Horoscope Today 21 February 2025: ಯಾರೋ ಕೊಟ್ಟಿದ್ದು ನಿಮ್ಮದಾಗದು, ನೀವು ಪಡೆದದ್ದು ನಿಮ್ಮದೇ

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಸುಕರ್ಮ, ಕರಣ : ಬವ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭಕಾಲ : ರಾಹು ಕಾಲ 11:19 – 12:46, ಯಮಘಂಡ ಕಾಲ 15:42 – 17:10, ಗುಳಿಕ ಕಾಲ 08:23 – 09:51.

ಮೇಷ ರಾಶಿ: ಇಂದು ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಬಂದರೆ ನಿಮ್ಮ ಪ್ರವೇಶದ ಅಗತ್ಯ ಬೀಳದು. ಕ್ಷಣಾರ್ಧದಲ್ಲಿ ಪರಿಹಾರವನ್ನು ಕಂಡುಕೊಳ್ಳುಬರು. ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿಬರಬಹುದು. ಲಕ್ಷ್ಯಕ್ಕೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ನಿಮ್ಮ ಯೋಜನೆ ಉತ್ತಮವಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕಷ್ಟವಾದೀತು. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ಮಕ್ಕಳಿಂದ ಪ್ರೀತಿಯನ್ನು ಪಡೆಯುವಿರಿ.

ವೃಷಭ ರಾಶಿ: ಇಂದು ಉನ್ನತ ಅಧಿಕಾರಿಗಳು ನಿಮ್ಮಿಂದ ಅಧಿಕ ನಿರೀಕ್ಷೆಯನ್ನು ಅಪೇಕ್ಷಿಸುವರು. ಉದ್ಯಮಿಗಳ ಕೆಲಸದಲ್ಲಿ ಅಡೆತಡೆಗಳು ಬರಬಹುದು. ಅದನ್ನು ಗಣನೆಗೆ ತೆಗೆದುಕೊಳ್ಳದೇ ಮುಂದುವರಿಯುವಿರಿ. ಉದ್ಯೋಗವನ್ನು ನಂಬಿ ಜೀವನ ಸಾಗಿಸುವವರಿಗೆ ಬೇಸರ ಎದುರಾಗಬಹುದು. ಕಳೆದುಕೊಂಡಿದ್ದನ್ನು ನೀವು ಪುನಃ ಪಡೆದುಕೊಳ್ಳುವ ಪ್ರಯತ್ನದಲ್ಲಿ ನೀವು ಇರುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ಸೌಂದರ್ಯವರ್ಧನೆಗೆ ಬೇಕಾದ ಸಮಯವನ್ನು ಕೊಡುವಿರಿ. ವ್ಯವಹಾರದಲ್ಲಿ ಗೊಂದಲವಿಟ್ಟುಕೊಳ್ಳುವುದು ಬೇಡ. ನಿಮ್ಮ ಸೋಲನ್ನು ಒಪ್ಪಿಕೊಳ್ಳದೇ ವಾದಿಸುವಿರಿ. ನಿಮ್ಮ ಪರೀಕ್ಷೆಯ ದಿನವು ಇಂದಾಗಿದ್ದು ಫಲಿತಾಂಶವೂ ನಿಮ್ಮ ವರ್ತನೆಯ ಮೇಲಿರುವುದು.

ಮಿಥುನ ರಾಶಿ: ವಿದೇಶದಲ್ಲಿ ಇರುವ ಬಂಧುಗಳು ತಮ್ಮ ಬದುಕನ್ನು ಸ್ವಾವಲಂಬಿಯಾಗಿಸಿಕೊಳ್ಳಲು ಬಯಸುವರು. ಯಾವುದೋ ಅಸತ್ಯವಾದ ಉದ್ಯೋಗಕ್ಕೆ ಮನಸೋತು ಹಣವನ್ನು ಕಳೆದುಕೊಳ್ಳಬೇಕಾದೀತು. ಪ್ರೀತಿಯ ವಿಷಯದಲ್ಲಿ ಇಂದು ದುಃಖ. ಮನಸ್ತಾಪವನ್ನು ದ್ವೇಷವಾಗಿ ಪರಿವರ್ತಿಸಿಕೊಳ್ಳುವುದು ಬೇಡ. ವ್ಯಾಪಾರದ ನಷ್ಟವನ್ನು ಇನ್ನಾವುದರಿಂದಲೇ ತುಂಬಿಕೊಳ್ಳುವಿರಿ. ಮನೆಯ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವುದಿಲ್ಲ. ಆದಾಯದ ವಿಚಾರದಲ್ಲಿ ಹಿನ್ನಡೆಯಾಗಿದ್ದು ನಿಮ್ಮ ತಂತ್ರವು ಪೂರ್ಣವಾಗಿ ಫಲಿಸದು. ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ನಿಮಗೆ ಆಗದವರ ಮೇಲೆ ಸಲ್ಲದ ದೂರನ್ನು ಕೊಡುವಿರಿ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ಕೆಲವರ ತಂತ್ರಕ್ಕೆ ಸಿಲುಕಿ ನೀವು ಒದ್ದಾಡಬೇಕಾಗುವುದು. ನಟರಿಗೆ ಅವಕಾಶವು ಸಿಕ್ಕೂ ಸಿಗದಂತೆ ಆಗಬಹುದು. ಎಲ್ಲ ಸನ್ನಿವೇಶಕ್ಕೂ ಒಂದೇ ಪರಿಹಾರವು ಇರದು. ಒಂದೇ ವಿಚಾರವನ್ನು ಹೆಚ್ಚು ಯೋಚಿಸಿದಷ್ಟೂ ಮನಸ್ಸು ದುರ್ಬಲವಾಗಬಹುದು. ಅಲ್ಪ ಮೊತ್ತವನ್ನು ಸಾಮಾಜಿಕ ಕಾರ್ಯಕ್ಕೆ ಕೊಡುವಿರಿ.

ಕರ್ಕಾಟಕ ರಾಶಿ: ಕೆಲವು ಸ್ಥಳಗಳಲ್ಲಿ ನಿಮ್ಮ ವರ್ತನೆಯನ್ನು ನೀವು ನಿಯಂತ್ರಿಸಿಕೊಳ್ಳಬೇಕು, ಇಲ್ಲದಿದ್ದರೆ ತಮಾಷೆಯ ವಸ್ತುವಾಗಬೇಕಾಗುವುದು. ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ಪಾಲುದಾರಿಕೆಯನ್ನು ಪಡೆಯುವ ಮೊದಲು ಸಾಧ್ಯಾಸಾಧ್ಯತೆಗಳ ಬಗ್ಗೆ ಗಮನವಿರಲಿ. ಕೆಲಸದ ಸ್ಥಳದಲ್ಲಿ ಸಾಕಷ್ಟು ಕಠಿಣ ಪರಿಶ್ರಮ ಇರುತ್ತದೆ. ಆದಾಯದಲ್ಲಿ ಅಡೆತಡೆಗಳು ಉಂಟಾಗಬಹುದು, ವೆಚ್ಚಗಳು ಹೆಚ್ಚಾಗುತ್ತವೆ. ಕುಟುಂಬ ಜೊತೆ ಯಾವುದಾದರೂ ಧಾರ್ಮಿಕ ಸ್ಥಳಕ್ಕೆ ಪ್ರವಾಸ ಹೋಗುವಿರಿ. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವ ಪ್ರಯತ್ನವಿರಲಿದೆ‌. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ. ನಿಮ್ಮ ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು. ನಿದ್ರೆಯನ್ನು ಹೆಚ್ಚು ಮಾಡುವಿರಿ. ಜವಾಬ್ದಾರಿಯನ್ನು ಪಡೆದ ಬೆನ್ನಲ್ಲೇ ಹಿತಶತ್ರುಗಳನ್ನೂ ಹೆಚ್ಚಿಸಿಕೊಳ್ಳುವಿರಿ. ಚಂಚಲವಾದ ಮನಸ್ಸು ನಿಮ್ಮ ಸಂಗಾತಿಗೆ ಇಷ್ಡವಾಗದು.

ಸಿಂಹ ರಾಶಿ: ಇಂದು ಉದ್ಯೋಗಿಗಳಿಗೆ ಕಛೇರಿಯಲ್ಲಿ ಸಂತೋಷದಿಂದ ಸಮಯ ಕಳೆಯುವ ಅವಕಾಶವು ಸಿಗಲಿದೆ. ತಪ್ಪನ್ನು ಮಾಡಿ ಅನಂತರ ಅದನ್ನು ಸರಿ ಮಾಡಿಕೊಳ್ಳಲು ವಿವಿಧ ಪ್ರಯತ್ನವನ್ನು ಮಾಡುವಿರಿ. ಹಳೆಯ ಸ್ನೇಹಿತರ ಸಹಾಯದಿಂದ ನೀವು ಉದ್ಯೋಗಾವಕಾಶಗಳನ್ನು ಪಡೆಯಬಹುದು. ನಿಮ್ಮ ಇಚ್ಛೆಗೆ ವಿರುದ್ಧವಾಗಿ ಕೆಲಸದ ಪ್ರದೇಶದಲ್ಲಿ ಒತ್ತಡ ಹೆಚ್ಚಳವಾಗುವ ಸಾಧ್ಯತೆ ಇದೆ. ಮನೆಯಲ್ಲಿ ಹಬ್ಬದ ವಾತಾವರಣ ಇರಲಿದ್ದು ನೀವೂ ಬಹಳ ದಿನಗಳ ಅನಂತರ ಇಂತಹ ಸಂತೋಷವನ್ನು ಪಡೆಯುವಿರಿ. ಕಛೇರಿಯ ಕಾರ್ಯವನ್ನು ಮನೆಯಲ್ಲಿ ಇದ್ದು ಮಾಡಬೇಕಾಗಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ಎಲ್ಲೇ ಇದ್ದರೂ ನಿಮಗೆ ಬೇಕಾದ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳುವಿರಿ. ಸಾಮಾಜಿಕ ತಾಣದಲ್ಲಿ ಹೆಚ್ಚು ಸಮಯ ಕಳೆಯುವಿರಿ. ಸ್ನೇಹಿತರ ತಮಾಷೆಯು ನಿಮಗೆ ಇಷ್ಟವಾಗದು. ದ್ವಿಚಕ್ರ ವಾಹನವನ್ನು ಓಡಿಸುವಾಗ ಎಚ್ಚರ ಇರಲಿ. ಸಂಗಾತಿಯ ಮನಃಸ್ಥಿತಿಗೆ ಪೂರಕವಾಗಿ ನಿಮ್ಮ ಆಲೋಚನೆಯೂ ಇರಲಿದ್ದು ನಿಮಗೆ ಖುಷಿಯಾಗುವುದು.

ಕನ್ಯಾ ರಾಶಿ: ಎಂತಹ ಒತ್ತಡದ ನಡುವೆಯೂ ತಾಳ್ಮೆಯನ್ನು ಕಂಡುಕೊಳ್ಳುವಿರಿ. ಕಾರಣಾಂತರಗಳಿಂದ ನಿಲ್ಲಿಸಿದ್ದ ಕಾರ್ಯವನ್ನು ಪುನಃ ಪ್ರಾರಂಭಿಸಲು ಸಹಕಾರ ಸಿಗುವುದು. ಹಳೆಯ ವಾಹನವನ್ನು ಪಡೆದುಕೊಳ್ಳುವಿರಿ. ಮನಸ್ಸು ಗೊಂದಲದಲ್ಲಿ ಉಳಿಯುತ್ತದೆ. ಧಾರ್ಮಿಕ ಕಾರ್ಯಗಳ ಕಡೆ ಶ್ರದ್ಧೆ ಹೆಚ್ಚಾಗುತ್ತದೆ. ತಂದೆಯ ಅನಾರೋಗ್ಯದಿಂದ ನಿಮಗೆ ಚಿಂತೆ. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳಬೇಕಾಗುವುದು. ಕೆಲವು ಶುಭ ಸೂಚನೆಗಳು ನಿಮಗೆ ಗೊತ್ತಾಗಲಿದ್ದು ನಿರೀಕ್ಷೆಯೂ ಎಂದಿಗಿಂತ ಹೆಚ್ಚಿರಲಿದೆ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು. ಸಿಕ್ಕ ಅವಕಾಶದಲ್ಲಿ ತೃಪ್ತಿ ಪಡೆಯುವುದು ಮುಖ್ಯವಾಗಿರಲಿ. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ಎಲ್ಲದಕ್ಕೂ ವಿಧಿಯನ್ನು ಹೀಗಳೆಯುವುದಕ್ಕಿಂತ ನಿಮ್ಮ ಪ್ರಯತ್ನವನ್ನು ಮುಂದುವರೆಸಿರಿ. ಮನಶ್ಚಾಂಚಲ್ಯದಿಂದ ಕಛೇರಿಯಲ್ಲಿ ಸರಿಯಾದ ಕೆಲಸವನ್ನು ಮಾಡಲಾಗದು.

ತುಲಾ ರಾಶಿ; ಇಂದು ಉನ್ನತ ಅಧಿಕಾರಿಗಳ ಜೊತೆ ಹೆಚ್ಚು ವ್ಯವಹಾರವನ್ನು ಮಾಡಬೇಕಾಗಿರುವ ಕಾರಣ ಅವರ ಜೊತೆ ಸಮಯ ಕಳೆಯುವಿರಿ. ಹಣಕಾಸಿನ ವೆಚ್ಚಗಳ ಬಗ್ಗೆ ವಿಶೇಷವಾಗಿ ಕಾಳಜಿ ಬೇಕು. ಸ್ನೇಹಿತರ ಜೊತೆ ಮೋಜಿನಲ್ಲಿ ದಿನವನ್ನು ಮುಗಿಸುವಿರಿ. ಉದ್ಯೋಗದಲ್ಲಿ ಕೆಲಸದ ವ್ಯಾಪ್ತಿಯನ್ನು ಹೆಚ್ಚಿಸುವ ಸಾಧ್ಯತೆಯಿದೆ, ಹೆಚ್ಚಿನ ಶ್ರಮ ಇರುತ್ತದೆ, ಖರ್ಚುಗಳು ಹೆಚ್ಚಾಗುತ್ತವೆ. ಜಾಹೀರಾತು ವಿಭಾಗದಲ್ಲಿ ಇರುವವರಿಗೆ ಅವಕಾಶವು ಹೆಚ್ಚು ಸಿಗಬಹುದು. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು. ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದ್ದು ನಿಮ್ಮ ಇಂದಿನ ಕಾರ್ಯವು ಬದಲಾಗಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ. ಲೆಕ್ಕಪತ್ರದ ವಿಚಾರದಲ್ಲಿ ನಿಷ್ಠುರವಾದ ಮನೋಭಾವವನ್ನು ಇಟ್ಟುಕೊಳ್ಳುವಿರಿ. ನಿಮ್ಮ ಮನಸ್ಸಿಗೆ ಹಿಡಿಸದೇ ಇರುವವರಿಂದ ದೂರ ಉಳಿಯುವಿರಿ.

ವೃಶ್ಚಿಕ ರಾಶಿ; ವಿದ್ಯಾರ್ಥಿಗಳು ಹಲವು ದಿನಗಳ ಅನಂತರ ಅಭ್ಯಾಸದಲ್ಲಿ ನಿರತರಾಗಿರುತ್ತಾರೆ. ಏಕಾಗ್ರತೆಯಿಂದ ಕೆಲಸ ಮಾಡಿದರೆ ಅನಾಯಾಸವಾಗಿ ಗುರಿಯನ್ನು ತಲುಪಬಹುದು. ಲಾಭಾಕ್ಕಾಗಿ ವ್ಯಾಪಾರದಲ್ಲಿ ನೂತನ ಆಕರ್ಷಕ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಮಕ್ಕಳ ಜೊತೆ ಚಿಂತೆಯನ್ನೆಲ್ಲ ಬಿಟ್ಟು ಸಂತೋಷದಿಂದ ಕಾಲವನ್ನು ಕಳೆಯುವಿರಿ. ನಿಮ್ಮ ಕೆಲಸದಲ್ಲಿ ನೀವು ಅಧಿಕಾರಿಗಳಿಂದ ಸಹಕಾರವನ್ನು ಪಡೆಯುತ್ತೀರಿ. ಸ್ಥಳ ಬದಲಾವಣೆ ಸಾಧ್ಯತೆ ಇದೆ. ಔದಾಸೀನ್ಯದಿಂದ ವ್ಯಾಪಾರದಲ್ಲಿ ನಷ್ಟವಾಗಲಿದೆ. ಇಂದಿನ ಪ್ರಯಾಣದಿಂದ ಹಿಂಸೆ ಆಗಬಹುದು. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ನಿರೀಕ್ಷಿತ ಫಲವು ಲಭಿಸದು. ದೇವರ ಬಗ್ಗೆ ಶ್ರದ್ಧೆಯು ಕಡಿಮೆಯಾಗಲಿದೆ. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು. ನಿಮ್ಮ ಇಚ್ಛಾಶಕ್ತಿಯು ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಹಕಾರಿ.

ಧನು ರಾಶಿ: ಉದ್ಯೋಗವನ್ನು ಅರಸುತ್ತಿರುವ ನೀವು ಇಂದು ದುಡಿಕಿ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಒಳ್ಳೆಯ ಕೆಲಸವನ್ನು ನಷ್ಟ ಮಾಡಿಕೊಳ್ಳುವಿರಿ. ಯಂತ್ರದ ವ್ಯಾಪಾರದಿಂದ ನಿಮಗೆ ಲಾಭವು ಅಧಿಕವಾಗುವುದು. ನಿಮ್ಮ ತಾಯಿಯಿಂದ ಬೆಂಬಲವನ್ನು ಪಡೆಯುತ್ತೀರಿ, ವೆಚ್ಚಗಳು ಹೆಚ್ಚಾಗುತ್ತವೆ. ವಾಹನ ನಿರ್ವಹಣೆಗೆ ಖರ್ಚು ಹೆಚ್ಚಾಗಬಹುದು. ನೀವು ಶೈಕ್ಷಣಿಕ ಕೆಲಸದ ಸಂತೋಷದ ಫಲಿತಾಂಶಗಳನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು. ಉದ್ಯಮದ ಕಾರಣ ಇರುವ ಸ್ಥಳದಿಂದ ದೂರ ಹೋಗಬೇಕಾಗುವದು. ಸುಳ್ಳನ್ನಾಡಿ ನಿಮ್ಮ ಕೆಲಸವನ್ನು ಇಂದು ಮಾಡಿಸಿಕೊಳ್ಳುವಿರಿ. ಅಚಾತುರ್ಯದಿಂದ ಹಣ ನಷ್ಟ. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದು ಕಾರ್ಯಕ್ಕೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಉತ್ತಮ. ನಿಮ್ಮ ಬಗ್ಗೆ ಯಾರಿಗೂ ಗೊತ್ತಿಲ್ಲ ಮಾಹಿತಿಯು ಗೊತ್ತಾಗುವುದು. ವಿದ್ಯೆಯ ಕಾರಣಕ್ಕೆ ಇಂದು ನಿಮಗೆ ಗೌರವವು ಸಿಗಲಿದೆ.

ಮಕರ ರಾಶಿ: ಇಂದು ನಿಮ್ಮ ಹಠದ ಸ್ವಭಾವದಿಂದ ಬೇರೆಯವರ ಹೃದಯವನ್ನೂ ನೋಯಿಸುವಿರಿ. ಮೇಲಧಿಕಾರಿಗಳಿಗೆ ನೇರ ನುಡಿಯ ಪ್ರತಿಕ್ರಿಯೆಯನ್ನು ನೀಡುವುದು ಬೇಡ. ದಿನನಿತ್ಯದ ಬಳಕೆಯ ವಸ್ತುಗಳ ವ್ಯಾಪಾರ ಮಾಡುವವರ ಮಾರಾಟ ನಿರೀಕ್ಷೆಗಿಂತ ಹೆಚ್ಚಾಗಿರುತ್ತದೆ. ಆತ್ಮವಿಶ್ವಾಸದ ಕೊರತೆ ಇರುತ್ತದೆ. ಕೌಟುಂಬಿಕ ಜೀವನವು ನೋವಿನಿಂದ ಕೂಡಿರಬಹುದು. ಕೆಲಸದ ವ್ಯಾಪ್ತಿಯಲ್ಲಿ ಬದಲಾವಣೆಯಾಗಬಹುದು. ಕೋಪದ ಸಂದರ್ಭದಲ್ಲಿ ಸಮಾಧಾನವನ್ನು ತಂದುಕೊಳ್ಳುವಿರಿ. ಎಲ್ಲರ ನಡುವೆ ಸಂವಹನ ಮಾಡುವಾಗ ತಾಳ್ಮೆಯಿಂದಿರಿ. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಸಿಕ್ಕ ಅವಕಾಶದಲ್ಲಿ ಪ್ರೀತಿಯಿರಲಿ. ಕೊರಗುತ್ತ ಇರುವುದು ಬೇಡ.

ಕುಂಭ ರಾಶಿ: ಪರಿಚಿತರ ರಹಸ್ಯವನ್ನು ದ್ವೇಷದ ಕಾರಣಕ್ಕೆ ಹೊರ ಹಾಕುವಿರಿ. ನಿಮ್ಮ ಕಾರ್ಯದ ಅನುಭವವು ಇಂದು ಪ್ರಯೋಜನಕ್ಕೆ ಬರಲಿದ್ದು, ಎಲ್ಲರೂ ನಿಮ್ಮ ಸಲಹೆಯನ್ನು ಪಡೆಯುವರು. ಕಲಾವಿದರು ಅವಕಾಶದಿಂದ ವಂಚಿತರಾಗಬೇಕಾಗುವುದು. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ ಇದೆ. ಇಂದು ನೀವು ಕೆಲಸದ ನಿಮಿತ್ತ ಬೇರೆ ಸ್ಥಳಕ್ಕೆ ಹೋಗಬೇಕಾಗಬಹುದು. ಮಕ್ಕಳಿಗೆ ಆರೋಗ್ಯ ಸಮಸ್ಯೆಗಳಿರಬಹುದು. ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಓಡಾಟವು ಅಧಿಕವಾಗಿ ಇರುವುದು. ಸ್ನೇಹಿತರು ನಿಮಗೆ ಸುಳ್ಳು ಹೇಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಹೂಡಿಕೆಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗದು.

ಮೀನ ರಾಶಿ: ಮೈಯೆಲ್ಲ ಕಣ್ಣಾಗಿ ಕಾರ್ಯದಲ್ಲಿ ಜಾಗರೂಕರಾದಾಗ ಮಾತ್ರ ಅವಕಾಶಗಳು ಸಿಗುತ್ತವೆ. ಕಛೇರಿ ಕೆಲಸವು ನಿಮ್ಮ ಸ್ವಂತ ಕೆಲಸಕ್ಕೆ ತೊಂದರೆಯನ್ನು ಕೊಡಬಹುದು. ಇಂದು ನಿಮ್ಮ ಕೆಲಸದಲ್ಲಿ ನೀವು ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ, ಪ್ರಗತಿಯ ಸಾಧ್ಯತೆಗಳಿವೆ. ಆದಾಯ ಹೆಚ್ಚುತ್ತದೆ ಆದರೆ ಸ್ಥಳ ಬದಲಾವಣೆಯ ಸಾಧ್ಯತೆಗಳಿವೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವರು. ಯಾರದೋ ವಿವಾಹದ ಕಾರ್ಯಕ್ಕೆ ಓಡಾಟ ಮಾಡಬೇಕಾದೀತು. ಒಂದಿಷ್ಟು ಆಯಾಸ ಬಿಟ್ಟರೆ, ಮತ್ತೇನೂ ಆಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಸಂಗಾತಿಯ ಜೊತೆ ಭಿನ್ನಮತವು ಬರಬಹುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ಆಭರಣ ಖರೀದಿಗೆ ಉತ್ತಮ ದಿನವಿದಾಗಲಿದೆ. ವೃದ್ಧರ ಸೇವೆಯಲ್ಲಿ ತೊಡಗಿಕೊಳ್ಳುವಿರಿ.

Source : https://tv9kannada.com/horoscope/horoscope-today-february-21-2025-what-someone-gives-is-not-yours-what-you-get-is-yours-zodiac-signs-in-kannada-ggs-981180.html

Leave a Reply

Your email address will not be published. Required fields are marked *