Horoscope Today 29 April: ಈ ರಾಶಿಯವರಿಗೆ ಆಕಸ್ಮಿಕ ಧನಲಾಭವು ಆಶ್ಚರ್ಯವನ್ನು ಉಂಟುಮಾಡಬಹುದು.

Horoscope Today 29 April: ಈ ರಾಶಿಯವರು ಅನಕ್ಷರಸ್ಥರ ಜೊತೆ ವಾಗ್ವಾದ ಮಾಡುವರು

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ದ್ವಿತೀಯಾ ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ಸೌಭ ಅಗ್ಯ ಕರಣ : ಬವ, ಸೂರ್ಯೋದಯ – 06 – 12 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭಕಾಲ : ರಾಹು ಕಾಲ 15:39 – 17:13, ಯಮಘಂಡ ಕಾಲ 09:21 – 10:56, ಗುಳಿಕ ಕಾಲ 12:30 – 14:05

ಮೇಷ ರಾಶಿ: ಹೃದಯ ಭಾಗದಲ್ಲಿ ನೋವು ಕಾಣಿಸಬಹುದು. ಇಂದು ಶ್ರಮಪಟ್ಟು ಮಾಡಿದ ಕೆಲಸವು ಕೊನೆಯ ಕ್ಷಣದಲ್ಲಿ ಹಾಳಾಗಿ, ಬೇಸರವುಂಟಾಗಬಹುದು. ಕರ್ತವ್ಯಗಳನ್ನು ನಿಷ್ಠೆಯಿಂದ ಮಾಡಿ. ಹಿರಿಯರ ದಿನವನ್ನು ಶ್ರದ್ಧೆಯಿಂದ ಮಾಡಿ.‌ ಕುಟುಂಬಕ್ಕೆ ಇದರಿಂದ ಅನೇಕ ಲಾಭಗಳು ನಿಮಗಾಗಲಿವೆ. ಇನ್ನೊಬ್ಬರಿಂದ ಪಡೆದ ಪ್ರಚೋದನೆಯ ಶಕ್ತಿ ಕೆಲ ಕಾಲ ಮಾತ್ರ ಉಳಿಯುವುದು. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಬಂಧುಗಳ ಬಗ್ಗೆ ಸಮಾಧಾನವಿರದು. ಕಾರ್ಯಗಳಿಗೆ ಅಪರಿಚಿತರೂ ಸಹಾಯ ಮಾಡಲಿದ್ದಾರೆ. ಕೃತಜ್ಞತೆಯನ್ನು ಅರ್ಪಿಸಲು ಮರೆಯಬೇಡಿ. ನಿಮ್ಮ ಒಳ್ಳೆತನ ನಿಮಗೆ ವರವಾಗಿಯೇ ಇರಲಿದೆ. ದುಡುಕಿದ ಕಾರ್ಯದಿಂದ ಪಶ್ಚಾತ್ತಾಪವಾಗುವುದು. ಬೇಡವೆಂದು ಬಿಟ್ಟ ಕಾರ್ಯಗಳಿಂದಲೇ ಪ್ರಯೋಜನವಾದೀತು. ವಿದ್ಯಾರ್ಥಿಗಳಲ್ಲಿ ಉತ್ಸಾಹಿಗಳು ಎದ್ದು ಕಾಣಲಿವೆ. ಕೃಷಿಯ ಕುರಿತು ಕುತೂಹಲ ಹಾಗೂ ಆಸೆಯು ಬರಬಹುದು.

ವೃಷಭ ರಾಶಿ: ನಿಮಗೆ ಯೋಗ್ಯವಾದ ಸ್ಥಾನ ಕೊಟ್ಟರೆ ಮಾತ್ರ ಜವಾಬ್ದಾರಿಯನ್ನು ನಿರ್ವಹಿಸುವಿರಿ. ಹಣವು ಯಾವುದೋ ಒಂದು ರೀತಿಯಲ್ಲಿ ಖರ್ಚಾಗುವ ಸಾಧ್ಯತೆ ಇದ್ದು, ಅದನ್ನು ನಿಭಾಯಿಸಿ. ಶತ್ರುಗಳು ನಿಮ್ಮ ಪತನವನ್ನು ನಿರೀಕ್ಷಿಸುತ್ತಿರುತ್ತಾರೆ. ಹೊಸ ಉದ್ಯೋಗ ಸಿಗುವುದೋ ಇಲ್ಲವೋ ಎಂಬ ಅನುಮಾನ ಕಾಡುವುದು. ಜಾಗರೂಕರಾಗಿ ಹೆಜ್ಜೆಯನ್ನು ಹಾಕಿ. ಉದ್ಯೋಗದಲ್ಲಿ ನಿಮ್ಮ ಸ್ಥಾನಕ್ಕೆ ಬರಲು ಯಾರಾದರೂ ಕಾಯುತ್ತಿರಬಹುದು. ಹಿತಶತ್ರುಗಳ ಕಿರುಕುಳವನ್ನು ನೀವು ಸಹಿಸಲಾರಿರಿ. ಮೃಷ್ಟಾನ್ನ ಭೋಜನಕ್ಕೆ ಓಡಾಟ ಮಾಡುವಿರಿ. ಮನೆಯ ವಾತಾವರಣವು ಸಂತೋಷವನ್ನು ಕೊಟ್ಟೀತು. ಯಾರ ಸಹಕಾರವನ್ನೂ ಪಡೆಯದೇ ನಿಮ್ಮ ಕಾರ್ಯಗಳನ್ನು ಮಾಡಿಕೊಳ್ಳುವಿರಿ. ಹಿರಿಯರ ಭೇಟಿಯಿಂದ ಜೀವನಕ್ಕೆ ಹಲವು ಪ್ರಯೋಜನಗಳು ಆಗಲಿವೆ. ಇಷ್ಟವಾಗದವರ ಜೊತೆ ವೃಥಾ ಕಾಲಹರಣ ಮಾಡುವುದು ಬೇಡ. ಸ್ಥಾನಮಾನವನ್ನು ಪಡೆಯಲು ಏನಾದರೂ ಮಾಡುವಿರಿ. ಹಣಕಾಸಿನ ತೊಂದರೆಯನ್ನು ಸರಿ ಮಾಡಿಕೊಳ್ಳುವ ಮಾರ್ಗದ ಅನ್ವೇಷಣೆ ಮಾಡುವಿರಿ. ನೀರಿನ ಭೀತಿಯು ಇರಲಿದೆ.

ಮಿಥುನ ರಾಶಿ: ಪ್ರಯಾಣದಲ್ಲಿ ಪರಿಚಿತರ ಭೇಟಿ. ನಾಲ್ಕು ಜನರನ್ನು ಕೇಳಿಯಾದರೂ ತೊಂದರೆಯಿಲ್ಲ, ನೀವಿಡುವ ಹೆಜ್ಜೆಗಳು ಸರಿಯಾಗಿರಿಲಿ. ಉನ್ನತ ಚಿಂತನೆಗಳು ನಿಮ್ಮನ್ನು ಎತ್ತರಕ್ಕೆ ಒಯ್ಯುವುದು. ಎಲ್ಲರ ಜೊತೆಗೆ ಸ್ನೇಹದಿಂದ ಮಾತನಾಡುವಿರಿ. ಆಪ್ತಬಂಧುಗಳ ಅಗಲಿಕೆಯಿಂದ ನೋವಾಗಬಹುದು. ಸರಕಿನ‌ ಉದ್ಯಮದಿಂದ ಆತಂಕ. ಸಣ್ಣ ಕಲಾವಿದರಿಗೆ ಪ್ರೋತ್ಸಾಹವು ಸಿಗಲಿದೆ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಒತ್ತಡದಿಂದ ನೀವು ಉದ್ವೇಗಕ್ಕೆ ಒಳಗಾಗಬಹುದು. ಯಾರ ಜೊತೆಗೂ ನಿಮ್ಮ ವರ್ತನೆಯು ಸಹಜತವಾಗಿ ಇರದು. ಯಂತ್ರಗಳ ಕೆಲಸವು ನಿಮಗೆ ಸಾಕೆನಿಸಬಹುದು. ಆಸ್ತಿಯ ವಿಚಾರದಲ್ಲಿ ಆಕಸ್ಮಿಕ ತಿರುವು ಬರಬಹುದು. ಇಷ್ಟವಿಲ್ಲದಿದ್ದರೂ ಬಂಧುಗಳ ಮನೆಗೆ ಗಮನ. ನಂಬಿಕೆಯನ್ನು ಗಳಿಸಲು ಸತತ ಪ್ರಯತ್ನವನ್ನು ಮಾಡುವಿರಿ. ಶ್ರೇಷ್ಠ ವ್ಯಕ್ತಿಗಳ ಭೇಟಿಯಿಂದ ಹೊಸ ಕಾರ್ಯಗಳನ್ನು ಮಾಡಲು ಉತ್ಸುಕರಾಗಿರುವಿರಿ. ನಿಮ್ಮ‌ಮಾತಿಗೆ ಸಮಜಾಯಿಷಿ ಕೊಡಬೇಕಾದೀತು. ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡುವುದಿಲ್ಲ ಬೇಸರವೂ ಇರುವುದು. ಆರ್ಥಿಕ ಪರಿಸ್ಥಿತಿ ಸುಧಾರಿಸಿ ನೆಮ್ಮದಿ ಸಿಗುವುದು.

ಕರ್ಕಾಟಕ ರಾಶಿ: ಸಮಯದ ಸದುಪಯೋಗಕ್ಕೆ ಪ್ರಶಂಸೆ ಸಿಗುವುದು. ಇಂದು ಮನೆಯ ಹಿರಿಯರ ಸಹವಾಸವನ್ನು ಮಾಡುವಿರಿ.‌ ಅವರ ಸೇವೆಯಿಂದ ತೃಪ್ತಿ ಇರಲಿದೆ. ತಂತ್ರಜ್ಞರು ಉನ್ನತ ಸ್ಥಾನದ ಬಯಕೆಯಿಂದ ಕಛೇರಿಯನ್ನು ಬಿಡಬಹುದು. ಸರಿಯಾದ ಸ್ಥಳದಲ್ಲಿ ಹೂಡಿಕೆಯಿಂದ ಲಾಭ. ನಿಮ್ಮ ಕೈ ಮೀರಿದ ಕೆಲಸದಲ್ಲಿ ನಿಮಗೆ ಆತಂಕ ಬೇಡ. ಪ್ರೇಮವು ನಿಮಗೆ ಬಂಧನದಂತೆ ಕಾಣಿಸುವುದು. ನಿಮ್ಮ ಸೋಲನ್ನು ನೀವು ಒಪ್ಪಿಕೊಳ್ಳಲಾರಿರಿ. ಅನಿರೀಕ್ಷಿತ ವಾರ್ತೆಯು ನಿಮ್ಮನ್ನು ಚಿಂತೆಗೆ ದೂಡಲಿದೆ. ಪ್ರಶಾಂತವಾದ ವಾತಾವರಣದಲ್ಲಿ ಕೆಲವು ಸಮಯವನ್ನು ಕಳೆದು ಬನ್ನಿ. ಉನ್ನತ ಹುದ್ದೆಗಾಗಿ ಬರೆಯುವ ಪರೀಕ್ಷೆಯಲ್ಲಿ ನಿಮಗೆ ಜಯ ಸಿಗಲಿದೆ. ಇಂದಿನ ನಿಮ್ಮ ವ್ಯಾಪಾರ ವಿಳಂಬವಾಗಿ ಆರಂಭವಾಗುವುದು. ದೂರದ ಊರಿಗೆ ಪ್ರಯಾಣ ಮಾಡಲಿದ್ದೀರಿ. ನಿಮ್ಮ ಸಕಾರಾತ್ಮಕ ಆಲೋಚನೆಗಳೂ ನಿಮಗೆ ಸಹಕಾರವನ್ನು ಕೊಡದು. ಕುಟುಂಬದಲ್ಲಿ ಜವಾಬ್ದಾರಿಯ ಸ್ಥಾನವನ್ನು ಪಡೆಯಬೇಕಾಗುವುದು. ನಿಮ್ಮ ಮಾತು ಸುಳ್ಳಾಗಬಹುದು. ವಸ್ತುಗಳ ಖರೀದಿಯು ಖರ್ಚನ್ನು ಹೆಚ್ಚು ಮಾಡುವುದು.

ಸಿಂಹ ರಾಶಿ: ರಹಸ್ಯ ಬಯಲಾಗುವ ಆತಂಕವಿರುವುದು. ನಿಮ್ಮ ಅನಾರೋಗ್ಯದಿಂದ ಅಭ್ಯಾಸಕ್ಕೆ ತೊಂದರೆಯಾಗಲಿದೆ. ಪೂರ್ಣವಿಶ್ರಾಂತಿಗೆ ನೀವು ಒಳಪಡಬೇಕಾದೀತು. ಅರ್ಥಿಕತೆಯು ಏರಿಕೆಯಾಗಲಿದೆ. ಫಲಾಪೇಕ್ಷೆ ಇಲ್ಲದೇ ಮಾಡುವ ಸಹಾಯದ ಮೌಲ್ಯ ಅರಿವಾಗುವುದು. ಸ್ನೇಹಿತರ ಜೊತೆ ಮೋಜಿನಲ್ಲಿ ಇರುವ ಮನಸ್ಸು ಮಾಡುವಿರಿ. ಸಾಮಾಜಿಕ‌ ಕೆಲಸಗಳು ನಿಮಗೆ ಇನ್ನಷ್ಟೂ ಉತ್ಸಾಹವನ್ನು ಕೊಡುವುದು. ವೈದ್ಯರ ಬಳಿ ಸಾವಧಾನತೆಯಿಂದ ಮಾತನಾಡಿ. ನೀವು ಕಷ್ಟವನ್ನು ಆನಂದದಿಂದ ಕಳೆಯುವಿರಿ. ಅನಕ್ಷರಸ್ಥರ ಜೊತೆ ವಾಗ್ವಾದ ಸಲ್ಲ. ಇಂದು ಕೆಲಸಕ್ಕಿಂತ ಪ್ರಯಾಣವೇ ಹೆಚ್ಚಾಗಿರುವುದು. ಮಕ್ಕಳಿಂದ ನಿಮ್ಮ ಕೀರ್ತಿಯು ಹಾಳಾಗಬಹುದು‌‌. ನಿಮ್ಮ ಮಾತಿಗೆ ಬೆಲೆಯು ಬರುವಂತೆ ಮಾತನಾಡಿ. ಆದಾಯದಲ್ಲಿ ಇತರರಿಗೆ ಸಮಾನವಾಗಿದ್ದರೂ ಖರ್ಚು ಹಾಗಿರುವುದಿಲ್ಲ. ಏನಾದರೊಂದು ಹುಟ್ಟಿಕೊಳ್ಳುತ್ತದೆ. ಶಕ್ತಿ ಮೀರಿದ ಕೆಲಸವನ್ನು ಮಾಡಿ ಆಯಾಸ ಮಾಡಿಕೊಳ್ಳುವುದು ಬೇಡ. ಕುಟುಂಬಕ್ಕೆ ನಿಮ್ಮಿಂದ ಧನಸಹಾಯದ ಅಪೇಕ್ಷೆ ಇರುವುದು.

ಕನ್ಯಾ ರಾಶಿ: ದ್ವಂದ್ವದಿಂದ ಹೊರಗೆ ಬರವುದು ಉತ್ತಮ. ನೀವು ಕುಟುಂಬಕ್ಕೆ ಯೋಗ್ಯವಾದ ಹೆಸರನ್ನು ತಂದುಕೊಡಲಿದ್ದೀರಿ. ವಿದೇಶಕ್ಕೆ ಹೋಗಲು ನಿಮಗೆ ಕಛೇರಿಯಲ್ಲಿ ಅನುಮೋದನೆ ಸಿಗಬಹುದು. ಪುಣ್ಯಸ್ಥಳಗಳಿಗೆ ಅನಿರೀಕ್ಷಿತ ಭೇಟಿ. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ನೇರ ನುಡಿಯಿಂದ ಆಪ್ತರು ದೂರ ಸರಿಯಬಹುದು. ಮನೋರಂಜನೆಯಿಂದ ನಿಮಗೆ ಸಮಾಧಾನ ಸಿಗಲಿದೆ. ಮನೆಯ ಹಿರಿಯರನ್ನು ಸಂತೋಷಪಡಿಸಿದರೆ ಅದೇ ಆಶೀಋವಾದ. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ. ಹೊರದೇಶದಲ್ಲಿ ಹೊಸದಾಗಿ ಕೆಲಸವನ್ನು ಹುಡುಕುತ್ತಿದ್ದರೆ ಅದನ್ನು ನಿಲ್ಲಿಸಿ.‌ ಸದ್ಯ ವಿದೇಶದ ಕಡೆಗೆ ಗಮನವನ್ನು ಕೊಡಬೇಡಿ. ಇರುವ ಸ್ಥಳದಲ್ಲಿಯೇ ಸಿಕ್ಕ ಉತ್ತಮ‌ ಕೆಲಸವನ್ನು ಮಾಡಿ. ನಿಮ್ಮನ್ನು ಆಡಿಕೊಳ್ಳುವ ಜನರು ನಿಮ್ಮ ಪಕ್ಕದಲ್ಲಿಯೇ ಇರುತ್ತಾರೆ. ಅವರಿಗೆ ಕಾಣಿಸುವಂತೆ ಏನನ್ನೂ ಮಾಡಬೇಡಿ. ಇಂದು ಆರಂಭಿಸಿದ ಕೆಲಸಗಳನ್ನು ಇಂದೇ ಮುಗಿಸುವಂತೆ ನೋಡಿಕೊಳ್ಳಿ.

ತುಲಾ ರಾಶಿ: ಆಸ್ತಿಯ ವಿಭಾಗವಾಗುವಾಗ ಯಾವುದೇ ಮನಸ್ತಾಪ ಬರದಂತೆ ಜಾಗಾರೂಕರೆ ಬೇಕು. ನಿಮ್ಮ ಒಳ್ಳೆಯತನಕ್ಕೆ ಯಾವ ಫಲವಿಲ್ಲ ಎಂಬ ಬೇಸರವಿರಲಿದೆ. ಎಲ್ಲ ನಿರರ್ಥಕ ಎನ್ನುವ ಭಾವನೆಯು ನಿಮ್ಮಲ್ಲಿ ಬರಬಹುದು. ಯಾವ ಸಸಿಯೂ ನೆಟ್ಟ ಮರುಕ್ಷಣವೇ ಫಲವನ್ನು ಕೊಡುವುದಿಲ್ಲ ಎಂಬ ವಿಚಾರವು ನಿಮ್ಮೊಳಗೆ ಸರಿಯಾಗಿ ಬೇರೂರಿರಲಿ. ನಮ್ಮ ಪೂರ್ಣವಾಗಿ ನಂಬಲಾರಿರಿ. ನಿಮಗೆ ಬೇಡ ಎನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿ ಬಂದು‌ ಮಾನಸಿಕ ಹಿಂಸೆಯಾದೀತು. ಆಲಸ್ಯದಿಂದ ನಿಮ್ಮ ಕಾರ್ಯಗಳು ನಿಧಾನವಾಗಲಿದೆ. ವ್ಯಾಪರಸ್ಥರಿಗೆ ತಕ್ಕಮಟ್ಟಿನ ಲಾಭವು ಸಿಗಲಿದೆ. ಇಂದು ನಿಮ್ಮ ಭವಿಷ್ಯದ ಗುರಿಯನ್ನು ನಿರ್ಧಾರ ಮಾಡಿಕೊಳ್ಳುವುದು ಉತ್ತಮ. ನಿಮ್ಮ ಪ್ರಶಂಸೆಗೂ ಒಂದು ಬೆಲೆ ಇಂದು ಸಿಗುವುದು. ಆಧ್ಯಾತ್ಮಿಕ ಚಿಂತನೆಯನ್ನು ಹೆಚ್ಚು ಮಾಡುವಿರಿ. ನಿಮ್ಮ ತುಮುಲವನ್ನು ಅರಿತುಕೊಳ್ಳಲಾರರು. ಹತ್ತಿರದ ಬಂಧುಗಳ ಒಡನಾಟವು ಹೆಚ್ಚಿರಲಿದೆ.

ವೃಶ್ಚಿಕ ರಾಶಿ: ವಾಕ್ಸಮರದಿಂದ ನೆಮ್ಮದಿ ಹಾಳು. ಇಂದು ನಿಮ್ಮ ಉತ್ತಮ‌ ನಡತೆಗೆ ಪ್ರಶಂಸೆ ಸಿಗಲಿದೆ. ಕೃಷಿ ಚಟುವಟಿಕೆಯಲ್ಲಿ ಆಸಕ್ತಿಯನ್ನು ತೋರಿಸುವಿರಿ. ವಾಹನಕ್ಕೋಸ್ಕರ ಸಾಲ ಮಾಡುವ ಸ್ಥಿತಿಯು ಬರಬಹುದು. ಮನಸ್ಸಿನ ಸ್ಥಿರತೆಯಲ್ಲಿ ಅಭಾವವಿದ್ದು ನಿಮ್ಮ ಗುರಿಯೂ ಬದಲಾಗುವುದು. ಪ್ರೇಮವು ಕೊನೆಗೂ ಅಂದುಕೊಂಡಂತೆ ಆಗಲಿದೆ. ನಕಾರಾತ್ಮ ಯೋಚನೆಗಳು ನಿಮ್ಮ ಮನಸ್ಸಿನಲ್ಲಿ ಸುಳಿಯಬಹುದು. ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿದ್ದರೆ ಸಂತೋಷಕರವಾದ ಸುದ್ದಿಯೊಂದು ನಿಮ್ಮ ಪಾಲಿಗಿರುತ್ತದೆ. ನಿರುತ್ಸಾಹಿಗಳಾಗಿ ಕುಳಿತುಕೊಳ್ಳದೇ ಏನನ್ನಾದರೂ ಸಾಧಿಸಬೇಕು ಎಂಬ ಮನಸ್ಸು ನಿಮಗೆ ಬರುತ್ತದೆ. ಒತ್ತಡದಿಂದ ಯಾವುದನ್ನೂ ಮಾಡಲು ಹೋಗಬೇಡಿ. ಕಳೆದುಹೋದುದನ್ನು ಹುಡುಕಿ ಪ್ರಯೋಜನ ಇಲ್ಲ. ಕುಟುಂಬದ ಜೊತೆ ನಿಕಟ ಸಂಬಂಧವನ್ನು ಇಟ್ಟುಕೊಳ್ಳುವ ಮನಸ್ಸಾಗುವುದು.‌ ಕಾರ್ಯಗಳಿಂದ ಹೆಚ್ಚಿನ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಉದ್ಯಮದಲ್ಲಿ ಜನರ ವಿಶ್ವಾಸವನ್ನು ಗಳಿಸುವುದು ಮುಖ್ಯವಾಗಿರುವುದು. ಪ್ರವಾಸ ಹೋಗುವ ಮನಸ್ಸಾದೀತು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು.

ಧನು ರಾಶಿ: ಆರೋಗ್ಯವನ್ನು ಕಾಪಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ಇಂದು ನೀವು ನೋಡಲು ಸಾಮಾನ್ಯರಂತೆ ಕಂಡರೂ ನಿಮ್ಮ ಪ್ರಭಾವವು ಅಧಿಕವಾಗಿರುತ್ತದೆ‌. ಸಾಮಾಜಿಕವಾಗಿ ನಿಮ್ಮನ್ನು ಗುರುತಿಸಿ ಸಮ್ಮಾನಿಸಬಹುದು. ಕಲಾವಿದರಾಗುವ ಆಸೆ ಪೂರ್ಣವಾಗುವುದು. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಬಗೆ ಹರಿಯಬಹುದು. ಕುಟುಂಬದ ನೆಮ್ಮದಿಯು ನಿಮ್ಮ ಮಾತಿನಿಂದ ವಿಚಲಿತವಾಗುವುದು. ಕೇಳಿದ್ದಕ್ಕಿಂತ ಹೆಚ್ಚಿನ ಹಣ ಸಿಗುವ ಸಾಧ್ಯತೆ ಇದೆ. ಆಕಸ್ಮಿಕ ಧನಲಾಭವು ನಿಮ್ಮ ಬದುಕನ್ನು ಖುಷಿಯಾಗಿ ಇಡಲಿದೆ. ಮತ್ತೊಬ್ಬರಿಗೆ ಸಹಾಯ ಮಾಡುವ ಅವಕಾಶ ಬಂದಾಗ ಅದನ್ನು ಅಲ್ಲಗಳೆಯಬೇಡಿ. ಉದ್ಯೋಗದ ಸ್ಥಳ ನಿಮಗೆ ಅನೇಕ ಅನುಕೂಲಗಳನ್ನು ಮಾಡಬಹುದು. ವಿದ್ಯಾಭ್ಯಾಸಕ್ಕೆ ಅತಿಯಾದ ಹಣಕಾಸಿನ ಖರ್ಚು ಬರಲಿದ್ದು, ನಿಮಗೆ ಕಷ್ಟವಾಗುವುದು. ಅಸೂಯೆಯಿಂದಾಗಿ ನಿಮ್ಮ ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳುವ ಸಾಧ್ಯತೆ ಇದೆ. ಆಕಸ್ಮಿಕವಾಗಿ ಧನಲಾಭವು ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.

ಮಕರ ರಾಶಿ: ಇಂದು ನಿಮ್ಮ ಮೌನವೂ ಅನರ್ಥಕ್ಕೆ ಕಾರಣವಾಗಬಹುದು. ನಿಮ್ಮ ಕಾರ್ಯದ ದಕ್ಷತೆಯನ್ನು ಗಮನಿಸಿ, ಉನ್ನತ ಸ್ಥಾನವು ಸುಗುವುದು. ಕೆಲವರಿಗೆ ವೃತ್ತಿಯನ್ನು ಬದಲಿಸಬೇಕಾಗಿ ಬರಬಹುದು. ಮನೆಯಲ್ಲಿ ಸುಂದರ ವಾತಾವರಣವಿರುತ್ತದೆ. ಸಂಗಾತಿಯಿಂದ ದೂರ ಉಳಿಯಬೇಕಾದ ಸ್ಥಿತಿ ಬರಬಹುದು. ಸ್ಥಾನವನ್ನು ಪಡೆಯಲು ಹಣವನ್ನು ಖರ್ಚುಮಾಡುವಿರಿ. ಮಾತಿನಿಂದ ಯಾರನ್ನೂ ಟೀಕಿಸಲು ಹೋಗಬೇಡಿ. ನಿಮ್ಮನ್ನು ಟೀಕಿಸಲು ಜನರು ಕಾದುಕುಳಿತಿರುತ್ತಾರೆ. ಎಷ್ಟೋ ವಿಷಯಗಳು ಅರ್ಥವಾಗದೇ ಮುಗಿದುಹೋಗಿದೆ ಎಂದು ಅನ್ನಿಸುತ್ತಿರುತ್ತದೆ. ಇಂದು ನಿಮಗೆ ರಾಜಕೀಯ ವ್ಯಕ್ತಿಗಳ ಭೇಟಿಯಾಗುವುದು. ಮಾರುಕಟ್ಟೆಗೆ ಸಂಬಂಧಿತ ಕಾರ್ಯಗಳನ್ನು ಮಾಡಲು ಸರಿಯಾದ ಸಮಯ. ಹೊಸಬರನ್ನು ಸಾಮಾಜಿಕ ತಾಣದಲ್ಲಿ ಪರಿಚಯ ಮಾಡಿಕೊಳ್ಳುವಿರಿ. ತಂದೆಯ ಮಾತನ್ನು ಉಳಿಸಿಕೊಳ್ಳಲು ನಿಮ್ಮ ಶ್ರಮವು ಬಳಕೆಯಾಗುವುದು.

ಕುಂಭ ರಾಶಿ: ಆರ್ಥಿಕ ವ್ಯವಹಾರದಲ್ಲಿ ಋಜುತ್ವ ಬಹಳ ಮುಖ್ಯ. ಇಂದು ನಿಮ್ಮ ಸಂಬಂಧದ ಮೌಲ್ಯವು ತಿಳಿಯುವುದು. ಮನೆಯವರ ಚಿಂತೆಯು ನಿಮ್ಮನ್ನು ಬಹಳ ಕಾಡಬಹುದು. ಸಹೋದರರ ಜೊತೆ ಕಲಹವು ಏರ್ಪಟ್ಟು ಕೆಲವು ಕಾಲ ಮೌನವಹಿಸುವಿರಿ. ಇಂದು ನೀವು ಒಗ್ಗಟ್ಟಿನಿಂದ ಕಾರ್ಯವನ್ನು ಸಾಧಿಸುವಿರಿ. ಕೃಷಿಯ ಜೀವನ ನಿಮಗೆ ಬಹಳ ಸುಖವನ್ನು ನೀಡುತ್ತದೆ ಎಂದನ್ನಿಸುತ್ತಿರುತ್ತದೆ‌. ಧಾರ್ಮಿಕ‌ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗಲಿದೆ.‌ ನೀವು ಇಂದು ಜನರೊಡನೆ ಬೆರೆಯಲು ಬಿಡುವಿನ ವೇಳೆಯನ್ನು ಹೊಂದಿದ್ದೀರಿ. ಏನಾದರೂ ಅವಘಡಗಳು ಸಂಭವಿಸಬಹುದು. ವೈವಾಹಿಕ ಸಂಬಂಧಗಳಲ್ಲಿ ಸಾಮರಸ್ಯ ಇರಲಿದೆ. ಮನೋಭಿಲಾಷೆಯ ಪೂರೈಕೆಯಿಂದ ಸಂತೃಪ್ತಿ ಇರುವುದು. ಮಕ್ಕಳ‌ ವಿದ್ಯಾಭ್ಯಾಸದ ಚಿಂತೆಯು ದೂರಾಗುವುದು. ಉತ್ತಮ ಸ್ಥಳವು ಸಿಕ್ಕಿದ್ದು ನಿಮಗೆ ಖುಷಿಯೂ ಆಗುವುದು. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಪ್ರೀತಿಗೆ ಯೋಗ್ಯರನ್ನು ಹುಡುಕುವಿರಿ. ವಿದ್ಯಾಭ್ಯಾಸದ ಪ್ರಗತಿಯಿಂದ ಮನೆಯಲ್ಲಿ ಖುಷಿ ಇರಲಿದೆ.

ಮೀನ ರಾಶಿ: ಸ್ತ್ರೀಯರಿಗೆ ಮಾನಸಿಕ ಕ್ಷೇಶದಿಂದ ದಿನದ ಕಾರ್ಯಗಳು ಅಸ್ತವ್ಯಸ್ತ. ನೀವು ಭೂಮಿಯ ವ್ಯವಹಾರವನ್ನು ಮಾಡಿದರೆ ಲಾಭವನ್ನು ಇಟ್ಟಕೊಳ್ಳಬೇಡಿ. ನೀವು ಪ್ರಯತ್ನಿಸಿದ ಕಾರ್ಯಗಳು ಫಲವನ್ನು ಕೊಡಲಿವೆ. ವಾಹನವನ್ನು ಓಡಿಸುವ ಎಚ್ಚರಿಕೆಯಿಂದ ಇರಿ. ದೂರದ ಊರಿಗೆ ಅನಿವಾರ್ಯವಾಗಿ ಹೋಗಿ ಆರೋಗ್ಯವನ್ನು ಕೆಡಿಸಿಕೊಳ್ಳುವಿರಿ. ಕಳ್ಳತನದ ಅಪವಾದಿಂದ ವಾಗ್ವಾದ. ಯಾರದೋ ಸಿಟ್ಟನ್ನು ಯಾರ ಮೇಲೋ ತೀರಿಸಿಕೊಳ್ಳುವ ನಿಮ್ಮ ಸ್ವಭಾವವು ಒಳ್ಳೆಯದಲ್ಲ. ತಿದ್ದಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಕರ್ತವ್ಯಗಳನ್ನು ಮಾಡಲು ಹಿಂದೇಟು ಹಾಕದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ. ನಿಮ್ಮ ಮದುವೆ ಈ ದಿನ ಒಂದು ತಿರುವನ್ನು ತೆಗೆದುಕೊಳ್ಳುತ್ತದೆ. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಮನೆಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜೀವನ ಸಂಗಾತಿಯು ಸಂಪೂರ್ಣ ಬೆಂಬಲವನ್ನು ನೀಡುತ್ತಾನೆ.

Source : TV9 Kannada

Leave a Reply

Your email address will not be published. Required fields are marked *