ವೀರಶೈವ ಸಮಾಜದವತಿಯಿಂದ ಆ. 3 ರಂದು “ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ” ಪ್ರತಿಭಾ ಪುರಸ್ಕಾರ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಜು. 30 : ನಗರದ ವೀರಶೈವ ಸಮಾಜದವತಿಯಿಂದ 2023-24ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ., ದ್ವಿತೀಯ ಪಿ.ಯು.ಸಿ. ಪದವಿ, ಸ್ವಾತಕೋತ್ತರ ಪದವಿಯಲ್ಲಿ ಡಿಸ್ಟಿಂಕ್ಷನ್ ಪಡೆದ ಪ್ರತಿಭಾನ್ವಿತ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ಆ. 3 ರ ಶನಿವಾರ ಬೆಳಿಗ್ಗೆ 10.30ಕ್ಕೆ ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಕಾರ್ಯದರ್ಶಿ ಪಿ.ವಿರೇಂದ್ರಕುಮಾರ್ ತಿಳಿಸಿದ್ದಾರೆ.

ಸಮಾರಂಭವನ್ನು ಶಾಸಕರಾದ ಕೆ.ಸಿ.ವಿರೇಂದ್ರರವರು ಉದ್ಘಾಟಿಸಲಿದ್ದಾರೆ. ವೀರಶೈವ ಸಮಾಜದ ಅಧ್ಯಕ್ಷರಾದ ಹೆಚ್.ಎನ್.ತಿಪ್ಪೇಸ್ವಾಮಿರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್ ನವೀನ್, ಕೆಡಿಪಿ ಸದಸ್ಯರು ವೀರಶೈವ ಸಮಾಜದ ಉಪಾಧ್ಯಕ್ಷರಾದ ಕೆ.ಸಿ.ನಾಗರಾಜ್ ಭಾಗವಹಿಲಿದ್ದಾರೆ, ಚಳ್ಳಕೆರೆಯ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಜಿ.ವಿ.ರಾಜಣ್ಣರವರು ಉಪನ್ಯಾಸವನ್ನು ನೀಡಲಿದ್ದಾರೆ. 

Leave a Reply

Your email address will not be published. Required fields are marked *