Skip to content
  • Thursday, March 26, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: ಬೇಡದ ದಾಖಲೆಗೆ ಕೊರಳೊಡ್ಡಿದ ಧವನ್; ತನ್ನದೇ ದಾಖಲೆ ಮುರಿದ ವಾರ್ನರ್..!
Sports

IPL 2023: ಬೇಡದ ದಾಖಲೆಗೆ ಕೊರಳೊಡ್ಡಿದ ಧವನ್; ತನ್ನದೇ ದಾಖಲೆ ಮುರಿದ ವಾರ್ನರ್..!

May 18, 2023
samagrasuddi

ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ಪಂಜಾಬ್ ಕಿಂಗ್ಸ್ ತಂಡ ಈ ಆವೃತ್ತಿಯಲ್ಲೂ ಬರಿಗೈಯಲ್ಲೇ ಟೂರ್ನಿಯಿಂದ ಹೊರಬಿದ್ದಿದೆ.ಡೆಲ್ಲಿ ವಿರುದ್ಧ ಗೆಲ್ಲಲೇಬೇಕಾದ ಪಂದ್ಯದಲ್ಲಿ ಪಂಜಾಬ್ 15 ರನ್​ಗಳಿಂದ ಸೋಲೊಪ್ಪಿಕೊಂಡಿತು. ನಿರ್ಣಾಯಕ ಪಂದ್ಯದಲ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯಬೇಕಾಗಿದ್ದ ನಾಯಕ ಶಿಖರ್ ಧವನ್ ಮೊದಲ ಓವರ್​ನಲ್ಲೇ ಅದು ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಇದರೊಂದಿಗೆ ಬೇಡದ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡರು.ಧರ್ಮಶಾಲಾದಲ್ಲಿ ನಡೆದ ಕದನದಲ್ಲಿ ದೆಹಲಿ ಕ್ಯಾಪಿಟಲ್ಸ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್‌ಗೆ ವೇಗಿ ಇಶಾಂತ್ ಶರ್ಮಾ ಮೊದಲ ಓವರ್​​ನಲ್ಲೇ ಶಾಕ್ ನೀಡಿದರು. ಇಶಾಂತ್ ಎಸೆತದಲ್ಲಿ ಸ್ಲಿಪ್​ನಲ್ಲಿ ಕ್ಯಾಚಿತ್ತು ಗೋಲ್ಡನ್ ಡಕ್ ಆದ ಧವನ್, ಭಾರತದ ಮಾಜಿ ಬ್ಯಾಟರ್ ಗೌತಮ್ ಗಂಭೀರ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಸ್ಟಾರ್ ಅಜಿಂಕ್ಯ ರಹಾನೆ ಅವರ ಬೇಡದ ದಾಖಲೆಯನ್ನು ಸರಿಗಟ್ಟಿದ್ದಾರೆ.ಧವನ್ ಐಪಿಎಲ್‌ನಲ್ಲಿ ಆರಂಭಿಕರಾಗಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಧವನ್ ಅವರು ಗಂಭೀರ್ ಮತ್ತು ರಹಾನೆ ಅವರೊಂದಿಗೆ ಅನಗತ್ಯ ದಾಖಲೆಯನ್ನು ಹಂಚಿಕೊಂಡಿದ್ದಾರೆ. ಆರ್​ಸಿಬಿಯ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಆರಂಭಿಕ ಆಟಗಾರನಾಗಿ 11 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದು, ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ.ಈ ಪಂದ್ಯದಲ್ಲಿ ಧವನ್ ಬೇಡದ ದಾಖಲೆಯನ್ನು ತನ್ನ ಹೆಸರಿಗೆ ಹಾಕಿಕೊಂಡರೆ, ಡೆಲ್ಲಿ ನಾಯಕ ವಾರ್ನರ್ ತಮ್ಮದೇ ದಾಖಲೆಯನ್ನು ಮುರಿಯುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ.ವಾರ್ನರ್ 31 ಎಸೆತಗಳಲ್ಲಿ 46 ರನ್ ಗಳಿಸಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ದಾಖಲೆಯನ್ನು ಮುರಿದರು. ವಾರ್ನರ್ ಪಂಜಾಬ್ ವಿರುದ್ಧ 1084 ರನ್ ಬಾರಿಸಿದ್ದು, ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಬರೆದರು. ವಾರ್ನರ್ ಕೆಕೆಆರ್ ವಿರುದ್ಧ 1075 ರನ್ ಬಾರಿಸಿದ್ದು, ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಬಾರಿಸಿದ್ದ ದಾಖಲೆಯಾಗಿತ್ತು. ಸಿಎಸ್‌ಕೆ ವಿರುದ್ಧ 1057 ರನ್ ಗಳಿಸಿರುವ ಧವನ್ ವಾರ್ನರ್ ನಂತರದ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ (1040 ಕೆಕೆಆರ್ ವಿರುದ್ಧ) ಮತ್ತು ವಿರಾಟ್ ಕೊಹ್ಲಿ (1030 ಡೆಲ್ಲಿ ವಿರುದ್ಧ) ಕ್ರಮವಾಗಿ 3 ಮತ್ತು 4ನೇ ಸ್ಥಾನದಲ್ಲಿದ್ದಾರೆ.

source https://tv9kannada.com/photo-gallery/cricket-photos/ipl-2023-shikhar-dhawan-matches-gautam-gambhirs-unwanted-feat-david-warner-breaks-own-record-in-pbks-vs-dc-clash-psr-581633.html

Tags: Cricket, David Warner, DC, IPL, IPL 2023, PBKS, samagrasuddi, Shikhar Dhawan, TATA IPL 2023, ಸಮಗ್ರ ಸುದ್ದಿ

Post navigation

SRH vs RCB: ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ
ಪೋಷಕರು ಮಕ್ಕಳ ಆಸಕ್ತಿಗನುಗುಣವಾಗಿ ಶಿಕ್ಷಣಕ್ಕೆ ಪ್ರಾತಿನಿಧ್ಯವನ್ನು ನೀಡಿ : ಶ್ರೀಮತಿ ಗಿರಿಜಮ್ಮ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
  • Horoscope Today, 26 March: ಈ ರಾಶಿಯವರಿಗೆ ಇಂದು ಮಾನಸಿಕವಾಗಿ ಸ್ವಲ್ಪ ಗೊಂದಲದ ದಿನ.
  • 2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ
  • RCB New Era:ಬೃಹತ್ ಮೊತ್ತಕ್ಕೆ ಮಾರಾಟವಾದ ಆರ್‌ಸಿಬಿ; ಹೊಸ ಮಾಲೀಕರು ಯಾರು? ಕೊಹ್ಲಿ ಭವಿಷ್ಯವೇನು? ಸಂಪೂರ್ಣ ವಿವರ.
  • UPSC ನಿಂದ ಮೆಗಾ ನೇಮಕಾತಿ: 1300ಕ್ಕೂ ಅಧಿಕ ವೈದ್ಯಾಧಿಕಾರಿ ಹುದ್ದೆಗಳು ಖಾಲಿ, ಮಾ.31 ಕಡೆ ದಿನ.
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
Copyright © 2026
CONTACT US
Theme by: Theme Horse
Proudly Powered by: WordPress