2024 ಮೇ 23ರ ದಿನ ಭವಿಷ್ಯ: ಗುರುವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.
![](https://samagrasuddi.co.in/wp-content/uploads/2024/03/image-140.png)
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಪರಿಘ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 54 ನಿಮಿಷಕ್ಕೆ, ರಾಹು ಕಾಲ 14:06ರಿಂದ 15:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:05ರಿಂದ ಬೆಳಗ್ಗೆ 07:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:17 ರಿಂದ 10:53ರ ವರೆಗೆ.
ಮೇಷ ರಾಶಿ :ಇಂದು ದಿನದ ಆರಂಭದಲ್ಲಿ ಕೆಲವು ಅನಿರೀಕ್ಷಿತ ಒತ್ತಡ ಬರುವುದು. ಅದನ್ನು ದಾಟಿ ನೆಮ್ಮದಿಯನ್ನು ಕಾಣುವಿರಿ. ಬಂಧುಗಳು ನಿಮ್ಮ ಆಗಬೇಕಾದ ಕೆಲಸವನ್ನು ನಿಲ್ಲಿಸುವರು. ವಾಹನ ಖರೀದಿಯನ್ನು ಮಾಡಲಿದ್ದೀರಿ. ನೀರಿನ ಉತ್ಪನ್ನದ ವ್ಯಾಪರಿಗಳಿಗೆ ಲಾಭವು ಸಿಗಲಿದೆ. ಸಹೋದರರ ಜೊತೆ ಆತ್ಮೀಯವಾದ ಒಡನಾಟವನ್ನು ಹೊಂದುವಿರಿ. ಯಾರ ಮನಸ್ಸನ್ನೂ ಕೊಲ್ಲದೇ ಗೆಲ್ಲುವ ಬಗ್ಗೆ ಆಲೋಚನೆ ಇರಲಿ. ಆಗದ ಕಾರ್ಯವನ್ನು ಮಾಡಿಕೊಡುವ ಆಶ್ವಾಸನೆ ಬೇಡ. ಯಶಸ್ಸನ್ನು ಹಂಬಲವು ಅತಿಯಾಗಿ ಕಾಣಿಸುವುದು. ಮರೆಯಲ್ಲಿ ಇದ್ದು ನಿಮ್ಮಷ್ಟಕ್ಕೇ ಕೆಲಸ ಮಾಡಿಕೊಳ್ಳುವುದು ಇಷ್ಟವಾಗುವುದು. ಸಿಕ್ಕ ಸೌಲಭ್ಯವನ್ನು ದುರುಪಯೋಗ ಮಾಡಿಕೊಳ್ಳುವಿರಿ. ನಿಮ್ಮ ನೀವು ಬೇರೆ ರೀತಿಯಲ್ಲಿ ಬಿಂಬಿಸಿಕೊಳ್ಳಲು ಇಷ್ಟಪಡುವಿರಿ. ಇಂದಿನ ಕಾರ್ಯಕ್ಕೆ ಸಮಯ ಸಾಲದೇ ಅರ್ಧಕ್ಕೇ ನಿಲ್ಲಿಸುವಿರಿ.
ವೃಷಭ ರಾಶಿ :ಇಂದಿನ ನಿಮ್ಮ ಮಾತುಗಳು ಆಪ್ತರ ಹೃದಯಕ್ಕೆ ನಾಟಿ ದೂರಾಗುವರು. ಅಪಮಾನವಾಗುವ ಸಂಗತಿಯನ್ನು ನೀವೇ ತಂದುಕೊಳ್ಳುವಿರಿ. ಬೇಸರವನ್ನು ಹೆಚ್ಚು ಮಾಡಿಕೊಳ್ಳುವ ಸನ್ನಿವೇಶವನ್ನು ಎದುರು ಹಾಕಿಕೊಳ್ಳಬೇಡಿ. ನಿಮ್ಮ ಒಳ್ಳೆಯ ಕೆಲಸವೇ ನಿಮ್ಮನ್ನು ಕೈ ಹಿಡಿಯುವುದು. ನಿಮಗೆ ಗೊಂದಲುಗಳು ಇಂದು ಬರಬಹುದು. ಅನುಭವಿಗಳ ಅಥವಾ ಹಿರಿಯರ ಮಾತುಗಳು ಉಪಯೋಗಕ್ಕೆ ಬರಬಹುದು. ಒಳ್ಳೆಯವರ ಸಹವಾಸವನ್ನು ಮಾಡಿದ್ದಕ್ಕೆ ಒಳ್ಳೆಯ ಸ್ಥಿತಿಯು ಬರಲಿದೆ. ನಿರೀಕ್ಷಿತ ಪ್ರತಿಸ್ಪಂದವು ನಿಮ್ಮ ಮಾತಿಗೆ ಸಿಗದೇ ಇರುವುದು. ವಿದ್ಯಾರ್ಥಿಗಳ ಬಗ್ಗೆ ಅಸಮಾಧನವು ಇರುವುದು. ಹೊಸ ವಸ್ತುಗಳ ಬಳಕೆಯನ್ನು ತಿಳಿಯದೇ ಅದನ್ನು ಹಾಳು ಮಾಡಿಕೊಳ್ಳುವಿರಿ. ಉದ್ವೇಗಕ್ಕೆ ಒಳಗಾಗುವ ಸಂದರ್ಭವು ಬರಬಹುದು. ಧನಲಾಭದ ನಿರೀಕ್ಷೆಯಲ್ಲಿ ನೀವು ಇರುವುದಿಲ್ಲ. ಅತ್ಯುತ್ಸಾಹವು ನಿಮಗೆ ಹಾನಿಯನ್ನು ಉಂಟುಮಾಡೀತು.
ಮಿಥುನ ರಾಶಿ :ನಿಮ್ಮವರೇ ನಿಮಗೆ ಯಾವುದಾದ ರೀತಿಯಲ್ಲಿ ವಂಚನೆ ಮಾಡಬಹುದು. ನೀವೇ ಮಾಡಿಕೊಂಡ ತಪ್ಪಿನಿಂದ ನಿಮಗೆ ಬೀಳುವ ಸಾಧ್ಯತೆ ಇದೆ. ನಿಮ್ಮ ಮಾತುಗಳು ಅನರ್ಥವನ್ನು ಉಂಟುಮಾಡಿ ಕಲಹಕ್ಕೂ ಕಾರಣವಾಗಲಿದೆ. ಸ್ತ್ರೀಯರಿಂದ ಅಪವಾದ ಬರುವ ಸಾಧ್ಯತೆ ಇದೆ. ಉದ್ಯೋಗದ ನಿಮಿತ್ತ ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ಅನವಶ್ಯಕ ಕಾರ್ಯಗಳನ್ನು ನೀವು ಮೈಮೆಲೆ ಹಾಕಿಕೊಳ್ಳುವಿರಿ. ನೂತನ ಗೃಹನಿರ್ಮಾಣದ ಕನಸನ್ನು ಕಾಣಲಿದ್ದೀರಿ. ಇಂದು ದೂರ ಹೋಗಬೇಕಾದ ಅನಿವಾರ್ಯತೆ ಬರಲಿದ್ದು, ವಾಹನಚಾಲನೆಯಿಂದ ಅಪಘಾತವಾಗುವ ಸಾಧ್ಯತೆ ಇದೆ. ಹತ್ತಾರು ವಿಚಾರಗಳನ್ನು ನೀವು ಒಂದೇ ಬಾರಿ ಅಲೋಚಿಸುವಿರಿ. ಅಧಿಕಪ್ರಸಂಗಿತನ ಬೇಡ. ಇನ್ನೊಬ್ಬರಿಂದ ಕೊಂಬೆ ನೋವಾಗುವುದು. ನಿಮ್ಮ ಪ್ರೀತಿಯು ಕೆಲವು ಗೊಂದಲವನ್ನು ಸೃಷ್ಟಿಸೀತು. ಇಬ್ಬರ ನಡುವಿನ ಜಗಳದಲ್ಲಿ ಮಧ್ಯಸ್ತಿಕೆ ವಹಿಸುವಿರಿ.
ಕಟಕ ರಾಶಿ :ಇಂದಿನ ನಿಮ್ಮ ಮಾತುಕತೆಗಳಿಂದ ನೀವಿನ್ನೂ ತಿಳಿದುಕೊಳ್ಳಬೇಕು ಎಂದು ಕಾಣುವುದು. ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ಆಸಕ್ತಿ ಇರುವುದು. ಪ್ರಕ್ಷುಬ್ದವಾಗಿದ್ದ ಮನಸ್ಸು ಸಮಾಧಾನಕ್ಕೆ ಬರಲಿದೆ. ಸಾಲಬಾಧೆಯಿಂದ ಮುಕ್ತರಾಗಲಿದ್ದೀರಿ. ಎಲ್ಲರೂ ವಿದ್ಯಾವಂತೆ ತೋರಿ ನಿಮಗೇ ನಿಮ್ಮ ಮೇಲೆ ಅಶಿಕ್ಷಿತ ಭಾವನೆ ಬರಲಿದೆ. ಶತ್ರುಗಳೆದುರು ತಲೆ ಎತ್ತಿ ನಿಲ್ಲುವ ಮನಸ್ಸು ಮಾಡುವಿರಿ. ಯಾರದೋ ಸಿಟ್ಟನ್ನು ಮಕ್ಕಳ ಮೇಲೆ ತೀರುಗಿಸಿವಿರಿ. ಮನೆಯಿಂದ ಹೊರಗೆ ಇರಬೇಕಾದ ಸ್ಥಿತಿ ಬರಲಿದೆ. ಯಾರಾದರೂ ಕೆಲಸಕ್ಕೋಸ್ಕರ ನಿಮ್ಮನ್ನು ಹೊಗಳಬಹುದು. ಅದಕ್ಕೆ ಹಿಗ್ಗುವಿರಿ. ಕಾನೂನಾತ್ಮಕ ಜಯವು ನಿಮಗೆ ಸಂತೋಷವನ್ನು ಕೊಡುವುದು. ಹಿರಿಯರಿಗೆ ಕೊಡುವ ಅಗೌರವವು ನಿಮಗೂ ಮುಳುವಾಗಬಹುದು ಎಂಬ ಆಲೋಚನೆ ಮನಸ್ಸಿನಲ್ಲಿ ಇರಬೇಕಾದೀತು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿಯು ಇರುವುದು.
ಸಿಂಹ ರಾಶಿ :ರೂಪಕ್ಕೆ ತಕ್ಕಂತೆ ಸ್ವರೂಪವಿರುವುದಿಲ್ಲ ಎನ್ನುವುದು ಸತ್ಯವಾಗುವುದು. ಯಾರದೋ ಮಾತಿನಿಂದ ಕೆಲಸದಲ್ಲಿ ಉತ್ಸಾಹವನ್ನು ಕಳೆದುಕೊಳ್ಳುವಿರಿ. ನಿಮಗೆ ಸಲ್ಲದ ಮಾತುಗಳು ನಿಮ್ಮೆದುರು ಬರಬಹುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಬೇಡಿ. ನಿಮ್ಮನ್ನು ಅನ್ಯರಂತೆ ಕಂಡಾರು. ಮೇಲಧಿಕಾರಿಗಳ ಜೊತೆ ಅಥವಾ ಸಹೋದ್ಯೋಗಿಗಳ ಜೊತೆ ಕಲಹವಾದರೂ ಆದೀತು. ಸಿಗಬೇಕಾದುದು ಸಿಕ್ಕಿಲ್ಲವೆಂದರೆ ಅದರ ಬಗ್ಗೆ ಹೆಚ್ಚು ವಿಚಾರ ಬೇಡ. ದಾಂಪತ್ಯದಲ್ಲಿ ಬಿರುಸಿನ ಮಾತುಗಳು ಕೇಳಿಬರಬಹುದು. ಮೋಹದಿಂದ ಹೊರಬರುವುದು ಕಷ್ಟವಾದೀತು. ಕಾನೂನಿನ ಹಾದಿಯು ನಿಮ್ಮನ್ನು ರಕ್ಷಿಸಬಹುದು. ನಿಮ್ಮ ಕಾರ್ಯಗಳು ಇತರರಿಗೆ ಅಸೂಯೆಯನ್ನು ಕೊಡಬಹುದು. ನಿಮ್ಮ ದುರ್ಬಲ್ಯವು ಇನ್ನೊಬ್ಬರಿಗೆ ಆಹಾರವಾಗಬಹುದು. ನಿಮ್ಮ ನೇರವಾದ ಮಾತು ನಿಮಗಷ್ಟೇ ಚೆನ್ನಾಗಿದೆ ಎನ್ನಿಸಬಹುದು.
ಕನ್ಯಾ ರಾಶಿ :ನೀವು ಉದ್ಯಮದಲ್ಲಿ ಒತ್ತಡಗಳು ಇಲ್ಲದೇ ಇಂದು ನಿಶ್ಚಿಂತೆಯಿಂದ ಕೆಲಸವನ್ನು ಮಾಡುವಿರಿ. ದುಶ್ಚಟಗಳನ್ನು ಸ್ನೇಹಿತರು ನಿಮಗೆ ಹಿಡಿಸಬಹುದು. ವಿಶ್ವಾಸಘಾತಕರು ನಿಮ್ಮ ಸುತ್ತಲೇ ಇದ್ದಾರೆ ಎಂದು ಅನ್ನಿಸುತ್ತದೆ. ಸಣ್ಣ ಅನಾಹುತವೂ ನಿಮ್ಮ ವೃತ್ತಿಗೆ ಕಂಟಕವಾದೀತು. ಸ್ತ್ರೀಯರಿಂದ ಅಪಮಾನಕ್ಕೆ ಒಳಗಾಗುವಿರಿ. ಇದು ನಿಮ್ಮ ಮನೋಬಲವನ್ನು ಕುಗ್ಗಿಸೀತು. ಸ್ವಂತ ಆಲೋಚನೆಗಳಿಂದ ಮಾಡಬೇಕಾದುದನ್ನು ಮಾಡಿಕೊಳ್ಳಿ. ಎಲ್ಲವನ್ನೂ ಒಂದೇ ತೂಕದಲ್ಲಿ ನೋಡುವುದು ಬೇಡ. ಋಣಮುಕ್ತರಾಗಲು ನೀವು ಬಹಳ ಶ್ರಮಪಡಬೇಕಾಗಿದೆ. ಚೂರಾದ ಮನಸ್ಸುಗಳನ್ನು ಕೂಡಿಸುವುದು ಕಷ್ಟವಾದೀತು. ಕಾಲಹರಣ ಮಾಡಲು ಅನವಶ್ಯಕ ಮಾತುಗಳನ್ನು ಆಡುವಿರಿ. ಆಲಸ್ಯ ಮನೋಭಾವವನ್ನು ಕಡಿಮೆ ಮಾಡಿಕೊಳ್ಳಿ. ಸಾಮಾಜಿಕ ಕೆಲಸದಲ್ಲಿ ನೀವು ಕಳೆದುಹೋಗಬಹುದು. ವಾಹನ ಚಾಲನೆಯಲ್ಲಿ ಜಾಗರೂಕತೆ ಬೇಕಾಗುವುದು.
ತುಲಾ ರಾಶಿ :ಸೋಮಾರಿತನದಿಂದ ಆಗುವ ನಷ್ಟವು ಇಂದು ನಿಮಗೆ ಗೊತ್ತಾಗುವುದು. ಯಾವುದಕ್ಕೂ ಕೂಡಲೇ ಫಲವು ಸಿಗದು. ಅದು ಸಿಗುವ ತನಕ ಪ್ರಯತ್ನವನ್ನು ಬಿಡಬೇಡಿ. ವಿದ್ಯಾರ್ಥಿಗಳು ಶಿಕ್ಷಕರಿಂದ ಉಪದೇಶವನ್ನು ಪಡೆಯುವರು. ಮಕ್ಕಳಿಂದ ತಲೆ ತಗ್ಗಿಸುವ ಕೆಲಸವಾಗಲಿದೆ. ಸಮಾಜಸೇವೆಗೆ ನಿಮ್ಮನ್ನು ತೊಡಗಿಸಿಕೊಳ್ಳುವ ಹಂಬಲದಲ್ಲಿ ಇರುತ್ತೀರಿ. ಬೆಳಗಿನಿಂದ ಮನಸ್ಸು ಭಾರವಾದಂತೆ ಅನ್ನಿಸುವುದು. ಬಹಳ ದಿನಗಳಿಂದ ಇದ್ದ ಆಸೆಯನ್ನು ಇಂದು ಪೂರೈಸಿಕೊಳ್ಳುವಿರಿ. ಸಿಗದ ಹಣದ ಬಗ್ಗೆ ನಿಮಗೆ ಬೇಸರವಿರುವುದು. ಅದನ್ನು ಹೇಗಾದರೂ ಮಾಡಿ ಗಳಿಸುವ ತವಕ ಇರುವುದು. ಬಂಧುಗಳು ಮನಸ್ಸಿಗೆ ನೋವಾಗುವ ಮಾತುಗಳನ್ನು ಆಡಿದರೂ ಅದನ್ನು ಮನಸ್ಸಿನಲ್ಲಿ ಇರಿಸಿಕೊಳ್ಳುವುದಿಲ್ಲ. ಧಾರ್ಮಿಕ ಭಾವವು ನಿಮ್ಮಲ್ಲಿ ಜಾಗರೂಕವಾಗಬಹುದು. ಪ್ರೀತಿಪಾತ್ರರು ವಿಚಾರದಲ್ಲಿ ಬುದ್ಧಿವಾದವನ್ನು ಹೇಳುವರು.
ವೃಶ್ಚಿಕ ರಾಶಿ :ನೀವು ನಿಮ್ಮ ಮಕ್ಕಳ ಬಗ್ಗೂ ಇತರರ ಬಗ್ಗೆಯೂ ಹೆಚ್ಚು ಕಾಳಜಿಯನ್ನು ಇರಿಸಿಕೊಳ್ಳುವಿರಿ. ಅನೇಕ ದಿನಗಳಿಂದ ಸಣ್ಣ ಪುಟ್ಟ ಅನಾರೋಗ್ಯದ ತೊಂದರೆಯಾಗಲಿದ್ದು ವೈದ್ಯರ ಸಲಹೆಯನ್ನು ಒಮ್ಮೆ ಪಡೆಯುವುದು ಉತ್ತಮ. ಅಪರಿಚಿತರ ವರ್ತನೆಯಿಂದ ಸಹವಾಸವನ್ನು ಮಾಡಬೇಡಿ. ಸಹಾಯವನ್ನು ಮಾಡಿ ಸಮಯವನ್ನು ವ್ಯರ್ಥಮಾಡಬೇಡಿ. ವೃತ್ತಿಯಿಂದ ನಿಮಗೆ ಬೇಸರವುಂಟಾಗಬಹುದು. ಸಂಗಾತಿಯಿಂದ ನಿಮಗೆ ಕಿರಿಕಿರಿ ಆಗಬಹುದು. ಯಾವುದೇ ನಿರ್ಧಾರಗಳನ್ನು ಇಂತಹ ಸಂದರ್ಭಗಳಲ್ಲಿ ತೆಗೆದುಕೊಳ್ಳಬೇಡಿ. ಹಣವು ಖರ್ಚಾಗುವುದೆಂಬ ಆತಂಕ ಬೇಡ. ಅಧಿಕಾರವು ಕ್ಷಣಿಕ ಎಂಬ ಭಾವವು ನಿಮ್ಮೊಳಗೆ ಇರಲಿ. ಚಿಕ್ಕ ಕೆಲಸವನ್ನಾದರೂ ಬಹಳ ಅಚ್ಚುಕಟ್ಟಿನಿಂದ ಮಾಡಿಕೊಳ್ಳುವಿರಿ. ಕುಟುಂಬದ ಕಾರ್ಯದಿಂದ ಆಯಾಸವು ಬರಲಿದೆ. ಕೆಲವರ ವ್ಯಕ್ತಿತ್ವವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟವಾದೀತು. ನಿಗದಿತ ಅವಧಿಯಲ್ಲಿ ನಿಮ್ಮ ಕೆಲಸಗಳನ್ನು ಪೂರ್ಣ ಮಾಡಿಕೊಳ್ಳುವುದು ಅನಿವಾರ್ಯ.
ಧನು ರಾಶಿ :ನಿಮಗೆ ಇಂದು ತುರ್ತು ಕಾರ್ಯಗಳು ಹೆಚ್ಚಾಗುವುದು. ಇನ್ನೊಬ್ಬರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ನೀವೇ ಸಮಸ್ಯೆಯಲ್ಲಿ ಸಿಕ್ಕಿಹಾಕಿಕೊಳ್ಳುವಿರಿ. ನಿಮಗಾಗದವರು ನಿರ್ಮಿಸಿದ ಜಾಲಕ್ಕೆ ಬೀಳುವಿರಿ. ಸ್ನೇಹಿತರ ಸಹಕಾರದಿಂದ ನೀವು ಸ್ವಲ್ಪ ಸಮಯದಲ್ಲಿಯೇ ಪಾರಾಗುವಿರಿ. ನೀವಿಂದು ಹಿರಿಯರ ಮಾರ್ಗದರ್ಶನದಲ್ಲಿ ಮುಂದುವರಿದರೆ ಉತ್ತಮವಾಗಲಿದೆ. ಇನ್ನೊಬ್ಬರ ಕೆಲಸದಲ್ಲಿ ಮೂಗು ತೂರಿಸಲು ಹೋಗಬೇಡಿ. ಇಂದು ಮನೆಯಿಂದ ದೂರದಲ್ಲಿ ನಿಮ್ಮ ವಾಸವು ಇರುವುದು. ನಿಧಾನಗತಿಯಲ್ಲಿ ಸಾಗುವ ಕೆಲಸದಿಂದ ಬೇಸರಗೊಳ್ಳುವಿರಿ. ರಾಜಕಾರಣಿಗಳಿಗೆ ಸಮಾಜದಿಂದ ಗೌರವವನ್ನು ಪಡೆಯಬೇಕು ಎನ್ನುವ ಆಸೆ ಇರಲಿದೆ. ವಿದ್ಯಾರ್ಥಿಗಳು ಓದಿಗೆ ಸಮಯವು ಸಿಗದೇ ಕಷ್ಟವಾಗುವುದು. ಆಗುತ್ತಿರುವ ಕೆಲಸಕ್ಕೆ ಅಡ್ಡಗಾಲು ಹಾಕಿ ದಿಕ್ಕು ತಪ್ಪಿಸುವುದು ಬೇಡ. ತಪ್ಪಾದಾಗ ಮಾತ್ರ ಸರಿ ಮಾಡಿ.
ಮಕರ ರಾಶಿ :ನೀವು ಭವಿಷ್ಯಕ್ಕೆ ಬೇಕಾದ ಆರ್ಥಿಕ ವ್ಯವಸ್ಥೆಯನ್ನು ಮಾಡಿಕೊಳ್ಳಲು ಚಿಂತನೆ ಮಾಡುವಿರಿ. ನಿಮ್ಮ ಮಕ್ಕಳು ನಿರೀಕ್ಷೆಗಳನ್ನು ಹುಸಿಗೊಳಿಸದೇ ಸಮಾಧಾನ ಮಾಡಿ. ದೊಡ್ಡ ವ್ಯಕ್ತಿಗಳೆಂದು ಯಾರಾದರೂ ಹೇಳಿ ನಿಮಗೆ ವಂಚಿಸಬಹುದು. ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹಿಂಜರಿಯುವಿರಿ. ಬರಬೇಕಾದ ಹಣವು ನಿಮಗೆ ಪೂರ್ತಿಯಾಗಿ ಬಾರದೇ ಬೆರಸರವಾದೀತು. ಚಂಚಲ ಮನಸ್ಸನ್ನು ನಿಯಂತ್ರಿಸಲು ಕಷ್ಟವಾದೀತು. ಇದರಿಂದ ಕೆಲಸದಲ್ಲಿ ಹಿನ್ನಡೆಯಾಗುವುದು. ನಂಬಿಕೆಗೆ ಮೋಸವಾಗಬಹುದು. ಕೊಡುಕೊಳ್ಳುವ ವ್ಯವಹಾರವು ಪ್ರಮಾಣಿಕವಾಗಿ ಇರಲಿ. ಉತ್ತಮ ಉದ್ಯೋಗವನ್ನು ಕಳೆದುಕೊಳ್ಳಬಹುದು. ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ನಿರಾಕರಿಸುವಿರಿ. ನಿಮ್ಮ ಆಸ್ತಿಯನ್ನು ಪಡೆಯಲು ಬೇರೆಯವರ ದೃಷ್ಟಿ ಇರುವುದು. ಕೆಲವರಿಗೆ ನಿಮ್ಮ ಉಪಕಾರವು ಸಿಗುವುದು. ಸಂಗಾತಿಯ ಅಸಹಜ ಮಾತುಗಳಿಂದ ನಿಮಗೆ ಕಷ್ಟವಾಗುವುದು. ನಿಮ್ಮ ಪ್ರತಿಭೆಗೆ ಸೂಕ್ತ ಸ್ಥಳವನ್ನು ಕಂಡುಕೊಳ್ಳಿ.
ಕುಂಭ ರಾಶಿ :ಎಲ್ಲವನ್ನೂ ಅರ್ಧ ಕೆಲಸ ಮಾಡಿ ಇಡುವಿರಿ. ಏಕಾಗ್ರತೆ ಕೊರತೆ ಅತಿಯಾಗಿ ಕಾಡುವುದು. ನೀವು ಹೇಳದೇ ಇರುವ ರಹಸ್ಯವನ್ನು ಇಂದು ನಿಮ್ಮಿಂದ ತಿಳಿಯಲಿದೆ. ಕೊಟ್ಟ ಹಣವು ಮತ್ತೆ ಬರುವ ನಿರೀಕ್ಷೆಯಲ್ಲಿ ಇರುವಿರಿ. ವಿದ್ಯಾಭ್ಯಾಸವು ಕಷ್ಟದಿಂದ ಸಾಗಲಿದೆ. ಉನ್ನತವಾದ ಧ್ಯೇಯವೇ ನಿಮ್ಮ ಯಶಸ್ಸಿನ ಮೊದಲು ಮೆಟ್ಟಿಲು ಎನ್ನುವುದನ್ನು ತಿಳಿದಿದ್ದೀರಿ. ಯಾರ ಬಗ್ಗೆಯೂ ಕೇಳುವ ಸಮಾಧಾನ ಇರದು. ನೀವು ನಿಮ್ಮದೇ ಲೋಕದಲ್ಲಿ ಇರುವಿರಿ. ನಿಮ್ಮವರಿಗೆ ಸಮಯವನ್ನು ಕೊಡಲು ಮರೆತಿದ್ದು ಇಂದು ತಿಳಿಯುತ್ತದೆ. ಸ್ಥಿರಾಸ್ತಿಯ ಖರೀದಿಯ ಯೋಗವಿದ್ದರೂ ಯೋಗವಿದೆ. ವಿವಾಹಕ್ಕೆ ಅನ್ಯರಿಂದ ಅಡಚಣೆ ಬರಬಹುದು. ಆದಾಯಕ್ಕಿಂತ ಹೆಚ್ಚು ಖರ್ಚು ಹೆಚ್ಚಿದ್ದು ನಿಮಗೆ ನಿಯಂತ್ರಣವು ಕಷ್ಟವಾದೀತು. ದೃಷ್ಟಿದೋಷವು ನಿಮಗೆ ಅಧಿಕವಾಗಬಹುದು. ಹಳೆಯ ಪರಿಚಯವು ನಿಮಗೆ ಹೊಸತಾಗಿ ಕಾಣಿಸುವುಸುದು. ಯಾರದ್ದಾರೂ ಸಲಹೆಯನ್ನು ಪಡೆದು ನಿಮ್ಮ ನಿರ್ಧಾರವನ್ನು ಬದಲಿಸಿ. ನಿಮ್ಮ ಹೂಡಿಕೆಯು ಸರಿಯಾದ ಸ್ಥಳದಲ್ಲಿ ಇಲ್ಲದೇ ಇರಬಹುದು.
ಮೀನ ರಾಶಿ :ಇಂದು ನೀವು ಅನಾರೋಗ್ಯದಿಂದ ದಿನದ ಹೆಚ್ಚು ಭಾಗವನ್ನು ಕಳೆಯಬೇಕಾಗಬಹುದು. ತಾಯಿಯ ಪ್ರೀತಿಯಿಂದ ನಿಮಗೆ ನೆಮ್ಮದಿ ಸಿಗಲಿದೆ. ಭೂಮಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ಗೊಂದಲಗಳು ಬರಬಹುದು. ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸುವಿರಿ. ಪರಾಕ್ರಮದಿಂದ ಭೂಮಿಯ ಲಾಭವು ಆಗಲಿದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುವಿರಿ. ಬುದ್ಧಿವಂತಿಕೆಯನ್ನು ಬಳಸಿಕೊಂಡು ಲಾಭ ಪಡೆಯುವಿರಿ. ದಿನದ ಕೊನೆಯಲ್ಲಿ ಬಹಳ ಕೆಲಸವಿರುವಂತೆ ತೋರುವುದು. ಬಿಡುವಿಲ್ಲದ ದುಡಿಮೆಯು ನಿಮಗೆ ಕಷ್ಟವಾಗಬಹುದು. ಕೃಷಿಯಲ್ಲಿ ಲಾಭ. ಆಸ್ತಿಯ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಕಷ್ಟವಾದೀತು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವಾಗುವುದು. ಯಾರನ್ನೂ ನೀವು ತಪ್ಪಾಗಿ ಗ್ರಹಿಸುವುದು ಬೇಡ. ನಿಮ್ಮ ನಡೆಯಿಂದ ವಿರೋಧಿಗಳು ಹುಟ್ಟಿಕೊಳ್ಳಬಹುದು. ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವಿರಿ.