ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಕೃಷ್ಣ ಪಕ್ಷದ ಚತುರ್ಥೀ ತಿಥಿ, ಭಾನುವಾರ ಪ್ರವಾಸದಿಂದ ಅನಾರೋಗ್ಯ, ಮಿತ್ರರಿಗೆ ಸಹಾಕಾರ, ಪ್ರಭಾವೀ ವ್ಯಕ್ತಿಗಳ ಭೇಟಿ ಇವೆಲ್ಲವೂ ಇಂದಿನ ವಿಶೇಷ.

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ಸುಕರ್ಮ, ಕರಣ : ಭದ್ರ ಸೂರ್ಯೋದಯ – 06 – 57 am, ಸೂರ್ಯಾಸ್ತ – 06 – 36 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:09 – 18:36, ಯಮಘಂಡ ಕಾಲ 12:47 – 14:14, ಗುಳಿಕ ಕಾಲ 15:42 – 17:09.
ಮೇಷ ರಾಶಿ: ಒಳ್ಳೆಯ ಕಾರ್ಯಕ್ಕೆ ನಿಮ್ಮವರನ್ನು ಮನವೊಲಿಸುವುದು ನಿಮ್ಮಿಂದ ಕಷ್ಟವಾದೀತು. ಸ್ನೇಹಿತರ ಜೊತೆಗಿನ ಸಂಪರ್ಕವನ್ನು ಕಡಿಮೆ ಮಾಡಿಕೊಳ್ಳುವಿರಿ. ನೌಕರರ ತಪ್ಪಿನಿಂದ ನೀವು ಹಣವನ್ನು ಖರ್ಚು ಮಾಡಬೇಕಾದೀತು. ಕೃಷಿಯಲ್ಲಿ ನಿಮಗೆ ದೂರದೃಷ್ಟಿಯ ಕಾರಣ ಆಸಕ್ತಿ ಬೆಳೆಯುವುದು. ಮಕ್ಕಳು ನಿಮ್ಮಿಂದ ಪ್ರೀತಿಯನ್ನು ಬಯಸುವರು. ನಿಮ್ಮ ತಾಳ್ಮೆ ಮತ್ತು ಶ್ರಮದಿಂದ ನಿರೀಕ್ಷಿತ ಫಲಿತಾಂಶವೇ ಇರಲಿದೆ. ಆರ್ಥಿಕ ಪ್ರಗತಿಯ ಪರಿಗಣನೆ ಮಾಡುವ ಸಮಯ. ಕುಟುಂಬದಲ್ಲಿ ಹೊಸ ಶುಭ ಸಂದರ್ಭಗಳಿಗೆ ಮುನ್ಸೂಚನೆ. ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಯೋಗ್ಯ ಸಮಯ. ಅಪರಿಚಿತರು ಆಪ್ತರಾಗುವ ಸಾಧ್ಯತೆ ಇದೆ. ದುರಭ್ಯಾಸಕ್ಕೆ ಅವಕಾಶಗಳು ಬರಲಿದ್ದು ಆಲೋಚಿಸಿ ಮುಂದುವರಿಯಿರಿ. ನಿಮ್ಮ ವರ್ತನೆಯನ್ನು ಕಂಡು ಯಾರಾದರೂ ನಕ್ಕಾರು. ನಿಮ್ಮ ವೇಷಭೂಷಣದ ಬಗ್ಗೆ ಟೀಕಿಸುವರು.ಹೂಡಿಕೆಯ ಬಗ್ಗೆ ಸಂಗಾತಿಯ ನಿಲುವಿಗೆ ಬದ್ಧರಾಗಬೇಲಾದೀತು. ಯಾವುದನ್ನೂ ನೀವು ಮನಸ್ಸಿಗೆ ತೆಗೆದುಕೊಳ್ಳದೇ ನಿಶ್ಚಿಂತೆಯಿಂದ ಇರುವಿರಿ. ಆರ್ಥಿಕತೆಯನ್ನು ಬಲಪಡಿಸಿಕೊಳ್ಳುವ ಮಾರ್ಗವನ್ನು ಕಂಡುಕೊಳ್ಳಿ.
ವೃಷಭ ರಾಶಿ: ಅನವಶ್ಯಕ ಚರ್ಚೆಯಿಂದ ನಿಮ್ಮ ಅಮೂಲ್ಯ ಸಮಯವನ್ನು ಹಾಳು ಮಾಡಿಕೊಳ್ಳುವಿರಿ. ನಿಂದನೆಗಳು ಸಹಜವೆಂಬಂತೆ ಆಗಲಿದೆ. ಆರ್ಥಿಕ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಮಗ್ರ ಪರಿಶೀಲನೆ ಮಾಡಿ. ಯಶಸ್ಸನ್ನು ಗಳಿಸದಂತೆ ಹಿತಶತ್ರುಗಳು ಅಡ್ಡಗಾಲು ಹಾಕುವಿರಿ. ಆಭರಣದ ವಿಚಾರದಲ್ಲಿ ಜಾಗರೂಕತೆ ಇರಲಿ. ಸಹೋದ್ಯೋಗಿಗಳ ಜೊತೆ ಪ್ರೇಮಾಂಕುರ, ಮನೆಯವರ ಅಭಿಪ್ರಾಯದ ಬಗ್ಗೆ ಆತಂಕ. ನಿಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಲಿ. ಮನಸ್ಸಿನ ಚಾಂಚಲ್ಯವನ್ನು ನಿಲ್ಲಿಸಲಾಗದು. ಇಂದು ನೀವು ಖುಷಿ ಕೊಡುವ ಕಾರ್ಯವನ್ನು ಮಾತ್ರ ಮಾಡುವಿರಿ. ನಿಮ್ಮ ಸ್ವಭಾವವು ಕೆಲವರಿಗೆ ಇಷ್ಟವಾಗದೇ ಹೋಗುವುದು. ಸ್ವತಂತ್ರವಾಗಿರಲು ನೀವು ಹೆಚ್ಚು ಇಷ್ಟಪಡುವಿರಿ. ಯಾರ ಮಾತನ್ನೂ ಕೇಳದೇ ನಿಮ್ಮದೇ ದಾರಿಯಲ್ಲಿ ಸಾಗುವಿರಿ. ವೃತ್ತಿಯಲ್ಲಿ ಬದಲಾವಣೆ ಬೇಕು ಎನಿಸುವುದು. ಅಜ್ಞಾತವಾಸದಂತೆ ಇರುವ ನಿಮ್ಮ ಜೀವನಕ್ಕೆ ಹೊಸ ತಿರುವು ಸಿಕ್ಕೀತು. ಅಪರಿಚಿತರು ನಿಮಗೆ ಕೆಲವು ತೊಂದರೆಯನ್ನು ಕೊಡಬಹುದು.
ಮಿಥುನ ರಾಶಿ: ಸೋಲಾದ ಸ್ಥಳದಲ್ಲಿಯೇ ಮೇಲೆ ಬರುವ ಛಲ ನಿಮಗೆ. ಧರ್ಮಾಚರಣೆಯ ಕಡೆ ಒಲವಿದ್ದರೂ ಸಮಯವು ಸರಿಯಾಗಿ ಸಿಗದೇ ಇದ್ದೀತು. ಸಂಗಾತಿಯ ಮೇಲೆ ಎಲ್ಲಿಲ್ಲದ ಅನುಮಾನ. ಉದ್ಯೋಗದಲ್ಲಿ ಮೇಲಧಿಕಾರಿಗಳು ನಿಮಗೆ ಪೂರಕವಾಗಿ ಸಹಕಾರ ನೀಡುವರು. ಮೂರನೇ ವ್ಯಕ್ತಿಯ ಮಾತುಗೆ ಪ್ರಾಮುಖ್ಯ ಬೇಡ. ನ್ಯಾಯಾಲಯದ ವಿಚಾರವನ್ನು ಬೇಗ ಮುಗಿಸಿಕೊಳ್ಳಲು ಪ್ರಯತ್ನಿಸುವಿರಿ. ಭೋಗವಸ್ತುಗಳ ಖರೀದಿಯನ್ನು ಹೆಚ್ಚು ಮಾಡುವಿರಿ. ಕಛೇರಿಯಲ್ಲಿ ಅನಿರೀಕ್ಷಿತ ಒತ್ತಡವು ಬಂದು ಮುತ್ತಿಕೊಂಡು ದಿಕ್ಕು ತೋಚದಂತೆ ಆಗುವುದು. ದಾಂಪತ್ಯ ಕಲಹವು ಸುಖಾಂತವಾಗಲಿದೆ. ಸ್ಥಳದ ವ್ಯತ್ಯಾಸದಿಂದ ಆರೋಗ್ಯದ ಮೇಲೆ ದುಷ್ಪರಿಣಾಮವಾಗಲಿದೆ. ಉದ್ಯೋಗದ ಕಾರಣ ಪ್ರಯಾಣ ಮಾಡುವ ಸನ್ನಿವೇಶವು ಬರಲಿದೆ. ನಿಷ್ಠುರ ಮಾತುಗಳನ್ನು ಆಡುವುದು ಬೇಡ. ಕುಟುಂಬದ ಜೊತೆ ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ.
ಕರ್ಕಾಟಕ ರಾಶಿ: ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲನ್ನು ಕೇಳುವ ಸ್ಥಿತಿ ಬರಬಹುದು. ವಿದ್ಯಾಭ್ಯಾಸವನ್ನು ಪೂರ್ಣ ಮಾಡಿದ ಸಂತೋಷವು ಸಿಗುವುದು. ಎಷ್ಟೋ ದಿನಗಳ ಹಿಂದೆಯೇ ಆಲೋಚಿಸಿದ್ದ ಕಾರ್ಯಗಳನ್ನು ನೀವು ಮತ್ತೆ ಆರಂಭಿಸಲು ಮನಸ್ಸು ಮಾಡುವಿರಿ. ಆರ್ಥಿಕವಾಗಿ ಸ್ಥಿರತೆ ಪಡೆಯಲು ಹೊಸ ಮಾರ್ಗಗಳ ಹುಡುಕಾಟ ನಡೆಯಲಿದೆ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗೆ ಅವಕಾಶ. ಸೋಲನ್ನೂ ಆನಂದಿಸುವ ಮನೋಭಾವವಿರಲಿದೆ. ಹೊಸ ಜವಾಬ್ದಾರಿ ಬರಬಹುದು. ಇಂದಿನ ನಿಮ್ಮ ಕಾರ್ಯಕ್ಕೆ ಸಮಯದ ಮಿತಿಯನ್ನು ಅವಶ್ಯಕ. ನಿಮ್ಮ ಮಾತಿನಿಂದ ಇತರರಿಗೆ ನೋವಾಗುವುದು. ಪ್ರೇಮವು ಅಪಾಯಕ್ಕೆ ಸಿಕ್ಕಿಕೊಳ್ಳಬಹುದು. ವೇತನವನ್ನು ಹೆಚ್ಚಿಸಲು ಅಧಿಕಾರಿಗಳನ್ನು ಕೇಳಿಕೊಳ್ಳುವಿರಿ. ದೂರದ ಬಂಧುಗಳ ಭೇಟಿಯಿಂಸ ನಿಮಗೆ ಸಂತೋಷವಾಗುವುದು. ಸಹೋದ್ಯೋಗಿಗಳ ಜೊತೆ ವಾದವನ್ನು ಮಾಡುವಿರಿ. ವ್ಯವಹಾರದಲ್ಲಿ ಮಾತನಾಡುವಾಗ ನಿಮ್ಮನ್ನು ಅಳೆಯಬಹುದು. ಶತ್ರುಗಳನ್ನು ತಿಳಿದುಕೊಳ್ಳುವ ಅಸಕ್ತಿಯು ಇರಲಿದೆ.
ಸಿಂಹ ರಾಶಿ: ಇಂದು ಮತ್ತೊಬ್ಬರಿಗೆ ನಿಮ್ಮಿಂದಾದ ನೋವನ್ನು ಸರಿ ಮಾಡಿಕೊಳ್ಳುವಿರಿ. ಸಾಂತ್ವನದಿಂದ ಸ್ನೇಹವು ಮೊದಲಿನಂತಾಗುವುದು. ನಿಮ್ಮ ಅತಿಯಾದ ನಂಬುಗೆಯು ಇಂದು ಹುಸಿಯಾಗಬಹುದು. ಸಂತಾನಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಟೀಕೆಗಳು ನಡೆಯುವುದು. ನಿಮ್ಮ ನಿರ್ಧಾರ ಶಕ್ತಿಯು ಮುಂದಿನ ಯಶಸ್ಸಿನ ಕೀಲಿಕೈ. ವಿದೇಶಿ ವ್ಯವಹಾರಗಳಿಗೆ ಅನುಕೂಲಕರ ಸಮಯ. ವಿದ್ಯಾರ್ಥಿಗಳಿಗೆ ಭವಿಷ್ಯಕ್ಕೆ ಮಾರ್ಗದರ್ಶನವಾಗಲಿದೆ. ನಿಮ್ಮ ಇಷ್ಟದವರನ್ನು ಭೇಟಿಯಾಗಿ ಕೆಲವು ಸಮಯ ಸಂತೋಷದಿಂದ ಕಳೆಯುವಿರಿ. ಯಾರಂದಲೋ ಪ್ರೇರಿತರಾದ ನಿಮಗೆ ಸಾಮಾಜಿಕ ಕಾರ್ಯವು ಹಿಡಿಸುವುದು. ಉದ್ಯಮದ ವಿಷಯದಲ್ಲಿ ಸಲ್ಲದ ಮಾತುಗಳು ಕೇಳಿಬರಬಹುದು. ಸಂಪತ್ತಿನ ಮೇಲೆ ನಿಮಗೆ ಮೋಹವು ಕಡಿಮೆ ಇರುವುದು. ವಂಚಿಸಿದವರಿಗೆ ಪ್ರತಿವಂಚನೆಯನ್ನು ಮಾಡಲು ಸಮಯವನ್ನು ನಿರೀಕ್ಷಿಸುತ್ತಿರುವಿರಿ. ಆಶಿಸ್ತಿನ ಕೆಲಸಕ್ಕೆ ಹಿರಿಯರು ನಿಂದಿಸಬಹುದು. ಅಪರಿಚಿತ ವ್ಯಕ್ತಿಗಳಿಂದ ಸಾಲಕ್ಕಾಗಿ ದೂರವಾಣಿಯ ಮೂಲಕ ಪೀಡೆ.
ಕನ್ಯಾ ರಾಶಿ: ಸ್ಥಿರವಾದ ಮನಃಸ್ಥಿತಿಯಿದ್ದರೆ ಹೊಸದೇನನ್ನಾದರೂ ಆರಂಭಿಸಬಹುದು. ಜನರ ಜೊತೆ ಸೌಹಾರ್ದವಾದ ಮಾತುಕತೆಗಳಿಂದ ಪ್ರೀತಿಯು ಹುಟ್ಟುವುದು. ಸಾಹಸ ಮನೋಭಾವದಿಂದ ಯಶಸ್ಸು. ಆರ್ಥಿಕ ನಿರ್ಧಾರಗಳಲ್ಲಿ ತಾಳ್ಮೆ ಮತ್ತು ಪರಿಶೀಲನೆ ಅಗತ್ಯ. ಸಂಬಂಧಗಳಲ್ಲಿ ಗೊಂದಲಗಳು ತಲೆದೋರಬಹುದು, ಸೂಕ್ಷ್ಮವಾಗಿ ನಡೆದುಕೊಳ್ಳಿ. ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ. ಕುಟುಂಬದವರ ಮಾತುಗಳು ಕಿರಿಕಿರಿ ಎನಿಸಬಹುದು. ನಿಮ್ಮ ತಾಳ್ಮೆಯು ಇಂದು ಕಡಿಮೆಯಾಗಿ ಏನಾದರೂ ಹೇಳುವಿರಿ. ಹಣದ ಉಳಿತಾಯದಲ್ಲಿ ಜಿಪುಣರಂತೆ ತೋರುವುದು. ನಿಮಗೆ ನಿರೀಕ್ಷಿತ ಉದ್ಯೋಗವು ಸಿಕ್ಕುವ ಸೂಚನೆ ಬರಲಿದೆ. ಸಾಲವು ಮುಗಿಯುತು ಎಂದುಕೊಳ್ಳುತ್ತಿದ್ದಂತೆ ಇನ್ನೊಂದು ಆರಂಭವಾಗಬಹುದು. ಬಂಧುಗಳಿಂದ ನೀವು ನಿರ್ಲಕ್ಷ್ಯಕ್ಕೆ ಒಳಗಾಗುವಿರಿ. ನಿಮಗೆ ಸಿಕ್ಕ ಅಶುಭ ಸೂಚನೆಯಿಂದ ಭಯವಾಗಬಹುದು. ದಾಂಪತ್ಯದಲ್ಲಿ ನೀವು ಸುಖವನ್ನು ಕಾಣುವಿರಿ. ಇಷ್ಟು ದಿನ ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ಇಂದು ನಿರ್ವಹಿಸಲು ಕಷ್ಟವಾದೀತು.
ತುಲಾ ರಾಶಿ: ನಿಮ್ಮವರ ಅಶಿಸ್ತಿನ ಕೆಲಸವನ್ನು ನೀವು ಸರಿ ಮಾಡಬೇಕಾಗುವುದು. ಕಾಮಗಾರಿಗಳ ವಿಚಾರದಲ್ಲಿ ದೂರು ಬರಬಹುದು. ಬಳಕೆಯಾಗದ ಭೂಮಿಯಿಂದ ಮಾರಾಟ ಮಾಡಿ ಆದಾಯವನ್ನು ಪಡೆಯುವಿರಿ. ಹಣಕ್ಕಾಗಿ ಇನ್ನೊಬ್ಬರಿಗೆ ಮಾನಸಿಕ ಒತ್ತಡವನ್ನೂ ಹಿಂಸೆಯನ್ನೂ ಕೊಡುವಿರಿ. ಆದಾಯದಲ್ಲಿ ಸ್ಥಿರತೆ ಕಾಣಬಹುದು. ವ್ಯವಸ್ಥಿತ ಯೋಜನೆ ರೂಪಿಸಿದರೆ ಭವಿಷ್ಯದಲ್ಲಿ ಲಾಭ. ಮಾತುಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸುವ ಸಮಯ. ಕೌಟುಂಬಿಕ ಜೀವನದಲ್ಲಿ ಅಹಂಕಾರಕ್ಕೆ ಅವಕಾಶ ನೀಡಬೇಡಿ. ಹೂಡಿಕೆಯ ಕಡೆ ಅಧಿಕ ಆಲೋಚನೆ ಮಾಡುವಿರಿ. ಗೌಪ್ಯವಾಗಿ ನಿಮಗೆ ಹಣವು ಸಿಗಲಿದೆ. ಅದನ್ನು ಯಾರ ಬಳಿಯೂ ಹೇಳಿಕೊಳ್ಳುವುದಿಲ್ಲ. ಸಮಯವನ್ನು ನೋಡಿ ನಿಮ್ಮ ವಿಚಾರವನ್ನು ಮೇಲಧಿಕಾರಿಗಳಿಗೆ ಹೇಳಿ. ಮನೆಯಲ್ಲಿ ಇದ್ದು ಕೆಲಸ ಮಾಡುವವರಿಗೆ ಬಂಧನದಂತೆ ಅನ್ನಿಸಬಹುದು. ದಾನದಿಂದ ನಿಮಗೆ ಪ್ರಶಂಸೆಯು ಸಿಗುವುದು. ಆಭರಣಗಳನ್ನು ಖರೀದಿಸುವ ಇಚ್ಛೆ ಇದ್ದರೆ ಖರೀದಿಸಬಹುದು. ಸಲ್ಲದ ಮಾತುಗಳನ್ನಾಡಿ ಅನಂತರ ಪಶ್ಚಾತ್ತಾಪಪಡುವಿರಿ.
ವೃಶ್ಚಿಕ ರಾಶಿ: ಆದಾಯವು ಕಡಿಮೆ ಇದ್ದರೂ ಖರ್ಚನ್ನು ಮಾಡಲು ಯಾವುದೇ ಹಿಂಜರಿಕೆ ಇರದು. ಹಣವು ಹೆಚ್ಚಾಗುತ್ತದೆ ಎಂಬ ಸ್ಥೈರ್ಯವು ಇರುವುದು. ವೃತ್ತಿ ಜೀವನದಲ್ಲಿ ಹೊಸ ಹೊಣೆಗಾರಿಕೆಗಳನ್ನು ನಿರ್ವಹಣೆ. ಆರ್ಥಿಕವಾಗಿ ಲಾಭದಾಯಕ ದಿನ, ಹಳೆಯ ಸಾಲ ತೀರಿಸುವ ಅವಕಾಶ. ಕುಟುಂಬದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಲಿದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಅಂದುಕೊಂಡ ಕಾರ್ಯವು ಮುಗಿಯುತ್ತ ಇರುವಾಗಲೇ ಯಾರಾದರೂ ಅಡ್ಡಿ ಮಾಡುವರು. ಸ್ನೇಹಿತರ ಸಲಹೆಯ ಆಧಾರದ ಮೇಲೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಿರಿ. ಯಾರನ್ನೋ ಮೆಚ್ಚಿಸಲು ಹೋಗಿ ನಿಮ್ಮ ಸಮಯವು ವ್ಯರ್ಥವಾದೀತು. ಸಂದರ್ಭದಲ್ಲಿ ಎಲ್ಲವೂ ಗೊತ್ತಿದೆ ಎಂದು ತೋರಿಸಿಕೊಳ್ಳುವುದು ನಿಮಗೆ ಕಷ್ಟವಾದೀತು. ಆಪ್ತರ ಜೊತೆಗಿನ ಬಿಚ್ಚು ಮನಸ್ಸಿನ ಮಾತುಕತೆಯಿಂದ ನಿಮ್ಮ ಭಾರವಾದ ಮನಸ್ಸು ಹಗುರಾಗುವುದು. ನೀವು ಇಂದು ಸಿಟ್ಟು ಮಾಡಿಕೊಳ್ಳಬಹುದಾದ ಸನ್ನಿವೇಶಗಳು ಬಾರದು. ಇಂದು ಸ್ತ್ರೀಯರಿಂದ ಸುಖವನ್ನು ಅನುಭವಿಸುವಿರಿ. ನಿಮ್ಮ
ಧನು ರಾಶಿ: ಪ್ರಭಾವೀ ವ್ಯಕ್ತಿಗಳ ಕಡೆಯಿಂದ ನಿಮಗೆ ಕೆಲಸವು ಸಿಗಬಹುದು. ಅಪಮಾನವನ್ನು ಎದುರಿಸುವುದು ನಿಮಗೆ ಕಷ್ಟವಾದೀತು. ಅವಿವಾಹಿತರು ತಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಿರಿ. ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ದೊರೆಯಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ, ದಿನಚರಿಯಲ್ಲಿ ತಾಳ್ಮೆ ವಹಿಸಿ. ಮನೆಯವರ ಸಹಕಾರದಿಂದ ನಿಮ್ಮ ಸಮಸ್ಯೆ ಪರಿಹಾರ. ನಿಮ್ಮ ಧೈರ್ಯ ಮತ್ತು ದೃಢ ನಿಲುವು ಯಶಸ್ಸಿನ ಮೂಲಮಂತ್ರ. ನೂತನ ವಸ್ತುಗಳನ್ನು ಪಡೆದು ಸಂತೋಷಪಡುವಿರಿ. ಗೌರವಾದಿಗಳು ಸಿಕ್ಕಿ ಸಂತೋಪಡುವಿರಿ. ನೀವು ಅಂದುಕೊಂಡ ಹಾಗೆಯೇ ನಡೆಯದು. ಅಮೂಲ್ಯ ವಸ್ತುಗಳನ್ನು ಎಲ್ಲಿಯೋ ಇಟ್ಟು ಹುಡುಕುವಿರಿ. ಧಾರ್ಮಿಕ ಆಚರಣೆಗಳನ್ನು ಹೆಚ್ಚು ಮಾಡಲು ಮನಸ್ಸಾಗುವುದು. ನಿಮ್ಮ ವಾಹನವನ್ನು ಚಲಾಯಿಸಲು ಕಷ್ಟವಾದೀತು. ನಿಮ್ಮವರು ನಿಮ್ಮ ದೋಷವನ್ನೇ ಹೆಚ್ಚು ಹೇಳುವರು. ರಾಜಕೀಯದಲ್ಲಿ ಅನಿರೀಕ್ಷಿತ ಬದಲಾವಣೆ ಆಗುವುದು. ಸಾಹಿತ್ಯದಲ್ಲಿ ಆಸಕ್ತಿ ಇರುವವರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಕೊಳ್ಳುವರು.
ಮಕರ ರಾಶಿ: ಶತ್ರುಗಳ ಕಾಟವು ಇಲ್ಲದಿದ್ದರೂ ಅವರ ಬಗ್ಗೆ ಕುತೂಹಲ, ಅನುಮಾನ ಬರುವುದು. ಮಿತ್ರರ ಭೂಮಿಯ ಖರೀದಿಗೆ ಸಹಾಯ. ಸ್ತ್ರೀಯರು ತಮ್ಮ ಇಷ್ಟದ ಕಾರ್ಯದಲ್ಲಿ ಮುಳುಗುವರು. ಅಪರಿಚಿತರೇ ನಿಮಗೆ ಆಗಿಬರಬಹುದು. ಅನ್ಯೋನ್ಯತೆ ಹುಟ್ಟುವುದು. ಉದ್ವೇಗಕ್ಕೆ ವಶವಾಗದೇ ಬುದ್ದಿವಂತಿಕೆಯಿಂದ ನಿಮ್ಮ ಕಾರ್ಯವನ್ನು ಮುನ್ನಡೆಸಿ. ಆರ್ಥಿಕ ಪರಿಸ್ಥಿತಿ ಸ್ಥಿರವಾಗಿರುತ್ತದೆ, ಹೊಸ ಆದಾಯದ ಅವಕಾಶ ಇರುತ್ತದೆ. ವೃತ್ತಿಯ ಅಭಿವೃದ್ಧಿಗೆ ನೂತನ ಅವಕಾಶಗಳು ಲಭ್ಯ. ತಮ್ಮ ಉದ್ಯಮವನ್ನು ಪ್ರಭಾವೀ ವ್ಯಕ್ತಿಗಳ ಸಹಾಯದಿಂದ ಜನಪ್ರಿಯ ಗೊಳಿಸಿಕೊಳ್ಳುವರು. ಮಕ್ಕಳನ್ನು ದೂರ ಕಳಿಸುವುದು ನಿಮಗೆ ಇಷ್ಟವಾಗದು. ಎಲ್ಲವನ್ನೂ ನೀವೇ ಮಾಡಬೇಕು ಎನ್ನುವ ಮಾನಸಿಕತೆ ಬೇಡ. ಒಂಟಿತನವು ಇಷ್ಟವಾಗುವುದು. ಕುರುಡು ನಂಬಿಕೆಯಿಂದ ನಿಮಗೆ ಇಷ್ಟವಾಗುವುದು. ಕುಟುಂಬದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಗೌಪ್ಯವಾಗಿ ಇರುವುದು. ಸಿಟ್ಟನ್ನು ಯಾರದೋ ಮೇಲೆ ತೀರಿಸಿಕೊಂಡು ಸಮಾಧಾನಪಡುವಿರಿ. ಹಿರಿಯರ ಮಾತಿನಿಂದ ಪ್ರೇರಣೆ ಸಿಗಲಿದೆ.
ಕುಂಭ ರಾಶಿ: ಇಂದಿನ ಅನಿರೀಕ್ಷಿತ ಖರ್ಚಿನಿಂದ ವಿಚಲಿತರಾಗುವಿರಿ. ಸರಳತೆಯನ್ನು ರೂಢಿಸಿಕೊಳ್ಳಬೇಕು. ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡಲು ಸಂಕಲ್ಪ. ಪ್ರಯತ್ನಿಸಿದರೆ ಹೊಸ ಅವಕಾಶಗಳು ಎದುರಾಗಬಹುದು. ನಿಮ್ಮ ಪರಿಶ್ರಮಕ್ಕೆ ಇಂದು ಫಲಿತಾಂಶ ದೊರೆಯಬಹುದು. ಆರ್ಥಿಕ ಅಭಿವೃದ್ಧಿಗೆ ಹೊಸ ಆಯ್ಕೆಗಳನ್ನು ಅನ್ವೇಷಿಸುವಿರಿ. ಕುಟುಂಬ ಜೊತೆ ಸಂತಸದ ಕ್ಷಣಗಳನ್ನು ಕಳೆಯುವಿರಿ. ಭೂಮಿಯ ಉತ್ಪನ್ನದಿಂದ ಕೆಲವು ಅದಾಯವು ಸಿಗಬಹುದು. ಬಂಧುಗಳ ಅನಾರೋಗ್ಯದ ಕಾರಣ ನೀವು ಧನಸಹಾಯವನ್ನು ಮಾಡಬೇಕಾದೀತು. ನಿಮ್ಮ ಸ್ಥಾನವನ್ನು ಕಾಪಾಡಿಕೊಳ್ಳಲು ಬೇರೆಯವರ ಮೇಲೆ ಗೂಬೆ ಕೂರಿಸುವಿರಿ. ಹೊಸ ಸಾಲಕ್ಕೂ ಮೊದಲು ಹಳೆಯದನ್ನು ದೂರಮಾಡಿಕೊಳ್ಳುವುದು ಉತ್ತಮ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಏಕಾಗ್ರತೆಯು ಇಲ್ಲವಾಗಬಹುದು. ಮಾತಿನಲ್ಲಿ ಪೇಲವ ಬೇಡ. ದೃಢತೆಯಿಂದ ಮಾತನಾಡಿ. ನೀವೇ ಆಯ್ಕೆ ಮಾಡಿಕೊಂಡ ಕೆಲಸದಲ್ಲಿ ಆಸಕ್ತಿಯು ಕಡಿಮೆ ಇರುವುದು. ನಿಮ್ಮ ನಿರ್ಧಾರಗಳು ಬಲವಾದಂತೆ ಕಾರ್ಯಗಳಲ್ಲಿಯೂ ದೃಢತೆ ಇರಲಿ.
ಮೀನ ರಾಶಿ: ಇಂದು ವಾದದಲ್ಲಿ ಸೋಲನ್ನು ಒಪ್ಪಿಕೊಂಡು ಗೆಲುವಿಗಾಗಿ ಪ್ರಯತ್ನಿಸುವಿರಿ. ಉದ್ಯಮದಲ್ಲಿ ಜಾಣ್ಮೆಯಿಂದ ವ್ಯವಹರಿಸುವಿರಿ. ಉನ್ನತ ವಿದ್ಯಾಭ್ಯಾಸದ ಕಾರಣ ದೂರ ಪ್ರಯಾಣವನ್ನು ಮಾಡಬೇಕಾಗಬಹುದು. ಇಂದು ಸಂಯಮವನ್ನು ಹೊಂದಿರುವುದು ಅವಶ್ಯಕ. ಹೊಸ ಉತ್ಸಾಹದಿಂದ ಕಾರ್ಯಗಳು ಕೈಗೂಡುವುದು. ಆರ್ಥಿಕವಾಗಿ ನಿರೀಕ್ಷಿತ ಲಾಭ ದೊರಕುವ ಸಾಧ್ಯತೆ ಇದೆ. ಕೌಟುಂಬಿಕ ವಿಚಾರದಲ್ಲಿ ಸಾಮರಸ್ಯ ಹೆಚ್ಚಾಗಬಹುದು. ಹೊಸ ವ್ಯವಹಾರ ಶುರು ಮಾಡಲು ಚಿಂತನೆ. ತಾಯಿಯ ಕಡೆಯಿಂದ ನಿಮಗೆ ಆಸ್ತಿಯು ಲಭಿಸುವುದು. ಅಂದುಕೊಂಡ ಕಾರ್ಯಕ್ಕೆ ಬೆಂಬಲು ಪೂರ್ಣವಾಗಿ ಸಿಗದು. ಹಣಕಾಸಿನ ವಿಚಾರದಲ್ಲಿ ಯಾರನ್ನು ನಂಬಬೇಕು ಎಂಬುದು ಗೊತ್ತಾಗದು. ಅತಿಥಿ ಸತ್ಕಾರದಿಂದ ಖುಷಿಯಾಗುವುದು. ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಆಸೆ ಇರುವುದು. ಪತ್ನಿಯ ಅನವಶ್ಯಕ ಖರ್ಚಿಗೆ ಕಡಿವಾಣವನ್ನು ಹಾಕಬೇಕಾದೀತು. ಇದಕ್ಕಾಗಿ ಕೂಗಾಡಿಕೊಳ್ಳಬಹುದು. ಮಕ್ಕಳ ಬಗ್ಗೆ ನಿಮ್ಮ ಲಕ್ಷ್ಯವು ಇರಲಿ.