ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಸೆ. 03: ಕಾಂಗ್ರೆಸ್ನ ಹಿರಿಯ ಮುಖಂಡರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ರಾಮಪ್ಪರವರನ್ನು ಮೈಸೂರಿನ ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿಗಳನ್ನಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇಮಕ ಮಾಡಿದ್ದಾರೆ.
ಈ ಹಿಂದೆ ರಾಣೇಬೆನ್ನೂರು ಹಾಗೂ ಹಾವೇರಿ ಜಿಲ್ಲೆಯ ಉಸ್ತುವಾರಿಗಳಾಗಿ ಕೆಲಸ ಮಾಡಿ ಅಲ್ಲಿನ ವಿಧಾನಸಭಾ ಕ್ಷೇತ್ರದ ಗೆಲುವಿಗೆ ಸಹಕಾರಿಯಾಗಿದ್ದಾರೆ. ಇವರನ್ನು ಮೈಸೂರಿನ ಹೆಚ್.ಡಿ.ಕೋಟೆಯ ಹುಣಸೂರು ಕ್ಷೇತ್ರಕ್ಕೆ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ ಎಂದಿದ್ದಾರೆ.