
ಚಿತ್ರದುರ್ಗ: ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆ, ಚಿತ್ರದುರ್ಗ ಇಲ್ಲಿ ದಿನಾಂಕ 19.06.2024ರಂದು “ಶಾಲಾ ಮಟ್ಟದ ಹೌಸ್ಗಳ ಉದ್ಘಾಟನಾ ಸಮಾರಂಭ ನಡೆಯಿತು”. ಮಕ್ಕಳ ಸರ್ವತೋಮುಖ ಅಭಿವೃದ್ಧಿಯ ದೃಷ್ಠಿಯಿಂದ ಶೈಕ್ಷಣಿಕವಾಗಿ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು “ಪದ್ಮಶ್ರೀ, ಪದ್ಮ ವಿಭೂಷಣ, ಪದ್ಮಭೂಷಣ, ಭಾರತ ರತ್ನ ” ಎಂಬ ನಾಲ್ಕು ಹೌಸ್ಗಳನ್ನು ರಚಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್ ಜೆ ಕುಮಾರಸ್ವಾಮಿ ಕೆಎಸ್ಪಿಎಸ್ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿಗಳು, ಅವರು ಮಾತನಾಡುತ್ತಾ ಮಕ್ಕಳ ಪ್ರತಿಭೆಯನ್ನು ಗುರುತಿಸಲು ಹೌಸ್ಗಳು ಸಹಾಯಕ. ಮೊಬೈಲ್ ಗೀಳು ಆರೋಗ್ಯಕ್ಕೆ ಪ್ರತಿಭೆಗೆ ಹಾನಿಕರ ಎಂದು ಕಿವಿ ಮಾತು ನೀಡಿದರು. ಒನಕೆ ಓಬವ್ವಳ ಸಾಹಸ ಗಾಥೆಯನ್ನು ಸ್ಮರಿಸಿದರು. ಶಿಸ್ತಿನಿಂದ ಇದ್ದರೆ ನಿಮ್ಮ ಗುರಿ ಸಾಧಿಸಲು ಅವಕಾಶವಾಗುತ್ತದೆ ಎಂದರು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಚೆನ್ನಾಗಿ ನಿಭಾಯಿಸಿ ಎಂದು ಮಕ್ಕಳಿಗೆ ಉತ್ತೇಜನಕಾರಿ ಮಾತುಗಳನ್ನು ಆಡಿದರು.
ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ವಿಜಯ್ ಕುಮಾರ್ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳ ಅಭಿವೃದ್ದಿಗೆ ಹೌಸ್ಗಳ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಸ್.ಎಂ ಪೃಥ್ವೀಶ ಸರ್ ಶ್ರೀಮತಿ ಸುನೀತಾ ವಿಜಯ್ ಕುಮಾರ್, ಮುಖ್ಯೋಪಾಧ್ಯಾಯರಾದ ತಿಪ್ಪೇಸ್ವಾಮಿ ಎನ್.ಜಿ ಐಸಿಎಸ್ಸಿ ಪ್ರಾಚಾರ್ಯರಾದ ಶ್ರೀ ಬಸವರಾಜಯ್ಯ ಪಿ. ಉಪಪ್ರಾಚಾರ್ಯರಾದ ಶ್ರೀ ಅವಿನಾಶ್.ಬಿ. ಶಿಕ್ಷಕ/ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಸನಿಹಾ ಸಿಂಚನ ನಿರೂಪಿಸಿದರು, ಜುಹಾ ಸಾರಾ, ಸ್ವಾಗತಿಸಿದರು, ವರ್ಷಿತಾ ವಂದಿಸಿದರು.