ಚಿತ್ರದುರ್ಗ ಸೆ. 04
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ನಗರದ ಧರ್ಮಶಾಲಾ ರಸ್ತೆಯಲ್ಲಿನ ಶ್ರೀ ಪಾರ್ಶ್ವನಾಥ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಠಮಿಯ ಅಂಗವಾಗಿ ಶಾಲೆಯಲ್ಲಿನ ಕಿರಿಯ, ಹಿರಿಯ ಶಿಶುವಿಹಾರ 1 ಮತ್ತು 2ನೇ ಶಾಲಾ ತರಗತಿಯ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯ ವೇಷವನ್ನು ಹಾಕಿಸಲಾಗಿತ್ತು. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಶಾಲಾ ಆವರಣದಲ್ಲಿ ಮಕ್ಕಳಿಂದ ಮಡಿಕೆಯನ್ನು ಒಡೆಯುವ ಮತ್ತು ಸಾಂಸ್ಕøತಿಕ ಕಾರ್ಯಕ್ರಮವನ್ನು ನಡಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ಸುರೇಶ್ ಕುಮಾರ್ ಸಹ ಕಾರ್ಯದರ್ಶಿ ಸುರೇಶ್ ಪಟಿಯಾರ್, ನಿದೇಶಕರಾದ ಜುವೇರಿಲಾಲ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ನಾಜಿಮಾ ಸ್ವಾಲೆಹ, ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಜನಕರೆಡ್ಡಿ, ಹಾಗೂ ಪೋಷಕರು ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j