Skip to content
  • Saturday, July 5, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • IPL 2023 Final CSK vs GT: ಮಳೆ ಬಂದರೆ ಸೂಪರ್ ಓವರ್​ ಮೂಲಕ ಫಲಿತಾಂಶ ನಿರ್ಧಾರ
Sports

IPL 2023 Final CSK vs GT: ಮಳೆ ಬಂದರೆ ಸೂಪರ್ ಓವರ್​ ಮೂಲಕ ಫಲಿತಾಂಶ ನಿರ್ಧಾರ

May 29, 2023
samagrasuddi

IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಐಪಿಎಲ್​​ನ ಫೈನಲ್ ಪಂದ್ಯವು ಇಂದು (ಮೆ 29) ಜರುಗಲಿದೆ. ಮಳೆಯ ಕಾರಣ ಮೀಸಲು ದಿನಕ್ಕೆ ಮುಂದೂಡಲ್ಪಟ್ಟ ಪಂದ್ಯಕ್ಕೆ ಮತ್ತೆ ವರುಣನ ಭೀತಿ ಎದುರಾಗಿದೆ.ಏಕೆಂದರೆ ಹವಮಾನ ವರದಿ ಪ್ರಕಾರ ಸೋಮವಾರ ಕೂಡ ಅಹಮದಾಬಾದ್​ನ ಸುತ್ತ ಮುತ್ತ ಮೋಡ ಕವಿದ ವಾತವರಣವಿದ್ದು, ಹೀಗಾಗಿ ಮಳೆಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಒಂದು ವೇಳೆ ಇಂದು ಕೂಡ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕಾಗಿ ಬಿಸಿಸಿಐ ಕೆಲ ನಿಯಮಗಳನ್ನು ರೂಪಿಸಿದೆ.ಈ ನಿಯಮಗಳಲ್ಲಿ ಸೂಪರ್ ಓವರ್ ಕೂಡ ಇರುವುದು ವಿಶೇಷ. ಅಂದರೆ ನಿಗದಿತ ಸಮಯದೊಳಗೆ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ ಸೂಪರ್ ಓವರ್ ಪಂದ್ಯ ನಡೆಯುವುದು ಖಚಿತ. ಆದರೆ ಅದಕ್ಕೂ ಮುನ್ನ ಇತರೆ ಆಯ್ಕೆಗಳನ್ನು ಪರಿಶೀಲಿಸಲಿದೆ. ಈ ಆಯ್ಕೆಗಳೆಂದರೆ...ಪಂದ್ಯ ಆರಂಭಕ್ಕೂ ಮುನ್ನ ಮಳೆ ಬಂದರೆ ಅಥವಾ ಆರಂಭದ ಬಳಿಕ ಮಳೆ ಬಂದು ವಿಳಂಬವಾದರೆ ಸಂಪೂರ್ಣ ಓವರ್​ಗಳ ಪಂದ್ಯಗಳನ್ನು ನಡೆಸಲಾಗುತ್ತದೆ. ಇಲ್ಲಿ ಓವರ್​ಗಳ ಕಡಿತಕ್ಕೆ ಕಟ್​ ಆಫ್ ಟೈಮ್ ರಾತ್ರಿ 9.40. ಅಂದರೆ ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. 2 ತಂಡಗಳು 20 ಓವರ್​ಗಳನ್ನು ಆಡಲಿದೆ.ಇನ್ನು ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳನ್ನು ಕಡಿತ ಮಾಡಲಾಗುತ್ತದೆ. ಇನ್ನು ಉಭಯ ತಂಡಗಳ ಇನಿಂಗ್ಸ್​​ ನಡುವೆ ಮಳೆ ಬಂದು ನಿಂತರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಇಲ್ಲಿ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಬೇಕು ಎಂಬ ನಿಯಮ ರೂಪಿಸಲಾಗಿದೆ.ಇನ್ನು 7.30 ರಿಂದ 11.56 ರೊಳಗೆ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಲು ಮುಂದಾಗಲಿದೆ. ಈ 5 ಓವರ್​ಗಳ ಪಂದ್ಯವು ರಾತ್ರಿ 12.06 ರಿಂದ ಶುರುವಾಗಲಿದೆ.ಒಂದು ವೇಳೆ ರಾತ್ರಿ 12.06 ರಿಂದ 12.50 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಕೂಡ ಸಾಧ್ಯವಾಗದಿದ್ದರೆ ಸೂಪರ್ ಓವರ್ ಮೊರೆ ಹೋಗಲಾಗುತ್ತದೆ. ಇಲ್ಲಿ ಸೂಪರ್ ಓವರ್ ನಡೆಸಲು ಪಿಚ್ ಸಿದ್ಧವಿದೆಯಾ ಎಂಬುದನ್ನು ಮುಖ್ಯವಾಗಿ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ.ಈ ಬಗ್ಗೆ ಉಭಯ ತಂಡಗಳ ನಾಯಕರುಗಳೊಂದಿಗೆ ಚರ್ಚಿಸಿದ ಬಳಿಕ ಅಂಪೈರ್ ಸೂಪರ್ ಓವರ್​ ನಡೆಸಲು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಒಂದು ವೇಳೆ ಸೂಪರ್ ಓವರ್ ನಡೆಸಲು ಕೂಡ ಸಾಧ್ಯವಾಗದಿದ್ದರೆ ಗುಜರಾತ್ ಟೈಟಾನ್ಸ್ ತಂಡ ಚಾಂಪಿಯನ್ ಆಗಲಿದೆ.
ಏಕೆಂದರೆ ಮೀಸಲು ದಿನದಂದು ಕನಿಷ್ಠ ಸೂಪರ್ ಓವರ್ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ, ಲೀಗ್ ಹಂತದ 70 ಪಂದ್ಯಗಳ ಬಳಿಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಗುತ್ತದೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಅಗ್ರಸ್ಥಾನ ಅಲಂಕರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ದ್ವಿತೀಯ ಸ್ಥಾನ ಅಲಂಕರಿಸಿತ್ತು. ಹೀಗಾಗಿ ಇಂದು ಕೂಡ ಪಂದ್ಯ ನಡೆದಿದ್ದರೆ ಹಾರ್ದಿಕ್ ಪಾಂಡ್ಯ ಪಡೆಯನ್ನು ಚಾಂಪಿಯನ್ಸ್ ಎಂದು ಪರಿಗಣಿಸಲಾಗುತ್ತದೆ.

source https://tv9kannada.com/photo-gallery/cricket-photos/ipl-2023-final-what-is-the-super-over-rule-for-csk-vs-gt-ipl-2023-final-kannada-news-zp-589514.html

Tags: Chennai, Cricket, CSK, GT, Gujarat, IPL, IPL 2023, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

WTC Final 2023: ಡಬ್ಲ್ಯುಟಿಸಿ ಫೈನಲ್​ಗೆ 15 ಆಟಗಾರರ ಅಂತಿಮ ತಂಡ ಪ್ರಕಟಿಸಿದ ಆಸೀಸ್..!
IPL 2023: ಸಂಬಳದ ವಿಚಾರದಲ್ಲಿ ತಮ್ಮ ತಂಡದ ನಾಯಕರನ್ನೇ ಮೀರಿಸಿದ ಕ್ರಿಕೆಟಿಗರಿವರು..!

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
Health

ಪ್ರತಿನಿತ್ಯ ಈ 3 ಹಣ್ಣುಗಳ ಸೇವನೆಯಿಂದ ಮುಖದ ಸೊಕ್ಕು ಮಾಯ, ಚರ್ಮದ ಹೊಳಪು ಪಳ ಪಳ! | “Facial Wrinkles”

July 3, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ನೀರಜ್ ಚೋಪ್ರಾ ಪ್ರಧಾನದ ಆಕರ್ಷಣೆ: ಬೆಂಗ್ಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಎನ್ ಸಿ ಕ್ಲಾಸಿಕ್ ಸ್ಪರ್ಧೆ
  • 📝 ಎಸ್‌ಎಸ್‌ಎಲ್‌ಸಿ ಬ್ಲೂಪ್ರಿಂಟ್‌ನಲ್ಲಿ ಎಲ್ಲಾ ಮಾದರಿ ಅಂಕಗಳ ಪ್ರಶ್ನೆ
  • “WCL 2025”: ಯುವರಾಜ್ ಸಿಂಗ್ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕೆ; ಮೊದಲ ಎದುರಾಳಿ ಪಾಕಿಸ್ತಾನ.
  • ಭಾರತ – ಇಂಗ್ಲೆಂಡ್ 2ನೇ ಟೆಸ್ಟ್‌: ಆಕಾಶ್‌ – ಸಿರಾಜ್‌ ದಾಳಿಗೆ ಕುಸಿದ ಆಂಗ್ಲರು – ಇಬ್ಬರೂ ವೇಗಿಗಳು ಕಬಳಿಸಿದ ವಿಕೆಟ್ ಎಷ್ಟು?
  • ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress