Skip to content
  • Friday, June 26, 2026
  • ABOUT US
  • CONTACT US
  • Privacy Policy
  • Disclaimer
  • Terms and Conditions
  • Editorial Policy
  • Corrections Policy
  • Fact Check Policy

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • IPL 2023: ಹೀಗಾದ್ರೆ RCB ಪ್ಲೇಆಫ್ ಪ್ರವೇಶಿಸುವುದು ಖಚಿತ
Sports

IPL 2023: ಹೀಗಾದ್ರೆ RCB ಪ್ಲೇಆಫ್ ಪ್ರವೇಶಿಸುವುದು ಖಚಿತ

May 10, 2023
samagrasuddi

IPL 2023 RCB playoffs: ಐಪಿಎಲ್ ಸೀಸನ್ 16 ರಲ್ಲಿ 11 ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು ಕೇವಲ 5 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. ಇದರೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಮತ್ತಷ್ಟು ಕಠಿಣವಾಗಿದೆ.ಏಕೆಂದರೆ ಇನ್ನು ಆರ್​ಸಿಬಿಗೆ ಉಳಿದಿರುವುದು ಕೇವಲ 3 ಪಂದ್ಯಗಳು ಮಾತ್ರ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಳ್ಳಲಾಗುವುದಿಲ್ಲ. ಬದಲಾಗಿ ಪ್ರಸ್ತುತ ಅಂಕಪಟ್ಟಿಯಲ್ಲಿ  ಮೂರನೇ ಹಾಗೂ ನಾಲ್ಕನೇ ಸ್ಥಾನದಲ್ಲಿರುವ ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶಗಳನ್ನು ಎದುರು ನೋಡಬೇಕಾಗುತ್ತದೆ.ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಮೂರನೇ ಸ್ಥಾನದಲ್ಲಿದೆ. ಮುಂಬೈಗೆ ಇನ್ನುಳಿದಿರುವುದು 3 ಪಂದ್ಯಗಳು. ಈ ಮೂರು ಪಂದ್ಯಗಳಲ್ಲಿ ಮುಂಬೈ ವಿರುದ್ಧ ಗುಜರಾತ್ ಟೈಟಾನ್ಸ್ ಹಾಗೂ ಎಸ್​ಆರ್​ಹೆಚ್​ ತಂಡಗಳು ಗೆಲ್ಲಬೇಕು. ಇದರಿಂದ 3ನೇ ಸ್ಥಾನದಿಂದ 14 ಪಾಯಿಂಟ್ಸ್​ನೊಂದಿಗೆ ಮುಂಬೈ ಇಂಡಿಯನ್ಸ್ ಕುಸಿತಕ್ಕೊಳಗಾಗಲಿದೆ.ಹಾಗೆಯೇ ನಾಲ್ಕನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲಬೇಕು. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ 3 ಪಂದ್ಯಗಳಲ್ಲಿ 1 ರಲ್ಲಿ ಸೋತರೂ ಆರ್​ಸಿಬಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರುವ ಅವಕಾಶ ಇರಲಿದೆ.ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ರಸ್ತುತ ಪಾಯಿಂಟ್ಸ್​ 11. ಇನ್ನು ಮೂರು ಪಂದ್ಯಗಳಲ್ಲಿ 2 ಜಯ ಸಾಧಿಸಿದರೂ ಅದು 15 ಅಂಕ ಆಗಲಿದೆ. ಇದರಿಂದ 16 ಪಾಯಿಂಟ್ಸ್ ಕಲೆಹಾಕುವ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ ಮೇಲೇರಬಹುದು.ಇನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಜಯ ಸಾಧಿಸಿದರೆ, ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ 11 ಪಂದ್ಯವಾಡಿರುವ ಆರ್​ಆರ್​ ಇದುವರೆಗೆ ಕಲೆಹಾಕಿರುವುದು 10 ಪಾಯಿಂಟ್ಸ್ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಆರ್​ಸಿಬಿ ವಿರುದ್ಧ ಸೋತರೆ ಅದು ಫಾಫ್ ಡುಪ್ಲೆಸಿಸ್ ಪಡೆಗೆ ಪ್ಲಸ್ ಪಾಯಿಂಟ್ ಆಗಲಿದೆ.ಏಕೆಂದರೆ ಮುಂದಿನ ಪಂದ್ಯದಲ್ಲಿ ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಒಂದು ತಂಡ ಪ್ಲೇಆಫ್ ರೇಸ್​ನಿಂದ ಹೊರಬೀಳುವ ಸಾಧ್ಯತೆಯಿದೆ. ಇಲ್ಲಿ ಕೆಕೆಆರ್ ವಿರುದ್ದ ರಾಜಸ್ಥಾನ್ ರಾಯಲ್ಸ್ ಗೆಲ್ಲಬೇಕು. ಹಾಗೆಯೇ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿದರೆ, ಅತ್ತ ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ಉಳಿದ 2 ಪಂದ್ಯಗಳನ್ನು ಗೆದ್ದರೂ 14 ಪಾಯಿಂಟ್ಸ್​ಗಳಿಸಲಷ್ಟೇ ಸಾಧ್ಯವಾಗಲಿದೆ.ಇತ್ತ ಮುಂದಿನ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ 16 ಅಂಕಗಳನ್ನು ಪಡೆದರೆ ಆರ್​ಸಿಬಿ ತಂಡವು ಪ್ಲೇಆಫ್​ ಪ್ರವೇಶಿಸಲು ಅವಕಾಶ ದೊರೆಯಲಿದೆ. ಅದಕ್ಕೂ ಮುನ್ನ ಅಂಕ ಪಟ್ಟಿಯಲ್ಲಿ 3ನೇ ಅಥವಾ 4ನೇ ಸ್ಥಾನ ಪಡೆಯುವ ತಂಡಗಳು 16 ಅಥವಾ ಅದಕ್ಕಿಂತ ಅಂಕಗಳನ್ನು ಪಡೆದಿರಬೇಕು.ಇಲ್ಲಿ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡವು 16 ಅಂಕ ಪಡೆದಿದ್ದರೆ ಆರ್​ಸಿಬಿ ತಂಡಕ್ಕೆ ಉತ್ತಮ ಅವಕಾಶ ದೊರೆಯಲಿದೆ. ಏಕೆಂದರೆ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಆಡಲಿದೆ. ಈ ವೇಳೆ ನೆಟ್​ ರನ್​ ರೇಟ್ ಲೆಕ್ಕಚಾರದೊಂದಿಗೆ ಜಯ ಸಾಧಿಸಿ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.ಒಟ್ಟಿನಲ್ಲಿ ಈ ಮೇಲೆ ತಿಳಿಸಲಾದ ಲೆಕ್ಕಚಾರದಂತೆ ನಡೆದರೆ ಈ ಬಾರಿ ಆರ್​ಸಿಬಿ ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದೇ ಹೇಳಬಹುದು.

source https://tv9kannada.com/photo-gallery/cricket-photos/ipl-2023-how-can-rcb-qualify-for-playoffs-kannada-news-zp-574938.html

Tags: samagrasuddi, ಸಮಗ್ರ ಸುದ್ದಿ

Post navigation

Karnataka Exit Poll 2023 :  ಈ ಬಾರಿಯೂ  ಫಲಿತಾಂಶ ಅತಂತ್ರ ! ಯಾವ ಸಮೀಕ್ಷೆ, ಯಾರಿಗೆ ಎಷ್ಟು ಸ್ಥಾನ ? ಇಲ್ಲಿದೆ ಮಾಹಿತಿ…!
ವಿಧಾನಸಭಾ ಚುನಾವಣೆ: ಚಿತ್ರದುರ್ಗ ಜಿಲ್ಲೆಯಲ್ಲಿ ಮುಗಿದ ಮತದಾನ : ಯಾವ ಕ್ಷೇತ್ರದಲ್ಲಿ ಎಷ್ಟು ಶೇಕಡಾವಾರು ಮತದಾನವಾಗಿದೆ ? ಇಲ್ಲಿದೆ ಸಂಪೂರ್ಣ ಮಾಹಿತಿ..!

Leave a Reply Cancel reply

Your email address will not be published. Required fields are marked *

CITIES

Cities

ಹವಾಮಾನ ಇಲಾಖೆ ಮುನ್ಸೂಚನೆ: ಕರಾವಳಿಗೆ ಭಾರಿ ಮಳೆ ಎಚ್ಚರಿಕೆ, 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆ.

June 23, 2026
samagrasuddi

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದಾದ್ಯಂತ ಮುಂಗಾರು ಮಳೆ ಚೇತರಿಕೆ ಕಂಡಿದ್ದು, ಮುಂದಿನ ಒಂದು ವಾರದ ಅವಧಿಗೆ ವಿವಿಧೆಡೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದರ ಪ್ರಮುಖ ವಿವರಗಳು ಕೆಳಗಿನಂತಿವೆ: ಕರಾವಳಿ ಭಾಗದಲ್ಲಿ ಭಾರಿ ಮಳೆ ಬೆಂಗಳೂರು ಹವಾಮಾನ ಗುಡುಗು ಸಹಿತ ಸಾಧಾರಣ…

Cities

ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆಗ್ರಹ.

June 19, 2026
samagrasuddi
Cities

ಬಳ್ಳಾರಿಯನ್ನು ‘ಬಾಲ್ಯ ವಿವಾಹ ಮುಕ್ತ ಜಿಲ್ಲೆ’ಯನ್ನಾಗಿಸಲು ಪಣ: ಜಿಲ್ಲಾಡಳಿತ ಹಾಗೂ ರೀಚ್ ಸಂಸ್ಥೆಯಿಂದ ವಿಶೇಷ ಜಾಗೃತಿ ಅಭಿಯಾನ

June 18, 2026
samagrasuddi
Cities

ದಾವಣಗೆರೆಯಲ್ಲಿ ಭೀಕರ ಅಗ್ನಿ ಅವಘಡ: 18ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್‌ಗಳ ಸ್ಫೋಟ, ಇಬ್ಬರಿಗೆ ಗಂಭೀರ ಗಾಯ

June 15, 2026
samagrasuddi
Cities

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ 2026: ಆಡಗಲ್ ಗ್ರಾಮದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ.

June 13, 2026
samagrasuddi

You may Missed

Spiritual

Daily Bhagavad Gita – ಅಧ್ಯಾಯ 6 (ಧ್ಯಾನ ಯೋಗ) | ಶ್ಲೋಕ 23 | ದಿನ 166

June 26, 2026
samagrasuddi
Spiritual

Daily Bhagavad Gita – ಅಧ್ಯಾಯ 6 (ಧ್ಯಾನ ಯೋಗ) | ಶ್ಲೋಕ 22 | ದಿನ 165

June 25, 2026
samagrasuddi
Spiritual

Daily Bhagavad Gita – ಅಧ್ಯಾಯ 6 (ಧ್ಯಾನ ಯೋಗ) | ಶ್ಲೋಕ 20 | ದಿನ 163

June 23, 2026
samagrasuddi
Spiritual

Daily Bhagavad Gita – ಅಧ್ಯಾಯ 6 (ಧ್ಯಾನ ಯೋಗ) | ಶ್ಲೋಕ 19 | ದಿನ 162

June 22, 2026
samagrasuddi
  • ಐರ್ಲೆಂಡ್ ವಿರುದ್ಧದ ಮೊದಲ ಟಿ20: ಟಾಸ್ ಗೆದ್ದ ಭಾರತ ಬೌಲಿಂಗ್, ಯುವ ಆಟಗಾರ ವೈಭವ್ ಸೂರ್ಯವಂಶಿಗೆ ನಿರಾಸೆ
  • ಚಿತ್ರದುರ್ಗ: ಒನಕೆ ಓಬವ್ವ ರಾಜ್ಯಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಮಾದಾರ ಚನ್ನಯ್ಯ ಶ್ರೀಗಳಿಂದ ಚಾಲನೆ.
  • ಮಾದಾರ ಚೆನ್ನಯ್ಯ ಶ್ರೀಗಳಿಗೆ ಕೆಂಪೇಗೌಡ ಪ್ರಶಸ್ತಿ ರಾಷ್ಟ್ರೀಯ ಪ್ರಶಸ್ತಿ 
  • ಗೃಹಲಕ್ಷ್ಮಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ಬಿಜೆಪಿ ವಕ್ತಾರ ಬೇದ್ರೇ 
  • ಚಳ್ಳಕೆರೆ: ಗಜ್ಜುಗಾನಹಳ್ಳಿ ನಿವಾಸಿ ಮಹಂತಮ್ಮ ಸಂಗಮ ಗಿರಿಯಣ್ಣ (87) ನಿಧನ.
Copyright © 2026 ಸಮಗ್ರ ಸುದ್ದಿ
CONTACT US
Theme by: Theme Horse
Proudly Powered by: WordPress