
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಚಿತ್ರದುರ್ಗ ಜೂ. 19 ಸಂಸದ ರಾಹುಲ್ ಗಾಂಧಿಯವರ ಜನ್ಮ ದಿನಾಚರಣೆಯನ್ನು ಚಿತ್ರದುರ್ಗ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕೇಕ್ ಕತ್ತರಿಸುವುದರ ಮೂಲಕ ಆಚರಣೆಯನ್ನು ಮಾಡಲಾಯಿತು.
ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಕೆ.ತಾಜ್ ಪೀರ್ ರಾಹುಲ್ಗಾಂಧಿಯವರ ಭಾವಚಿತ್ರದ ಮುಂದೆ ಕೇಕ್ ಕತ್ತರಿಸುವುದರ ಮೂಲಕ ರಾಹುಲ್ ಗಾಂಧಿಯವರ ಹುಟ್ಟು ಹಬ್ಬವನ್ನು ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿ ಮೈಲಾರಪ್ಪ, ಶಿಕ್ಷಕರ ಕ್ಷೇತ್ರ ಘಟಕದ ಅಧ್ಯಕ್ಷರಾದ ಮುದಸಿರ್, ರಾಮ ಪ್ರಕಾಶ್ ನಾಯ್ಕ್, ಖುದ್ದುಸ್, ಸೇವಾದಳದ ಇಂದಿರಾ, ಟಿಪ್ಪು ಖಾಸಿಂ ಆಲಿ ಸೇರಿದಂತೆ ಇತರರು ಭಾಗವಹಿಸಿದ್ದರು.