ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ.

ದೆಹಲಿ, ಮಾ.14: ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ (Gyanesh Kumar) ಮತ್ತು ಸುಖಬೀರ್ ಸಂಧು (Sukhbir Sandhu) ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.ಸಮಿತಿಯಲ್ಲಿ ವಿರೋಧ ಪಕ್ಷದ ಸದಸ್ಯರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಚೌಧರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. 212 ಅಧಿಕಾರಿಗಳ ಹೆಸರನ್ನು ಈ ಸಮಿತಿ ತಿಳಿಸಿತ್ತು. ಅದರಲ್ಲಿ ಇಬ್ಬರನ್ನು ಆಯ್ಕೆ ಮಾಡಲಾಗಿದೆ, ಒಬ್ಬರು ಕೇರಳದ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್, ಇನ್ನೊಬ್ಬರು ಪಂಜಾಬ್ ಸುಖಬೀರ್ ಸಿಂಗ್ ಸಂಧು ಎಂದು ಹೇಳಿದ್ದಾರೆ.
ಇನ್ನು ಸಮಿತಿಯ ಬಗ್ಗೆ ವಿರೋಧ ಪಕ್ಷದ ಸದಸ್ಯರಾಗಿರುವ ಅಧೀರ್ ರಂಜನ್ ಚೌಧರಿ ಅವರು ಅಸಮಾಧನ ಹೊರಹಾಕಿದ್ದಾರೆ. ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದರು, ಶಾರ್ಟ್-ಲಿಸ್ಟ್ ಮಾಡಲಾದ ಅಧಿಕಾರಿಗಳ ಹೆಸರುಗಳು ತನಗೆ ಮುಂಚಿತವಾಗಿ ಲಭ್ಯವಾಗಲಿಲ್ಲ ಎಂದು ಆರೋಪಿಸಿದ್ದಾರೆ. ಈ ಸಮಿತಿಯಲ್ಲಿ ಸರ್ಕಾರದ ಸದಸ್ಯರೇ ಹೆಚ್ಚಾಗಿದ್ದಾರೆ. ಈ ಹಿಂದೆ, ಸರ್ಕಾರ ನನಗೆ 212 ಹೆಸರುಗಳನ್ನು ನೀಡಿತ್ತು. ಆದರೆ ನೇಮಕಾತಿಗೆ 10 ನಿಮಿಷಗಳ ಮೊದಲು ಕೇವಲ ಆರು ಹೆಸರುಗಳನ್ನು ನೀಡಿದ್ದಾರೆ.
ಇನ್ನು ಈ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಇಲ್ಲ. ಸಿಜೆಐ ಮಧ್ಯಪ್ರವೇಶಿಸದಂತೆ ಸರ್ಕಾರವು ಅಂತಹ ಕಾನೂನನ್ನು ಮಾಡಿದೆ. ಕೇಂದ್ರ ಸರ್ಕಾರವು ಅವರಿಗೆ ಯಾರು ಬೇಕು ಅವರ ಹೆಸರನ್ನು ಆಯ್ಕೆ ಮಾಡಬಹುದು. ಇದು ನಿಯಂತ್ರಕ ಎಂದು ನಾನು ಹೇಳುತ್ತಿಲ್ಲ, ಆದರೆ ಅನುಸರಿಸುತ್ತಿರುವ ಕಾರ್ಯವಿಧಾನದಲ್ಲಿ ಲೋಪ ಇದೆ ಎಂದು ಹೇಳಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1