Skip to content
  • Thursday, March 26, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: RCB ತಂಡದಿಂದ 7 ಆಟಗಾರರಿಗೆ ಗೇಟ್ ಪಾಸ್ ಸಾಧ್ಯತೆ
Sports

IPL 2023: RCB ತಂಡದಿಂದ 7 ಆಟಗಾರರಿಗೆ ಗೇಟ್ ಪಾಸ್ ಸಾಧ್ಯತೆ

May 30, 2023
samagrasuddi

IPL 2023: ಐಪಿಎಲ್ ಸೀಸನ್ 16 ಮುಕ್ತಾಯಗೊಂಡಿದೆ. ಅಂತಿಮ ಹಣಾಹಣಿಯಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇತ್ತ ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದೊಂದಿಗೆ ಟೂರ್ನಿ ಆರಂಭಿಸಿದ್ದ ಆರ್​ಸಿಬಿ 6ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು.
ಲೀಗ್ ಹಂತದಲ್ಲಿ 14 ಪಂದ್ಯಗಳನ್ನಾಡಿದ್ದ ಆರ್​ಸಿಬಿ ಜಯ ಸಾಧಿಸಿದ್ದು ಕೇವಲ 7 ಪಂದ್ಯಗಳಲ್ಲಿ ಮಾತ್ರ. ವಿಶೇಷ ಎಂದರೆ ಈ ಏಳು ಪಂದ್ಯಗಳ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ್ದು ಕೇವಲ ನಾಲ್ವರು ಆಟಗಾರರು ಮಾತ್ರ.ಅಂದರೆ ಟೂರ್ನಿಯುದ್ಧಕ್ಕೂ ಫಾಫ್ ಡುಪ್ಲೆಸಿಸ್ (730 ರನ್), ವಿರಾಟ್ ಕೊಹ್ಲಿ (639 ರನ್), ಗ್ಲೆನ್ ಮ್ಯಾಕ್ಸ್​ವೆಲ್ (400 ರನ್) ಹಾಗೂ ಮೊಹಮ್ಮದ್ ಸಿರಾಜ್ (19 ವಿಕೆಟ್) ಮಿಂಚಿದ್ದು ಬಿಟ್ಟರೆ, ಉಳಿದವರು ಲೆಕ್ಕಕ್ಕಿದ್ದರೇ ಹೊರತು ಆಟಕ್ಕಿರಲಿಲ್ಲ.
ಹೀಗಾಗಿಯೇ ಮುಂದಿನ ಸೀಸನ್​ ಐಪಿಎಲ್​ಗೂ ಮುನ್ನ ಆರ್​ಸಿಬಿ ತಂಡಕ್ಕೆ ಮೇಜರ್ ಸರ್ಜರಿ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ಈ ಬಾರಿ ಕಳಪೆ ಪ್ರದರ್ಶನ ನೀಡಿದ ಆಟಗಾರರನ್ನು ಕೈ ಬಿಡುವುದು ಬಹುತೇಕ ಖಚಿತ ಎನ್ನಲಾಗಿದೆ. ಅದರಂತೆ ಈ ಸಲ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...1- ದಿನೇಶ್ ಕಾರ್ತಿಕ್: 13 ಇನಿಂಗ್ಸ್​ಗಳಲ್ಲಿ ಬ್ಯಾಟಿಂಗ್ ಮಾಡಿರುವ ದಿನೇಶ್ ಕಾರ್ತಿಕ್ ಕಲೆಹಾಕಿರುವುದು ಕೇವಲ 140 ರನ್ ಮಾತ್ರ. ಸದ್ಯ ಸ್ಪರ್ಧಾತ್ಮಕ ಕ್ರಿಕೆಟ್​ನಿಂದ ದೂರ ಉಳಿದಿರುವ ಕಾರಣ ಡಿಕೆಯನ್ನು ಕೂಡ ಉಳಿಸಿಕೊಳ್ಳುವುದಿಲ್ಲ ಎನ್ನಬಹುದು.2- ಮಹಿಪಾಲ್ ಲೋಮ್ರರ್: 10 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಲೋಮ್ರರ್ 135 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಹೀಗಾಗಿ ಲೋಮ್ರರ್​ಗೂ ಗೇಟ್ ಪಾಸ್ ನೀಡಲಿದೆ.3- ಅನೂಜ್ ರಾವತ್: 7 ಇನಿಂಗ್ಸ್​ ಆಡಿರುವ ಅನೂಜ್ ರಾವತ್ ಕಲೆಹಾಕಿರುವುದು ಕೇವಲ 91 ರನ್​ ಮಾತ್ರ. ಇತ್ತ 3.4 ಕೋಟಿಗೆ ಖರೀದಿಸಿರುವ ಆಟಗಾರನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದ ಕಾರಣ ತಂಡದಿಂದ ರಿಲೀಸ್ ಮಾಡುವುದು ಖಚಿತ.4- ಶಹಬಾಝ್ ಅಹ್ಮದ್: 10 ಪಂದ್ಯಗಳಲ್ಲಿ 6 ಮ್ಯಾಚ್​ನಲ್ಲಿ ಬ್ಯಾಟ್ ಮಾಡಿರುವ ಶಹಬಾಝ್ ಕಲೆಹಾಕಿದ್ದು 42 ರನ್​ ಮಾತ್ರ. ಇನ್ನು ಕೇವಲ 1 ವಿಕೆಟ್ ಮಾತ್ರ ಪಡೆದಿದ್ದಾರೆ. ಹೀಗಾಗಿ ಶಹಬಾಝ್​ನ ಕೈ ಬಿಡುವುದು ಬಹುತೇಕ ಖಚಿತ ಎನ್ನಬಹುದು.5- ಕೇದರ್ ಜಾಧವ್: 1 ಇನಿಂಗ್ಸ್ ಆಡಿದ್ದ ಹಿರಿಯ ಆಟಗಾರ ಕೇದರ್ ಜಾಧವ್ ಕಲೆಹಾಕಿದ್ದು ಕೇವಲ 12 ರನ್​ ಮಾತ್ರ. ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಜಾಧವ್ ಅವರನ್ನು ಉಳಿಸಿಕೊಳ್ಳುವುದು ಅನುಮಾನ.6- ಸುಯಶ್ ಪ್ರಭುದೇಸಾಯಿ: 5 ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ಸುಯಶ್ 4 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕಲೆಹಾಕಿದ ಒಟ್ಟು ಸ್ಕೋರ್ ಕೇವಲ 35 ರನ್ ಮಾತ್ರ. ಹೀಗಾಗಿ ಸುಯಶ್​ರನ್ನು ಕೂಡ ರಿಲೀಸ್ ಮಾಡಬಹುದು.7- ಕರ್ಣ್ ಶರ್ಮಾ: 7 ಪಂದ್ಯಗಳಲ್ಲಿ 223 ರನ್ ನೀಡಿ ಕರ್ಣ್ ಶರ್ಮಾ ಒಟ್ಟು 10 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಮುಂದಿನ ಸೀಸನ್​ಗಾಗಿ 35 ವರ್ಷದ ಹಿರಿಯ ಆಟಗಾರನನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.RCB ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

source https://tv9kannada.com/photo-gallery/cricket-photos/ipl-2023-rcb-players-who-should-be-released-in-ipl-2024-kannada-news-zp-590511.html

Post navigation

Wrestlers Protest: ಇಂಡಿಯಾ ಗೇಟ್‌ನಲ್ಲಿ ಕುಸ್ತಿಪಟುಗಳ ಪ್ರತಿಭಟನೆಗೆ ಅವಕಾಶವಿಲ್ಲ: ದೆಹಲಿ ಪೊಲೀಸ್
ಕುಸ್ತಿಪಟುಗಳು ಪದಕಗಳನ್ನು ಗಂಗಾ ನದಿಗೆ ಎಸೆಯದಂತೆ ತಡೆದ ರೈತ ನಾಯಕ ನರೇಶ್ ಟಿಕಾಯತ್

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81

March 26, 2026
samagrasuddi
Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81
  • 1ನೇ ತರಗತಿ ದಾಖಲಾತಿ: 6 ವರ್ಷದ ಕಡ್ಡಾಯ ನಿಯಮ ಸಡಿಲಿಸಿದ ರಾಜ್ಯ ಸರ್ಕಾರ, ಪೋಷಕರಿಗೆ ಭರ್ಜರಿ ರಿಲೀಫ್!
  • ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 70 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ.”
  • SSLC 2026 : ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ; ಹೊಸ ದಿನಾಂಕದ ವಿವರ.
  • Horoscope Today, 26 March: ಈ ರಾಶಿಯವರಿಗೆ ಇಂದು ಮಾನಸಿಕವಾಗಿ ಸ್ವಲ್ಪ ಗೊಂದಲದ ದಿನ.
Copyright © 2026
CONTACT US
Theme by: Theme Horse
Proudly Powered by: WordPress