ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ಷಷ್ಠೀ ತಿಥಿಯಲ್ಲಿ ವೃತ್ತಿಯನ್ನೇ ನಂಬಿ ಜೀವನ ಸಾಗಿಸುವವರಿಗೆ, ಅನಿರೀಕ್ಷಿತ ಮನಸ್ತಾಪದಲ್ಲಿ ಇರಬೇಕಾದ ಮನಸ್ಸು, ಗೆಳೆತನವನ್ನು ನಿಭಾಯಿಸುವ, ಹೊಸ ಕಾರ್ಯಕ್ಕೆ ಹೋಗಬೇಕಾದ ಇರಬೇಕಾದ ಪೂರ್ವಸಿದ್ಧತೆಗಳನ್ನು ಇಂದಿನ ಭವಿಷ್ಯದಿಂದ ಪಡೆದುಕೊಳ್ಳಬಹುದು. ಸಂಪೂರ್ಣ ದಿನವು ಶುಭಕರವಾಗಿರಲಿ.
![](https://samagrasuddi.co.in/wp-content/uploads/2024/09/image-12-1024x576.png)
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಹೇಮಂತ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಶ್ರವಣಾ, ಮಾಸ : ಪೌಷ, ಪಕ್ಷ : ಕೃಷ್ಣ, ವಾರ : ಮಂಗಳ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಶ್ರವಣಾ, ಯೋಗ : ವಜ್ರ, ಕರಣ : ಭದ್ರ, ಸೂರ್ಯೋದಯ – 07 – 02 am, ಸೂರ್ಯಾಸ್ತ – 06 – 28 pm ಇಂದಿನ ಶುಭಾಶುಭಕಾಲ : ರಾಹು ಕಾಲ 15:37ರಿಂದ 17:03ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:54ರಿಂದ ಬೆಳಗ್ಗೆ 11:20, ಗುಳಿಕ ಕಾಲ ಮಧ್ಯಾಹ್ನ 12:4 6ರಿಂದ ಮಧ್ಯಾಹ್ನ 14:12ರ ವರೆಗೆ.
ಮೇಷ ರಾಶಿ :ದೇಹದಂಡನೆಗೆ ನೀವು ಆಸಕ್ತಿ ತೋರಿಸಲಾರಿರಿ. ಮಹಿಳೆಯರಿಗೆ ಶುಭ ಸುದ್ದಿ ಇರಲಿದ್ದು ಬಹಳ ದಿನಗಳ ಅನಂತರ ನಿಮಗೆ ನಿರಾಳ ಸಿಕ್ಕಂತೆ ಆಗುವುದು. ವಸ್ತುಗಳ ಉತ್ಪನ್ನ ಮಾಡುವವರಿಗೆ ನೌಕರರ ಕೊರತೆ ಕಾಣಿಸಬಹುದು. ಹಠಾತ್ ಬದಲಾವಣೆಯನ್ನು ಕುಟುಂಬ ನಿಮ್ಮಿಂದ ನಿರೀಕ್ಷಿಸದು. ಕೃಷಿ ಉತ್ಪನ್ನಗಳ ಮೇಲೆ ನಂಬಿಕೆ ಇರಲಿದೆ. ತಂದೆಯಿಂದ ಮಾನಸಿಕವಾಗಿ ನೋವಾಗಲಿದೆ. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಎಲ್ಲರೂ ನಾನಾ ಪ್ರಶ್ನೆಗಳನ್ನು ಕೇಳುವರು. ಸ್ನೇಹವು ವೈರವಾಗಿ ಬದಲಾಗಬಹುದು, ಇದು ಪರಸ್ಪರ ಪೂರಕವಾದುದಲ್ಲ. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಇಂದು ಉತ್ತಮವಾಗಿದೆ. ಕಾರ್ಯಕ್ಷೇತ್ರದಿಂದ ಹೆಚ್ಚುವರಿ ಆದಾಯ ಬರುವುದು. ನಿಮ್ಮ ಬದ್ಧತೆಯನ್ನು ಉಳಿಸಿಕೊಳ್ಳಿ. ಕಾಮಗಾರಿಗೆ ಬೇಕಾದ ಆರ್ಥಿಕ ನೆರವು ಲಭ್ಯವಾಗಿ ಕಾರ್ಯ ಮುಂದುವರಿಯುವುದು.
ವೃಷಭ ರಾಶಿ : ಸರ್ಕಾರಿ ಉದ್ಯೋಗದ ಅಪೇಕ್ಷೆ ಇದ್ದರೂ ಪ್ರವೇಶದ್ವಾರ ನಿಮಗೆ ಮುಚ್ಚಿದಂತೆ ಕಾಣಿಸುತ್ತದೆ. ಸಾಮಾಜಿಕತೆಯನ್ನು ರೂಢಿಸಿಕೊಳ್ಳುವ ಬಗ್ಗೆ ಆಸಕ್ತಿ ತೋರುವಿರಿ. ಉದ್ಯೋಗದಲ್ಲಿ ಗೊತ್ತಾಗದೇ ನಿಮ್ಮ ಮೇಲೆ ಅಪವಾದಗಳು ಬರಬಹುದು. ಅದನ್ನು ತಾಳ್ಮೆ ತಿಳಿಸಿ, ಸರಿ ಮಾಡಿಕೊಳ್ಳುವಿರಿ. ಆರೋಗ್ಯದ ವ್ಯತ್ಯಾಸದಿಂದ ನಿಮ್ಮ ಮುಖ್ಯ ಕಾರ್ಯಗಳನ್ನು ಮಾಡಲು ಆಗದು. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಗುವಂತೆ ಮಾಡಬಹುದು. ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು. ವ್ಯವಹಾರದ ಬಗ್ಗೆ ಹೆಚ್ಚಿನ ಗಮನ ಹರಿಸಿದ ಅನಂತರವೂ ಕೆಲಸ ತಡವಾಗಿ ಪೂರ್ಣಗೊಳ್ಳುತ್ತದೆ. ಇಂದು ನಿಮಗೆ ಮನಸ್ಸಿನ ಭಾರವನ್ನು ಕಳೆದುಕೊಳ್ಳುವುದು ಕಷ್ಟ. ಹೊಸ ಸಂಬಂಧದ ಮೂಲಕ ಅದೃಷ್ಟ ಬರಬಹುದು. ಸಾಮಾಜಿಕ ಗೌರವವನ್ನು ಪಡೆಯುತ್ತೀರಿ. ನಿಮ್ಮ ಆಜ್ಞೆಯಂತೆ ಎಲ್ಲವೂ ನಡೆಯುತ್ತದೆ ಎಂಬ ನಿರೀಕ್ಷೆ ಬೇಡ.
ಮಿಥುನ ರಾಶಿ : ನಿಮ್ಮಿಂದ ಪ್ರಭಾವಕ್ಕೆ ಒಳಪಟ್ಟವರನ್ನು ಸರಿಯಾಗಿ ಕರೆದೊಯ್ಯುವಿರಿ. ಉನ್ನತ ವಿದ್ಯಾಭ್ಯಾಸಕ್ಕೆ ಹಿರಿಯರಿಂದ ಆಶೀರ್ವಾದವನ್ನು ಪಡೆದುಕೊಳ್ಳುವಿರಿ. ಇನ್ನೊಬ್ಬರಲ್ಲಿ ಪ್ರೀತಿ ಮೂಡುವ ಸಾಧ್ಯತೆ ಇದೆ. ಹಳೆಯ ಗೆಳೆಯರು ನಿಮಗೆ ಆಕಸ್ಮಿಕವಾಗಿ ಸಿಕ್ಕಾರು. ಆಸೆಗಳನ್ನು ಹಿಡಿದಿಟ್ಟುಕೊಂಡು ಕಷ್ಟಪಡಬೇಕಾಗಿಲ್ಲ. ತಪ್ಪುಗಳನ್ನು ತಿದ್ದಿಕೊಂಡು ಒಳ್ಳೆಯವರಾಗುವಿರಿ. ಇನ್ನೊಬ್ಬರ ಭಾವಕ್ಕೆ ಸ್ಪಂದಿಸುವ ಗುಣವಿರುವುದು. ನಾನಾ ಪ್ರಕಾರದ ಖರ್ಚುಗಳಿಂದ ಇಂದಿನ ದಿನದ ಸಮಯವು ದುಬಾರಿ ಎನಿಸಬಹುದು. ನಿಮ್ಮ ಲಾಭಕ್ಕೆ ಪೂರಕವಾದ ಅವಕಾಶಗಳು ಸಿಗುತ್ತವೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಮಕ್ಕಳನ್ನು ಹಿಡೆತಕ್ಕೆ ತರಲು ಪ್ರಯತ್ನಿಸುವಿರಿ. ಉದ್ಯೋಗದ ಪ್ರಯಾಣವು ನಿಮ್ಮನ್ನು ವಿದೇಶಕ್ಕೆ ಕರೆದುಕೊಂಡುಹೋಗಬಹುದು. ಪ್ರಮುಖ ನಿರ್ಧಾರವನ್ನು ಅವಸರದಲ್ಲಿ ತೆಗೆದುಕೊಳ್ಳುವುದು ಬೇಡ. ಅಧ್ಯಾತ್ಮದ ಬಗ್ಗೆ ಆಸಕ್ತಿ ಇರುತ್ತದೆ. ಸಹೋದರಿಯರು ಮತ್ತು ಸಂಗಾತಿ ನಿಮ್ಮ ಬೆಂಬಲ ಪಡೆಯುವರು.
ಕರ್ಕಾಟಕ ರಾಶಿ :ನಿಮಗೆ ಬರುವ ಕಷ್ಟಕಾಲವು ಪುಣ್ಯ ಕರ್ಮದ ಫಲದಿಂದ ದೂರಾಗುವುದು. ನಿಮ್ಮ ಕಾರ್ಯಗಳಲ್ಲಿ ಉತ್ಸಾಹವಿದ್ದರೂ ಹಿತಶತ್ರುಗಳು ನಿಮ್ಮ ಕಾರ್ಯವನ್ನು ಕಾಳು ಮಾಡಿಯಾರು. ಅಧಿಕಾರಿ ವರ್ಗದಿಂದ ನಿಮ್ಮ ಮೇಲೆ ಒತ್ತಡವು ಬರಬಹುದು. ನಿಮ್ಮ ತಪ್ಪನ್ನು ಮರೆಮಾಚಲು ಪ್ರಯತ್ನಿಸುವಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಆರ್ಥಿಕ ಚಿಂತೆಗಳು ಸಕಾರಾತ್ಮಕ ಮಾರ್ಗದಲ್ಲಿ ಇರಲಿ. ನಷ್ಟದ ಪ್ರಮಾಣಗಳು ಅಧಿಕವಾಗಬಹುದು. ಮರೆವಿನಿಂದ ನಿಮ್ಮ ವಸ್ತುಗಳು ಕಷ್ಟವಾಗಬಹುದು. ಅಪರಿಚಿತರ ವ್ಯವಹಾರವನ್ನು ಕಡಿಮೆ ಮಾಡಿ. ನಿಮ್ಮನ್ನು ನೀವೇ ಬೈದುಕೊಳ್ಳುವ ಸ್ಥಿತಿ ಬರಬಹುದು. ಅದನ್ನು ಕೂಡಲೇ ಪ್ರಕಟಿಸದೇ ನಿಯಂತ್ರಿಸಲು ಪ್ರಯತ್ನಿಸಿ. ಆತ್ಮೀಯರ ಬಳಿ ನಿಮ್ಮ ಅಳಲನ್ನು ಹಂಚಿಕೊಳ್ಲಕುವಿರಿ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು. ದೈನಂದಿನ ವ್ಯಾಪಾರಿಗಳು ಹೆಚ್ಚು ಶ್ರಮಿಸಬೇಕು. ನಿಮ್ಮ ಮನೋವಿಕಾರದಿಂದ ಇತರರಿಗೂ ಕಷ್ಟವಾದೀತು.
ಸಿಂಹ ರಾಶಿ :ಮೇಲಾಧಿಕಾರಿಗಳ ಜೊತೆ ಒಲ್ಲದ ಮನಸ್ಸಿನಿಂದ ಕಾರ್ಯವನ್ನು ಮಾಡಬೇಕು. ಕೆಲವನ್ನು ಅನುಭವಿಗಳ ಜೊತೆ ಚರ್ಚಿಸಿ ತೀರ್ಮಾನಿಸುವುದು ಒಳ್ಳೆಯದು. ಸಮಯಕ್ಕಾಗಿ ನೀವು ಕಾಯುವುದು ಅನಿವಾರ್ಯವಾದೀತು. ಅನಾರೋಗ್ಯದ ಗಂಭೀರತೆಯನ್ನು ಅರ್ಥಮಾಡಿಕೊಂಡಿರಿ. ನಿಮ್ಮ ಸಹಕಾರದ ಗುಣವು ಎಲ್ಲರಿಗೂ ಮೆಚ್ಚುಗೆಯಾದೀತು. ಸ್ವಯಂಕೃತ ಅಪರಾಧದಿಂದ ನಿಮಗೆ ಕಿಂಚಿತ್ತೂ ಬೇಸರವಾಗದು. ನಿಮ್ಮ ಸೋಮಾರಿತನವೇ ನಿಮ್ಮ ದೊಡ್ಡ ಶತ್ರುವಾಗಲಿದೆ. ಒಂಟಿತನದ ಆಲೋಚನೆಯು ಪೂರ್ಣವಾಗದು. ಮಹಿಳಾ ಉದ್ಯೋಗಿಗಳಿಗೆ ಬಡ್ತಿ, ಪ್ರಶಂಸೆ ಪ್ರಾಪ್ತಿ. ಆರ್ಥಿಕತೆಯು ನಿಮಗೆ ತೃಪ್ತಿ ಕೊಡುವುದು. ವ್ಯಕ್ತಿತ್ವದ ಬೆಳವಣಿಗೆಯ ಜೊತೆಗೆ ಸಾಮಾಜಿಕ ಚಿತ್ರಣವನ್ನು ಬದಲಿಸುವಿರಿ. ಹಣವು ಒಮ್ಮೆ ಕೈಗೆ ಬಂದರೆ, ಸಾಹಸ ಕಾರ್ಯಗಳಲ್ಲಿ ತೊಡಗುವಿರಿ. ಸ್ವಲ್ಪ ಕುಟುಂಬದ ಸಮಸ್ಯೆಗಳಿಂದಾಗಿ, ಮನಸ್ಸು ಚಂಚಲವಾಗಿರುತ್ತದೆ.
ಕನ್ಯಾ ರಾಶಿ : ಕಾನೂನಾತ್ಮಕ ಹೋರಾಟಕ್ಕೆ ಜಯ ಸಲ್ಲುವುದು. ನಿಮ್ಮ ಮಾತುಗಳನ್ನು ಉಳಿಸಿಕೊಳ್ಳಲು ಶ್ರಮದ ಅಗತ್ಯವಿದೆ. ತಾಯಿಯಿಂದ ಆರ್ಥಿಕ ಸಹಾಯವನ್ನೂ ಸಿಗಲಿದ್ದು ತೃಪ್ತಿದಾಯಕವಾಗಲಿದೆ. ವಾಹನವನ್ನು ಖರೀದಿಸುವ ಯೋಜನೆಯನ್ನು ಮುಂದೂಡುವುದು ಉತ್ತಮ. ವಿದ್ಯಾಭ್ಯಾಸದಲ್ಲಿ ಅಸ್ಥಿರತೆ ಕಾಡಬಹುದು. ನಿಮ್ಮ ಮಾತಿಗೆ ಆಕ್ಷೇಪಗಳು ಬರಬಹುದು. ಆಹಾರದ ಉದ್ಯಮಕ್ಕೆ ಆದಾಯ ಹೆಚ್ಚು. ನಿಮ್ಮ ಕಾರಣದಿಂದ ಕುಟುಂಬವು ಸಂಕಷ್ಟದಲ್ಲಿ ಸಿಕ್ಕಿಕೊಳ್ಳಬಹುದು. ಎಲ್ಲಾ ಕೆಲಸಗಳನ್ನು ಮಾಡಿದರೂ ಯಶಸ್ಸಿನಲ್ಲಿ ವಿಳಂಬವಾಗಬಹುದು. ಮನಸ್ಸಿನ ನಕಾರಾತ್ಮಕ ಭಾವನೆಗಳು ನಿಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ವಿಚಲಿತರನ್ನಾಗಿ ಮಾಡುತ್ತವೆ. ನಿಮ್ಮ ಸ್ವಭಾವದಿಂದ ವೈರಿಗಳು ಹುಟ್ಟಿಕೊಳ್ಳಬಹುದು. ಮನಸ್ಸು ಅನೈತಿಕ ಚಟುವಟಿಕೆಗಳಿಂದ ವಿಮುಖವಾಗಬಹುದು. ನಿಮಗೆ ಸಂಬಂಧವಿಲ್ಲದ ವಿಚಾರದ ಬಗ್ಗೆ ಯಾರು ಏನೇ ಅಂದರೂ ಚಿಂತೆ ಬೇಡ.
ತುಲಾ ರಾಶಿ :ಮಕ್ಕಳಿಗೆ ನಿಮ್ಮ ಹಿತನುಡಿಯ ಅವಶ್ಯಕತೆ ಇದೆ. ಅವರನ್ನು ಭಾವನಾತ್ಮಕವಾಗಿ ಬಂಧಿಸಬೇಕು. ಇಂದು ಹಣಕಾಸಿನ ಕ್ರಮಬದ್ದ ಹೂಡಿಕೆ ಮತ್ತು ಖರ್ಚುಗಳ ಬಗ್ಗೆ ಸಂಗಾತಿಯ ಜೊತೆ ಚಿಂತನೆ ನಡೆಸುವಿರಿ. ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಇಂದು ಅನಿರೀಕ್ಷಿತ ಪ್ರಶಂಸೆ ಹಾಗು ಗೌರವಗಳು ಸಿಗಲಿವೆ. ಆಲಸ್ಯದಿಂದ ಹೊರಬರುವ ಮನಸ್ಸಾಹುವುದು. ಅಸ್ಥಿರವಾದ ಮನಸ್ಸನ್ನು ಸೂಕ್ಷ್ಮ ಕಾರ್ಯಗಳಿಗೆ ಜೋಡಿಸಲಾಗದು. ಮಕ್ಕಳ ಭವಿಷ್ಯದ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಳ್ಳುವಿರಿ. ನಿಮ್ಮ ಬಗ್ಗೆ ಇರುವ ಆಕ್ಷೇಪಗಳು ಎಲ್ಲವು ಮುರಿದು ಬೀಳಬಹುದು. ನ್ಯಾಯ ನೀತಿಯ ವಿರುದ್ಧ ನಡೆಯುವುದು ಬೇಡ. ಸ್ಥಿರಾಸ್ತಿಯ ನಷ್ಟದಿಂದ ಬೇಸರವಾಗುವುದು. ಸ್ನೇಹಿತರ ಜೊತೆ ಸಣ್ಣ ಕಾರಣಕ್ಕೆ ಕಲಹವಾಗುವುದು. ಯೌವನದ ಉತ್ಸಾಹದಿಂದ ಮತ್ತೆಲ್ಲ ಕುರುಡಾಗುವುದು. ಇಂದು ನಿಮಗೆ ಸಾಮಾಜಿಕವಾಗಿ ಗೌರವವನ್ನು ಪಡೆಯುವಿರಿ. ಆದರೆ ಕೆಲವು ತಪ್ಪುಗ್ರಹಿಕೆಯಿಂದಾಗಿ ಅಸಮಾಧಾನ ಇರಲಿದೆ. ಇಂದಿನ ಉದ್ಯಮವು ನಿಮ್ಮ ಹಿಡಿತದಲ್ಲಿ ಇರುತ್ತದೆ. ಲಾಭವೂ ಹೆಚ್ಚಾಗುವುದು.
ವೃಶ್ಚಿಕ ರಾಶಿ :ದುಷ್ಟರ ಪ್ರಭಾವವು ನಿಮ್ಮ ಮೇಲೆ ಆಗಲಿದೆ. ನಿಮ್ಮ ಯೋಜನೆಯ ಮುಖ್ಯ ಕೆಲಸಗಳು ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು ನಿಮಗೆ ನಿರಾಳವೆನಿಸಬಹುದು. ಪರಸ್ಥಳ ವಾಸದಿಂದ ನಿಮಗೆ ಕಸಿವಿಸಿಯಾಗುವ ಸಾಧ್ಯತೆ ಇದೆ. ದಾಂಪತ್ಯದ ಮಾರ್ಗವು ಅಲ್ಲಲ್ಲಿ ತಿರುವು ಕಂಡರೂ ಮಾರ್ಗ ಬೇರೆ ಆಗದು. ದುಃಸ್ವಪ್ನಗಳಿಂದ ನಿಮ್ಮ ಮನಸ್ಸು ವಿಕಾರವಾಗುವುದು. ಉನ್ನತ ವಿದ್ಯಾಭ್ಯಾಸದ ಚಿಂತೆ ಕಾಡಬಹುದು. ಶತ್ರುಗಳು ನಿಮ್ಮ ನೆಮ್ಮದಿಯನ್ನು ಹಾಳುಮಾಡಬಹುದು. ಎಂದೋ ಮಾಡಿದ ಕಾರ್ಯಕ್ಕೆ ಇಂದು ಪಶ್ಚಾತ್ತಾಪ ಪಡಬೇಕಾದೀತು. ಯಾರ ಆಳವನ್ನೂ ಮೇಲಿಂದ ಕಂಡುಕೊಳ್ಳಲಾಗದು. ನಿಮ್ಮ ಕಾರ್ಯಕ್ಕೆ ತೃಪ್ತಿ ಸಿಗದೇ ಟೀಕೆಗಳು ಬರುವುವು. ಇಂದು, ನೀವು ವಾಸ್ತವಕ್ಕಿಂತ ಕಾಲ್ಪನಿಕತೆಯಲ್ಲಿ ಹೆಚ್ಚು ಇರುತ್ತೀರಿ. ಈ ಕಾರಣದಿಂದಾಗಿ ಜನರು ನಿಮ್ಮನ್ನು ಕಂಡು ನಗುವರು. ಖರ್ಚು ಆದಾಯಕ್ಕಿಂತ ಹೆಚ್ಚಾಗುತ್ತದೆ.
ಧನು ರಾಶಿ :ಶತ್ರುಗಳ ಭೀತಿಯಿಂದ ನಿಮಗೆ ನಿರಾತಂಕ ಎನಿಸದರೂ ಸಹೋದರರು ಆಸ್ತಿಯ ಬಗ್ಗೆ ಮನಸ್ತಾಪಗೊಳ್ಳುವರು. ನೀವು ವಹಿಸಿಕೊಳ್ಳುವ ಜವಾಬ್ದಾರಿಗಳು ಕಠಿಣ ಹಾದಿಯದ್ದಾಗಿರಲಿದೆ. ಯಾರದೋ ಮಾತಿನಿಂದ ನೀವು ದುಃಖಪಡುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಧಿಕ ಖರ್ಚನ್ನು ನೀವು ಮಾಡಬೇಕಾಗಯವುದು. ನಿಮ್ಮ ಕಾಮಗಾರಿಗಳು ಅಪೂರ್ಣತೆಯನ್ನೇ ಒಳಗೊಂಡಿದೆ. ಆರ್ಥಿಕತೆಯು ನಿಮ್ಮನ್ನು ಬೇರೆ ಕಾರ್ಯಕ್ಕೆ ಪ್ರೇರೇಪಿಸುವುದು. ವೈವಾಹಿಕ ಜೀವನದ ಚಿಂತೆ ಅತಿಯಾಗಿ ಕಾಡಬಹುದು. ಪಾಲುದಾರಿಕೆಯಲ್ಲಿ ಉಂಟಾದ ವಿವಾದವನ್ನು ದೊಡ್ಡ ಮಾಡಿಕೊಳ್ಳುವಿರಿ. ಸಹೋದ್ಯೋಗಿಗಳಿಗೆ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಇರದು. ಇಂದು ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಅವಮಾನ ಎನಿಸುವುದು. ಈ ದಿನ ನೀವು ಸಂತೋಷವಾಗಿರುವಿರಿ. ಆದರೆ ಅಸಭ್ಯ ವರ್ತನೆಯು ಕೆಲವರಿಂದ ಮಾತುಗಳು ಕೇಳಿಬರಬಹುದು.
ಮಕರ ರಾಶಿ :ಉಪಕಾರಕ್ಕೆ ಪ್ರತ್ಯುಕರಾವಿರದಿದ್ದರೂ ಕೃತಜ್ಞತೆ ಇರಲಿ. ನ್ಯಾಯಾಲಯದಲ್ಲಿ ನಿಮಗೆ ಜಯ ಸಿಗುವ ಸಂಭವವು ಅಸಾಧ್ಯ. ವ್ಯಾಪಾರದಲ್ಲಿ ಹಿನ್ನಡೆಯನ್ನು ಪಡೆಯಬೇಕಾಗುವುದು. ವಿದ್ಯಾಭ್ಯಾಸದ ಗಮನವು ಬೇರೆ ಕಡೆಗೆ ಹೋಗಬಹುದು. ದೀರ್ಘಕಾಲದ ರೋಗದಿಂದ ಬಳಲಿಕೆಯು ನಿಮಗೆ ಅಭ್ಯಾಸವಾಗಲಿದೆ. ಶತ್ರುಗಳ ಕಾಟಗಳು ನಿಮ್ಮ ಉತ್ಸಾಹವನ್ನು ಭಂಗ ಮಾಡಬಹುದು. ದೈವದ ಭೀತಿಯು ನಿಮ್ಮನ್ನು ಕಾಡಬಹುದು. ರಾಜಕಾರಣಿಗಳುಗೆ ಬೆಂಬಲ ಅಧಿಕವಾಗುವುದು. ಈ ದಿನ ನೀವು ಶಾರೀರಿಕ ಕಾಳಜಿಯನ್ನು ಹೆಚ್ಚು ಮಾಡಬೇಕಾದೀತು. ಇಂದು ವ್ಯವಹಾರದಲ್ಲಿ, ಮಾತುಗಳು ಹೆಚ್ಚು ತೀವ್ರವಾಗಿರಲಿದ್ದು, ಅದರ ಸರಿಯಾದ ಪ್ರಯೋಜನು ವಿಳಂಬದಿಂದ ಬರುವುದು. ಹೇಗೋ ಬಂದೊದಗುವ ಖರ್ಚಿಗೆ ನೀವೇ ಪಾಲುದಾರರು. ಕುಟುಂಬ ವಾತಾವರಣವು ಇಂದು ಹೆಚ್ಚು ಭಾವನಾತ್ಮಕವಾಗಿ ಇರುತ್ತದೆ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಕಾಣಿಸಿಕೊಳ್ಳುವುದು.
ಕುಂಭ ರಾಶಿ :ಅನಾರೋಗ್ಯದಿಂದ ಆರ್ಥಿಕ ಪ್ರಗತಿ ಹಿಂದೆಬೀಳಬಹುದು. ದೈನಂದಿನ ಕೆಲಸದಲ್ಲಿ ಬದಲಾವಣೆಯನ್ನು ನೀವು ಅಪೇಕ್ಷಿಸುವಿರಿ. ಕಾರ್ಯ ಕ್ಷೇತ್ರದಲ್ಲಿ ಒತ್ತಡವಿರುವ ಕಾರಣ ಮನಸ್ಸಿಗೆ ಸಿಗಬೇಕಾದ ಶಾಂತಿಯ ಕೊರೆತೆಯೂ ಇರಲಿದೆ. ದಾಂಪತ್ಯದಲ್ಲಿ ನಿರಾಸಕ್ತಿ ಉಂಟಾಗಬಹುದು. ಪಾಲುದಾರಿಕೆಯಲ್ಲಿ ಸಮಸ್ಯೆ ಕಾಣಿಸುವುದು. ನೀವು ಕೊಟ್ಟ ಭರವಸೆ ಹುಸಿಯಾಗಬಹುದು. ನಿಮಗೆ ಯಾರಿಂದಲೋ ರಕ್ಷಣೆ ಇದೆ ಎನ್ನಿಸಬಹುದು. ಮನೆಯಲ್ಲೂ ತಾಳ್ಮೆಯನ್ನು ಇಟ್ಟುಕೊಳ್ಳಿ. ಯಾರೊಬ್ಬರ ಮಾತುಗಳಿಗೆ ಶೀಘ್ರವಾಗಿ ಪ್ರತಿಕ್ರಿಯೆ ಕೊಡುವುದು ಬೇಡ. ಶುಭ ಸುದ್ದಿಯು ನಿಮ್ಮನ್ನು ಪ್ರೋತ್ಸಾಹಿಸಬಹುದು. ತಪ್ಪಿಗೆ ಅಲ್ಪವಾದರೂ ಪಶ್ಚಾತ್ತಾಪ ಇರಲಿ. ಖಾಸಗಿ ಸಂಸ್ಥೆಯಿಂದ ದೂರದೃಷ್ಟಿಯ ಯೋಜನೆಯು ಪ್ರಯೋಜನವಾದೀತು. ಇಂದು ಮನೆಯ ಸದಸ್ಯರ ಮನವೊಲಿಸುವುದು ಕಷ್ಟವಾಗದು. ನಿರಾಶೆಯನ್ನು ಉಂಟುಮಾಡವ ಆಲೋಚನೆಗಳನ್ನು ತಪ್ಪಿಸಿ.
ಮೀನ ರಾಶಿ :ಕೊಟ್ಟ ಜವಬ್ದಾರಿಯನ್ನು ನ್ಯೂನತೆ ಬಾರದಂತೆ ನಿಭಾಯಿಸುವಿರಿ. ಇಂದು ಯಂತ್ರೋಪಕರಣಗಳ ಮಾರಾಟದಿಂದ ಹೆಚ್ಚಿನ ಲಾಭವನ್ನು ನೀವು ಕಾಣಬಹುದು. ನಿಮ್ಮದೇ ಸ್ಥಿರಾಸ್ತಿ ವ್ಯವಹಾರದಲ್ಲಿ ನಿಮಗೆ ಅನುಕೂಲವಾಗುವಂತೆ ಆಗುವುದು. ಮಾನಸಿಕ ನೆಮ್ಮದಿಯು ನಿಮ್ಮ ಹಲವು ಕೆಲಸಗಳನ್ನು ಮಾಡಲು ಸಹಾಯಕವಾಗುವುದು. ವಾಹನದ ತೊಂದರೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ. ಸ್ವಂತ ವ್ಯಾಪಾರದಲ್ಲಿ ಹಿನ್ನಡೆಯಾಗುವುದು. ಬೋಧಕ ವೃಂದದ ಸತತ ಪ್ರಯತ್ನಕ್ಕೆ ಗೆಲುವು ಸಿಗಲಿದೆ. ತೆಗಳಿಕೆಯನ್ನು ಛಲವಾಗಿ ತೆಗೆದುಕೊಳ್ಳುವಿರಿ. ಯಾರ ಮೇಲೂ ಅವಮಾನ ಬೇಡ. ವಾಣಿಜ್ಯದಲ್ಲೂ ಕೆಲಸ ಸುಗಮವಾಗಿ ನಡೆಯುವುದು. ಹಿಂದಿನ ತಪ್ಪುಗಳು ಪಾಠವಾಗುವುದು. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಇಂದು ತಂದೆ ಹೇಳಿದ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ಕೆಲವು ವಿಷಯಗಳ ಬಗ್ಗೆ ಮನೆಯ ಹಿರಿಯರಿಂದ ವ್ಯತ್ಯಾಸಗಳು ಆಗಬಹುದು.