಮಾಸ : ಕಾರ್ತಿಕ, ಸೌರ ಮಾಸ : ತುಲಾ, ಮಹಾನಕ್ಷತ್ರ : ವಿಶಾಖಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಸಿದ್ಧ, ಕರಣ : ಭದ್ರ, ಸೂರ್ಯೋದಯ – 06 – 17 am, ಸೂರ್ಯಾಸ್ತ – 05 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:44 – 09:10, ಗುಳಿಕ ಕಾಲ 13:30 – 14:56, ಯಮಗಂಡ ಕಾಲ 10:37 – 12:13.
ಮೇಷ ರಾಶಿ: ಅನಾರೋಗ್ಯದಿಂದ ಹೊರಬಂದಿದ್ದು ಏನನ್ನೋ ಗೆದ್ದಂತಹ ಅನುಭವವಾಗಲಿದೆ. ನಿಮ್ಮ ಹೇಳಿಕೆಯನ್ನು ಸುಳ್ಳುಮಾಡಬಹುದು. ನಿಮ್ಮ ಮೇಲೆ ಯಾವುದಾದರೊಂದು ವಿಷಯ, ವ್ಯಕ್ತಿಗಳು ಪ್ರಭಾವ ಬೀರಬಹುದು. ಇಂದಿನ ಕಾರ್ಯಸಾಧನೆಗೆ ಹೆಚ್ಚಿನ ತಿರುಗಾಟವು ಬರಬಹುದು. ಹಿತಶತ್ರಗಳು ನಿಮ್ಮನ್ನು ಸಿಕ್ಕಿಹಾಕಿಸಬಹುದು. ಧಾರ್ಮಿಕ ಆಚರಣೆಯಿಂದ ಸಂಕಷ್ಟಗಳು ದೂರಾಗುವ ನಂಬಿಕೆ ಇರಲಿದೆ. ಕರ್ತವ್ಯಗಳನ್ನು ಮರೆಯುವ ಸಾಧ್ಯತೆ ಇದೆ. ಸರ್ಕಾರದ ಕೆಲಸವನ್ನು ಪ್ರಭಾವಿ ವ್ಯಕ್ತಿಗಳ ಮೂಲಕ ಮುನ್ನಡೆಸುವಿರಿ. ಮಾತಿನಿಂದ ನಿಮಗೆ ಕಷ್ಟವಾದೀತು. ಖರ್ಚಿನ ವಿಚಾರದಲ್ಲಿ ಗೊಂದಲವಾಗಬಹುದು. ಪ್ರಾಮುಖ್ಯ ವಿಚಾರವನ್ನು ನೀವು ನೆನಪಿನಲ್ಲಿ ಇಟ್ಟುಕೊಳ್ಳಲೇಬೇಕು. ಇಂದು ಕೋಪವು ಹೆಚ್ಚಾಗಬಹುದು. ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಮನಸ್ಸು ಬರುವುದು. ಸಂಗಾತಿಯನ್ನು ಪ್ರೀತಿಯಿಂದ ಗೆಲ್ಲಬೇಕಾದೀತು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ.
ವೃಷಭ ರಾಶಿ: ಪ್ರೀತಿಯನ್ನು ತೋರ್ಪಡಿಸುವ ರೀತಿ ಬೇರೆ ರೀತಿಯದ್ದು. ತೋರಿಕೆಯ ಪ್ರೀತಿ ನಿಮಗೆ ಹಿಂದಿರುಗಿ ಬರುತ್ತದೆ. ಯಾವುದನ್ನು ನಿಮ್ಮದೇ ಎಂದುಕೊಂಡಿದ್ದೀರೋ ಅದು ಉಳಿಯದು. ಅಧಿಕಾರಕ್ಕೆ ಸಂಬಂಧಿಸಿದಂತೆ ಮಿತ್ರನಿಂದ ನಿಮಗೆ ವಂಚನೆಯಾಗಿರುವುದು ಗೊತ್ತಾಗುವುದು. ಕಳೆದುದ್ದು ಸಣ್ಣ ವಸ್ತುವೇ ಆದರೂ ಬಹಳ ಬೇಸರಗೊಳ್ಳುವಿರಿ. ಮನೆಯ ಕೆಲಸದಲ್ಲಿ ಸಮಯವನ್ನು ಕಳೆಯುವಿರಿ. ನಿಮ್ಮ ಬೆಳವಣಿಗೆ ಸಾಮಾನ್ಯದ್ದಾಗಿರುತ್ತದೆ. ಮಕ್ಕಳಿಗೆ ಉದ್ಯೋಗವನ್ನು ಕೊಡಿಸಲು ಕೆಲವರನ್ನು ಭೇಟಿಯಾಗುವಿರಿ. ಅಧಿಕಾರವು ನೀವೇ ಸಾಕೆನಿಸುವಂತೆ ಮಾಡಲಿದೆ. ನಿರುದ್ಯೋಗದಿಂದ ಮನೆಯಲ್ಲಿಯೇ ಕುಳಿತು ಬೇಸರವಾಗುವುದು. ನಿಮ್ಮ ಬಗ್ಗೆ ಸಕಾರಾತ್ಮಕ ಮಾತುಗಳನ್ನು ಆಡುವರು. ಹಣದ ಹರಿವು ಇಂದು ಸಾಮಾನ್ಯವಾಗಿರುವುದು. ಸಂಗಾತಿಯ ಜೊತೆ ಸಣ್ಣ ವಾಗ್ವಾದವು ನಡೆಯಬಹುದು. ಸ್ವಂತಿಕೆಯನ್ನು ಬಿಟ್ಟು ಬೇಡುವುದು ಬೇಡ. ಸಹವಾಸದಿಂದ ನಿಮ್ಮ ಸ್ವಭಾವವು ಗೊತ್ತಾಗದೇ ಬದಲಾಗುವುದು.
ಮಿಥುನ ರಾಶಿ: ಭೂಮಿಯ ಕಲಹವನ್ನು ಸಂಧಾನದಿಂದ ಮುಕ್ತಾಯವಾಗಲಿದೆ. ನಿಮ್ಮನ್ನು ರಕ್ಷಿಸಿಕೊಳ್ಳಲು ಬೇರೆ ತಂತ್ರಗಳನ್ನು ಮಾಡುವಿರಿ. ನಿಮ್ಮ ಮಾತನ್ನು ಯಾರೂ ಕೇಳರು ಎಂದು ಬೇಸರವಾಗುವುದು. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಳ್ಳುವ ಸಂಭವವಿದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೇ ಸರಿಯಾಗಿ ಗೊತ್ತಿಲ್ಲದೇ ಹೋಗಬಹುದು. ನಿಮ್ಮ ಜವಾಬ್ದಾರಿಯು ತಾನಾಗಿಯೇ ತಪ್ಪಬಹುದು. ಬಂಗಾರದ ಮೇಲೆ ಹೂಡಿಕೆ ಮಾಡುವಿರಿ. ತಾಯಿಯ ಕಡೆಯಿಂದ ನಿಮಗೆ ಬೇಕಾದ ಸಹಾಯವನ್ನು ನಿರೀಕ್ಷಿಸಬಹುದು. ಆತುರದ ಪ್ರಯಾಣವನ್ನು ಮಾಡುವುದು ಬೇಡ. ನಿಮಗೆ ಅನೇಕ ಕಡೆಗಳಿಂದ ಶಿಪಾರಸ್ಸು ಕರೆ ಬರಲಿದೆ. ಯಂತ್ರೋಪಕರಣಗಳ ಮಾರಾಟದಿಂದ ನಷ್ಟವಾಗುವ ಸಾಧ್ಯತೆ ಇದೆ. ಬಂದ ಅವಕಾಶಗಳನ್ನು ಕೈ ಬಿಡುವಿರಿ. ಮೇಲ್ನೋಟಕ್ಕೆ ಸರಿಕಂಡರೂ ನಿಮಗೆ ನಂಬಿಕೆ ಬರದು. ನಿಮ್ಮ ಮಾತಿಗೆ ಯಾರೂ ಬೆಲೆ ಕೊಡದೇ ಇರುವುದು ಬೇಸರವಾದೀತು. ಇಂದು ಯಾವ ಕಾರ್ಯಕ್ಕೂ ನಿಮಗೆ ಶ್ರದ್ಧೆಯು ಇಲ್ಲವಾಗುವುದು. ಮನೆಗೆ ಅತಿಥಿಗಳ ಆಗಮನವಾಗಲಿದೆ.
ಕರ್ಕಾಟಕ ರಾಶಿ: ಸಮಾರಂಭದ ತಯಾರಿಯಲ್ಲಿ ನೀವಿರುವಿರಿ. ನಿಮ್ಮನ್ನು ಯಾರಾದರೂ ಮಾತಿನಲ್ಲಿ ಸಿಕ್ಕಿಹಾಕಿಸಬಹುದು. ಇಂದು ವೈಯಕ್ತಿಕ ಕಾರಣದಿಂದ ನಿಮ್ಮ ಉದ್ಯೋಗವನ್ನು ಬದಲಿಸಬೇಕಾಗುವುದು. ಅಪರಿಚಿತರ ಮಾತನ್ನು ನೀವು ನಂಬುವಿರಿ. ಪರೀಕ್ಷೆಯ ಸಿದ್ಧತೆಯಲ್ಲಿ ವಿದ್ಯಾರ್ಥಿಗಳಿಗೆ ಗೊಂದಲವಾಗಬಹುದು. ಬಂಧುಗಳ ವಿಯೋಗವೂ ಆಗಬಹುದು. ಒಪ್ಪಂದಕ್ಕೆ ಮೊದಲು ಸರಿಯಾದ ತೀರ್ಮಾನ, ವಿಚಾರಣೆ ಮಾಡಿಕೊಳ್ಳಿ. ಆಮದು ವ್ಯವಹಾರವು ಇತರ ಅಸೂಯೆಗೆ ಕಾರಣವಾಗಲಿದೆ. ಸ್ನೇಹಿತರು ಕೇಳಿದರೂ ಸಹಾಯ ಮಾಡದೇ ಇರುವುದು ನಿಮಗೆ ಸಂದೇಹ ಬರುವುದು. ಪ್ರೇಮವು ನೀವಂದುಕೊಂಡಂತೆ ಮುಕ್ತಾಯವಾದುದ್ದು ನಿಮಗೆ ಖುಷಿಕೊಡುವುದು. ಅಂದುಕೊಂಡಂತೆ ಆಗಿದ್ದಕ್ಕೆ ಸಂತೋಷವು ಇರಲಿದೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುವಿರಿ. ಮುಸುಕಿನ ಗುದ್ದಾಟದಿಂದ ಮೈಕೈ ನೋವಾಗಬಹುದು ಅಷ್ಟೇ. ಲೋಭದಿಂದ ಇರುವ ಸಂಪತ್ತನ್ನೂ ಕಳೆದುಕೊಳ್ಳಬೇಕಾಗಬಹುದು. ನಿಮ್ಮ ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ.
ಸಿಂಹ ರಾಶಿ: ಅನ್ವೇಷಕ ಬುದ್ಧಿಗೆ ಇಂದು ಯೋಗ್ಯವಾದ ಕೆಲಸವೇ ಸಿಗಲಿದೆ. ಕೃಷಿಯಲ್ಲಿ ನಿಮಗೆ ತಾಳ್ಮೆ ಅತ್ಯಂತ ಅವಶ್ಯಕ. ಪಾಲುದಾರಿಕೆಯ ಭಿನ್ನಾಭಿಪ್ರಾಯವನ್ನು ನೀವೇ ಮೊದಲು ಮಾತನಾಡಿ ಸರಿ ಮಾಡಿಕೊಂಡರೆ ಮುಂದುವರಿಯುವುದು. ವಿವಿಧ ಮೂಲಗಳಿಂದ ನಿಮಗೆ ಆದಾಯವು ಬರಲಿದ್ದು ಹೂಡಿಯ ಕಡೆ ನಿಮ್ಮ ಗಮನ ಇರುವುದು. ಪ್ರಭಾವಿಗಳ ಸಹಕಾರದಿಂದ ಉತ್ತಮ ಉದ್ಯೋಗ ಲಭಿಸುವುದು. ನಿಮ್ಮ ಆಲಸ್ಯವನ್ನು ಹಿತಶತ್ರುಗಳು ಅವಕಾಶವಾಗಿ ತೆಗೆದುಕೊಳ್ಳುವರು. ನಿಮ್ಮ ಹೂಡಿಕೆಯನ್ನು ಜಗಜ್ಜಾಹಿರ ಮಾಡಿಕೊಳ್ಳುವ ಸನ್ನಿವೇಶ ಬರಲಿದೆ. ನಿಮ್ಮ ಭಾವನೆಗಳನ್ನು ಇನ್ನೊಬ್ಬರ ಬಳಿ ಹೇಳುಕೊಳ್ಳುವಿರಿ. ಭೂಮಿಯಿಂದ ಇಂದು ಸಂಪತ್ತು ಸಿಗಬಹುದು. ಹಿರಿಯರ ಮಾತುಗಳು ಪೂರ್ಣವಾಗಿ ಇಷ್ಟವಾಗದು. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸುವುದು ಮುಖ್ಯವಾದೀತು. ಯಾವುದನ್ನೇ ಆದರೂ ಚಿಂತಿಸಿ ಮಾತನಾಡಿ. ಹೊಸ ಮನೆಯನ್ನು ಕಟ್ಟುವ ಯೋಚನೆಯನ್ನು ಕಾರಣಾಂತೆಗಳಿಂದ ನಿಲ್ಲಿಸುವಿರಿ.
ಕನ್ಯಾ ರಾಶಿ: ಆಹ್ವಾನವಿಲ್ಲದ ಕಡೆ ಅನಿರೀಕ್ಷಿತವಾಗಿ ಹೋಗುವಿರಿ. ಇಂದಿನ ಸಣ್ಣ ಕೆಲಸವನ್ನು ಮಾಡಲು ಅಧಿಕ ಸಮಯವನ್ನು ತೆಗೆದುಕೊಳ್ಳುವಿರಿ. ನಿಮ್ಮ ದೌರ್ಬಲ್ಯವು ಗೌರವವನ್ನು ಹರಣಮಾಡಬಹುದು. ದಾಂಪತ್ಯದಲ್ಲಿ ಸುಖವನ್ನು ಕಾಣುವಿರಿ. ತಂದೆ ತಾಯಿಯರ ಸೇವೆಯನ್ನು ಮಾಡುವಿರಿ. ಮನೆಯ ಕೆಲಸವು ಆಗಿಲ್ಲವೆಂದು ಕೋಪವು ಇರಲಿದ್ದು ಅದನ್ನು ಪ್ರಕಟಿಸುವಿರಿ. ನಿಮ್ಮ ಬಗ್ಗೆ ನಕಾರಾತ್ಮಕ ಹೇಳಿಕೆಯನ್ನು ಸಹಿಸಲಾರಿರಿ. ನಿಮ್ಮ ರಕ್ಷಣೆಯ ಬಗ್ಗೆ ಕಾಳಜಿ ಇರಲಿ. ನಿಮ್ಮ ಪ್ರಾಮಾಣಿಕತೆಯು ಇತರರಿಗೆ ಇಷ್ಟವಾಗುವುದು. ನಿಮ್ಮ ಹಿತಶತ್ರುಗಳಿಂದ ತೊಂದರೆ ಬರುವ ಸಾಧ್ಯತೆ ಇದ್ದು, ಅವರನ್ನು ಸರಿಮಾಡಿಕೊಳ್ಳಿ. ಶೀಘ್ರ ಹಣಸಂಪಾದನೆಗೆ ಸಲಹೆ ಪಡೆಯುವಿರಿ. ಉದ್ಯೋಗವನ್ನು ಕೊಡಿಸಲು ನಿಮಗೆ ಹಣವನ್ನು ಕೊಡಬಹುದು. ಸತ್ಯವನ್ನು ಹೇಳುವ ಮನಸ್ಸಿದ್ದರೂ ಬೇರೆಯವರ ಒತ್ತಡದಿಂದಾಗಿ ಹೇಳದೇ ಮುಚ್ಚಿಡುವಿರಿ. ಮಕ್ಕಳ ವಿವಾಹದಿಂದ ಚಿಂತೆ ದೂರವಾಗುವುದು. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾದೀತು. ಮನೆಯಿಂದ ಹೊರ ನಡೆಯುವ ಪ್ರಸಂಗವು ಬರಬಹುದು. .
ತುಲಾ ರಾಶಿ: ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅಪರಿಚಿತರ ಧನಸಹಾಯ ಸಿಗಲಿದೆ. ಅಂದುಕೊಂಡಷ್ಟು ವೇಗವಾಗಿ ಯಾವುದೂ ಆಗುವುದಿಲ್ಲ ಎಂಬುದು ಗೊತ್ತಿರಲಿ. ಇಂದು ಸಂಗಾತಿಯ ಜೊತೆಗಿನ ಬಾಂಧವ್ಯವನ್ನು ಗಟ್ಟಿ ಮಾಡಿಕೊಳ್ಳುವಿರಿ. ಬಹಳ ದಿನಗಳಿಂದ ಒತ್ತಡದಲ್ಲಿ ಇದ್ದ ಕಾರಣ ಇಂದು ಎಲ್ಲವನ್ನೂ ಮರೆಯು ದಿನದ ಹೆಚ್ಚಿನ ಸಮಯವನ್ನು ವಿಶ್ರಾಂತಿಯಲ್ಲಿಯೇ ಕಳೆಯುವಿರಿ. ನೀವು ನಿರಂತರ ಕಾರ್ಯವನ್ನು ಬದಲಿಸುತ್ತಿರುವುದು ನಿಮ್ಮ ಅಭ್ಯಾಸವಾಗುವುದು. ದಾನದಿಂದ ಪುಣ್ಯವನ್ನು ಗಳಿಸುವಿರಿ. ನಿಮ್ಮ ಮಕ್ಕಳ ಮನೋಭಾವವನ್ನು ಅವರಿಗೆ ಇಷ್ಟವಾದುದನ್ನು ಮಾಡುವಿರಿ. ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚಿರಲಿ. ಅಂತರವನ್ನು ಕಡಿದುಕೊಳ್ಳಲು ಪ್ರಯತರನಿಸುವಿರಿ. ಸ್ತ್ರೀಯರಿಂದ ಸಹಾಯ ಪಡೆದರೂ ನೋಡುಗರು ಅದನ್ನು ಅಪಾರ್ಥ ಮಾಡಿಕೊಳ್ಳಬಹುದು. ಭೇಟಿಯನ್ನು ಮಾಡಲು ಕಾದು ಸಮಯವನ್ನು ವ್ಯರ್ಥಮಾಡಿಕೊಳ್ಳುವಿರಿ. ತಾಳ್ಮೆಯಿಂದ ವರ್ತಿಸಲು ನಿಮ್ಮವರಿಂದ ಸಲಹೆ ಸಿಗುವುದು.
ವೃಶ್ಚಿಕ ರಾಶಿ: ಕೊನೆಯ ಕ್ಷಣದವರೆಗೂ ನಿಮ್ಮ ಹೋರಾಟ ಪ್ರಬಲವಾಗಿಯೇ ಇರುವುದು. ಸ್ವಯಂ ಪ್ರೇರಣೆಯಿಂದ ಉದ್ಯಮದಲ್ಲಿ ಹೊಸ ಬದಲಾವಣೆಗಳನ್ನು ತರುವಿರಿ. ಇಂದು ನಿಮಗೆ ಸಿಗುವ ಪ್ರೀತಿ ಹಂಚಿಕೆಯಾಗಿ ನಿಮಗೆ ಕಷ್ಟವಾಗುವುದು. ಆರ್ಥಿಕ ವಿಚಾರದಲ್ಲಿ ಸಲ್ಲದ ಅಪವಾದಗಳು ಬರಬಹುದು. ಆಪ್ತರನ್ನು ಅನಿರೀಕ್ಷಿತವಾಗಿ ಕಳೆದುಕೊಳ್ಳಬೇಕಾಗಬಹುದು. ಸಣ್ಣ ಪುಟ್ಟ ವಿಷಯಕ್ಕೆ ಸ್ನೇಹಿತರ ಜೊತೆಗಿನ ಸಂಬಂಧವು ಹಾಳಾಗಬಹುದು. ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡು ಕೈ ಬಿಡಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು ಯೋಗ್ಯ ಚಿಕಿತ್ಸೆಯನ್ನು ಕೊಡುವಿರಿ. ಆರ್ಥಿಕ ವಿಚಾರದಲ್ಲಿ ಸರಿಯಾದ ಹೊಂದಾಣಿಕೆ ಸಿಗದೇ ಕಷ್ಟವಾಗಬಹುದು. ವಿವಾಹೇತರ ಸಂಬಂಧದಿಂದ ನಿಮಗೆ ಬೇಸರವಾಗುವುದು. ದೂರದಲ್ಲಿರುವ ವ್ಯಕ್ತಿಗಳು ದೂರದಿಂದಷ್ಟೇ ಇರುವುದು ಉತ್ತಮ. ವ್ಯವಹಾರಕ್ಕೆ ಇಂದು ದೂರಪ್ರಯಾಣ ಮಾಡುವಿರಿ. ನಿಮ್ಮ ಮಾತಿನಿಂದ ಯಾವ ಲಾಭವೂ ಆಗದು ಎಂಬುದು ಇಂದು ತಿಳಿಯುವುದು. ಸ್ವಂತ ಉದ್ಯೋಗವನ್ನು ಮಾಡಬೇಕು ಎಂದು ಅನ್ನಿಸುವುದು. ನಿಮ್ಮನ್ನೇ ಒಮ್ಮೆ ನೋಡಿಕೊಳ್ಳಿ.
ಧನು ರಾಶಿ: ಹಲವು ಘಟನೆಗಳು ನಿಮ್ಮ ಅಂತಶ್ಶಕ್ತಿಯನ್ನು ನಿಮಗೇ ತಿಳಿಸಿಕೊಡುತ್ತವೆ. ನಿಮ್ಮ ಖರೀದಿಗಳು ಆದಾಯವನ್ನು ಅವಲಂಬಿಸಿ ಇರುವುದು. ಇಂದು ನೀವು ಲಾಭವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕೆಲಸ ಮಾಡಿದರೆ ನಿಮಗೆ ತೃಪ್ತಿ ಸಿಗದು. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿಯು ಇರಲಿದ್ದು ವಿದ್ಯಾಭ್ಯಾಸಕ್ಕೆ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವಿರಿ. ಬಲವುಳ್ಳವರ ಬಳಿ ವಿರೋಧ ಬೇಡ. ಇಂದಿನ ನಿಮ್ಮ ಕೆಲಸವು ನಿಮಗೇ ಇಷ್ಟವಾಗದು. ಕೆಲವು ವಿಷಯಕ್ಕೆ ಕುಟುಂಬದಿಂದ ವಿರೋಧವಿರುವುದು. ಸ್ನೇಹಿತರ ಜೊತೆ ಸುತ್ತಾಟ ಮತ್ತು ಉತ್ತಮ ಭೋಜನವನ್ನು ಮಾಡುವಿರಿ. ನಿಮ್ಮದು ನಿಮಗೇ ಸಿಕ್ಕರೂ ಸಂತೃಪ್ತಿ ಇರದು. ಹಠದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಎಲ್ಲವನ್ನೂ ನಕಾರಾತ್ಮಕವಾಗಿಯೇ ನೋಡುವಿರಿ. ಸಂಗಾತಿಯ ಪ್ರೀತಿಯು ಕಡಿಮೆ ಆದೀತು. ಸ್ವಂತ ಕೆಲಸಕ್ಕೆ ಸಮಯವು ಸಿಗದೇ ಎಲ್ಲವನ್ನೂ ಉಳಿಸಿಕೊಳ್ಳುವಿರಿ.
ಮಕರ ರಾಶಿ: ವಿಚಾರ ಮಂಡನೆಯನ್ನು ಎಂತಹವರೂ ಒಪ್ಪುವಂತೆ ಮಾಡುವಿರಿ. ತಾಂತ್ರಿಕತೆಯನ್ನು ರೂಢಿಸಿಕೊಳ್ಳುವುದು ನಿಮಗೆ ಇಷ್ಟವಾದ ಸಂಗತಿ. ಇಂದು ನೀವು ಸಂಗಾತಿಯ ಮೇಲೆ ಕೋಪವನ್ನು ತೀರಿಸಿಕೊಂಡರೂ ಆ ಕಡೆಯಿಂದ ಯಾವ ಪ್ರತಿಕ್ರಿಯೆ ಬಾರದು. ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ. ಇನ್ನೊಬ್ಬರು ಕೊಡುವ ತೊಂದರೆಯಿಂದ ನೀವು ಬೇಸತ್ತುಹೋಗಬಹುದು. ಮೃದುತ್ವವನ್ನು ಕೆಲವು ಸಂದರ್ಭಗಳಲ್ಲಿ ಕಳೆದುಕೊಳ್ಳಬೇಕಾಗಬಹುದು. ಹೂಡಿಕೆ ಮಾಡಲು ಯಾರಿಂದಲಾದರೂ ಒತ್ತಡವು ಬರಬಹುದು. ಈ ದಿನವನ್ನು ಮನೆಯ ಕೆಲಸದ ಜೊತೆ ಕಳೆಯುವಿರಿ. ಎಂದೋ ಆಗಬೇಕಿದ್ದ ಕೆಲಸಗಳು ಇಂದು ಪೂರ್ಣವಾಗುವುದು. ನೀವೇ ಕೈ ಚೆಲ್ಲಿ ಕುಳಿತರೆ ಮತ್ತಿನ್ನಾರು ಗತಿ. ಹಗುರವಾಗಿ ಯಾರ ಬಗ್ಗೆಯೂ ಮಾತನಾಡುವುದು ಬೇಡ. ನಿಮ್ಮ ವ್ಯಕ್ತಿತ್ವದ ಪೂರ್ಣಪರಿಚಯವು ಆಗುವುದು. ಆತ್ಮವಂಚನೆಯೇ ನಿಮ್ಮನ್ನು ಬಹಳ ಕಾಡುವುದು. ಇಂದೂ ಕೂಡ ಮನೆಯಿಂದ ಕಛೇರಿಯ ಕೆಲಸವನ್ನು ಮಾಡುವಿರಿ. ಎಲ್ಲವೂ ಇದ್ದರೂ ಅದನ್ನು ಬಳಸುವ ಕಲೆಯೂ ಗೊತ್ತಿರಬೇಕಾಗುವುದು.
ಕುಂಭ ರಾಶಿ: ಪೂರ್ವ ಸಿದ್ಧತೆ ಮಾಡಿಕೊಳ್ಳದೇ ಸಾರ್ವಜನಿಕ ಸಮಾರಂಭಗಳಿಗೆ ಹೋಗುವುದು ಬೇಡ. ಸ್ವತಂತ್ರವಾಗಿ ಸಾಧಿಸುವ ಇಚ್ಛೆ ನಿಮ್ಮದಾಗಲಿದೆ. ಯಾರನ್ನೂ ನೀವು ಒಮ್ಮೆಲೆ ನಂಬುವುದು ಕಷ್ಟವಾದರೂ ಇಂದು ನಂಬಿಕೆ ಅನಿವಾರ್ಯ ಆದೀತು. ಮನೆಯನ್ನು ಬಿಟ್ಟು ಹೋಗಲು ಚೋರ ಭಯವು ಕಾಡಬಹುದು. ಸ್ನೇಹಿತರು ನಿಮ್ಮ ನಿರ್ಲಕ್ಷ್ಯದ ಕಾರಣದಿಂದ ದೂರಾಗಬಹುದು. ಕೃತಜ್ಞತೆಯನ್ನೂ ತೋರದಷ್ಟು ನಿಷ್ಕರುಣೆ ಇರುವುದು. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ನಿಮ್ಮ ಕೈ ಸೇರಿದ್ದು ಮಾತ್ರ ನಿಮ್ಮದು ಎಂಬ ಭವವಿರಲಿ. ನಿಮ್ಮಲ್ಲಿ ಎಲ್ಲ ದಾಖಲೆಗಳೂ ಇರುವಂತೆ ಮಾಡಿಕೊಳ್ಳುವಿರಿ. ಬಾಯಾರಿಕೆಯು ಹೆಚ್ಚಾದೀತು. ನಿಮ್ಮ ಸ್ವಭಾವದಲ್ಲಿ ಬದಲಾವಣೆ ಇರಲಿದ್ದು ಇತರರಿಗೆ ಇದು ಅನಿರೀಕ್ಷಿತವೂ ಆಗಬಹುದು. ಪ್ರಣಯದಲ್ಲಿ ಇಂದು ಅತಿಯಾದ ಆಸಕ್ತಿಯು ಇರುವುದು. ಕುಟುಂಬವು ನಿಮ್ಮ ವಿವಾಹದ ಸಂತೋಷದಲ್ಲಿ ಇರಲಿದೆ. ಕೃತಜ್ಞತೆಯಿಂದ ನಿಮ್ಮ ವ್ಯವಹಾರವು ಇರಲಿ. ಸಂಪತ್ತಿಗಾಗಿ ನೀವು ಬಹಳ ಶ್ರಮಪಡುವಿರಿ. ಆರ್ಥಿಕತೆಯ ಅಭಿವೃದ್ಧಿಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗುವುದು.
ಮೀನ ರಾಶಿ: ಮಕ್ಕಳ ವೈವಾಹಿಕ ಜೀವನದಿಂದ ನಿಮ್ಮ ಮನ ನೋಯುವುದು. ಬದುಕಿನಲ್ಲಿ ಯಾವ ಪಾತ್ರ ಅತಿಮುಖ್ಯ ಎನ್ನುವುದು ತಿಳಿಯಬಹುದು. ಮನಸ್ಸಿನಲ್ಲಿ ನಾನಾ ಬಗೆಯ ಗೊಂದಲವು ಇರುವುದು. ವಿದೇಶ ಪ್ರಯಾಣಕ್ಕೆ ಮಿತ್ರನ ಸಹಕಾರವು ಸಿಗಬಹುದು. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿಯು ಬರಬಹುದು. ನಿಮ್ಮ ಸ್ಥಿರಮತಿಯಿಂದ ಕಷ್ಟದ ಸಂದರ್ಭವನ್ನು ಹಿಡಿತಕ್ಕೆ ತರುವಿರಿ. ಸಂಗಾತಿಗೆ ಉಡುಗೊರೆಯನ್ನು ನೀಡಿ ಕೋಪವು ಕಡಿಮೆ ಮಾಡುವಿರಿ. ಹಿರಿಯರ ನೈತಿಕ ಬೆಂಬಲವು ಆತ್ಮವಿಶ್ವಾಸವನ್ನು ಹೆಚ್ಚು ಮಾಡುವುದು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಬಯಸುವಿರಿ. ಇಂದು ಮೌನವಾಗಿ ಇರುವುದು ಹಿತವೆನಿಸುವುದು. ಇಂದು ನಿಮ್ಮ ಉತ್ಸಾಹಕ್ಕೆ ಯಾರಿಂದಲಾದರೂ ತೊಂದರೆಯಾಗಬಹುದು. ಆಪ್ತರ ಜೊತೆಗಿದ್ದು ವ್ಯವಹಾರದ ಚಾತುರ್ಯವನ್ನು ನೀವು ಇಂದು ಅರಿತುಕೊಳ್ಳುವಿರಿ. ನಿಮ್ಮ ವಸ್ತುವೇ ಆದರೂ ಅದರ ಮೇಲೆ ಅಧಿಕಾರ ಚಲಾಯಿಸಲಾಗದು.
Views: 41