Skip to content
  • Monday, March 30, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: ಐಪಿಎಲ್​ನಿಂದ 8 ಆಟಗಾರರು ಔಟ್: ನಾಲ್ವರು ಇನ್..!
Sports

IPL 2023: ಐಪಿಎಲ್​ನಿಂದ 8 ಆಟಗಾರರು ಔಟ್: ನಾಲ್ವರು ಇನ್..!

March 27, 2023
samagrasuddi

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭವಾಗಲು ಇನ್ನು ದಿನಗಳು ಮಾತ್ರ ಉಳಿದಿವೆ. ಈಗಾಗಲೇ  ಗಾಯದ ಹಿನ್ನಲೆ ಟೂರ್ನಿಯಿಂದ 8 ಆಟಗಾರರು ಹಿಂದೆ ಸರಿದಿದ್ದಾರೆ. ಆದರೆ ಇವರ ಬದಲಿಗೆ ನಾಲ್ವರು ಆಟಗಾರರು ಮಾತ್ರ ಐಪಿಎಲ್​ನಲ್ಲಿ ಸ್ಥಾನ ಪಡೆದಿದ್ದಾರೆ.ಅಂದರೆ ಒಟ್ಟು 8 ಆಟಗಾರರಲ್ಲಿ ನಾಲ್ವರ ಬದಲಿ ಆಟಗಾರರ ಆಯ್ಕೆ ನಡೆಯಬೇಕಿದೆ. ಇತ್ತ ಐಪಿಎಲ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಫ್ರಾಂಚೈಸಿಗಳ ನಡೆ ಕೂಡ ಅಚ್ಚರಿ ಮೂಡಿಸಿದೆ. ಇನ್ನು ಈ ಬಾರಿಯ ಐಪಿಎಲ್​ಗೆ ಬದಲಿ ಆಟಗಾರರಾಗಿ ಆಯ್ಕೆಯಾಗಿರುವ ಪ್ಲೇಯರ್ಸ್ ಯಾರೆಲ್ಲಾ ಎಂಬುದರ ಮಾಹಿತಿ ಈ ಕೆಳಗಿನಂತಿದೆ.ಮೈಕೆಲ್ ಬ್ರೇಸ್​ವೆಲ್ (ನ್ಯೂಜಿಲೆಂಡ್): ಆರ್​ಸಿಬಿ ತಂಡದಲ್ಲಿದ್ದ ಇಂಗ್ಲೆಂಡ್ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇದೀಗ ಅವರ ಬದಲಿಗೆ ನ್ಯೂಜಿಲೆಂಡ್​ನ ಎಡಗೈ ದಾಂಡಿಗ ಮೈಕೆಲ್ ಬ್ರೇಸ್​ವೆಲ್ ಅವರನ್ನು ಆಯ್ಕೆ ಮಾಡಲಾಗಿದೆ.ಮ್ಯಾಥ್ಯೂ ಶಾರ್ಟ್​ (ಆಸ್ಟ್ರೇಲಿಯಾ): ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್​ಸ್ಟೋವ್ ಕೂಡ ಫಿಟ್​ನೆಸ್ ಸಮಸ್ಯೆಯ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಆಸ್ಟ್ರೇಲಿಯಾ ಆಲ್​ರೌಂಡರ್ ಮ್ಯಾಥ್ಯೂ ಶಾರ್ಟ್ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.ಸಿಸಂದ ಮಗಲಾ (ಸೌತ್ ಆಫ್ರಿಕಾ): ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಕೂಡ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಸೌತ್ ಆಫ್ರಿಕಾದ ವೇಗದ ಬೌಲರ್ ಸಿಸಂದ ಮಗಲಾ ಸಿಎಸ್​ಕೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.ಸಂದೀಪ್ ಶರ್ಮಾ: ರಾಜಸ್ಥಾನ್ ರಾಯಲ್ಸ್ ತಂಡದಿಂದ ಪ್ರಸಿದ್ಧ್ ಕೃಷ್ಣ ಗಾಯದ ಕಾರಣ ಹೊರಗುಳಿದಿದ್ದಾರೆ. ಇದೀಗ ಇವರ ಬದಲಿಗೆ ಸಂದೀಪ್ ಶರ್ಮಾ ಆಯ್ಕೆಯಾಗಿದ್ದಾರೆ.ಐಪಿಎಲ್​ನಿಂದ ಹೊರಗುಳಿದಿರುವ ಆಟಗಾರರ ಪಟ್ಟಿ ಹೀಗಿದೆ:1- ಜಸ್​ಪ್ರೀತ್ ಬುಮ್ರಾ: ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಮುಂದಾಗಿರುವ ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.2- ಜ್ಯೆ ರಿಚರ್ಡ್ಸನ್: ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಜ್ಯೆ ರಿಚರ್ಡ್ಸನ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ.3- ರಿಷಭ್ ಪಂತ್: ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಸದ್ಯ ಚಿಕಿತ್ಸೆಯಲ್ಲಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ.4- ಪ್ರಸಿದ್ಧ್ ಕೃಷ್ಣ: ಗಾಯದ ಕಾರಣ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಈ ಬಾರಿಯ ಐಪಿಎಲ್ ಆಡುತ್ತಿಲ್ಲ. 5- ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೂಡ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಿಂದ ಮೊದಲಾರ್ಧದಿಂದ ಹೊರಗುಳಿಯಲಿದ್ದಾರೆ. ಇನ್ನು ಚೇತರಿಸಿಕೊಂಡರೆ ಮಾತ್ರ ದ್ವಿತಿಯಾರ್ಧದಲ್ಲಿ ಕಣಕ್ಕಿಳಿಯಲಿದ್ದಾರೆ.6- ಕೈಲ್ ಜೇಮಿಸನ್: ಸಿಎಸ್​ಕೆ ತಂಡದಲ್ಲಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಐಪಿಎಲ್​ನಿಂದ ಹೊರಗುಳಿದಿದ್ದಾರೆ.7- ಜಾನಿ ಬೈರ್​ಸ್ಟೋವ್: ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಇಂಗ್ಲೆಂಡ್ ಆಟಗಾರ ಜಾನಿ ಬೈರ್​ಸ್ಟೋವ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.8- ವಿಲ್ ಜಾಕ್ಸ್: ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ಈ ಬಾರಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಗಾಯಗೊಂಡಿದ್ದ ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

source https://tv9kannada.com/photo-gallery/cricket-photos/ipl-2023-kannada-list-of-injured-players-and-replacement-kannada-news-zp-au50-544049.html

Post navigation

ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ಮನೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ನೋಟೀಸ್..!
SA vs WI, 2nd T20I: ಒಂದೇ ಪಂದ್ಯದಲ್ಲಿ 7 ವಿಶ್ವ ದಾಖಲೆಗಳು ನಿರ್ಮಾಣ..!

Leave a Reply Cancel reply

Your email address will not be published. Required fields are marked *

CITIES

Cities

ಏ. 1ರಂದು ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ: ಸಿದ್ದಗಂಗಾ ಮಠದ ಡಾ. ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ ಕಾರ್ಯಕ್ರಮ ಕಡಿತ!

March 29, 2026
samagrasuddi

ತುಮಕೂರು: ತ್ರಿವಿಧ ದಾಸೋಹಿ, ‘ನಡೆದಾಡುವ ದೇವರು’ ಎಂದೇ ಭಕ್ತರ ಮನದಲ್ಲಿ ನೆಲೆಸಿರುವ ಪರಮಪೂಜ್ಯ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಅತ್ಯಂತ ಭಕ್ತಿ-ಭಾವದಿಂದ ಆಚರಿಸಲು ಸಕಲ ಸಿದ್ಧತೆಗಳನ್ನು…

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi
Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 13 | ದಿನ 85

March 30, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 12 | ದಿನ 84

March 29, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 11 | ದಿನ 83

March 28, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 10 | ದಿನ 82

March 27, 2026
samagrasuddi
  • ​ವಾಂಖೆಡೆಯಲ್ಲಿ ರೋಹಿತ್-ರಿಯಾನ್ ಅಬ್ಬರ: ಕೆಕೆಆರ್ ಮಣಿಸಿ ದಾಖಲೆಯ ಜಯ ಸಾಧಿಸಿದ ಮುಂಬೈ!
  • Skin and Hair Care in Summer: ಬೇಸಿಗೆಯಲ್ಲಿ ನಿಮ್ಮ ತ್ವಚೆ ಮತ್ತು ಕೂದಲಿನ ಆರೈಕೆ ಹೇಗೆ? ಇಲ್ಲಿದೆ ಬೆಸ್ಟ್ ಬ್ಯೂಟಿ ಟಿಪ್ಸ್
  • ​Day Special, March 30: ಇತಿಹಾಸದ ಪುಟಗಳಲ್ಲಿ ಅಚ್ಚಳಿಯದ ಘಟನೆಗಳು ಮತ್ತು ಜಾಗತಿಕ ಮಹತ್ವದ ದಿನಗಳು.
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 13 | ದಿನ 85
  • Today Horoscope,30 March: ಈ ರಾಶಿಯವರಿಗೆ ಇಂದು ಹಲವು ಮೂಲಗಳಿಂದ ಹಣಕಾಸಿನ ಹರಿವು ಇರಲಿದೆ.
Copyright © 2026
CONTACT US
Theme by: Theme Horse
Proudly Powered by: WordPress