ಚಿತ್ರದುರ್ಗ| ಬಸವ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ : ಮಹಾಮಾನವತಾವಾದಿ,ಸಾಂಸ್ಕೃತಿಕ ನಾಯಕ, ಮಹಾತ್ಮ ಬಸವೇಶ್ವರರ ಜಯಂತಿ – 2025 ರ ಆಚರಣೆ ಕುರಿತಾಗಿ ಚಿತ್ರದುರ್ಗದ ಜಗದ್ಗುರು ಶ್ರೀ ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಪೂರ್ವಭಾವಿ ಸಭೆಯನ್ನು ಶ್ರೀಮಠದ ಅನುಭವ ಮಂಟಪದಲ್ಲಿ ದಿನಾಂಕ 08/04/2025 ರ ಮಂಗಳವಾರ ಸಂಜೆ 5 ಗಂಟೆಯಿಂದ ಆಯೋಜಿಸಲಾಗಿದೆ.

ಶ್ರೀಶಿವಯೋಗಿಸಿ.ಕಳಸದ(ಐಎಎಸ್),ನಿ,ಅಧ್ಯಕ್ಷರು,ಆಡಳಿತ ಮಂಡಳಿ,ಶ್ರೀಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠ,ಚಿತ್ರದುರ್ಗ, ಇವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ. ಶ್ರೀ ಮಠದ ಭಕ್ತರು, ಅಭಿಮಾನಿಗಳು, ಬಸವತತ್ವಾನುಯಾಯಿಗಳು, ಸರ್ವ ಸಮಾಜಗಳ ಬಾಂಧವರು,ಜನಪ್ರತಿನಿಧಿಗಳು, ಮುಖಂಡರು, ಶಿಕ್ಷಣ ಸಂಸ್ಥೆಯ ಪ್ರಮುಖರು ಮತ್ತು ಸಂಘ ಸಂಸ್ಥೆಗಳ ಪ್ರಮುಖರು ದಯವಿಟ್ಟು ಬಿಡುವು ಮಾಡಿಕೊಂಡು ಬಂದು, ಜಯಂತ್ಯುತ್ಸವ ಯಶಸ್ವಿಯಾಗಿ ನಡೆಯಲು ತಮ್ಮ ಅಮೂಲ್ಯ ಸಲಹೆಗಳನ್ನು ನೀಡಲು ಈ ಮೂಲಕ ಕೋರಲಾಗಿದೆ.

ಸಭೆ ನಿಗದಿತ ಸಮಯಕ್ಕೆ ಸರಿಯಾಗಿ ಪ್ರಾರಂಭವಾಗುತ್ತದೆ ಮತ್ತು ಮುಗಿಯುತ್ತದೆ. ದಯವಿಟ್ಟು ಎಲ್ಲರೂ ಸಭೆಗೆ 10 ನಿಮಿಷ ಮೊದಲೇ ಬಂದು ಆಸೀನರಾಗಬೇಕಾಗಿ ಕೋರಿದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *