Skip to content
  • Thursday, March 26, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: RCB ಸೋಲನ್ನು ಸಂಭ್ರಮಿಸಿದ್ರಾ ನವೀನ್ ಉಲ್ ಹಕ್?
Sports

IPL 2023: RCB ಸೋಲನ್ನು ಸಂಭ್ರಮಿಸಿದ್ರಾ ನವೀನ್ ಉಲ್ ಹಕ್?

May 22, 2023
samagrasuddi

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್​ನಿಂದ ಹೊರಬಿದ್ದಿದೆ. ಪ್ಲೇಆಫ್ ಪ್ರವೇಶಿಸಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಆರ್​ಸಿಬಿ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು.ಇತ್ತ ಆರ್​ಸಿಬಿ ತಂಡ ಸೋಲುತ್ತಿದ್ದಂತೆ ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ನವೀನ್ ಉಲ್ ಹಕ್ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ. ತಮಾಷೆಯಿಂದ ಕೂಡಿರುವ ಪೋಸ್ಟ್​ನಲ್ಲಿ ವ್ಯಕ್ತಿಯೊಬ್ಬರು ಸಖತ್ ಸಂತಸದಿಂದ ನಗುತ್ತಿರುವುದನ್ನು ಕಾಣಬಹುದು. ಇತ್ತ ಆರ್​ಸಿಬಿ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲುತ್ತಿದ್ದಂತೆ ನವೀನ್ ಇಂತಹದೊಂದು ಪೋಸ್ಟ್ ಹಂಚಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.ಅದರಲ್ಲೂ ಆರ್​ಸಿಬಿ ತಂಡದ ಸೋಲನ್ನು ನವೀನ್ ಉಲ್ ಹಕ್ ಈ ರೀತಿಯಾಗಿ ಸಂಭ್ರಮಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಏಕೆಂದರೆ ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟಾದಾಗ ನವೀನ್ ಸ್ವೀಟ್ ಮ್ಯಾಂಗೋ ಎಂದು ಪೋಸ್ಟ್ ಹಾಕಿ ಕಿಚಾಯಿಸಿದ್ದರು.ಇದೀಗ ಹೀಯಾಳಿಸುವ ನಗುವನ್ನು ಹೊಂದಿರುವ ಪೋಸ್ಟ್​ವೊಂದನ್ನು ಹಾಕಿ ನವೀನ್ ಉಲ್ ಹಕ್ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಅಂದಹಾಗೆ ನವೀನ್ ಉಲ್ ಹಕ್ ಈಗಾಗಲೇ ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ವಾಕ್ಸಮರ ನಡೆದಿತ್ತು. ಅಲ್ಲದೆ ಹಸ್ತಲಾಘವ ನೀಡುವ ವೇಳೆಯು ಕೊಹ್ಲಿ ಜೊತೆ ನವೀನ್ ಕಿತ್ತಾಡಿಕೊಂಡಿದ್ದರು.ಈ ಅಹಿತಕರ ಘಟನೆಯಲ್ಲಿ ಭಾಗಿಯಾಗಿದ್ದ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಹಾಗೂ ನವೀನ್ ಉಲ್​ ಹಕ್​ಗೆ ಬಿಸಿಸಿಐ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿತ್ತು. ಅಲ್ಲಿಗೆ ಮುಕ್ತಾಯವಾಗಬೇಕಿದ್ದ ಆಟಗಾರರ ನಡುವಣ ಜಿದ್ದಾಜಿದ್ದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮುಂದುವರೆದಿದೆ.ಇದರ ನಡುವೆ ಮತ್ತೊಮ್ಮೆ ಅಭಿಮಾನಿಗಳನ್ನು ಕೆಣಕುವಂತಹ ಪೋಸ್ಟ್ ಹಾಕುವ ಮೂಲಕ ನವೀನ್ ಉಲ್ ಹಕ್ ಆರ್​ಸಿಬಿ ಫ್ಯಾನ್ಸ್​ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

source https://tv9kannada.com/photo-gallery/cricket-photos/ipl-2023-naveen-ul-haq-shares-cryptic-story-on-instagram-after-rcb-eliminated-kannada-news-zp-584502.html

Tags: Cricket, IPL, Naveen ul haque, RCB, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

IPL 2023: ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 2 ಮಹತ್ವದ ದಾಖಲೆ ಬರೆದ ರೋಹಿತ್ ಶರ್ಮಾ..!
IPL 2023: ಶುಭ್​ಮನ್ ಗಿಲ್ ಬ್ಯಾಟಿಂಗ್ ಬಗ್ಗೆ ವಿಭಿನ್ನ ಕಾಮೆಂಟ್ ಮಾಡಿದ ಸಚಿನ್ ತೆಂಡೂಲ್ಕರ್..!

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
  • Horoscope Today, 26 March: ಈ ರಾಶಿಯವರಿಗೆ ಇಂದು ಮಾನಸಿಕವಾಗಿ ಸ್ವಲ್ಪ ಗೊಂದಲದ ದಿನ.
  • 2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ
  • RCB New Era:ಬೃಹತ್ ಮೊತ್ತಕ್ಕೆ ಮಾರಾಟವಾದ ಆರ್‌ಸಿಬಿ; ಹೊಸ ಮಾಲೀಕರು ಯಾರು? ಕೊಹ್ಲಿ ಭವಿಷ್ಯವೇನು? ಸಂಪೂರ್ಣ ವಿವರ.
  • UPSC ನಿಂದ ಮೆಗಾ ನೇಮಕಾತಿ: 1300ಕ್ಕೂ ಅಧಿಕ ವೈದ್ಯಾಧಿಕಾರಿ ಹುದ್ದೆಗಳು ಖಾಲಿ, ಮಾ.31 ಕಡೆ ದಿನ.
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
Copyright © 2026
CONTACT US
Theme by: Theme Horse
Proudly Powered by: WordPress