Horoscope Today May 26, 2024: ಭಾನುವಾರದ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಸಾಧ್ಯ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ ಸಂಜೆ 05:19 ರಿಂದ 06:56 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:30 ರಿಂದ 02:06ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:43 ರಿಂದ 05:19ರ ವರೆಗೆ.

ಮೇಷ ರಾಶಿ : ಇಂದು ನಿಮಗೆ ಬರಬೇಕಾದ ಹಣವನ್ನು ಬಲವಂತದಿಂದ ಪಡೆಯಬೇಕಾದೀತು. ಅತ್ಯಂತ ಶ್ರಮವಹಿಸಿ ಕಾರ್ಯವನ್ನು ಮಾಡಲಿದ್ದೀರಿ. ಸ್ನೇಹಿತರ ಸಹಾಯವೂ ದೊರೆಯಲಿದೆ. ದಾಂಪತ್ಯದಲ್ಲಿ ಪರಸ್ಪರ ಮನಸ್ತಾಪವೆದ್ದು ತಣ್ಣಗಾಗಲಿದೆ. ನಾಚಿಕೆಯನ್ನು ಬಿಟ್ಟು ಕೇಳಿದರೆ ನಿಮಗೆ ಬೇಕಾದ ವಸ್ತುಗಳು ಸಿಗಬಹುದು.‌ ಯಾವುದೇ ಕಾರ್ಯದಲ್ಲಿ ಮುಂದುವರಿಯಲು ಹೆದರಿಕೆಯು ಇರಲಿದೆ. ನಿಮಗೆ ನಿಮ್ಮ ಕೆಲಸದಿಂದ ಆದ ತಪ್ಪುಗಳು ಕಾಡಬಹುದು.‌ ನಿಮ್ಮ ಕುಶಲತೆಗೆ ಸರಿಯಾದ ಸ್ಥಾನ ಸಿಗಬಹುದು. ಅಪ್ರಯೋಜನದ ಮಾತುಗಳಿಂದ ನೀವು ಅಪಹಾಸ್ಯಕ್ಕೆ ಒಳಗಾಗುವಿರಿ. ಯಾರ ಮೇಲಿರುವ ಬೇಸರವನ್ನು ಮತ್ಯಾರದೋ ಮೇಲೆ ತೋರಿಸಿ ನಿಮ್ಮವರ ದ್ವೇಷಕ್ಕೆ ಕಾರಣವಾಗಬೇಡಿ. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು. ಅರ್ಥವಿಲ್ಲದ ಅನ್ವೇಷಣೆಯನ್ನು ಮಾಡುವುದು ಬೇಡ.

ವೃಷಭ ರಾಶಿ : ಇಂದು ನಿಮ್ಮ ಮಾತು ಎಲ್ಲರಿಗೂ ಪ್ರಿಯವಾದುದು. ಅಚಾತುರ್ಯದಿಂದ ಅನಾಹುತ ಮಾಡಿಕೊಳ್ಳುವಿರಿ. ಆಲಸ್ಯದಿಂದ ಮೇಲೆಳಬೇಕಾದ ಸ್ಥಿತಿ ಇದೆ. ನಿಮ್ಮ ಪ್ರತಿಭೆಯ ಅನಾವರಣಕ್ಕೆ ಸಕಾಲವಾಗಿದೆ. ನಿಮ್ಮವರನ್ನು ಬಂಧಿಸಿಡುವ ಕೆಲಸಕ್ಕೆ ಹೋಗಬೇಡಿ. ಪ್ರೀತಿಯಿಂದ ಕೊಟ್ಟ ಉಡುಗೊರೆಯನ್ನು ಸ್ವೀಕರಿಸುವಿರಿ. ನಿಮ್ಮ ಸಹಕಾರದ ಗುಣವು ಎಲ್ಲರಿಗೂ ಮೆಚ್ಚುಗೆಯಾಗುವುದು. ನಿಮ್ಮ ಕೆಲಸಕ್ಕೆ ಸರಿಯಾಗಿ ಹಣವು ಹರಿದು ಬರುವುದು. ಎಲ್ಲವೂ ಸರಿಯಾಗಿ ಆಗುವುದು. ಅತಿಯಾದ ನಿರೀಕ್ಷೆಯಿಂದ ದುಃಖವಾದೀತು. ಪ್ರೇಮದಲ್ಲಿ ಹಿನ್ನಡೆಯಾಗಲಿದೆ. ತಾಳ್ಮೆಯಿಂದ ಮುಖ್ಯ ಆಯುಧವಾಗಿರಲಿ. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು. ಒಂದೇ ವಿಚಾರವನ್ನು ಮನನ‌ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ. ಪ್ರಯಾಣದಿಂದ ಆಯಾಸವಾಗಬಹುದು.

ಮಿಥುನ ರಾಶಿ : ಆಪ್ತರು ನಿಮಗೆ ಒದಗುವ ಸಂಕಟದಲ್ಲಿ ಜೊತೆಯಾಗುವರು. ಧೈರ್ಯದಿಂದ ನೀವು ಇರಬಹುದು. ತಂತ್ರಜ್ಞರಿಗೆ ಉತ್ತಮ ಕೆಲಸ ಸಿಗಲಿದೆ ಅಥವಾ ಈಗಾಗಲೇ ಕೆಲಸ ಮಾಡುತ್ತಿದ್ದರೆ ಬಡ್ತಿ ಸಿಗಲಿದೆ. ಹೊಸದಾದ ವಾಹನವನ್ನು ಖರೀದಿ ಮಾಡಲಿದ್ದೀರಿ. ಸಾಲದ ಹೊರೆಯನ್ನು ಕಂಡು ಚಿಂತೆಗೆ ಒಳಗಾಗಬೇಕಾಗಬಹುದು. ಅವಸರವನ್ನು ಬಿಟ್ಟು ನಿಧಾನವಾಗಿ ಆಲೋಚಿಸಿ. ರಕ್ಷಣಾ ಪಡೆಗೆ ಸೇರುವವರಿಗೆ ಅವಕಾಶಗಳು ಸಿಗಬಹುದು. ಒಂದೇ ಕೆಲಸ ನಿಮಗೆ ನಿರಾಸಕ್ತಿಯನ್ನು ಮೂಡಿಸೀತು. ಕಛೇರಿಯ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ಇಂದು ಮಾನಸಿಕವಾಗಿ ನೀವು ಕುಗ್ಗುವಿರಿ. ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ಒಂದೇ ಕೆಲಸದಿಂದ ಎರಡು ಪ್ರಯೋಜನವನ್ನು ಪಡೆಯುವಿರಿ. ಭೂಮಿಯ ವ್ಯವಹಾರವು ಸುಲಭಕ್ಕೆ ಕೈ ಹಿಡಿಯದು. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು.

ಕಟಕ ರಾಶಿ : ನಿಮ್ಮ ಸಹೋದರಿಯರ ನಡುವೆ ಸಣ್ಣ ಭಿನ್ನಾಭಿಪ್ರಾಯ ಬರಬಹುದು. ಉದ್ಯೋಗದ ಸ್ಥಳದಿಂದ ನಿಮ್ಮನ್ನು ಕೈ ಬಿಡವ ಸಾಧ್ಯತೆ ಇದೆ. ನಿರಾಸೆಯು ಮೂಡಲಿದೆ. ವ್ಯಾಪರವು ಅಧೋಗತಿಗೆ ಹೋಗಲಿದೆ. ಶತ್ರುಗಳ ಪಿತೂರಿಯ ಕುರಿತು ನಿಮಗೆ ಶಂಕೆ ಉಂಟಾಗಲಿದೆ. ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಕುರಿತು ಆತಂಕವಿರಬಹುದು. ನಿಮಗೆ ಬೇಕಾದ ಭೂಮಿಯ‌ನ್ನು ನೀವು ಪಡೆಯುವಿರಿ. ಬುದ್ಧಿಗೆ ಸದ್ವಿಚಾರಗಳನ್ನು ನೀಡಿ. ಸಂಬಂಧ ಬೆಳೆಸುವ ವಿಚಾರದಲ್ಲಿ ನೀವು ಆತುರರಾಗುವಿರಿ. ಭವಿಷ್ಯದ ಬಗ್ಗೆ ಪತಿಯಾದ ಚಿಂತನೆ ಇರಲಿದೆ. ನಿಮ್ಮರನ್ನು ನೀವು ಕಳೆದುಕೊಳ್ಳುವ ಭೀತಿಯು ಇರುವುದು. ಆಲಸ್ಯದಿಂದ ನಿಮ್ಮ ಅನೇಕ ಕಾರ್ಯಗಳು ಹಿಂದುಳಿಯಬಹುದು. ಮಕ್ಕಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ಬೇಡದ ಇರುವ ವಸ್ತುಗಳನ್ನು ದಾನವಾಗಿ ಕೊಡುವಿರಿ.

ಸಿಂಹ ರಾಶಿ : ನೀವು ಕರ್ತವ್ಯಗಳನ್ನು ಮರೆತಿದ್ದು, ಯಾರೋ ಅದನ್ನು ನೆನಪಿಸಿಯಾರು. ಇದರಿಂದ ನಿಮಗೆ ಕೋಪಕ್ಕೆ ಬರಬಹುದು. ಕುಟುಂಬಕ್ಕೆ ಆಗಬೇಕಾದ ಕೆಲಸಗಳಿಂದ ಖರ್ಚುಗಳು ಹೆಚ್ಚಾಗಬಹುದು. ಯಾತ್ರೆಯನ್ನು ಮಾಡಲಿದ್ದೀರಿ. ಖರ್ಚನ್ನು ನಿಯಂತ್ರಿಸುವುದಕ್ಕಾಗಿ ನಿಮ್ಮ ಅವಶ್ಯಕತೆಗಳನ್ನು ಸದ್ಯ ನಿಲ್ಲಿಸುವಿರಿ. ಕ್ರೀಡೆಯಲ್ಲಿ ಮನಸ್ಸು ಇಡುವಿರಿ. ಓಡಾಟದ ಸುಸ್ತು ನಿಮಗೆ ಅನಾರೋಗ್ಯವಾಗಲಿದೆ. ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ನಿಮ್ಮ ಮನಸ್ಸಿಗೆ ಹಿತವಾದುದನ್ನು ಮಾತ್ರ ಮಾಡುವಿರಿ. ಉದ್ಯೋಗದಲ್ಲಿ ಹೆಚ್ಚುಗಾರಿಕೆ ಇರುವುದು. ತಾಳ್ಮೆಯಿಂದ ಕಾರ್ಯವನ್ನು ಮಾಡಿ. ನೂತನ‌ ಸ್ನೇಹವನ್ನು ಬೆಳೆಸಿಕೊಳ್ಳುವಿರಿ. ಬೇರೆಯವರ ಬಗ್ಗೆ ಯಾವುದೇ ಆತಂಕ ಬೇಡ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ. ವಿದೇಶದ ಪ್ರಯಾಣಕ್ಕೆ ಆಯಾಸವು ಆಯಾಸವು ಅಡ್ಡಿಬರಬಹುದು.

ಕನ್ಯಾ ರಾಶಿ : ನಿಮಗೆ ವಿದೇಶಕ್ಕೆ ಸಂಬಂಧಪಟ್ಟ ವ್ಯವಹಾರವನ್ನು ಪಾಲುದಾರಿಕೆಯಿಂದ ಪಡೆಯುವಿರಿ. ವ್ಯಾಪಾರದಲ್ಲಿ ಮಂದಗತಿ ಇರಲಿದೆ. ಯಂತ್ರೋಪಕರಣದ ಮಾರಾಟಗಾರಿಗೆ ಲಾಭವು ಆಗುವುದು. ಶಿಕ್ಷಕರು ತಮ್ಮ ವೃತ್ತಿಯಲ್ಲಿ ಕೀರ್ತಿಯನ್ನು ಗಳಿಸುವರು. ನಿಮಗೆ ಅಪಮಾನವಾಗುವ ಕೆಲಸವು ನಡೆಯಬಹುದು. ಸ್ತ್ರೀಸಂಬಂಧವಾದ ಅಪವಾದಗಳು ಬರಬಹುದು. ಮಾನಸಿಕ ಕಿರುಕುಳವನ್ನು ಅನ್ಯರಿಂದ ಅನುಭವಿಸುವಿರಿ. ಹೊಸತನ್ನು ಮಾಡಲು ಹೋಗಿ ಮುಗ್ಗರಿಸುವಿರಿ. ಸದ್ಯ ನೀವು ಯಾವುದೇ ಸಾಹಸದ ಕಾರ್ಯಕ್ಕೆ ಹೋಗುವುದು ಬೇಡ. ಅತಿಯಾದ ಆಡಂಬರವು ನಿಮಗೆ ಇಷ್ಟವಾಗದು. ನಿಮ್ಮ ವಿದ್ಯಾಪ್ರಗತಿಯು ಬಹಳ ಯಶಸ್ವಿಯಾಗುವುದು. ನಿಮ್ಮಲ್ಲಿರುವ ಅಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಇಂದಿನ ನಿಮ್ಮ ಮಾರಾಟದಿಂದ ಅಧಿಕಲಾಭವೂ ಆಗದು. ಸತ್ಪಾತ್ರರಿಗೆ ದಾನವನ್ನು ಮಾಡಿ.

ತುಲಾ ರಾಶಿ : ಇಂದು ಇಷ್ಟು ದಿನ ನಂಬಿ ಬಂದಿದ್ದ ಆಸ್ತಿಯು ಕೈ ತಪ್ಪುವ ಸಾಧ್ಯತೆ ಇದೆ. ಸಹನೆಯನ್ನು ಕಳೆದುಕೊಳ್ಳುವ ಸಂದರ್ಭದಲ್ಲಿ ನಿಮಗೆ ಎಚ್ಚರಿಕೆ ಇರಲಿ. ಸರ್ಕಾರಿ ಕಾರ್ಯಗಳು ಹಿಂದೆ ಬೀಳಲಿವೆ. ಅನಿವಾರ್ಯವಾಗಿ ಮಾಡಿದ ಸಣ್ಣ ಸಾಲವು ಇಂದು ದೊಡ್ಡದಾಗಿದೆ. ಇನ್ನೂ ಸಾಲಕ್ಕೆಂದು ಇನ್ನೊಬ್ಬರ ಬಳಿ ಕೈ ಚಾಚ ಬೇಕಾಗಬಹುದು.‌ ಮನೋಬಲವನ್ನು ಹೆಚ್ಚಿಸಿಕೊಳ್ಳಲು ಬೇಕಾದ ಕ್ರಮಗಳನ್ನು ಇಟ್ಟುಕೊಳ್ಳಿ. ನಿಮ್ಮ ಸುತ್ತ ಆಗುವುದನ್ನು ಒಮ್ಮನಸ್ಸಿನಿಂದ ಒಪ್ಪಿಕೊಳ್ಳಿ. ಆರ್ಥಿಕವಿಚಾರದಲ್ಲಿ ದಂಪತಿಗಳ ನಡುವೆ ಮನಸ್ತಾವಿರಲಿದೆ. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲವು ಕೆಲಸವನ್ನು ಮರೆಯುವಿರಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಬೇಕು ಎಂದು ಅನ್ನಿಸುವುದು. ಹವ್ಯಾಸಗಳು ನಿಮಗೆ ಪ್ರಯೋಜನವನ್ನು ಕೊಡುತ್ತದೆ. ಇಂದು ಖರೀದಿಸಿದ ಹೊಸ ವಸ್ತುವಿನಿಂದ ನಿಮಗೆ ಖುಷಿಯಾಗುವುದು.

ವೃಶ್ಚಿಕ ರಾಶಿ : ನಿಮ್ಮ ಮಕ್ಕಳ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳಿ. ಈಗಿರುವ ಕೆಲಸವನ್ನು ಬಿಟ್ಟು ಸ್ವಂತ ಉದ್ಯೋಗಕ್ಕೆ ತೊಡಗಬಹುದು. ಸಂತೋಷವಾಗಿರಲು ಬೇಕಾದಂತೆ ನಿಮ್ಮ ಶ್ರಮವನ್ನು ಇಟ್ಟುಕೊಳ್ಳಿ.‌ ಬಂಧುಗಳ ಭೇಟಿ ಸ್ವಲ್ಪ ಕಿರಿಕಿರಿ ಎನಿಸಿದರೂ ಅನಿವಾರ್ಯವಾಗಿ ಸುಮ್ಮನಿರುವಿರಿ. ಮನಸ್ಸಿಗೆ ಬುದ್ಧಿಗೆ ಕೆಲಸವನ್ನು ಕೊಡಬೇಡಿ. ಧನಾಗಮನದ ವಾರ್ತೆಯು ಇರಲಿದೆ. ಮರಗೆಲಸದವರಿಗೆ ಉತ್ತಮ ಕೆಲಸಗಳು ಸಿಗಲಿವೆ. ಜನರ ನಡುವೆ ಇರಲು ಬಯಸುವಿರಿ. ಗಂಭೀರವಾದುದನ್ನು ಬಹಳ ತಮಾಷೆಯಾಗಿ ಸ್ವೀಕರಿಸುವಿರಿ. ಹೂಡಿಕೆಯನ್ನು ಹಿಂಪಡೆಯುವ ಸಾಧಿಸುವಿರಿ ಇದೆ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ. ಆದಾಯಕ್ಕೆ ಯಾರಿಂದಲಾದರೂ ಅಡ್ಡಿಯಾಗಿ, ಸಿಟ್ಟುಗೊಳ್ಳುವಿರಿ. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಅಶುಭವಾದ ಕೆಲಸಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ.

ಧನು ರಾಶಿ : ಇಂದು ನೀವು ಮಾಡಲೇಬೇಕಾದ ಕೆಲಸವನ್ನು ಮಾಡದೇ ಆಲಸ್ಯದಿಂದ ಕಳೆಯುವಿರಿ. ಆಸ್ತಿಯ ವಿಚಾರದಲ್ಲಿ ನಿಮಗೆ ಅಕ್ಕಪಕ್ಕದವರ ಜೊತೆ ಅಸಮಾಧಾನ ವ್ಯಕ್ತವಾಗುವುದು. ಪ್ರಾಣಿಗಳ ಜೊತೆ ಸಮಯವನ್ನು ಕಳೆಯುವ ಮನಸ್ಸು ಮಾಡುವಿರಿ. ಊರಿನ ಉತ್ಸವದಲ್ಲಿ ಭಾಗಿಯಾಗುವಿರಿ. ರಾಜಕೀಯ ವ್ಯಕ್ತಿಗಳಾಗಿದ್ದರೆ ಇಂದು ಜನಸೇವೆಯನ್ನು ಮಾಡುವಿರಿ. ಮಕ್ಕಳು ನಿಮ್ಮನ್ನು ಇಷ್ಟ ಒಡುವರು.‌ ಅವರ ಜೊತೆ ಕಾಲ ಕಳೆಯಿರಿ. ಹಿರಿಯ ಅಧಿಕಾರಿಗಳ ಜೊತೆ ಸ್ನೇಹದಿಂದ ಮಾತನಾಡಿ ವಿಶ್ವಾಸ ಗಳಿಸುವಿರಿ. ನಿಮಗೆ ಆಗದವರನ್ನು ದೂರುವುದು ಬೇಡ. ಇಂದು ಬರುವ ಹಣದ ಆಧಾರದ ಮೇಲೆ ನೀವು ಯಾವ ವ್ಯವಹಾರವನ್ನೂ ಮಾಡುವುದು ಬೇಡ. ವಾಹನವನ್ನು ಚಾಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆಗಳು ಇರಲಿ. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳು ಬರುವುದು. ಸ್ವತಂತ್ರವಾದ ಆಲೋಚನೆಯು ಇಲ್ಲದೇ ಹೋದರೆ ಕಷ್ಟವಾದೀತು‌‌.

ಮಕರ ರಾಶಿ : ಇಂದು ಕುಟುಂಬದವರ ಮಾತಿನ ಅಲಕ್ಷ್ಯದಿಂದ ತೊಂದರೆಯಾದಂತೆ ಅನ್ನಿಸುವುದು. ಹಿರಿಯರಿಗೆ ತೊಂದರೆಯನ್ನು ಕೊಡಲು ಹೋಗಬೇಡಿ. ಯಶಸ್ಸು ನಿಮಗೆ ಬೇಡವೆಂದೆನಿಸಬಹುದು. ಯಾರ ಜೊತೆಗೂ ಇರಲು ನೀವು ಇಷ್ಟಪಡುವುದಿಲ್ಲ. ನಿದ್ರೆಯಲ್ಲಿ‌ ಬಿದ್ದ ದುಶಸ್ವಪ್ನವು ನಿಮ್ಮನ್ನು ಚಿಂತೆಗೆ ತಳ್ಳುವುದು. ನಿಮ್ಮದಲ್ಲದ್ದನ್ನು ಹಿಂದಿರುಗಿಸಿ. ಗೃಹನಿರ್ಮಾಣ ಕಾರ್ಯವನ್ನು ಆರಂಭಿಸಬಹುದು. ನಿಮ್ಮ ಕೆಲಸಕ್ಕೆ ಯೋಗ್ಯವಾದ ಪ್ರಶಂಸೆಗಳು ಸಿಗಲಿವೆ. ಅಹಾರದಿಂದ ಆರೋಗ್ಯವು ಕಡುವುದು. ಇನ್ನೊಬ್ಬರ ಬಗ್ಗೆ ಸಲ್ಲದ ಮಾತುಗಳನ್ನು ಆಡುವಿರಿ. ಅನವಶ್ಯಕವಾಗಿ ಚಿಂತನೆಯಿಂದ ನಿಮ್ಮ ಆತ್ಮವಿಶ್ವಾಸವನ್ನು ನೀವೇ ಹಾಳುಮಾಡಿಕೊಳ್ಳುವಿರಿ. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಸಹೋದ್ಯೋಗಿಗಳ ವರ್ತನೆಯಿಂದ ಸಿಟ್ಟಾಗುವ ಸಾಧ್ಯತೆ ಇದೆ. ಭೋಗವಸ್ತುಗಳನ್ನು ಖರೀದಿ ಮಾಡುವಿರಿ.

ಕುಂಭ ರಾಶಿ : ಇಂದು ನಿಮ್ಮ ಅಧಿಕವಾದ ಮಾತು ಕೇಳುವವರಿಗೆ ಹಿಂಸೆ ಕೊಡುವುದು. ಆಪ್ತರ ಜೊತೆ ಮಾತುಕತೆಗಳು ಆಗಬಹುದು. ಮನಸ್ಸಿಗೆ ಹಿತವಾದ ಕೆಲಸವನ್ನು ಮಾಡಿ. ಇಲ್ಲವಾದರೆ ಕೊರಗಬೇಕಾದೀತು. ಉತ್ತಮ ಆಹಾರವನ್ನು ಸೇವಸಲಿದ್ದೀರಿ. ಅಹಿತಕರವಾದ ಘಟನೆಯು ನಿಮ್ಮನ್ನು ಸ್ತಬ್ಧಗೊಳಿಸಬಹುದು. ನೂತನವಸ್ತ್ರಗಳ ಖರೀದಿಯನ್ನು ಮಾಡುವಿರಿ. ಉತ್ತಮವಾದ ಆಲೋಚನೆಗಳು ನಿಮಗೆ ಬರಲಿದ್ದು ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿ. ದೇಹಕ್ಕೆ ತೊಂದರೆ ಮಾಡಿಕೊಳ್ಳುವ ಸನ್ನಿವೇಶವಿರಲಿದೆ. ಮನೆಯ ಬದಲಾವಣೆಯನ್ನು ಮಾಡುವಿರಿ. ಯಾವುದೇ ಪ್ರಭಾವಕ್ಕೆ ಒಳಗಾಗದೆ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಭೂ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯಲಿದೆ. ಚರ ಆಸ್ತಿಯನ್ನು ಮಾರಾಟ ಮಾಡಿ ಹಣದ ಗಳಿಸುವಿರಿ. ನಿಮ್ಮ ಕಾರ್ಯವು ನಿಮಗೆ ಭಯವನ್ನು ಕೊಡುವುದು. ಇದರಿಂದ ಅಪಮಾನವು ಆಗುವುದು.

ಮೀನ ರಾಶಿ : ಇಂದು ಸುತ್ತಾಟಕ್ಕೆಂದು ಮಕ್ಕಳ ಜೊತೆ ಹೋಗಲಿದ್ದೀರಿ. ಕಡಿಮೆ ವೆಚ್ಚದಲ್ಲಿ ಹೆಚ್ಚು ಸಂಪಾದಿಸುವ ಯೋಜನೆಯನ್ನು ಹಾಕಿಕೊಳ್ಳುವುದಕ್ಕೆ ಎಲ್ಲಿಂದಲಾದರೂ ನಿಮಗೆ ಐಡಿಯಾ ಸಿಗಬಹುದು. ಹಿರಿಯರ ಹಾರೈಕೆ ನಿಮಗೆ ಸಿಗಲಿದೆ. ಕಛೇರಿಯ ಕೆಲಸಕ್ಕೂ ಸಮಯ ಸಿಗದೇ ಒತ್ತಡದಲ್ಲಿ ಇರುವಿರಿ. ಕಲಹವಾಗಿ ಸಂಗಾತಿಯಿಂದ ದೂರವಿರಬೇಕಾದೀತು. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಸಾವಾಗಲಿದೆ. ಕೃಷಿಯಲ್ಲಿ ಇಂದು ಎಂದಿಗಿಂತ ಉತ್ಸಾಹದಿಂದ ಪಾಲ್ಗೊಳ್ಳುವಿರಿ. ಖರ್ಚನ್ನು ಕಡಿಮೆ ಮಾಡಿಕೊಳ್ಳಿ. ವಿದ್ಯಾರ್ಥಿಗಳ ಕ್ರಿಯಾಶೀಲ ವ್ಯಕ್ತಿತ್ವದಿಂದ ಎಲ್ಲರ ಗಮನವನ್ನು ಸೆಳೆಯುವರು‌. ಆಪ್ತರ ಬಗ್ಗೆ ನಿಮ್ಮ ಅಭಿಪ್ರಾಯ ಬದಲಾಗಬಹುದು. ಪ್ರೀತಿಪಾತ್ರರಿಗೆ ಸಮಯ ವ್ಯರ್ಥ ಮಾಡುವಿರಿ. ಪ್ರೇಮವು ಯಾರಿಂದಲೋ ಬಹಿರಂಗವಾಗುವುದು. ಮಹಿಳಾ ಉದ್ಯೋಗಿಗಳು ಹೆಚ್ಚಿನ ಸ್ಥಾನವನ್ನು ಪಡೆಯುವಿರಿ. ಯಾರನ್ನೂ ದೂರುವ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ.

Source : https://tv9kannada.com/horoscope/dina-bhavishya-may-26th-2024-and-zodiac-signs-aries-to-pisces-in-kannada-krn-838509.html

Leave a Reply

Your email address will not be published. Required fields are marked *