ಕೊಲ್ಕತ್ತಾದ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ವೈದ್ಯೋ ನಾರಾಯಣೋ ಹರಿಃ’ ಎಂಬ ಮಾತಿನಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಎಂಬ ಮಾತಿದೆ ಆದರೆ ಪಶ್ಚಿಮ ಬಂಗಾಳದ ಕೊಲ್ಕತ್ತಾದ ಅರ್ ಜಿ ಕರ್ ವೈದ್ಯಕೀಯ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣ ಮಾನವೀಯ ಸಮಾಜ ತಲೆತಗ್ಗಿಸುವಂತೆ ಆಗಿದೆ. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಅತ್ಯಾಚಾರ ಮಾಡುವ ಸ್ಥಿತಿಗೆ ವ್ಯಕ್ತಿಗಳು ಬಂದಿರುವುದಕ್ಕೆ ಮೂಲ ಕಾರಣ ಅಲ್ಲಿನ ರಾಜ್ಯ ಸರ್ಕಾರ, ಹಿಂದಿನ ಎಷ್ಟೋ ಪ್ರಕರಣದ ಆರೋಪಿಗಳಿಗೆ ಶಿಕ್ಷೆಯನ್ನು ವಿಧಿಸದೆ ಆರೋಪಿಗಳ ಬೆನ್ನಿಗೆ ನೇರವಾಗಿ ಮಮತಾ ಬ್ಯಾನರ್ಜಿ ಸರ್ಕಾರ ನಿಂತಿರುವುದು, ಹಲವು ಪ್ರಕರಣಗಳಲ್ಲಿ ಕಂಡು ಬಂದಿದೆ ಇಂತಹ ಸರ್ಕಾರಗಳ ನಡೆಯಿಂದ ಮತ್ತೆ ಮತ್ತೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ.

ಕಳೆದ ಹಲವು ತಿಂಗಳುಗಳಿಂದ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದ ಘಟನೆಗಳು ನಡೆಯುತ್ತಿವೆ.  ಪಶ್ಚಿಮ ಬಂಗಾಳದ ಮಮತಾ ಸರ್ಕಾರವು ಇಂತಹ ದುಷ್ಕ್ರತ್ಯಗಳಲ್ಲಿ ತೊಡಗಿರುವ ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ.  ಈ ಹಿಂದೆ ಟಿಎಂಸಿ ಗೂಂಡಾಗಳಿಂದ ಇಂತಹ ಅನೇಕ ಅತ್ಯಾಚಾರಗಳು ನಡೆದಿವೆ ಆದರೆ ಮಮತಾ ಸರ್ಕಾರ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.  ಬಂಗಾಳದಲ್ಲಿ ನಡೆಯುತ್ತಿರುವ ಈ ಘಟನೆಗಳು ಮಾನವೀಯತೆಗೆ ನಾಚಿಕೆಗೇಡು.  ಈ ಘಟನೆಗಳನ್ನು ಗಮನದಲ್ಲಿಟ್ಟು ಕೊಂಡು ಮತ್ತು ಮಮತಾ ಸರ್ಕಾರದ ವಿರುದ್ಧ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆಯನ್ನು ನಡೆಸಿತು.

ಈ ಪ್ರತಿಭಟನೆಯಲ್ಲಿ ನಗರ ಕಾರ್ಯದರ್ಶಿ ಗೋಪಿ, ರಾಜ್ಯ ಕಾರ್ಯಕಾರಿಣಿ  ಕನಕರಾಜ್ ಕೋಡಿಹಳ್ಳಿ, ಚಿತ್ರಸ್ವಾಮಿ, ಮಹಿಳಾ ಪ್ರಮುಖರಾದ ಚಂದನ, ಕಾರ್ಯಕರ್ತರು ಸುದೀಪ್, ಚರಣ್, ಸಂಜು, ಜೀವನ್, ಮಿಥುನ್, ಆದರ್ಶ ಇನ್ನು ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *