Skip to content
  • Friday, March 27, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • GT vs MI: ಕ್ವಾಲಿಫೈಯರ್-2 ಪಂದ್ಯ ನಡೆಯಲಿರುವ ಅತಿ ದೊಡ್ಡ ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ಹೇಗಿದೆ?
Sports

GT vs MI: ಕ್ವಾಲಿಫೈಯರ್-2 ಪಂದ್ಯ ನಡೆಯಲಿರುವ ಅತಿ ದೊಡ್ಡ ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ಹೇಗಿದೆ?

May 26, 2023
samagrasuddi

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಇನ್ನು ಕೇವಲ ಎರಡು ಪಂದ್ಯಗಳು ಮಾತ್ರ ನಡೆಯಲಿದೆ. ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ಫೈನಲ್​ಗೆ ಪ್ರವೇಶ ಪಡೆದಿದೆ.ಇದೀಗ ಕ್ವಾಲಿಫೈಯರ್ 1 ರಲ್ಲಿ ಸೋತ ತಂಡ ಮತ್ತು ಎಲಿಮಿನೇಟರ್​ನಲ್ಲಿ ಗೆದ್ದ ತಂಡಗಳ ನಡುವೆ ಕ್ವಾಲಿಫೈಯರ್-2 ಪಂದ್ಯ ನಡೆಯಲಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಮತ್ತು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ನಡುವೆ ಈ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದೆ.ಈ ಪಂದ್ಯ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಸಿಎಸ್​ಕೆ ವಿರುದ್ಧ ಐಪಿಎಲ್ 2023 ಫೈನಲ್​ನಲ್ಲಿ ಟ್ರೋಫಿಗಾಗಿ ಸೆಣೆಸಾಡಲಿದೆ.ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್‌ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ.ಈ ಮೈದಾನದಲ್ಲಿ 180 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಉತ್ತಮ ಸ್ಕೋರ್ ಆಗಲಿದ್ದು, ಟಾಸ್ ಗೆದ್ದ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು. ಸುಮಾರು 114,000 ಜನರ ಆಸನ ಸಾಮರ್ಥ್ಯವನ್ನು ಈ ಕ್ರೀಡಾಂಗಣ ಹೊಂದಿದೆ. ದ್ವಿತೀಯ ಇನಿಂಗ್ಸ್ ವೇಳೆ ಬೌಲಿಂಗ್‌ ಮಾಡುವಾಗ ಹುಲ್ಲು ಹಾಸಿನ ಮೇಲೆ ಕಾಣಿಸಿಕೊಳ್ಳುವ ಇಬ್ಬನಿ ಪ್ರಮುಖ ಪಾತ್ರ ವಹಿಸಲಿದೆ. ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಈ ಮೈದಾನ 7 ಪಂದ್ಯಗಳಿಗೆ ಅತಿಥ್ಯ ವಹಿಸಿದ್ದು, 4 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ್ದ ತಂಡ ಜಯಿಸಿದ್ದರೆ, 3 ಪಂದ್ಯಗಳಲ್ಲಿ ಚೇಸ್ ಮಾಡಿದ ತಂಡ ಗೆಲುವನ್ನು ಕಸಿದಿದೆ.ಗುಜರಾತ್‌ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡೂ ತಂಡಗಳಲ್ಲಿಯೂ ಗುಣಮಟ್ಟದ ಬ್ಯಾಟ್ಸ್‌ಮನ್‌ಗಳಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರನ್‌ ಹೊಳೆ ಹರಿಯುವ ಸಾಧ್ಯತೆ ಇದೆ.

source https://tv9kannada.com/photo-gallery/cricket-photos/narendra-modi-stadium-has-so-far-been-batting-friendly-here-is-the-pitch-report-of-gt-vs-mi-qualifier-2-match-vb-587157.html

Tags: Cricket, GT, Gujarat, IPL, IPL 2023, MI, Mumbai, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

Wrestlers Protest: ಸಾಕ್ಷಿ, ವಿನೇಶ್, ಬಜರಂಗ್ ವಿರುದ್ಧ ಎಫ್‌ಐಆರ್‌ಗೆ ಅರ್ಜಿ: ಪ್ರತಿಭಟನೆ ತೀವ್ರಗೊಳಿಸಲು ಮತ್ತೊಂದು ಹೆಜ್ಜೆ ಇಟ್ಟಿ ಕುಸ್ತಿಪಟುಗಳು
IPL 2023 Closing Ceremony: ಐಪಿಎಲ್ 2023 ಸಮಾರೋಪ ಸಮಾರಂಭಕ್ಕೆ ಬಿಸಿಸಿಐ ಮೆಗಾ ಪ್ಲಾನ್: ಏನಿರಲಿದೆ ಗೊತ್ತೇ?

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 10 | ದಿನ 82

March 27, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81

March 26, 2026
samagrasuddi
Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
  • ಕಲ್ಲುಗಣಿಗಾರಿಕೆ ವಿರೋಧಿಸಿ ರೈತಸಂಘ ಪ್ರತಿಭಟನೆ.
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 10 | ದಿನ 82
  • ಛಲವಾದಿ ನಾರಾಯಣಸ್ವಾಮಿ ಅವರಿಗೆ ಮಾತನಾಡಲು ಅಡ್ಡಿ; ಕಾಂಗ್ರೆಸ್ ವಿರುದ್ಧ ಸಮುದಾಯದ ಮುಖಂಡರ ಆಕ್ರೋಶ.
  • ಚಿತ್ರದುರ್ಗ: ಶ್ರೀ ಪೇಟೆ ಆಂಜನೇಯಸ್ವಾಮಿ ದೇವಸ್ಥಾನದ ಶತಮಾನೋತ್ಸವ ಸಂಭ್ರಮ; ಮೂರು ದಿನಗಳ ಕಾಲ ಶ್ರೀ ರಾಮೋತ್ಸವ.
  • ಚಿತ್ರದುರ್ಗ: ಅಕ್ರಮ ಗ್ಯಾಸ್ ಸಿಲಿಂಡರ್ ಮಾರಾಟ ತಡೆಗೆ ಮಹಿಳಾ ಮತ್ತು ಮಕ್ಕಳ ರಕ್ಷಣಾ ಸೇನೆ ಆಗ್ರಹ.
Copyright © 2026
CONTACT US
Theme by: Theme Horse
Proudly Powered by: WordPress