Horoscope Today 13 June: ಈ ರಾಶಿಯವರಿಗೆ ಪರಿಹಾರ ಕಂಡುಕೊಳ್ಳುವುದು ಗೊತ್ತಾಗದು.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ವೃಷಭ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ : ಪರಿಘ, ಕರಣ: ತೈತಿಲ ಸೂರ್ಯೋದಯ – 06 : 04 am, ಸೂರ್ಯಾಸ್ತ – 07 : 00 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ10:56 – 12:33, ಯಮಘಂಡ ಕಾಲ 15:47 – 17:24, ಗುಳಿಕ ಕಾಲ 07:42 – 09:19

ಮೇಷ ರಾಶಿ: ನಿಮ್ಮ ಬಗೆಗಿನ ಅಭಿಮಾನ ಇಮ್ಮಡಿಸಬಹುದು. ಇಂದಿನ‌ ನಿಮ್ಮ ಅವಸರವಸರದ ಕಾರ್ಯಗಳಿಂದ ಜೊತೆಗಾರರಿಗೆ ಕಷ್ಟವಾಗುವುದು. ನಿಮ್ಮ ಉದ್ಯೋಗವು ಅನ್ಯರ ಪಿತೂರಿಯಿಂದ ನಷ್ಟವಾಗಬಹುದು. ಧಾರ್ಮಿಕಶ್ರದ್ಧೆಯಿಂದ ನಿಮಗೆ ಅನುಕೂಲವಿದ್ದರೂ ಅದನ್ನು ಮಾಡಲು ನಿಮಗೆ ಶ್ರದ್ಧೆ, ಭಕ್ತಿಯ ಕೊರತೆ ಹೆಚ್ಚಿರಲಿದೆ‌. ಅತಿಯಾದ ಕಾಯುವಿಕೆಯಿಂದ ನಿಮ್ಮ ಗೌರವವೇ ಕಡಿಮೆಯಾಗುವುದು. ಮನೆಯಲ್ಲಿ ಸಾಕಷ್ಟು ಚಟುವಟಿಕೆಗಳಿದ್ದು, ದಿನವನ್ನು ಅತಿ ಉತ್ಸಾಹದಿಂದ ಮತ್ತು ಮುದದಿಂದ ಕೂಡಿರುತ್ತದೆ. ನಿಮ್ಮ ಕೆಲಸಗಳನ್ನು ನೀವೇ ಹೊಗಳುತ್ತ ಅನ್ಯರ ಮೂದಲಿಕೆಗೆ ಸಿಕ್ಕುವಿರಿ. ದೌರ್ಬಲ್ಯವನ್ನು ಹೇಳಿಕೊಂಡು ಪರಿಹಾರ ಕಂಡುಕೊಳ್ಳುವುದು ಉತ್ತಮ. ಕಾರ್ಯವಿಲ್ಲದೇ ಎಲ್ಲಿಗೂ ಹೋಗಬೇಡಿ. ಪ್ರೇಮವು ನಿಮಗೆ ನಿಮ್ಮನ್ನು ಉತ್ಸಾಹದಿಂದ ಇಡುವುದು. ಇನ್ನೊಬ್ಬರಿಗೆ ನೀವು ಸಹಾಯವನ್ನು ಮಾಡಲು ಹೆಚ್ಚು ಇಷ್ಟಪಡುವಿರಿ. ವಿಳಂಬವಾಗಿ ಬರುತ್ತದೆ ಎಂದುಕೊಂಡ ಹಣವು ಬೇಗ ನಿಮಗೆ ಬೇಗ ಸಿಗಬಹುದು. ನಿಮ್ಮ ನಿರ್ಧಾರವು ತೂಗುಕತ್ತಿಯಂತೆ ಇರಲಿದೆ. ನಿಮ್ಮನ್ನು ನೀವೇ ಒತ್ತಡದಲ್ಲಿ ಸಿಲುಕಿಸಿಕೊಳ್ಳುವಿರಿ.

ವೃಷಭ ರಾಶಿ: ಪರರ ನೋವಿಗೆ ಸ್ಪಂದನೆಯಾದರೂ ಇರಲಿ. ಮಾಡಿಕೊಂಡ ಹೊಂದಾಣಿಕೆಯಿಂದ ನಿಮಗೆ ಬೇಸರವಾಗುವುದು. ಹೊಸತನ್ನು ಹುಡುಕಲು ಆರಂಭಿಸುವಿರಿ. ವೈಯಕ್ತಿಕ ವಿಚಾರಕ್ಕೆ ಅನ್ಯರು ಪ್ರವೇಶ ಮಾಡುವುದು ಸರಿಕಾಣದು. ಇಂದು ನಿಮಗೆ ಹಣಕಾಸಿನ ಹರಿವು ಹೆಚ್ಚಾಗುವುದರ ಜೊತೆಗೆ ಆತಂಕವೂ ಇರುವುದು. ನಿಮಗೆ ಬೇಡದ್ದನ್ನು ಕೊಟ್ಟು ದಾನಶೂರತೆಯನ್ನು ಮೆರೆಯುವಿರಿ. ಜನಪ್ರಿಯತೆ ಸ್ಥಿರವಾಗಿ ಬೆಳೆಯುತ್ತಿದೆ. ಪ್ರೀತಿಪಾತ್ರರು ನಿಮ್ಮ ದಿನವನ್ನು ಸಂತೋಷ ಮತ್ತು ನಗುವಿನಿಂದ ತುಂಬಿಸಬಹುದು. ವಿಶ್ರಾಂತಿ ಪಡೆಯಲು ನಿಮಗೆ ದೂರ ಪ್ರಯಾಣ ಮಾಡಬೇಕಾಗಬಹುದು. ದುಶ್ಚಟಗಳು ನಿಮ್ಮ ವ್ಯಕ್ತಿತ್ವವನ್ನು ಹಾಳು ಮಾಡಿ ಅಗೌರವವನ್ನು ತರಬಹುದು. ತನ್ನದು ಇಷ್ಟೇ ಸಾಮರ್ಥ್ಯ ಎಂಬ ತೀರ್ಮಾನಕ್ಕೆ ಬರುವಿರಿ. ಪತ್ನಿಯ ಮನಃಸ್ಥಿತಿಯನ್ನು ಅರಿತು ಇಂದು ಅವರೊಡನೆ ವ್ಯವಹರಿಸುವುದು ಒಳ್ಳೆಯದು. ನಿಮ್ಮ ಮಾತುಗಳು ದುರುದ್ದೇಶದಿಂದ ಕೂಡಿರುವುದು. ಉದ್ಯೋಗಿಗಳು ಪರಿಶ್ರಮವನ್ನು ಬಿಟ್ಟು ಲಾಭ ಗಳಿಸಲು ಬೇರೆ ದಾರಿ ಇರದು.

ಮಿಥುನ ರಾಶಿ: ಸ್ತ್ರೀಯರೊಂದಿಗೆ ಮಾತಿನಲ್ಲಿ ಸಿಕ್ಕಿಬೀಳುವಿರಿ. ಕುಟುಂಬದಲ್ಲಿ ಬರುವ ಮಾತಿಗೆ ನೀವು ಪ್ರತಿಕ್ರಿಯೆ ಕೊಡುವುದು ಬೇಡ. ನಂಬಿಕೆ ದ್ರೋಹದಿಂದ ನಿಮಗೆ ಬೇಸರವಾಗಲಿದೆ. ಸಹೋದರ ಜೊತೆ ನಿಮಗೆ ಯೋಗ್ಯ ಸಲಹೆಯು ಸಿಗಬಹುದು. ಸೃಜನಾತ್ಮಕವಾಗಿ ಬದುಕುವ ಸ್ವಭಾವಕ್ಕೆ ಫಲಸಿಗಬಹುದು. ಹೊಸ ಮನೆಗಿಂತ ಹಳೆಯ ಮನೆಯೇ ಸುಖವೆನಿಸಿ, ಅಲ್ಲಿಗೇ ಬರುವಿರಿ. ನಿಮ್ಮ ಕಾಳಜಿ ಹಿಂಸೆಯಾಗಬಹುದು. ಕೆಲಸದಲ್ಲಿ ನಿರತವಾಗಿದ್ದರೆ ನೀವು ಹೆಚ್ಚು ಶಾಂತ ವಾತಾವರಣವನ್ನು ಬಯಸುವಿರಿ. ಆಪ್ತರನ್ನು ಕಳೆದುಕೊಳ್ಳಬೇಕಾಗುವುದು. ಮಕ್ಕಳಿಂದ ನಿಮಗೆ ಸಂತೃಪ್ತಿಯು ಸಿಗಲಿದೆ. ಬಂಧುಗಳ ಭೇಟಿಯು ನಿಮಗೆ ಅಷ್ಟಾಗಿ ಇಷ್ಟವಾಗದು. ಪರಿಚಿತ ಬಳಗದಲ್ಲಿ ನಿಮ್ಮ ಬಗ್ಗೆ ಅತ್ಯಂತ ಗೌರವವಿರಲಿದೆ. ಭವಿಷ್ಯದ ಬಗ್ಗೆ ಅತಿಯಾದ ಚಿಂತೆ ನಿಮಗಿರಲಿದೆ. ಉತ್ತಮವಾದ ಸಮಯವನ್ನು ಸ್ನೇಹಿತರ ಜೊತೆ ಕಳೆಯುವಿರಿ. ವಾಹನಭೀತಿಯಿಂದ ಮನೆಯಲ್ಲಿ ಇರುವಿರಿ. ಅಮೂಲ್ಯವಸ್ತುವಿನ ಕಳ್ಳತನವಾಗಬಹುದು. ಒಳ ಜಗಳದಿಂದ ನಿಮಗೆ ಎಲ್ಲ ಕಾರ್ಯದಲ್ಲಿ ತೊಂದರೆಯಾಗುವುದು. ಅತಿಯಾಗಿ ಯಾವುದನ್ನು ಮಾಡಲು ಹೋಗುವುದು ಬೇಡ.

ಕರ್ಕಾಟಕ ರಾಶಿ: ಬೇಕಾದಷ್ಟು ಇದ್ದರೂ ಅನುಭವಿಸುವ ತಾಳ್ಮೆ, ಮನಸ್ಸು, ಸಮಯ ಇದೆಲ್ಲ ಬೇಕು. ನಿಮ್ಮ ಆದಾಯದ ಮೂಲವನ್ನು ಸರಿಯಾಗಿ ಪರೀಕ್ಷಿಸಿಕೊಳ್ಳಿ. ನಿಮ್ಮ ವೇತನವನ್ನು ಪ್ರಯತ್ನಪೂರ್ವಕವಾಗಿ ಯಾರಾದರೂ ಕೇಳಬಹುದು. ನಿಮ್ಮನ್ನು ನೀವು ಪರಿಚಯ ಮಾಡಿಕೊಳ್ಳುವಿರಿ. ಹೊಸ ಕೆಲಸಗಳನ್ನು ತಂದುಕೊಳ್ಳುವ ಬಗ್ಗೆ ಯೋಜನೆ ಹಾಕುವಿರಿ. ನಿಮಗೆ ಇಂದು ಪ್ರೇಮವಿವಾಹದಿಂದ ಆಗುವ ತೊಂದರೆಗಳ ಅರಿವಾಗಬಹುದು. ವ್ಯವಹಾರದಿಂದ ಅರ್ಧಕ್ಕೆ ಕೈಬಿಡುವ ಸಾಧ್ಯತೆ ಇದೆ. ಮನೆಯಲ್ಲಿನ ಕೆಲವು ಬದಲಾವಣೆಗಳಿಂದ ನಿಮ್ಮ ಸಂತೋಷಕ್ಕೆ ಭಂಗ ಬರಬಹುದು. ಅನಗತ್ಯ ತಿರುಗಾಟ, ಖರ್ಚುಗಳು ಜೀವನಕ್ಕೆ ದಿಕ್ಕು ಸಿಗಬಹುದು. ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು. ಇನ್ನೊಬ್ಬರನ್ನು ಪ್ರಶಂಸಿಸುವ ಮನೋಭಾವ ನಿಮ್ಮಲ್ಲಿ ಇರದು. ಉತ್ಸಾಹಕ್ಕೆ ಮನೆಯಲ್ಲಿ ಹಿನ್ನಡೆಯಾಗಬಹುದು. ಬಹಳ ದಿನಗಳ ಅನಂತರ ಸ್ನೇಹಿತರ ಜೊತೆ ಹರಟೆ ಹೊಡೆಯುವುದು ನಿಮ್ಮ ಮನಸ್ಸಿಗೆ ಖುಷಿಯನ್ನು ಕೊಡಬಹುದು. ಬೇಕಾದುದನ್ನು ಕೇಳಿ ಪಡೆಯಿರಿ. ಭೂಮಿಯ ವ್ಯವಹಾರವು ಬಹಳ ಕಷ್ಟವೆನಿಸಿ ಬಿಡುವುದು.

ಸಿಂಹ ರಾಶಿ: ಸಂಗಾತಿಯ ಒಪ್ಪಿಗೆ ನಿಮಗೆ ಸುಲಭಕ್ಕೆ ಸಿಗದು. ಇಂದು ಸಣ್ಣ ಮೊತ್ತವಾದರೂ ಅದನ್ನು ಉಳಿಸುವ ಬಗ್ಗೆ ಯೋಚಿಸುವಿರಿ‌. ಹಿತಶತ್ರುಗಳಿಂದ ಬೇಕಾದ ಮಾಹಿತಿಯು ಸಿಗಲಿದೆ. ಸಂಗಾತಿಯ ಬಗ್ಗೆ ಪ್ರೀತಿಯನ್ನು ಅನುಭವಿಸುವಿರಿ. ಇಂದು ನೀವು ಉದ್ಯೋಗವನ್ನು ಕಳೆದುಕೊಂಡು ಒದ್ದಾಡುವಿರಿ. ಖಾಸಗಿ ಉದ್ಯೋಗದವರಿಗೆ ಬಡ್ತಿ ಬರಬಹುದು. ಮಲಗಿದಾಗ ಮೇಲಿಂದ ಬೀಳಬಹುದು. ಕುಟುಂಬದ ಕಾರ್ಯಕ್ರಮದಲ್ಲಿ ನಿಮ್ಮನ್ನು ಕಡೆಗಣಿಸಿದ ಅನುಭವವಾಗಲಿದೆ. ದೀರ್ಘ ಪ್ರಯಾಣವು ನೀರಸ ಮತ್ತು ಬಳಲಿಕೆಯನ್ನು ಉಂಟುಮಾಡಬಹುದು. ಬೇಕಾದುದನ್ನು ಕೇಳಿ ಪಡೆಯುವುದು ಸೂಕ್ತ. ಮನಸ್ಸಿಗೆ ಇಷ್ಟವಾಗದ ಕಾರ್ಯವನ್ನು ನೀವು ಮಾಡಬೇಕಾದೀತು. ನಿಮ್ಮ ಯೋಜನೆಯನ್ನು ಪ್ರಯೋಗಕ್ಕೆ ತರಲು ಪೂರ್ಣ ಯಶಸ್ಸನ್ನು ಪಡೆಯಲಾರಿರಿ. ಒತ್ತಡವಿರುವ ಸಂದರ್ಭದಲ್ಲಿ ಯಾರ ಜೊತೆಯೂ ಮಾತನಾಡಲು ಹೋಗಬೇಡಿ. ನಿಮ್ಮನ್ನು ತಮಾಷೆ ಮಾಡಲೆಂದು ಏನನ್ನಾದರೂ ಹೇಳಬಹುದು. ಈ ಕಾರಣಕ್ಕೆ ನಿಮ್ಮ ಕೆಲಸಕ್ಕೆ ಸಹಾಯವೂ ಸಿಗದೆ ಹೋಗಬಹುದು.

ಕನ್ಯಾ ರಾಶಿ: ಹೂಡಿಕೆ ಮಾಡುವ ವ್ಯಕ್ತಿಗಳು ಬೇರೆಯಾಗುವರು. ನೀವು ಮಾಡದ ಕಾರ್ಯಗಳಿಗೆ ನಿಮ್ಮ ಹಣೆಪಟ್ಟಿ ಬೀಳಬಹುದು. ಅದನ್ನು ಎದುರಿಸುವ ಚಾಕಚಕ್ಯತೆ ನಿಮ್ಮದಾಗಲಿದೆ. ನೀವೇ ಇಂದು ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ಕೌಶಲ್ಯಗಳು ಕೆಲಸದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ನಿಮಗೆ ಸಹಾಯ ಮಾಡುತ್ತದೆ. ಅಮೂಲ್ಯ ವಸ್ತುಗಳನ್ನು ಎಲ್ಲಿಯೂ ಪ್ರಕಟಿಸಲಾರಿರಿ. ಸ್ತ್ರೀಯರು ಕಲಹದ ಸಂದರ್ಭದಲ್ಲಿ ವಿಷಯಗಳನ್ನು ಬದಲಾಯಿಸಲು ಹಾಗೂ ಎಲ್ಲವನ್ನೂ ಮರೆಯಲು ಸುತ್ತಾಡಲು ಬಯಸಬಹುದು. ವಿಷಯ, ಸಮಯ ಎಲ್ಲವನ್ನೂ ನೋಡಿ ವ್ಯವಹರಿಸಿ. ಅಶಕ್ತರ ಸೇವೆಯಲ್ಲಿ ತೊಡಗಿಕೊಳ್ಳುವಿರಿ. ಪ್ರವಾಸವು ಅಂತಿಮವಾಗಿ ಪೂರ್ಣವಾಗಲಿದೆ. ಇಲ್ಲವಾದರೆ ಅದಕ್ಕೆ ಅಧಿಕವಾದ ಹಣವು ವ್ಯಯವಾದೀತು. ಕರ್ತವ್ಯವನ್ನು ಬಿಡಸೇ ನಿರ್ವಹಿಸಿ. ಅಪರಿಚಿತ ವ್ಯಕ್ತಿಯ ಜೊತೆ ಜಗಳವಾಡಿ ದ್ವೇಷ ಬರುವಂತೆ ಮಾಡಿಕೊಳ್ಳುವಿರಿ. ಅಸಾಧ್ಯ ಎನಿಸಿರುವುದನ್ನು ಬಲವಂತವಾಗಿ ಮಾಡುವುದು ಬೇಡ. ಏನನ್ನೋ ಮಾತನಾಡಲು ಹೋಗಿ ಸಿಕ್ಕಿಹಾಕಿಕೊಳ್ಳಬೇಡಿ.

ತುಲಾ ರಾಶಿ: ನಿಮ್ಮ ಯೋಜನೆಯನ್ನು ಇತರರು ಅರ್ಥಮಾಡಿಕೊಳ್ಳಲಾರರು. ಇಂದು ಧಾರ್ಮಿಕ ಕಾರ್ಯಗಳಿಗೆ ಸಮಯವನ್ನೂ ಬೇಕಾದ ವ್ಯವಸ್ಥೆಯನ್ನೂ ಮಾಡಿಕೊಳ್ಳುರಿ. ಪರೋಪಕಾರದಲ್ಲಿ ಆಸಕ್ತಿ ಹೆಚ್ಚಿದ್ದು ಇನ್ನೊಬ್ಬರನ್ನೂ ಇದಕ್ಕೆ ಪ್ರೇರಿಸುವಿರಿ. ಆಸ್ತಿಯ ಹಂಚಿಕೆಯ ವ್ಯವಹಾರವನ್ನು ಮುಕ್ತಾಯಗೊಳಿಸಲು ಇದು ಉತ್ತಮ ದಿನ. ಎಲ್ಲದಕ್ಕೂ ಸುಲಭ ದಾರಿ ಸಿಗದು. ಕೆಲವು ಒತ್ತಡಗಳು ನಿಮ್ಮನ್ನು ಆಧ್ಯಾತ್ಮಿಕ ಸ್ಥಳದ ಕಡೆಗೆ ಹೋಗುವಂತೆ ಮಾಡಬಹುದು. ಕುಟುಂಬದವರು ಉಪಯುಕ್ತ ಆರೋಗ್ಯ ಸಲಹೆಗಳನ್ನು ನೀಡಬಹುದು. ವ್ಯಾಪಾರದಲ್ಲಿ ಚೇತರಿಕೆಯನ್ನು ಇಂದು ಕಾಣಬಹುದಾಗಿದೆ. ಜನರೊಡನೆ ವ್ಯಾವಹಾರಿಕವಾದ ಬಾಂಧವ್ಯವು ಚೆನ್ನಾಗಿರಲಿದೆ. ಆತುರಪಟ್ಟು ಅವಗಢಕ್ಕೆ ಸಿಲುಕಬೇಡಿ. ಹಿರಿಯರ ಸೇವೆಯನ್ನು ಕೆಲಸವೆಂದು ಮಾಡದೇ ಕರ್ತವ್ಯವೆಂದು ಮಾಡಿ. ನಿಮ್ಮ ಗುರಿಯ ಬಗ್ಗೆ ಅಸ್ಪಷ್ಟತೆ ಇರಲಿದ್ದು ಅನುಭವಿಗಳಿಂದ ಸ್ಪಷ್ಟತೆಯನ್ನು ತಂದುಕೊಳ್ಳುವಿರಿ. ದಾಖಲೆಗಳ ಬಗ್ಗೆ ಎಚ್ವರಿಕೆ ಅಗತ್ಯ. ವಿರುದ್ಧ ವಂಚನೆಯ ಆರೋಪವು ಬರಬಹುದು.

ವೃಶ್ಚಿಕ ರಾಶಿ: ದಿನವನ್ನು ಸಂತೋಷವಾಗಿಡಲು ಒಂಟಿಯಗಿ ಪ್ರಯಾಣ ಮಾಡುವಿರಿ. ಸ್ವಾಭಿಮಾನವನ್ನು ಮರೆತು ನೀವು ಜೀವನ ಸಾಗಿಸುವುದು ಕಷ್ಟವಾದೀತು. ನಿಮಗೆ ಲಾಭವಾಗುವ ಕೆಲವು ಕಾರ್ಯಗಳು ನಿಮಗೆ ಸಿಗಬಹುದು. ಸಂಗಾತಿಯನ್ನು ಹೊರಗೆ ಕರೆದುಕೊಂಡುಹೋಗುವ ಸನ್ನಿವೇಶ ಬರಬಹುದು. ನಿಮ್ಮ ದುರಭ್ಯಾಸವು ಅತಿಯಾಗಲಿದೆ. ನಿಮ್ಮ ಭಕ್ತಿಯ ಪ್ರಾರ್ಥನೆಗೆ ಫಲ ಸಿಗಲಿದೆ. ವಸ್ತುಗಳನ್ನು ಸದುಪಯೋಗ ಮಾಡಲು ಕಲಿಯಬೇಕಾಗುವುದು. ಕೆಲಸದ ಕಾರ್ಯಕ್ಷಮತೆಯು ಉನ್ನತ ಅಧಿಕಾರಿಗಳನ್ನು ಗೆಲ್ಲುತ್ತಿದೆ. ನಿಮ್ಮ ಕುಟುಂಬವು ನಿಮ್ಮ ಯೋಜನೆಗಳಿಗೆ ಬೆಂಬಲ ನೀಡುತ್ತದೆ ಮತ್ತು ನಿಮ್ಮನ್ನು ಬೆಂಬಲಿಸುತ್ತದೆ. ವಿದೇಶಕ್ಕೆ ಹೋಗುವ ಅವಕಾಶ ಬರಬಹುದು. ಸಾಲ ಕೊಟ್ಟವರು ನಿಮ್ಮನ್ನು ಶತ್ರುಗಳಂತೆ ಕಾಣುವರು. ದುಃಖವನ್ನೂ ಅನುಭವಿಸುವ ಸಂಗತಿಗಳು ಬರಬಹುದು. ಅದೃಷ್ಟವು ಕೈಕೊಡುವ ಸಾಧ್ಯತೆ ಇದೆ. ಮನಸ್ಸನ್ನು ಸುಮ್ಮನೆ ಬಿಡದೇ ಅನ್ಯ ಕಾರ್ಯದಲ್ಲಿ ತೊಡಗಿಸಿ. ವಿದ್ಯಾರ್ಥಿಗಳು ಅಭ್ಯಾಸವನ್ನು ಅರ್ಧಕ್ಕೇ ನಿಲ್ಲಸಬೇಕಾಗಿಬರಬಹುದು.

ಧನು ರಾಶಿ: ಬೇಸರದಲ್ಲಿ ಇರುವವರಿಗೆ ಶುಭವಾರ್ತೆ ಬರಲಿದೆ. ನೀವು ಕಾರ್ಯದ ಕಾರಣ ಸಹೋದ್ಯೋಗಿಗಳ ಜೊತೆ ದೂರ ಪ್ರಯಾಣಮಾಡಬೇಕಾಗುವುದು. ಇಂದು ಹೆಚ್ಚು ಸಮಯವು ಸಿಗುವ ಕಾರಣ ಇನ್ನೊಬ್ಬರ ಕುರಿತು ಹರಟೆ ಮಾಡುವಿರಿ. ನಿಮಗೆ ಇಂದು ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರವು ಗಟ್ಟಿತನ ಕೊಡಲಿದೆ. ಕೆಲಸದಲ್ಲಿ ಪ್ರಶಂಸೆ ನಿಮ್ಮನ್ನು ಇನ್ನೂ ಉತ್ತಮವಾಗಿ ಮಾಡಲು ಪ್ರೇರೇಪಿಸುತ್ತದೆ. ಪ್ರಗತಿಯ ಪರಿಶೀಲನೆಗೆ ತೆರಳುವಿರಿ. ನೀವು ಕುಟುಂಬದ ಸಮಸ್ಯೆಯನ್ನು ಸರಿಪಡಿಸಲು ಸಹಾಯ ಮಾಡಬಹುದು. ನೀವು ರಜೆಯಲ್ಲಿದ್ದರೆ, ಕೆಲವು ಹೊಸ ಸ್ಥಳಗಳನ್ನು ಅನ್ವೇಷಿಸುವ ನಿರೀಕ್ಷೆಯಿದೆ. ಹಿತಶತ್ರುಗಳಿಂದ ನಿಮ್ಮ ಯೋಜನೆ ಹಾಳಾಗುವುದು. ಯಂತ್ರದಿಂದ ಅಥವಾ ವಾಹನದಿಂದ ನಷ್ಟವಾಗಬಹುದು. ಮಕ್ಕಳಿಂದ‌ ಸಂತೋಷವಾರ್ತೆ ಬರಲಿದೆ. ಮೇಲಧಿಕಾರಿಗಳ ಪ್ರಶಂಸೆಯಿಂದ ಕೆಲಸದಲ್ಲಿ ಆಸಕ್ತಿ ಬರಲಿದೆ. ಮನಸ್ಸನ್ನು ಏಕಾಗ್ರಗೊಳಿಸುವತ್ತ ಗಮನಹರಿಸಿ. ಮಕ್ಕಳು ನಿಮಗೆ ಬೇಕಾದ ಆರ್ಥಿಕ ನೆರವನ್ನು ಕೊಡುವರು.

ಮಕರ ರಾಶಿ: ಉದ್ಯಮದಲ್ಲಿ ಸಂಪರ್ಕದ ಕೊರತೆಯಿಂದ ನಷ್ಟ ಸಂಭವಿಸಬಹುದು. ನಿಮಗೆ ಇಂದು ಅವ್ಯಕ್ತ ಭಯವು ಕಾಡುವುದು. ಎಲ್ಲ ಕಡೆಗಳಿಂದ ತೊಂದರೆಯಾದಂತೆ ಅನ್ನಿಸೀತು. ಸಾಲದ ವಸೂಲಿಯನ್ನು ಬಹಳ ತಾಳ್ಮೆಯಿಂದ ಸಿಟ್ಟನ್ನೆಲ್ಲ ನಿಯಂತ್ರಣದಲ್ಲಿ ಇರಿಸಿಕೊಂಡು ಮಾಡಬೇಕಾಗುತ್ತದೆ. ನಿಮ್ಮ ಎಲ್ಲ ತಿಳಿವಳಿಕೆಯನ್ನೂ ಇನ್ನೊಬ್ಬರ ಮೇಲೆ ಹೇರುವುದು ಬೇಡ. ಹೆಚ್ಚಿನ ವೇತನದ ಯೋಜನೆ ನಿಮ್ಮ ತೆಕ್ಕೆಗೆ ಸಿಗಲಿದೆ, ಸ್ಥಿರವಾಗಿರಿ. ನೀವು ಇಂದು ಮನೆಯಲ್ಲಿನ ವಿಷಯಗಳ ಮೇಲೆ ನಿಗಾ ಇಡಬೇಕಾಗುತ್ತದೆ. ಇನ್ನೊಬ್ಬರು ತೋರುವ ನಿರ್ಲಕ್ಷ್ಯದಿಂದ ನೀವು ಬಹಳ ದುಃಖಿಸುವಿರಿ. ಸಂಗಾತಿಯ ಕಡೆಯಿಂದ ಏನಾದರೂ ಕಿರಿಕಿರಿ ಉಂಟಾಗಬಹುದು‌. ನೌಕರರ ಬಗ್ಗೆ ಪ್ರೀತಿ ಇರುವುದು. ಕಛೇರಿಯಲ್ಲಿ ಸಮಾಧಾನ ತರುವ ವಿಚಾರಗಳು ಇರಬಹುದು. ಸಂಗಾತಿಯ ಜೊತೆ ಹರಟೆ ಹೊಡೆಯುವಷ್ಟು ಅವಕಾಶ ಸಿಗುವುದು. ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ನಿಮ್ಮ ಬಗ್ಗೆ ಕುಟುಂಬದಲ್ಲಿ ಒಳ್ಳೆಯ ಅಭಿಪ್ರಾಯವು ಇರುವುದು. ವೈವಾಹಿಕ ಜೀವನದಲ್ಲಿ ಏರಿಳಿತವು ಆರಂಭ.

ಕುಂಭ ರಾಶಿ: ಎಲ್ಲವನ್ನೂ ಹಾಸ್ಯಾಸ್ಪದವಾಗಿ ನೋಡಿದರೆ, ನಿಮ್ಮನ್ನು ಬೇರೆ ರೀತಿ ಅರ್ಥೈಸುವರು. ನಿಮ್ಮ ಇಷ್ಟದ ವಸ್ತುಗಳನ್ನು ಪಡೆಯುವ ಖುಷಿಯೇ ಬೇರೆ. ನಿಮಗೆ ಉದ್ಯೋಗದಲ್ಲಿ ಬಡ್ತಿಯಿಂದ ಸಂತೋಷವು ಇಮ್ಮಡಿಸುವುದು. ಕೆಲವು ಸಂದರ್ಭದಲ್ಲಿ ನೀವು ತಾಳ್ಮೆಯನ್ನು ಕಳೆದುಕೊಳ್ಳಬಹುದು. ನಿಮ್ಮ ವ್ಯವಹಾರ ಪಾಲುದಾರರನ್ನು ನಿಮ್ಮ ಕಲ್ಪನೆಗೆ ಸೇರಿಸಿಕೊಳ್ಳುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಮನೆ ಬದಲಾವಣೆಗೆ ನಿಮ್ಮ ಸಲಹೆಯನ್ನು ಸ್ವೀಕರಿಸಲಾಗುತ್ತದೆ. ಇಂದು ಸಮಯಯನಿಮ್ಮ ಇಚ್ಛೆಗೆ ವಿರುದ್ಧವಾಗಿ ನಡೆದರೂ ಸುಮ್ಮನಿರುವಿರಿ. ಮನೆಯಲ್ಲಿ ಇದ್ದು ಎಲ್ಲರಿಗೂ ಸಹಾಯ ಮಾಡುವಿರಿ. ಕಛೇರಿಯ ಗಾಂಭೀರ್ಯವನ್ನು ಕಾಡಿ. ಕಷ್ಟವಾದರೂ ಇಂದು ಪ್ರಯಾಣವನ್ನು ಮಾಡಲೇ ಬೇಕಾಗಬಹುದು. ಎಲ್ಲರೂ ಇಂದು ಎಂದಿನಂತೆ ಇರುವುದಿಲ್ಲ. ಎಲ್ಲರನ್ನೂ ಸಮಾಧಾನ ಮಾಡಲಾಗದು. ನಿಮ್ಮ ಕರ್ತವ್ಯವನ್ನು ಮಾಡಿ ಮುಗಿಸಿ. ರಾಜಕೀಯ ವ್ಯಕ್ತಿಗಳಿಗೆ ಬೆಂಬಲವಿರುವುದನ್ನು ಕಾಣಬಹುದು. ಆತುರಾತುರವಾಗಿ ಯಾವುದನ್ನೂ ಮಾಡಲು ಹೋಗುವುದು ಬೇಡ.

ಮೀನ ರಾಶಿ: ಸಂಗಾತಿಯ ಸಂಕಟವನ್ನು ಕೇಳಲು ಕಷ್ಟವಾದೀತು. ನೀವು ಬಂಧುಗಳಿಂದ ಯಾವುದಾದರೂ ಸಹಾಯವನ್ನು ಬಯಸುವಿರಿ. ಇಂದು ಬರುವ ಕೋಪವನ್ನು ಕಡಿಮೆ ಮಾಡಿಕೊಳ್ಳಿ. ಮನಸ್ಸು ಶಾಂತವಾದ ಬಳಿಕ ನಿಮ್ಮ ಕಾರ್ಯಗಳನ್ನು ಆರಂಭಿಸುವುದೇ ಉತ್ತಮ.‌ ಯಾಮಾರಿದರೆ ಇರುವ ಸಂಪತ್ತು ನಷ್ಟ. ನಿರೀಕ್ಷಿತ ಹಣವು ಅಂತಿಮವಾಗಿ ನಿಮ್ಮನ್ನು ತಲುಪಬಹುದು. ವ್ಯವಹಾರದಲ್ಲಿ ನಿಮಗಾಗಿ ಒಂದು ಸುವರ್ಣ ಅವಕಾಶ ಕಾಯುತ್ತಿರಬಹುದು. ಕುಟುಂಬದ ಸದಸ್ಯರು ಆನಂದದ ಆಶ್ಚರ್ಯವನ್ನು ಕಾಯ್ದಿರಿಸುವೆರು. ಆರ್ಥಿಕ ಸಂಕಷ್ಟಕ್ಕೆ ಇಂದೇ ಯೋಜನೆಯನ್ನು ರೂಪಿಸಿ. ಆಸ್ತಿ ವ್ಯವಹಾರದಲ್ಲಿ ದಾಯಾದಿ ಕಲಹವು ಬಗೆ ಹರಿಯದೇ ಚಿಂತೆ ಇರುವುದು. ಅನಿರೀಕ್ಷಿತ ಸುದ್ದಿಗೆ ಆತಂಕಪಡುವುದು ಬೇಡ. ಇಂದು ನೀವಾಡುವ ಮಾತಿನ ಮೇಲೆ ನಿಮ್ಮ ಕಾರ್ಯಗಳು ನಿಂತಿರುತ್ತದೆ. ವೃತ್ತಿಯನ್ನು ಗಂಭೀರವಾಗಿ ತೆಗೆದುಕೊಳ್ಳುವಿರಿ. ಸ್ವಂತ ಉದ್ಯಮದಲ್ಲಿ ನಿರೀಕ್ಷಿತ ಲಾಭವನ್ನು ಕಾಣುವಿರಿ.

TV9 Kannada

Leave a Reply

Your email address will not be published. Required fields are marked *