ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ, ಬುಧವಾರ ಹಠದ ಸ್ವಭಾವ, ರಾಜಕೀಯ ಪ್ರಭಾವ, ಪರರ ವರ್ತನಡಯಿಂದ ಆಗುವ ಪರಿಣಾಮಗಳೆಲ್ಲವೂ ಈ ದಿನದ ಭವಿಷ್ಯ

ಪಂಚಾಂಗ: ಶಾಲಿವಾಹನ ಶಕೆ 1947ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಬುಧ, ತಿಥಿ : ಪೂರ್ಣಿಮಾ ನಿತ್ಯನಕ್ಷತ್ರ : ಮಘಾ ಯೋಗ : ಆಯುಷ್ಮಾನ್, ಕರಣ : ವಣಿಜ, ಸೂರ್ಯೋದಯ – 06 – 58 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭಕಾಲ : ರಾಹು ಕಾಲ 12:47 – 14:14, ಯಮಘಂಡ ಕಾಲ 08:26 – 09:53, ಗುಳಿಕ ಕಾಲ 11:20 – 12:47
ಮೇಷ ರಾಶಿ :ಪರರನ್ನು ಅವಲಂಬಿಸಿ ನಿಮ್ಮ ನೆಮ್ಮದಿ ಇರದು. ನಿಮಗೆ ಬರಬೇಕಾದುದನ್ನು ಹಿಂಸಾತ್ಮಕವಾಗಿ ಪಡೆದುಕೊಳ್ಳುವಿರಿ. ಪ್ರೀತಿಯಲ್ಲಿ ಕೆಲವರ ಸಹಕಾರವನ್ನು ಕೇಳುವಿರಿ. ಉದ್ಯೋಗದಲ್ಲಿ ನೌಕರರಿಗೆ ತಾರತಮ್ಯ ತೋರಿಸುವುದು ಬೇಡ. ನಿಮ್ಮ ಕಾರ್ಯ ಕುಶಲತೆಗೆ ಮೆಚ್ಚುಗೆ ಪ್ರಾಪ್ತವಾಗುವುದು. ಎಲ್ಲರಂತೆ ಒಂದಾಗುವ ಇಚ್ಛೆ ನಿಮ್ಮೊಳಗೆ ಬಾರದು. ತಪ್ಪಿನ ಗಂಭೀರತೆಯನ್ನು ಅರ್ಥಮಾಡಿಕೊಳ್ಳಿ. ಅಸಮಾಧಾನವನ್ನು ಯಾವುದಾದರೊಂದು ರೀತಿಯಲ್ಲಿ ಹೊರಹಾಕಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ಹಠಮಾರಿ ಸ್ವಭಾವದಿಂದ ಮನೆಯಲ್ಲಿ ತೊಂದರೆ ಆದೀತು. ಯೋಜನೆಯನ್ನು ವೇಗವಾಗಿ ಮಾಡಿಮುಗಿಸುವಿರಿ. ದಿನದ ಆರಂಭದಲ್ಲಿ ಆಲಸ್ಯ ತೋರಿದರೂ ಅನಂತರ ಉತ್ಸಾಹದಿಂದ ಇರುವಿರಿ. ಆಕಸ್ಮಿಕ ದ್ರವ್ಯ ಲಾಭದಿಂದ ಖುಷಿ ಪಡುವಿರಿ. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸಂಗಾತಿಯ ಮಾನಸಿಕತೆಯು ನಿಮಗೆ ಗೊತ್ತಾಗದು. ಬಂಧುಗಳನ್ನು ಭೇಟಿಯಾಗಿ ಸ್ವಲ್ಪ ಹಗುರಾಗುವಿರಿ.
ವೃಷಭ ರಾಶಿ :ನಿಮ್ಮ ತಿಳಿವಳಿಕೆ ಮಟ್ಟ ನಿಮಗೆ ಖುಷಿಕೊಡಬಹುದು. ತಾರ್ಕಿಕವಾಗಿ ನೀವು ಸೋತರೂ ಪ್ರಾಯೋಗಿಕ ವಿಚಾರದಲ್ಲಿ ನಿಮ್ಮದೇ ಮೇಲುಗೈ ಆಗಲಿದೆ. ಸಂಗಾತಿಯ ಮಾತುಗಳು ನಿಮ್ಮನ್ನು ಹಿಂಜರಿಯುವಂತೆ ಮಾಡುವುದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮ್ಮ ಇರಾದೆಯನ್ನು ಸಂಗಾತಿಯ ಜೊತೆ ಹೇಳಿಕೊಳ್ಳಬಹುದು. ನಿಮಗೆ ಉಂಟಾದ ಅನುಕೂಲ ಸ್ಥಿತಿಯನ್ನು ನೀವು ಪುಣ್ಯವೆಂದು ತಿಳಿಯುವಿರಿ. ನಿಮ್ಮ ಯೋಗ್ಯತಯ ಅನಾವರಣ ಆಗುವುದು. ಬೇರೆಯವರನ್ನು ಆಶ್ರಯಿಸುವುದು ನಿಮಗೆ ಇಷ್ಟವಾಗದ ವಿಚಾರವಾಗಿದೆ. ಅವಕಾಶ ಸಿಕ್ಕಾಗ ಮುನ್ನುಗ್ಗಲು ಹಿಂಜರಿಯುವಿರಿ. ಮನೋವ್ಯಥೆಯಿಂದ ನಿಮಗೆ ಬಹಳಷ್ಟು ತೊಂದರೆಗಳು ಬರಬಹುದು. ಪುಣ್ಯಕ್ಷೇತ್ರದ ದರ್ಶನವನ್ನು ಮಾಡಿ. ಮಿತವಾದ ಮಾತು ನಿಮಗೆ ಆಗದು. ಹೊಸತನಕ್ಕೆ ತೆರೆದುಕೊಳ್ಳುವ ಅಗತ್ಯತೆಯು ಇದೆ. ಮಕ್ಕಳ ವಿಚಾರದಲ್ಲಿ ನೀವು ತಿಳಿದುಕೊಳ್ಳಬೇಕಾದುದು ಬಹಳಷ್ಟು ಇವೆ.
ಮಿಥುನ ರಾಶಿ :ಬೇಡವೆನಿಸಿದ್ದನ್ನು ಯಾರೇ ಹೇಳಿದರೂ ಒಪ್ಪಿಕೊಳ್ಳಲಾರಿರಿ. ಎಲ್ಲ ತಪ್ಪುಗಳೂ ತನ್ನಿಂದಲೇ ಆಗಿದ್ದು ಎನ್ನುವ ತಪ್ಪು ಕಲ್ಪನೆ ಬೇಡ. ಇದು ನಿಮ್ಮನ್ನು ಭೀತಿಗೊಳಿಸುವುದು. ಸೃಜನಾತ್ಮಕವಾಗಿ ಏನನ್ನಾದರೂ ಮಾಡುವುದು ಒಳ್ಳೆಯದು. ಸ್ಥಿರಾಸ್ತಿಯ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳುವಿರಿ. ಒಂಟಿತನವು ನಿಮಗೆ ಇಷ್ಟವಾಗದು. ಇನ್ನೊಬ್ಬರ ನೋವನ್ನು ಕಂಡೂ ನೀವು ಸುಮ್ಮನಿರುವುದು ಬೇಡ. ಆಕರ್ಷಕ ವಸ್ತುಗಳಿಗೆ ಮನಸೋಲುವಿರಿ. ಮನೆಯ ಜವಾಬ್ದಾರಿಯನ್ನೂ ನಿವು ತೆಗೆದುಕೊಳ್ಳಲು ಇಷ್ಟಪಡಲಾರಿರಿ. ಸ್ನೇಹಿತರು ಹಳೆಯ ಹಣಕಾಸಿನ ವಿಚಾರಕ್ಕೆ ಜಗಳವಾಡುವರು. ಅತಿಯಾದ ಬುದ್ಧಿವಂತಿಕೆಯನ್ನು ತೋರಿಸಲು ಹೋಗಿ ಎಡವುವಿರಿ. ಕ್ರಿಯಾಶೀಲತೆಯನ್ನು ನೀವು ಬಿಟ್ಟಿರುವುದು ನಿಮ್ಮ ಮನಸ್ಸಿಗೆ ಬರಲಿದೆ. ನಿಮ್ಮ ಯಂತ್ರಗಳು ದುರಸ್ತಿಗೆ ಬರಬಹುದು. ನೂತನ ವಸ್ತುಗಳಿಂದ ನಿಮಗೆ ಇಂದು ಸಂತೋಷವು ಸಿಗುವುದು. ನಿಮ್ಮ ವ್ಯವಹಾರವು ಇಂದು ಪೂರ್ಣವಾಗಲಾರದು.
ಕರ್ಕಾಟಕ ರಾಶಿ :ನಿಮ್ಮ ಉದ್ಯಮಕ್ಕೆ ರಾಜಕಾರಣಿಗಳ ಸ್ಪರ್ಶವಾಗಲಿದೆ. ಎಲ್ಲ ವಿಚಾರವೂ ನಿಮ್ಮಿಂದಲೇ ಹೋಗಬೇಕು ಎನ್ನುವ ಮಾನಸಿಕತೆಯನ್ನು ಬೆಳೆಸಿಕೊಳ್ಳುವಿರಿ. ಪರ ಊರಿನಲ್ಲಿರುವ ನಿಮಗೆ ಆರೋಗ್ಯವು ಹದ ತಪ್ಪುವ ಚಿಂತೆ ಇರುವುದು. ಉದ್ಯಮದಲ್ಲಿ ಊಹಿಸಿದ ತೊಂದರೆ ಎದುರಾಗುತ್ತದೆ. ತಜ್ಞರಿಂದ ಅದನ್ನು ಸರಿ ಮಾಡಿಕೊಳ್ಳುವುದು ಉತ್ತಮ. ಯಾರನ್ನೋ ಅನುಕರಿಸುತ್ತ ನೀವು ಸಂತೋಷವನ್ನು ಪಡುವಿರಿ. ಕೆಲವು ವ್ಯಕ್ತಿಗಳ ಬೆಂಬಲವೂ ಕೂಡ ನಿಮಗೆ ಸಿಗುತ್ತದೆ. ಅವಸರದ ನಿರ್ಧಾರವನ್ನು ಮಾಡಲುಹೋಗುವುದು ಬೇಡ. ನೀವು ಇಂದು ಕೆಟ್ಟವರಾಗಿ ಬಿಂಬಿತವಾಗುವಿರಿ. ನಿಮ್ಮ ಕಾರ್ಯವು ವಿಳಂಬವಾಗಲು ಕಾರ್ಮಿಕರು ಕಾರಣವಾಗುವರು. ಅವರ ಮೇಲೆ ಸಿಟ್ಟಗುವಿರಿ. ಮಾತಿನ ಮಿತಿಯನ್ನೂ ಮೀರಬಹುದು. ಹೂಡಿಕೆಯ ಚಿಂತನೆಯನ್ನು ಸಂಗಾತಿಯ ಜೊತೆ ಹಂಚಿಕೊಳ್ಳುವಿರಿ. ಪಕ್ಷಪಾತ ಮನಃಸ್ಥಿತಿಯು ನಿಮಗೆ ಶೋಭೆ ತರದು. ಪಾಲುದಾರಿಕೆಯಲ್ಲಿ ಮನಸ್ತಾಪವನ್ನು ಉಳಿಸಿಕೊಳ್ಳದೇ ಮುನ್ನಡೆಯಿರಿ. ಈ ದಿನವನ್ನು ಕಳೆಯಲು ನೀವು ನಾನಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಿರಿ.
ಸಿಂಹ ರಾಶಿ :ಮಕ್ಕಳು ನಿಮ್ಮ ಜೊತೆ ವಾದಕ್ಕೆ ಇಳಿಯಬಹುದು. ಸಂಕೀರ್ಣ ಕಾರ್ಯವು ನಿಮಗೆ ಪೂರ್ಣವಾಗಿ ಅರ್ಥವಾಗದು. ಸೋಲನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳಲಾರಿರಿ. ಸರ್ಕಾರಿ ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಣೆ ಮಾಡುವರು. ಭೂಮಿಯ ವ್ಯವಹಾರವು ಪೂರ್ಣ ಲಾಭವನ್ನು ತಂದುಕೊಡದು. ಚಿಂತೆಗಳೇ ಇರುವ ಮನಸ್ಸಿನಲ್ಲಿ ದೇವರ ಭಕ್ತಿಯನ್ನು ತುಂಬಿಕೊಂಡು ಸಮಾಧಾನದಿಂದ ಇರಿ. ನಿಮ್ಮ ಶುಷ್ಕ ಮಾತು ಇತರರಿಗೆ ಇಷ್ಟವಾಗದು. ಇಷ್ಟಪಟ್ಟು ಮಾಡುವ ಕಾರ್ಯದ ಆರಂಭದ ಉತ್ಸಾಹ ಅನಂತರ ಕಾಣಿಸದು. ಮಾತನ್ನು ಹರಿಬಿಟ್ಟು ಎಲ್ಲರ ಸಿಟ್ಟಿಗೆ ಗುರಿಯಾಗುವಿರಿ. ಪ್ರೀತಿಯಲ್ಲಿ ಸಣ್ಣ ಕಲಹ ಸಾಮಾನ್ಯ. ಸಂಗಾತಿಯ ವಿಚಾರದಲ್ಲಿ ನಿಮಗೆ ಪೂರ್ಣ ವಿಶ್ವಾಸವಿರದು. ಇಂದು ನಿಮ್ಮ ಆರ್ಥಿಕತೆಯ ಸ್ಥಿತಿಯು ಸರಿಯಾಗಿ ಗೊತ್ತಾಗಲಿದೆ. ಆಕಸ್ಮಿಕವಾಗಿ ಬರುವ ಹಣವನ್ನು ಭವಿಷ್ಯಕ್ಕಾಗಿ ಕೂಡಿ ಇಡುವಿರಿ. ಖಾಸಗಿ ಸಂಸ್ಥೆಯಲ್ಲಿ ನಿಮ್ಮ ಸ್ಥಾನವು ಏರಲಿದೆ. ಸ್ಥಗಿತವಾದ ಕಾರ್ಯಗಳಿಗೆ ಕಾಯಕಲ್ಪದ ಅವಶ್ಯಕತೆ ಇದೆ. ಅಧಿಕಾರ ಇದೆ ಎಂದು ಏನನ್ನಾದರೂ ಹೇಳುವುದು ಬೇಡ.
ಕನ್ಯಾ ರಾಶಿ :ನೀವು ಯಾವುದನ್ನೂ ವ್ಯರ್ಥ ಭಾವಿಸಲಾರಿರಿ. ಫಲ ಸಿಗುವ ತನಕ ಕಾಯುವಿಕೆ ನಿಮಗೆ ಸಿದ್ಧಿಸುವುದು. ನಿರಂತರ ಸೋಲಿನಿಂದ ನೀವು ಹತಾಶರಾಗುವಿರಿ. ಕೆಲವು ಸಂಗತಿಗಳನ್ನು ನಿಮ್ಮನ್ನೇ ಹುಡುಕಿಕೊಂಡು ಬಂದು ನಿಮ್ಮ ಮನಸ್ಸನ್ನು ಮತ್ತಷ್ಟು ದುರ್ಬಲಗೊಳಿಸೀತು. ಮಾರುಕಟ್ಟೆಯ ವ್ಯವಹಾರವನ್ನು ಅರಿತು ಹೂಡಿಕೆ ಮಾಡಿ. ಒಳ್ಳೆಯ ಸಮಯವನ್ನು ಕಳೆದುಕೊಳ್ಳಬೇಕಾಗುವುದು. ಮನಃಸ್ಥಿತಿಯು ಸರಿ ಇಲ್ಲದ ಕಾರಣ ನೌಕರರ ಮೇಲೆ ಸಿಟ್ಟಾಗುವಿರಿ. ಯಾರದೋ ಕೈಗೊಂಬೆಯಾಗಿ ವರ್ತಿಸಬೇಕಗುವುದು. ವೃತ್ತಿಯಲ್ಲಿ ನಿಮ್ಮ ತಿಳಿವಳಿಕೆಯನ್ನು ಪ್ರದರ್ಶಿಸಿ ನಿಮ್ಮ ಸಾಮರ್ಥ್ಯವನ್ನು ಪರಿಚಯಿಸುವಿರಿ. ಬಹಳ ಕಾಲದ ಹಿಂದೇ ಆಲೋಚಿಸಿದ್ದ ಕಾರ್ಯವು ಇಂದು ಆರಂಭಿಸಬೇಕು ಎಂದೆನಿಸುವುದು. ಸಂಗಾತಿಯ ಮಾತಿಗೆ ಸ್ಪಂದನೆಯೂ ಇರದು. ನಿಮ್ಮ ವಾಗ್ದಾನವನ್ನು ಉಳಿಸಿಕೊಳ್ಳಿ. ನಿಮ್ಮ ಆರ್ಥಿಕತೆಯನ್ನು ಗೌಪ್ಯವಾಗಿ ಇಡಬೇಕು ಎನಿಸುವುದು.
ತುಲಾ ರಾಶಿ :ನಿಮ್ಮ ಆಚರಣೆಗಳನ್ನು ಕಂಡು ಅಪಹಾಸ್ಯ ಮಾಡಬಹುದು. ನಿಮಗೆ ಸಿಗುವ ಬೆಂಬಲವನ್ನು ಸರಿಯಾಗಿ ಇಟ್ಟುಕೊಳ್ಳಿ. ಇನ್ನೊಬ್ಬರ ಮನೋಗತವನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ನಿಮ್ಮ ವಿದ್ಯಾಭ್ಯಾಸದ ಕನಸನ್ನು ಕುಟುಂಬದಲ್ಲಿ ಹಂಚಿಕೊಳ್ಳುವಿರಿ. ಎಲ್ಲಿ ಕಳೆದುಕೊಂಡಿರೋ ಅಲ್ಲಿಯೇ ಪಡೆಯುವ ಪ್ರಯತ್ನ ನಡೆಯುವುದು. ಕೆಲವು ಘಟನೆಗಳು ಕೌಟುಂಬಿಕ ಕಾಳಜಿಯನ್ನು ಹೆಚ್ಚು ಮಾಡುವುದು. ಜಾಣ್ಮೆಯ ವ್ಯವಹಾರವನ್ನು ಇಂದು ಮಾಡಬೇಕಾದೀತು. ಒಂದೇ ಶ್ರಮಕ್ಕೆ ಎರಡು ಫಲವನ್ನು ನೀವು ಪಡೆಯುವ ಸಂಭವವಿದೆ. ಉದ್ಯೋಗದ ಸ್ಥಳದಲ್ಲಿ ಸಿಕ್ಕ ಪ್ರಶಂಸೆಯಿಂದ ಸಂತೋಷವು ಇಮ್ಮಡಿಯಾಗುವುದು. ನಿಮ್ಮ ಹಳೆಯ ಪ್ರತಿಜ್ಞೆಯನ್ನು ಇಂದು ಪೂರ್ಣ ಮಾಡಿದ ಸಂತೋಷವು ಇರುವುದು. ವಿವಾಹದ ಬಗ್ಗೆ ನಾನಾ ಗೊಂದಲ ಕಾಡಬಹುದು. ಪಾಪಪ್ರಜ್ಞೆಯು ನಿಮ್ಮನ್ನು ಖಿನ್ನವಾಗಿಸಬಹುದು. ಸಕಾರಾತ್ಮಕ ಆಲೋಚನೆಯನ್ನು ಪ್ರಯತ್ನಪೂರ್ವಕವಾಗಿ ಮಾಡುವಿರಿ. ಯಾರನ್ನೂ ಸರಿಯಾಗಿ ಅರ್ಥಮಾಡಿಕೊಳ್ಳದೇ ನಿಮ್ಮ ಬಳಿ ಅವರನ್ನು ಬಿಟ್ಟುಕೊಳ್ಳಬೇಡಿ. ವಿದ್ಯುತ್ ಉಪಕರಣಗಳ ಖರೀದಿಯನ್ನು ಮಾಡುವಿರಿ.
ವೃಶ್ಚಿಕ ರಾಶಿ :ಒತ್ತಡ ನಿರ್ವಹಣೆಯನ್ನು ಪ್ರಯತ್ನದಿಂದ ಕಲಿಯಬೇಕು. ಕೌಶಲದಿಂದ ಆಪತ್ತನ್ನು ದೂರ ಮಾಡಬಹುದು. ಇಂದು ನಿಮಗೆ ಕಾರ್ಯದ ನಡುವೆ ಅಲ್ಪ ವಿಶ್ರಾಂತಿಗೆ ಸಮಯವು ಸಿಗುವುದು. ಮನೆಗೆ ಬೇಕಾದ ವಸ್ತುಗಳ ಖರೀದಿಯಲ್ಲಿ ನೀವು ಮಗ್ನರಾಗುವಿರಿ. ವ್ಯಾಪಾರದ ಹೊಸ ಅನುಭವವು ನಿಮಗೆ ಅಚ್ಚರಿಯಾದೀತು. ದೈವದ ಬಗ್ಗೆ ನಿಮಗೆ ಅಪನಂಬಿಕೆ ಬರಬಹುದು. ನಿಮ್ಮ ತಿಳಿವಳಿಕಯೇ ಉನ್ನತ ಸ್ಥಾನಕ್ಕೆ ಏರುವಂತೆ ಮಾಡುವುದು. ಮಕ್ಕಳ ಹಠಸ್ವಭಾವವು ಇಮಗೆ ಇಷ್ಟವಾಗದು. ನೀವು ಸಹನೆಯನ್ನು ಮೀರಿ ವರ್ತಿಸುವಿರಿ. ಆರ್ಥಿಕ ಸ್ಥಿತಿಯನ್ನು ಸ್ಥಿರಗೊಳಿಸಿಕೊಳ್ಳುವಿರಿ. ಗೃಹನಿರ್ಮಾಣದ ದಾಖಲಾತಿಗೆ ನೀವು ಓಡಾಟ ಮಾಡಬೇಕಾಗುವುದು. ಆದರೂ ಪೂರ್ಣವಾಗದು. ನಿಮ್ಮ ನಿರ್ಧಾರವನ್ನು ಬದಲಿಸಿಕೊಳ್ಳುವುದು ಕಷ್ಟವಾದೀತು. ಇಂದು ಆಡಂಬರಕ್ಕೆ ತೋರ್ಪಡಿಕೆಗೆ ಹೆಚ್ಚು ಒತ್ತು ನೀಡುವಿರಿ. ಸಾರ್ವಜನಿಕ ಮನ್ನಣೆಯನ್ನು ಗಳಿಸವಿರಿ. ಉದ್ಯಮದ ವಿಸ್ತರಣೆಗೆ ನಿಮ್ಮ ಕ್ರಮವು ಯಶಸ್ವಿಯಾಗುವುದು. ಏಕಾಗ್ರ ಮನಸ್ಸಿನಿಂದ ನೀವು ಇಂದಿನ ಕೆಲಸದಲ್ಲಿ ತೊಡಗುವಿರಿ. ಇನ್ನೊಬ್ಬರ ಮಾತಿನ ಬಾಣವು ನಿಮ್ಮನ್ನು ಘಾಸಿಮಾಡುವುದು.
ಧನು ರಾಶಿ :ಇಂದು ನಿಮಗೆ ಅಧೀರತೆ ಕಾಡುವುದು. ಯಶಸ್ಸು ನಿಮ್ಮಿಂದ ಕಠಿಣ ಶ್ರಮವನ್ನು ಅಪೇಕ್ಷಿಸುವುದು. ನೀವು ಉದ್ಯೋಗಕ್ಕಾಗಿ ದೂರ ಪ್ರಯಾಣವನ್ನು ಮಾಡುವಿರಿ. ಅಶುಭ ಸೂಚನೆಗಳನ್ನು ಗಮನಿಸಿ ಕೊಂಡು ಕಾರ್ಯಪ್ರವೃತ್ತರಾಗಿ. ಭೂಮಿಯ ಲಾಭಕ್ಕಾಗಿ ಓಡಾಟವನ್ನು ಮಾಡಬೇಕಾದೀತು. ಒಂದು ರೀತಿಯಲ್ಲಿ ನಿಮಗೆ ಆತಂಕದ ದಿವಸವೂ ಆಗಬಹುದು. ವಿದೇಶದ ವ್ಯವಹಾರವು ನಿಮಗೆ ಸರಿಯಾಗಿ ಆಗಿಬರದು. ಹೊಸ ಉದ್ಯೋಗಕ್ಕೆ ಸೇರಿದ ನಿಮಗೆ ಸಂಕೋಚದಿಂದ ಇರುವಿರಿ. ಆಗದಿರುವವರ ಬಗ್ಗೆ ಗೊಣಗುತ್ತ ಇರುವಿರಿ. ಇದರಿಂದ ಯಾವ ಪ್ರಯೋಜನವೂ ಆಗದು. ನೂತನ ವಾಹನದಲ್ಲಿ ಪ್ರಯಾಣ ಸಾಧ್ಯತೆ. ಸಾಹಿತ್ಯಾಸಕ್ತರು ತಮ್ಮ ಬಳಗದ ಜೊತೆ ಹೆಚ್ಚು ಸಮಯ ಇರುವರು. ಎಲ್ಲರೂ ನಿಮ್ಮ ಬಗ್ಗೆ ನಕಾರಾತ್ಮಕವಾಗಿ ಮಾತನಾಡಲಿದ್ದು ನೀವು ಹತಾಶೆಯ ಭಾವ ಜಾಗೃತವಾಗಿ ಖಿನ್ನತೆಗೂ ಹೋಗಬಹುದು. ನೀವು ಕೆಲವು ಅಪೂರ್ಣ ಕಾರ್ಯಗಳನ್ನು ಮಾಡಿ ಮುಗಿಸುವಿರಿ. ಅತಿಥಿ ಸತ್ಕಾರ ನಿಮಗೆ ಯೋಗ್ಯರೀತಿಯಲ್ಲಿ ಆಗಲಿದೆ.
ಮಕರ ರಾಶಿ :ಸಿಟ್ಟಿನಿಂದ ವಿವೇಕವನ್ನು ಕಳೆದುಕೊಳ್ಳಬೇಕಾಗುವುದು. ಕೌಟುಂಬಿಕ ಭಿನ್ನಾಭಿಪ್ರಾಯಗಳು ಇತರ ಕೆಲಸಗಳನ್ನು ಹಾಳುಮಾಡಬಹುದು. ಆರ್ಥಿಕ ವಹಿವಾಟಿನಲ್ಲಿ ಎಚ್ಚರಿಕೆ ಲಕ್ಷ್ಯವು ಹೆಚ್ಚಿರಲಿ. ನಿಮ್ಮ ಯೋಜನೆಗಳನ್ನು ಮಹಿಳೆಯರು ವಿರೋಧಿಸುವರು. ಕುಟುಂಬದ ಸಮಸ್ಯೆಗಳ ಪರಿಹಾರಕ್ಕೆ ನಿಮ್ಮ ಸಲಹೆಯು ಬೇಕಾಗುವುದು. ಅನಾರೋಗ್ಯವು ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆ ಕೊಡುವುದು. ಕಲಿತ ವಿದ್ಯೆಗಳನ್ನು ಎಲ್ಲಿಯಾದರೂ ಬಳಸಲು ನೋಡುವಿರಿ. ಕೃಷಿಯಲ್ಲಿ ಲಾಭ ಗಳಿಸಬೇಕೆಂದು ನಾನಾ ಪ್ರಯತ್ನವನ್ನು ಮಾಡುವಿರಿ. ಇಂದಿನ ಆದಾಯಕ್ಕೆ ತಕ್ಕಂತೆ ಖರ್ಚೂ ಇರಲಿದೆ. ನಿಮ್ಮ ಪ್ರೀತಿಗೆ ಇಂದು ಅಧಿಕೃತ ಮುದ್ರೆಯು ಬೀಳಲಿದ್ದು ನಿಮಗೆ ಖುಷಿಯಾಗಲಿದೆ. ನಿಮ್ಮ ವೃತ್ತಿಯ ಕುರಿತು ಯಾರಾದರೂ ಕೇಳಿಯಾರು. ಆದಾಯವನ್ನೂ ಕೇಳಬಹುದು. ಉನ್ನತ ವಿದ್ಯಾಭ್ಯಾಸವು ಯಶಸ್ವಿಯಾಗಿ ಪೂರೈಸಿದ ಸಂತೋಷ ನಿಮಗಾಗಲಿದೆ.
ಕುಂಭ ರಾಶಿ :ನೀವು ಕಲಿತ ವಿದ್ಯೆಯನ್ನು ವ್ಯಾಪಾರಕ್ಕಾಗಿ ಬಳಸುವಿರಿ. ಅತಿಯಾದ ಉತ್ಸಾಹವನ್ನು ಸಂಗಾತಿಯ ಸಣ್ಣ ಮಾತು ಹಾಳು ಮಾಡುವುದು. ಸ್ನೇಹಿತರು ನಿಮಗೆ ಶುಭ ವಾರ್ತೆಯನ್ನು ಹೇಳುವರು. ಯಾರ ಮೇಲೂ ಸಂದೇಹವನ್ನು ಇಟ್ಟುಕೊಳ್ಳುವುದು ಬೇಡ. ದುರಭ್ಯಾಸವನ್ನು ತಡೆಯಲಾಗದೇ ದುಃಖವಾಗಬಹುದು. ವ್ಯಾಪಾರವನ್ನು ಮಾಡುವಾಗ ಜಾಗರೂಕತೆ ಇರಲಿ. ಮನೆಯ ಜವಾಬ್ದಾರಿಯು ನಿಮಗೆ ಅನಿರೀಕ್ಷಿತವಾಗಿ ಬರಬಹುದು. ಗ್ರಾಹಕರಿಂದ ಮೋಸ ಹೋಗಬೇಕಾದೀತು. ನಿಮ್ಮ ಸಣ್ಣ ವ್ಯಾಪಾರವನ್ನು ವಿಸ್ತರಿಸಲಿದ್ದೀರಿ. ನಿಮ್ಮನ್ನು ಕೇಳಿಕೊಂಡು ಯಾರಾದರೂ ಅಪರಿಚಿತರು ಬರಬಹುದು. ದುಡಿಮೆಯ ಅಲ್ಪಭಾಗವನ್ನು ತಾಯಿಗೆ ನೀಡುವಿರಿ. ಯಾರನ್ನಾದರೂ ಕಳೆದುಕೊಳ್ಳುವ ಭೀತಿಯು ಇರಲಿದೆ. ನಿಮಗೇ ನೆರವು ಬೇಕಾಗಿದ್ದರೂ ಇನ್ನೊಬ್ಬರ ಸಹಾಯಕ್ಕೆ ಹೋಗುವಿರಿ. ನಿಮ್ಮ ವಿರೋಧಿಗಳ ಸಂಖ್ಯೆ ಕಡಿಮೆಯಾಗುವುದು. ನಿಮ್ಮ ದುಡಿಮೆ ನ್ಯಾಯದ ಹಾದಿಯಲ್ಲಿರಲಿ. ಇಲ್ಲವಾದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಮೀನ ರಾಶಿ :ಇಂದು ಧಾರ್ಮಿಕವಾದ ದೊಡ್ಡ ಕಾರ್ಯದಲ್ಲಿ ಭಾಗವಹಿಸಿ, ಹಾಳಾದ ಮನಸ್ಸನ್ನು ನೆಮ್ಮದಿಯ ಕಡೆಗೆ ಕರೆದೊಯ್ಯುವಿರಿ. ಅನಪೇಕ್ಷಿತ ಹಸ್ತಕ್ಷೇಪದಿಂದ ಲಾಭಕ್ಕೆ ಹೊಡೆತ ಬಿದ್ದೀತು. ಅಪರಿಚಿತರಿಂದ ಬೆಂಬಲವು ಸಿಗಲಿದೆ. ಕುಟುಂಬಕ್ಕೆ ನೀವು ಹಾಕಿದ ಶ್ರಮ ಫಲಿಸುವುದು. ವಿದ್ಯಾಭ್ಯಾಸದಲ್ಲಿ ಶ್ರದ್ಧೆಯು ಹೆಚ್ಚು ಬೇಕಾಗುವುದು. ನಿರ್ಮಾಣ ಕಾರ್ಯದ ಅಗತ್ಯವನ್ನು ನೀವು ಅನುಭವಿಸುವಿರಿ. ಸ್ನೇಹಿತರ ಮಾತಿನಿಂದ ವಿದೇಶಕ್ಕೆ ಹೋಗುವ ಆಸೆ ಅತಿಯಾಗುವುದು. ದೇಹಕ್ಕೆ ಸಂಬಂಧಿಸಿದಂತೆ ಕೆಲವು ತೊಂದರೆಗಳು ಕಾಣಿಸಿಕೊಳ್ಳುವುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ನಿಲುವು ಇರಲಿ. ನಿಮ್ಮ ವಿರುದ್ಧ ಷಡ್ಯಂತ್ರ ನಡೆಯುವುದು ಸಾಬೀತಾಗುವುದು. ಮಕ್ಕಳು ನಿಮ್ಮ ಜೊತೆ ವಾಗ್ವಾದ ಬರಬಹುದು. ಒಳ್ಳೆಯ ಸುದ್ದಿಯು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ಮನೆಯ ಬಗ್ಗೆ ಚಿಂತಿಸಬೇಕಾಗುವುದು. ನಿಮ್ಮನ್ನು ಸೋಲನ್ನು ನಿರೀಕ್ಷಿಸುವವರಿಗೆ ಆಹಾರವಾಗುವಿರಿ. ಮನಸ್ಸನ್ನು ಕಾರ್ಯದಲ್ಲಿ ನಿಲ್ಲಿಸಲು ಕಷ್ಟವಾದೀತು.