ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ, ಮಂಗಳವಾರ ಅಲೌಕಿಕ ಅನುಭವಕ್ಕೆ ಆಸೆ, ಅಸಂಗತ ವಿಚಾರದ ಕಡೆ ಗಮನ, ನೇರ ಮಾತಿನಿಂದ ದ್ವೇಷ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ವೃಷಭ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ – 06 : 03 am, ಸೂರ್ಯಾಸ್ತ – 06 – 57 pm, ಇಂದಿನ ಶುಭಾಶುಭಕಾಲ : ರಾಹು ಕಾಲ 15:44 – 17:21, ಯಮಘಂಡ ಕಾಲ 09:17 – 10:54, ಗುಳಿಕ ಕಾಲ 12:31 – 14:08
ಮೇಷ ರಾಶಿ: ಇನ್ನೊಬ್ಬರ ಮುಂದೆ ಸಂಭ್ರಮಿಸುವುದು ಬೇಡ. ಅಸೂಯ ಬರಬಹುದು. ಇಂದು ಅನುಭವಿಗಳ ಜೊತೆ ನಿಮ್ಮ ಅನನುಭವದ ಸನ್ನಿವೇಶವನ್ನು ಹಂಚಿಕೊಳ್ಳುವಿರಿ. ಅದು ಬಾಲಿಶ ಎನಿಸುವುದು. ನಿಮ್ಮ ವೈವಾಹಿಕ ಜೀವನದಲ್ಲಿ ಉದ್ವಿಗ್ನತೆ ಕಾಣಿಸಿಕೊಳ್ಳುವುದು. ಸ್ನೇಹಿತನ ಸಹಾಯದಿಂದ ಸಮಸ್ಯೆ ಬಗೆಹರಿಸಬಹುದು. ಆರೋಗ್ಯ ಚೆನ್ನಾಗಿರಲು ನಿಗಾ ಇಡಿ. ಶುಭ ಸಂಕೇತಗಳು ಅಚ್ಚರಿಯನ್ನು ಉಂಟುಮಾಡಬಹುದು. ಇಟ್ಟ ಹೆಜ್ಜೆಯನ್ನು ಹಿಡೆಯುವ ಯಾವ ವಿಚಾರವನ್ನೂ ಮಾಡಲಾರಿರಿ. ಅಡೆತಡೆಗಳು ಕೊನೆಗೊಳ್ಳುತ್ತವೆ. ಯೋಜನೆಯ ಪ್ರಕಾರ ಕೆಲಸ ಮಾಡಲು ಸಾಧ್ಯವಾಗುತ್ತದೆ. ಭಯದ ಕಾರಣಕ್ಕೆ ನೀವು ಎಲ್ಲ ಕಾರ್ಯಗಳಿಂದ ಹಿಮ್ಮುಖರಾಗುವಿರಿ. ಕೆಲವರಿಗೆ ದಾರ್ಷ್ಟ್ಯದ ಮಾತುಗಳನ್ನು ಆಡಬೇಕಾಗುವುದು. ಮನೆಯ ನಿರ್ಮಾಣದ ಕನಸನ್ನು ಕಾಣುವಿರಿ. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಚೌಕಟ್ಟಿನಲ್ಲಿ ಎಲ್ಲವೂ ಇರಬೇಕು ಎನ್ನುವುದು ಅಸಾಧ್ಯದ ಮಾತು.
ವೃಷಭ ರಾಶಿ: ಲಾಭಕ್ಕಿಂತ ಹೆಚ್ಚಾಗಿ ವಸ್ತುನಿಷ್ಠರಾಗಿ ಇರುವಿರಿ. ಇಂದು ನಿಮಗೆ ಯಾರ ಸಹಾನುಭೂತಿಯೂ ಬೇಕಾಗದು. ನೀವು ಇತರರ ಸಲಹೆಯನ್ನು ಮಾತ್ರ ಅವಲಂಬಿಸಿದ್ದರೆ ಸಂಭಾವ್ಯ ಆರ್ಥಿಕ ನಷ್ಟಗಳ ಬಗ್ಗೆ ಜಾಗರೂಕರಾಗಿರಿ. ಕೆಲಸದ ಒತ್ತಡ ಹೆಚ್ಚಾದರೂ, ನಿಮಗೆ ನಿರ್ವಹಣಾ ಶಕ್ತಿ ಇದೆ. ಹಣಕಾಸಿನಲ್ಲಿ ಖರ್ಚುಗಳಿಂದ ದೂರವಿರಿ. ಎಷ್ಟೇ ಹಣವಿದ್ದರೂ ಸಾಲದಂತೆ ಕಾಣಿಸುವುದು. ಕುಟುಂಬದ ಜೊತೆ ಸಮಯ ಕಳೆಯುವುದು ಸಂತೋಷ ತರಲಿದೆ. ಸ್ನೇಹಿತರೊಂದಿಗೆ ಉತ್ತಮ ಮಾತುಕತೆ ಸಾಧ್ಯ. ಹೊಸ ಯೋಜನೆ ನಿಮ್ಮ ದಿಕ್ಕು ಬದಲಾಯಿಸಬಹುದು. ದ್ವೇಷವನ್ನು ಕಟ್ಟಿಕೊಳ್ಳುವ ಸಾಧ್ಯತೆ ಇದೆ. ಕೆಲವು ಅಪವಾದವನ್ನು ಅನಿವಾರ್ಯವಾಗಿ ಹೊರಬೇಕಾಗುವುದು. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸುವಿರಿ. ಹಳೆಯ ವಿಚಾರವನ್ನು ಮತ್ತೆ ತೆಗದು ವಿವಾದ ಮಾಡಿಕೊಳ್ಳುವ ಸಂದರ್ಭವಿದೆ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಸಜ್ಜನರ ಸಹವಾಸದಿಂದ ಕೆಲವು ಬದಲಾವಣೆಯನ್ನು ತಂದುಕೊಳ್ಳುವಿರಿ.
ಮಿಥುನ ರಾಶಿ: ವಿವೇಕದಿಂದ ನಿಮಗೆ ಹೊಸ ಅರಿವು ಮೂಡುವುದು. ನಿಮ್ಮ ಬಿಡುವಿನ ದಿನದಲ್ಲಿಯೂ ಕುಟುಂಬದವರ ಬಗ್ಗೆ ಕಾಳಜಿ ಇರದು. ಬಹಳ ದಿನಗಳಿಂದ ಉಳಿದ ಕಾರ್ಯಕ್ಕೆ ನಿಮ್ಮ ಪೂರ್ಣ ಪರಿಶ್ರಮ ಬೇಕಾಗಲಿದೆ. ನಿಮ್ಮ ಮಾತುಕತೆಗಳು ಪ್ರಾಮಾಣಿಕರಾಗಿರಲಿ. ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಪರ್ಕ ಸಾಧಿಸುವಿರಿ. ಹಣಕಾಸಿನಲ್ಲಿ ಬದಲಾವಣೆ ಬೇಕಾದರೆ ಹೊಸ ಯೋಚನೆ ಮಾಡಿ. ಕುಟುಂಬದ ವಿಷಯದಲ್ಲಿ ನಿಮ್ಮ ಮಾತಿಗೆ ಬೆಲೆ ಇರುತ್ತದೆ. ನಿಮ್ಮ ಸ್ವಪ್ನಗಳಿಗೆ ಹೊಸ ದಿಕ್ಕು ಸಿಗಲಿದೆ. ಆರೋಗ್ಯ ಸರಿಹೊಂದುತ್ತದೆ. ವ್ಯಾಪಾರ ಪ್ರಯತ್ನಗಳು ಫಲಪ್ರದವಾಗುತ್ತವೆ. ಉಡುಗೊರೆಗಳು ಅಥವಾ ಗೌರವ ಹೆಚ್ಚಾಗುತ್ತದೆ. ಮಾಡಿದ ಪ್ರಯತ್ನಗಳು ಸಾರ್ಥಕವಾಗುತ್ತವೆ. ಮಾತನ್ನು ಸರಿಯಾಗಿ, ಸರಿಯಾದ ಸ್ಥಳದಲ್ಲಿ ಆಡಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು.
ಕರ್ಕಾಟಕ ರಾಶಿ: ಸಂಗಾತಿಯ ವಿರುದ್ಧ ಮಾತನಾಡುವುದನ್ನು ಸಹಿಸಲಾರಿರಿ. ಇಂದು ನಿಮ್ಮ ಸ್ಥಾನವನ್ನು ಬಿಟ್ಟುಕೊಡಬೇಕಾಗಿ ಬರಬಹುದು. ಕುಟುಂಬ ಸದಸ್ಯರ ಬಗ್ಗೆ ನಿಮಗಿದ್ದ ನಿರೀಕ್ಷೆಗಳು ಹುಸಿಯಾಗಬಹುದು. ಪ್ರೀತಿ ಇಂದು ನಿಮಗೆ ಸಂತೋಷವನ್ನು ತರಬಹುದು. ಕೆಲಸದಲ್ಲಿ ಉತ್ಪಾದಕ ದಿನವನ್ನು ನಿರೀಕ್ಷಿಸಿ. ಹೊಸ ಕೆಲಸ ಮಾಡಲು ಅವಕಾಶಗಳು ಸಿಗಲಿವೆ. ಸಮಯ ಸ್ವಲ್ಪ ತೊಂದರೆ ಉಂಟುಮಾಡುತ್ತದೆ. ಆದರೆ ನಿಮಗೆ ಅವಕಾಶ ಸಿಗುತ್ತದೆ ಮತ್ತು ಆರ್ಥಿಕ ಲಾಭವು ತೃಪ್ತಿಕರವಾಗಿರುತ್ತದೆ. ದಿನದ ಅಂತ್ಯವನ್ನು ನಿಮ್ಮ ಮಕ್ಕಳೊಂದಿಗೆ ಕಳೆಯುತ್ತೀರಿ. ಮಕ್ಕಳ ಜವಾಬ್ದಾರಿಗಳನ್ನು ಪೂರೈಸಲಾಗುವುದು. ಎಲ್ಲರೂ ನಿಮ್ಮನ್ನು ಮೆಚ್ಚಬೇಕು ಎಂದುಕೊಳ್ಳುವಿರಿ. ಸೃಜನಾತ್ಮಕ ಪ್ರಯತ್ನಗಳು ಫಲ ನೀಡುತ್ತವೆ. ಪರದೇಶದಲ್ಲಿ ಇರುವವರಿಗೆ ಜೀವನ ಕಷ್ಟವೆನಿಸಬಹುದು. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು.
ಸಿಂಹ ರಾಶಿ: ಒಬ್ಬರನ್ನೇ ಲೌಕಿಕ ಕಾರ್ಯಕ್ಕೆ ನಂಬಿ ಕುಳಿತರೆ ಆಗದು. ನಿಮ್ಮನ್ನು ಅವರು ಕೇವಲವಾಗಿ ನೋಡಬಹುದು. ಇಂದು ಸಾಮಾಜಿಕ ಕೂಟಗಳಲ್ಲಿ ಭಾಗವಹಿಸಲು ಅವಕಾಶ ಸಿಗುವುದು. ಹಣವನ್ನು ಉಳಿಸುವ ನಿಮ್ಮ ಪ್ರಯತ್ನಕ್ಕೆ ಇಂದು ಅಡೆತಡೆಗಳನ್ನು ಬರಬಹುದು. ಹೊಸ ವ್ಯವಹಾರ ಒಪ್ಪಂದಗಳು ಮತ್ತು ನಿರುದ್ಯೋಗಿಗಳಿಗೆ ಯಶಸ್ಸು ಸಿಗುತ್ತದೆ. ಲಾಭದ ಸ್ಥಿತಿ ಉಳಿಯುತ್ತದೆ. ನಿಮ್ಮ ಮಾತನ್ನು ನಿಯಂತ್ರಿಸಿ, ಕೋಪವು ವಿವಾದಗಳಿಗೆ ಕಾರಣವಾಗಬಹುದು. ವೈವಾಹಿಕ ಜೀವನವು ಆಹ್ಲಾದಕರವಾಗಿರುವುದು. ಮಿತವಾಗಿ ಕಡಿಮೆ ತೆಗೆದುಕೊಳ್ಳಿ. ಲೋಕ ವ್ಯವಹಾರದಲ್ಲಿ ಆಸಕ್ತಿ ತೋರಿಸಲಾರಿರಿ. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಷ್ಠೆಯನ್ನು ಉಳಿಸಿಕೊಳ್ಳುವುದು ಕಷ್ಟವಾದೀತು.
ಕನ್ಯಾ ರಾಶಿ: ಮನಸ್ಸು ನಕಾರದ ಕಡೆಗೆ ಹೋದರೂ ನೀವು ಅದನ್ನು ಸರಿದಾರಿಗೆ ತರಲೇಬೇಕಾಗುವುದು. ನಿಮ್ಮ ದೌರ್ಬಲ್ಯಗಳನ್ನು ಹತೋಟಿ ತರುವುದು ಕಷ್ಟವಾಗುವುದು. ಇದೇ ಕಾರಣಕ್ಕೆ ಅಪಮಾನವನ್ನು ಎದುರಿಸಬೇಕಾಗುವುದು. ಭೂಮಿ ಮಾರಾಟದ ಬಗ್ಗೆ ಯೋಚಿಸುತ್ತಿದ್ದರೆ ಇಂದು ಉತ್ತಮವಾಗಿರುವುದು. ಯಾವುದೇ ರೀತಿಯ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದಿಲ್ಲ. ಮನಸ್ಸು ಸಂತೋಷವಾಗಿರುತ್ತದೆ ಮತ್ತು ಕುಟುಂಬದೊಂದಿಗೆ ಸಮಯ ಕಳೆಯುತ್ತೀರಿ. ಅಗತ್ಯ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಸರ್ಜನಾತ್ಮಕ ಕೆಲಸಗಳಲ್ಲಿ ಪ್ರಗತಿ ಇರುತ್ತದೆ. ಮಿತ್ರನ ಬಗ್ಗೆ ಯಾರಾದರೂ ಸಲ್ಲದ ಮಾತನಾಡಬಹುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಸಾಮರಸ್ಯದ ಕೊರತೆ ಎದ್ದು ಕಾಣಿಸುವುದು. ಅತಿಯಾದ ಕೋಪದಿಂದ ನಿಮ್ಮ ವ್ಯವಹಾರವು ಬುಡಮೇಲಾದೀತು. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು.
ತುಲಾ ರಾಶಿ: ನಿಮ್ಮ ಮಾತೇ ನಿಮ್ಮನ್ನು ಉನ್ನತ ಸ್ತರಕ್ಕೆ ಏರಿಸುವುದು. ಗೌರವನ್ನೂ ತಂದುಕೊಡುವುದು. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಅತಿಯಾದಂತೆ ಯಾರಿಗಾದರೂ ಅನ್ನಿಸಬಹುದು. ನಿಮ್ಮ ನಿರ್ಧಾರಗಳು ಇಂದು ಹೆಚ್ಚುವರಿ ಹಣಕಾಸಿನ ಲಾಭವನ್ನು ತರಬಹುದು. ನಿಮ್ಮ ಸಂಗಾತಿಯ ಜೊತೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಭಾವನೆಗಳನ್ನು ವ್ಯಕ್ತಪಡಿಸಲು ಅವಕಾಶ ದೊರೆಯಲಿದೆ. ಕೆಲಸದಲ್ಲಿ ನಿಮಗೆ ಮುಖ್ಯ ಪಾತ್ರ ಲಭ್ಯವಾಗುವ ಸಾಧ್ಯತೆ ಇದೆ. ಹಣಕಾಸಿನಲ್ಲಿ ನಿಯಂತ್ರಣ ಕಾಪಾಡಿ. ಮನೆಯವರಿಂದ ಸಣ್ಣ ನಿರಾಸೆ ಆಗಬಹುದು, ಆದರೆ ಮಾತುಕತೆ ಎಲ್ಲವನ್ನೂ ಸರಿಮಾಡಬಹುದು. ಸರಕಾರದಿಂದ ಸಹಕಾರ ದೊರೆಯಲಿದೆ. ಶಿಕ್ಷಣವನ್ನು ನೀಡುವ ವ್ಯವಸ್ಥೆಯಲ್ಲಿ ಇದ್ದರೆ ಹೆಚ್ಚು ಉಪಯುಕ್ತವಾಗುವುದು. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಮಕ್ಕಳಿಗಾಗಿ ಹಣವನ್ನು ಇಡುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು.
ವೃಶ್ಚಿಕ ರಾಶಿ: ಇಂದಿನ ನಿಮ್ಮ ಪ್ರಯಾಣದ ಯೋಜನೆಯು ಸರಿಯಾಗಿದ್ದರೆ ಎಲ್ಲವೂ ಸಾಧ್ಯವಾಗುವುದು. ಇಂದು ನಿಮಗೆ ಅತ್ಯಾಕರ್ಷಕ ಅವಕಾಶಗಳು ಅನಿರೀಕ್ಷಿತವಾಗಿ ಸಿಗಲಿದೆ. ನಿಮ್ಮ ಸಂಗಾತಿಯಿಂದ ನಿಮಗೆ ಸಂತೋಷವು ಬೇಕೆನಿಸುವುದು. ಇಂದು ಎದುರಾಗುವ ಸವಾಲುಗಳು ನಿಮಗೆ ಉದ್ಯೋಗದಲ್ಲಿ ಸ್ಥಿರತೆಯನ್ನು ತೋರಿಸುತ್ತದೆ. ನಿರೀಕ್ಷೆಗಿಂತ ಹೆಚ್ಚಾಗಿ ಇತರರು ಸಹಾಯ ಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ಜೊತೆ ಹೆಚ್ಚು ಸಮಯ ಕಳೆಯುವುದು ನಿಮ್ಮ ಮನಸ್ಸಿಗೆ ನೆಮ್ಮದಿ ತರಲಿದೆ. ದಿನವು ಚೆನ್ನಾಗಿ ಆರಂಭವಾಗುತ್ತದೆ. ಆದಾಯ ಉತ್ತಮವಾಗಿರುತ್ತದೆ ಮತ್ತು ಬೆಂಬಲವೂ ಸಿಗುತ್ತದೆ. ಪರಸ್ಪರ ಸಂಬಂಧಗಳು ಮಧುರವಾಗಿರುತ್ತದೆ. ಭೂಮಿಯ ವ್ಯವಹಾರವು ನಿಮಗೆ ಶಕ್ತಿಯನ್ನು ತಂದೀತು. ಅವಶ್ಯಕವಿರುವದನ್ನು ಇಟ್ಟುಕೊಂಡು ಇನ್ನೊಬ್ಬರಿಗೂ ಕೊಡಿ. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು.
ಧನು ರಾಶಿ: ಆದಾಯದ ಅಮಲು ನಿಮ್ಮ ನಡವಳಿಕೆಯನ್ನು ಬದಲಿಸುವುದು. ಇಂದು ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಮಾತ್ರವಲ್ಲದೆ, ವೈಯಕ್ತಿಕವಾಗಿಯೂ ಒತ್ತಡ ಹೆಚ್ಚಿರುವುದು. ನಿಮ್ಮ ಪೋಷಕರ ಆರೋಗ್ಯಕ್ಕೆ ಸಂಬಂಧಿಸಿದಂತೆ ವೆಚ್ಚಗಳು ಹೆಚ್ಚಾಗಬಹುದು. ಇದು ನಿಮ್ಮ ಹಣಕಾಸಿನ ಸ್ಥಿತಿಯ ಮೇಲೆ ಪರಿಣಾಮವನ್ನು ಬೀರಬಹುದು. ಸಮಯವು ಹಣದ ಕೊರತೆಯನ್ನು ನಿವಾರಿಸುತ್ತದೆ. ಹಣಕ್ಕೆ ಸಂಬಂಧಿಸಿದ ಚಿಂತೆಗಳು ಕೊನೆಗೊಳ್ಳುತ್ತವೆ. ಅನಗತ್ಯ ವಿವಾದಗಳಿಂದ ದೂರವಿರಿ ಮತ್ತು ಯಾರನ್ನೂ ಹೆಚ್ಚು ನಂಬಬೇಡಿ. ಸರಿಯಾದ ಸಮಯಕ್ಕಾಗಿ ಕಾಯಿರಿ. ಸೃಜನಾತ್ಮಕ ಪ್ರಯತ್ನಗಳು ಫಲ ನೀಡುತ್ತವೆ. ವಾಹನ ಚಾಲನೆಯನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕಾಗುವುದು. ಉದ್ವೇಗದಿಂದ ಏನನ್ನಾದರೂ ಮಾಡಲು ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಕೋಪದಿಂದ ಕೆಲವು ಸುಂದರ ಕ್ಷಣವನ್ನು ಕಳೆದುಕೊಳ್ಳುವಿರಿ. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು.
ಮಕರ ರಾಶಿ: ನಿಮ್ಮ ಪ್ರೀತಿಗೆ ಸ್ನೇಹಿತರೇ ಅಡ್ಡಗೋಡೆಯಾಗಬಹುದಿ. ನಿಮಗೆ ಬೇಕಾದ ಹಣವನ್ನು ಹೊಂದಿಸಲು ಸೂಕ್ತ ವ್ಯಕ್ತಿಗಳ ಅನ್ವೇಷಣೆ ಮಾಡವಿರಿ. ಕೆಲಸ ಮೇಲೆ ನಿಮ್ಮ ಗಮನ ಕೇಂದ್ರೀಕರಿಸುವುದನ್ನು ಖಚಿತಪಡಿಸಿಕೊಳ್ಳಿ. ವ್ಯಾಪಾರದ ಆದ ಸ್ವಲ್ಪ ಅಜಾಗರೂಕತೆಯೂ ಭಾರೀ ನಷ್ಟವನ್ನು ಉಂಟುಮಾಡಬಹುದು. ಕೆಲವರ ಮಾತುಗಳಿಂದ ಮನಸ್ಸಿಗೆ ದುಃಖಿತವಾಗಬಹುದು, ಆದರೆ ಉತ್ತರ ಸೌಮ್ಯವಾಗಿರಲಿ. ಹಣಕಾಸಿನಲ್ಲಿ ಅನಿರೀಕ್ಷಿತ ತಡ ಸಂಭವಿಸಬಹುದು. ಹೊಸ ಕೆಲಸದ ಅವಕಾಶಗಳನ್ನು ತಪ್ಪಿಸಬೇಡಿ. ಪ್ರಯಾಣದ ಯೋಜನೆ ಮುಂದೂಡುವುದು ಉತ್ತಮ. ಹಣಕಾಸಿನ ವಿಷಯಗಳಲ್ಲಿ ಅಪಾಯಗಳನ್ನು ತೆಗೆದುಕೊಳ್ಳಬೇಡಿ. ಅನಗತ್ಯ ಸಮಸ್ಯೆಗಳು ಮತ್ತು ತೊಡಕುಗಳು ಉಂಟಾಗುತ್ತವೆ. ಎಂತಹ ಒತ್ತಡವಿದ್ದರೂ ತಾಳ್ಮೆಯಿಂದ ಕೆಲಸ ಮಾಡಿ. ಕಾರ್ಯಕ್ರಮದಲ್ಲಿ ದುಂದುವೆಚ್ಚದಂತೆ ಕೆಲವು ತೋರೀತು. ವಿವಾದಗಳನ್ನು ಮಾಡುವ ಸಂದರ್ಭವು ಬಂದರೂ ಅದರಿಂದ ದೂರವಿರಿ. ಸಹೋದರರ ಬಗೆಗಿನ ನಿಮ್ಮ ನಿಲುವು ಸರಿ ಇರದು.
ಕುಂಭ ರಾಶಿ: ಅನಿವಾರ್ಯ ಕಾರಣದಿಂದ ನಿಮ್ಮ ಯೋಜನೆಯನ್ನು ಮುಂದೆ ಹಾಕುವಿರಿ. ನಿಮ್ಮ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಬರುವುದು ಸಹಜವೇ. ಆದರೆ ಅದನ್ನು ಎದುರಿಸಬೇಕೋ ಶಾಂತಗೊಳಿಸಬೇಕೋ ಎನ್ನುವುದು ನಿಮಗೆ ಸೇರಿದ್ದು. ನಿಮ್ಮ ಸ್ನೇಹಿತರು ನಿಮ್ಮ ಸಹಾಯಕ್ಕೆ ಬರಬಹುದು. ತೀರ್ಮಾನಗಳ ಹಿಂದೆ ತಾಳ್ಮೆ ಇರಲಿ. ಹಣದ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಜವಾಬ್ದಾರಿಯುತರಾಗಿರಿ. ಕುಟುಂಬದಲ್ಲಿ ಹಿರಿಯರ ಸಲಹೆ ನಿಮ್ಮ ಸಮಸ್ಯೆಗೆ ಪರಿಹಾರವಾಗಬಹುದು. ಯಶಸ್ಸಿನ ಹಾದಿಯನ್ನು ತೆರೆಯುವ ಹೊಸ ಅವಕಾಶಗಳು ನಿಮಗೆ ಸಿಗುತ್ತವೆ. ನೀವು ಸೃಜನಶೀಲ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ವ್ಯಾಪಾರದಲ್ಲಿ ಖ್ಯಾತಿಯನ್ನು ಬಯಸುವಿರಿ. ಹೊಸ ಸಂಬಂಧಗಳು ವ್ಯವಹಾರದಿಂದ ಇಂದು ಆಗಲಿದೆ. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸೀತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ಸಹೋದರರ ಶೀತಲ ಸಮರವು ತಿಳಿಯಾಗಬಹುದು.
ಮೀನ ರಾಶಿ: ಪಾಲುದಾರಿಕೆಯಲ್ಲಿ ಮಾನಸಿಕ ತಿಕ್ಕಾಟವನ್ನು ಹೆಚ್ಚು ಮಾಡಿಕೊಳ್ಳುವಿರಿ. ನಿಮ್ಮ ಬಹಳ ದಿನಗಳ ಚಿಂತೆಗೆ ಇಂದು ಮುಕ್ತಿ ಸಿಗುವುದು. ನೀವು ಜನರ ಆಸೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದು, ವ್ಯವಹಾರದಲ್ಲಿ ಅದನ್ನು ಪ್ರಯೋಗಿಸುವಿರಿ. ಇಂದು ಅತಿಯಾಗಿ ಖರ್ಚು ಮಾಡದಿರುವುದು ಒಳ್ಳೆಯದು. ಹೊಸ ಅವಕಾಶಗಳು ಕಾಣಿಸುತ್ತವೆ. ಆದರೆ ಎಲ್ಲವನ್ನೂ ತಕ್ಷಣ ಸ್ವೀಕರಿಸದಿರಿ. ಕೆಲಸದ ಕಡೆ ಕೆಲ ಒತ್ತಡಗಳು ಬರಬಹುದು. ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ಹಣಕಾಸಿನ ವಿಚಾರದಲ್ಲಿ ಅನವಶ್ಯಕ ಖರ್ಚುಗಳು ಬರಬಹುದು. ಸ್ನೇಹಿತರ ಜತೆ ಮಾತು ತಪ್ಪಿದ್ರೆ ತಕ್ಷಣ ಸರಿಪಡಿಸಿ. ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಿ. ಆರೋಗ್ಯದ ಬಗ್ಗೆ ಉದಾಸೀನ ಮಾಡಬೇಡಿ. ಸರಕಾರದಿಂದ ಅರ್ಥಿಕ ಬೆಂಬಲ ದೊರೆಯಬಹುದು. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1