ಜೋಗದ ಬಳಿ ಪ್ರವಾಸಿ ಬಸ್ ಪಲ್ಟಿ: 21ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ, ಡಿಸೆಂಬರ್​​ 15: ಮಂಗಳೂರಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸಕ್ಕೆ ಬಂದಿದ ಖಾಸಗಿ ಬಸ್ (bus) ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾಗಿದೆ. 21ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಅರಳಗೊಡು ಸಮೀಪದ ಮುಪ್ಪನೆ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಂಗಳೂರಿನ ಬಿಸಿ ರೋಡ್ ನಿವಾಸಿಗಳ ತಂಡ ಶನಿವಾರ ರಾತ್ರಿ ಸ್ನೇಹಿತರ ಜೊತೆ ಪ್ರವಾಸ ಕೈಗೊಂಡಿದ್ದು, ಇಂದು ಬೆಳಿಗ್ಗೆ ಸಾಗರದ ಜೋಗ ಜಲಪಾತ ವೀಕ್ಷಣೆ ಮಾಡಿಕೊಂಡು ತಾಲೂಕಿನಲ್ಲಿ ಇರುವ ಬಲೆ ಪದ್ಮಾವತಿ ದೇವಸ್ಥಾನ ವೀಕ್ಷಣೆ ಮಾಡಲು ಹೋಗುತ್ತಿರುವ ಸಂದರ್ಭದಲ್ಲಿ ಅರಳಗೊಡು ಸಮೀಪ ಬಸ್​​ ಅಪಘಾತ ಸಂಭವಿಸಿದೆ.

ಬಸ್​​ನಲ್ಲಿದ್ದ 60 ಜನರು ಪೈಕಿ 21 ಜನರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆ ಬಗ್ಗೆ ಮಾಹಿತಿ ಪಡೆದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದೌಡಾಯಿಸಿ ಗಾಯಗೊಂಡಿದ್ದ ಪ್ರವಾಸಿಗರಿಗೆ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ.

Source : https://tv9kannada.com/karnataka/shivamogga-tourist-bus-overturns-near-joga-more-than-21-injured-karnataka-news-in-kannada-ggs-950385.html

Leave a Reply

Your email address will not be published. Required fields are marked *