ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ಯಾವ್ಯಾವ ಹಾಲಿನ ದರ ಎಷ್ಟು ಹೆಚ್ಚಾಗುತ್ತೆ? ಇಲ್ಲಿದೆ ಶಿಮುಲ್‌ ಪ್ರಕಟಿಸಿದ ಪಟ್ಟಿ.

ಶಿವಮೊಗ್ಗ : ನಂದಿನಿ ಹಾಲು (Milk) ಮತ್ತು ಹಾಲಿನ ಉತ್ಪನ್ನಗಳ ದರ ಹೆಚ್ಚಳ ಮಾಡಲಾಗಿದೆ. ಏ.1ರಿಂದ ನೂತನ ದರ ಜಾರಿಗೆ ಬರಲಿದೆ. ಈ ಸಂಬಂಧ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ (ಶಿಮುಲ್‌) ವ್ಯಾಪ್ತಿಯಲ್ಲಿ ನೂತನ ದರ ಪಟ್ಟಿ ಪ್ರಕಟಿಸಲಾಗಿದೆ.

ಕರ್ನಾಟಕ ಹಾಲು ಮಹಾಮಂಡಳದ ಸಭೆಯಲ್ಲಿ ಪ್ರತಿ ಲೀಟರ್‌ ಹಾಲಿಗೆ 4 ರೂ. ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಶಿಮುಲ್‌ ಅಧ್ಯಕ್ಷ ಹೆಚ್‌.ಎನ್.‌ವಿದ್ಯಾಧರ ನೇತೃತ್ವದಲ್ಲಿ ನಡೆದ 455ನೇ ಆಡಳಿತ ಮಂಡಳಿಯ ಸಭೆಯಲ್ಲಿ ದರ ಹೆಚ್ಚಳದ ತೀರ್ಮಾನ ಪ್ರಕಟಿಸಲಾಯಿತು.

ಹಾಲು ಉತ್ಪಾದಕರಿಗೆ ಪಾಲು

 ಸದ್ಯ ಶಿಮುಲ್‌ನಿಂದ ಹಾಲು (Milk) ಉತ್ಪಾದಕರ ಸಂಘಗಳಿಗೆ ಪ್ರತಿ ಕೆ.ಜಿ. ಹಾಲಿಗೆ 34.18 ರೂ. ನೀಡಲಾಗುತ್ತಿದೆ. ಸಂಘಗಳು ಹಾಲು ಉತ್ಪಾದಕರಿಗೆ‌ ಪ್ರತಿ ಕೆ.ಜಿ.ಗೆ 32.22 ರೂ. ನೀಡುತ್ತಿವೆ.

ಏಪ್ರಿಲ್‌ 1ರಿಂದ ನೂತನ ದರ ಜಾರಿಗೆ ಬರಲಿದೆ. ಆಗ ಶಿಮುಲ್‌ನಿಂದ ಹಾಲು ಉತ್ಪಾದಕರ ಸಂಘಗಳಿಗೆ 36.26 ರೂ. ನೀಡಲಾಗುತ್ತದೆ. ಸಂಘಗಳಿಂದ ಹಾಲು ಉತ್ಪಾದಕರಿಗೆ ಪ್ರತಿ ಕೆ.ಜಿಗೆ 34.21 ರೂ. ನೀಡಲು ಆದೇಶಿಸಲಾಗಿದೆ.

ಹಾಲು, ಮೊಸರು, ಮಜ್ಜಿಗೆ ರೇಟ್‌ ಹೆಚ್ಚಳ

ಏ.1ರಿಂದ ಹಾಲು, ಮೊಸರು, ಮಜ್ಜಿಗೆ, ಲಸ್ಸಿ ಪ್ಯಾಕೆಟ್‌ಗಳ ದರ ಹೆಚ್ಚಳವಾಗಲಿದೆ ಎಂದು ಶಿಮುಲ್‌ ಪ್ರಕಟಣೆಯಲ್ಲಿ ತಿಳಿಸಿದೆ. ಈ ಒಕ್ಕೂಟದ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಯಾವ್ಯಾವ ಉತ್ಪನ್ನಕ್ಕೆ ದರ ಎಷ್ಟಾಗಿದೆ ಅನ್ನುವುದರ ವಿವರ ಇಲ್ಲಿದೆ.

ಉತ್ಪನ್ನಹಳೆ ದರಹೊಸ ದರ
ಟೋನ್ಡ್‌ ಹಾಲು – 1 ಲೀಟರ್‌42 ರೂ.46 ರೂ.
ಟೋನ್ಡ್‌ ಹಾಲು – 500 ML22 ರೂ.24 ರೂ.
ಶುಭಂ ಸ್ಟಾಂಡರ್ಡ್‌ ಹಾಲು – 1 ಲೀ.48 ರೂ.52 ರೂ.
ಶುಭಂ ಸ್ಟಾಂಡರ್ಡ್‌ ಹಾಲು – 500 ML25 ರೂ.27 ರೂ.
ಹೋಮೊಜೀನೈಸ್ಡ್‌ ಶುಭಂ ಹಾಲು – 1 ಲೀ.49 ರೂ.53 ರೂ.
ಹೋಮೊಜೀನೈಸ್ಡ್‌ ಶುಭಂ ಹಾಲು – 500 ML25 ರೂ.27 ರೂ.
ಹೋಮೊಜೀನೈಸ್ಡ್‌ ಶುಭಂ ಹಾಲು – 200 ML12 ರೂ.13 ರೂ.
ಮೊಸರು – 500 ಗ್ರಾಂ26 ರೂ.28 ರೂ.
ಮೊಸರು – 200 ಗ್ರಾಂ12 ರೂ.13 ರೂ.
ಮೊಸರು – 5 ಕೆ.ಜಿ ಬಕೆಟ್‌375 ರೂ.395 ರೂ.
ಮೊಸರು – 10 ಕೆ.ಜಿ ಬಕೆಟ್‌740 ರೂ.780 ರೂ.
ಮಜ್ಜಿಗೆ – 200 ML9 ರೂ.10 ರೂ.
ಸ್ವೀಟ್‌ ಲಸ್ಸಿ – 200 ML13 ರೂ.14 ರೂ.

ನಂದಿನಿಯ ವಿವಿಧ ಶ್ರೇಣಿಯ ಹಾಲಿನ (Milk) 1 ಲೀಟರ್‌ ಮತ್ತು ಅರ್ಧ ಲೀಟರ್‌ ಪ್ಯಾಕೆಟ್‌ಗಳಿಗೆ ನೀಡಲಾಗುತ್ತಿದ್ದ 50 ಎಂ.ಎಲ್‌ ಹೆಚ್ಚುವರಿ ಪ್ರಮಾಣಕ್ಕೆ ಅನ್ವಯವಾಗುವಂತೆ 2 ರೂ. ಹೆಚ್ಚುವರಿ ದರವನ್ನು ಹಿಂಪಡೆಯಲಿದೆ. ಏ.1ರಿಂದ ಇದು ಜಾರಿಗೆ ಬರಲಿದೆ.

ಶಿಮುಲ್‌ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷ ಹೆಚ್‌.ಎಸ್.ವಿದ್ಯಾಧರ, ಉಪಾಧ್ಯಕ್ಷ ಚೇತನ್‌ ಎಸ್‌.ನಾಡಿಗರ, ನಿರ್ದೇಶಕರಾದ ಡಿ.ಆನಂದ್‌, ಜಗದೀಶಪ್ಪ ಬಣಕಾರ್‌, ಟಿ.ಶಿವಶಂಕರಪ್ಪ, ಜಿ.ಪಿ. ರೇವಣಸಿದ್ದಪ್ಪ, ಹೆಚ್‌.ಕೆ.ಬಸಪ್ಪ, ಹೆಚ್.ಬಿ.ದಿನೇಶ್‌, ಬಿ.ಜಿ.ಬಸವರಾಜಪ್ಪ, ಬಿ.ಆರ್‌.ರವಿಕುಮಾರ್‌, ಬಿ.ಸಿ.ಸಂಜೀವ ಮೂರ್ತಿ, ಟಿ.ಎಸ್‌.ದಯಾನಂದ ಗೌಡ, ಜಿ.ಬಿ.ಶೇಖರಪ್ಪ, ಎಸ್‌.ಕುಮಾರ್‌, ಸಹಕಾರ ಸಂಘಗಳ ಜಂಟಿ ನಿಬಂಧಕರ ಪ್ರತಿನಿಧಿ ನಾಗಭೂಷಣ ಕಲ್ಮನೆ, ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ. ಬಾಬುರತ್ನ, ಶಿಮುಲ್‌ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್‌ ಸಭೆಯಲ್ಲಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *