ಐಟಿ-ಬಿಟಿಯ ಹೆಬ್ಬಾಗಿಲು ಮಾಡಿದ ಕೀರ್ತಿ ಜತೆಗೆ ಅನೇಕ ಜನಪರ ಕಾರ್ಯಕ್ರಮಗಳನ್ನು ಕೊಟ್ಟ ಮಹಾನ್ ನಾಯಕ ಎಸ್.ಎಂ.ಕೃಷ್ಣ

ಚಿತ್ರದುರ್ಗ: ಡಿ.10 ಬೆಂಗಳೂರನ್ನು ಐಟಿ-ಬಿಟಿಯ ಹೆಬ್ಬಾಗಿಲು ಮಾಡಿದ ಕೀರ್ತಿ ಜತೆಗೆ ಅನೇಕ ಜನಪರ ಕಾರ್ಯಕ್ರಮಗಳನ್ನು ಕೊಟ್ಟ ಮಹಾನ್ ನಾಯಕ ಎಸ್.ಎಂ.ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ಮಾಜಿ ಸಚಿವ ಮಹೇಶ್ ತಿಳಿಸಿದರು.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ನಗರದ ಬಿಜೆಪಿ ಕಾರ್ಯಲಯದಲ್ಲಿ ಇಂದು ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್,ಎಂ,ಕೃಷ್ಣ ರವರ ನಿಧನ ಸಂಬಂಧ
ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿಯನ್ನು ಸರ್ಮಪಿಸಿ ಮಾತನಾಡಿದ ಅವರು ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ
ಎಲ್ಲ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿ, ಸಮರ್ಥವಾಗಿ ನಿಭಾಯಿಸಿದ ಬೆರಳೆಣಿಕೆ ರಾಜಕಾರಣಿಗಳಲ್ಲಿ ಎಸ್.ಕೆ.ಕೃಷ್ಣ ಪ್ರಮುಖರು.
ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವನ್ನುಂಟು ಮಾಡಿದೆ ಇಡೀ ಜಗತ್ತು ಕರ್ನಾಟಕದ ಕಡೆ ತಿರುಗಿ ನೋಡುವ ರೀತಿ ಐಟಿ-ಬಿಟಿ
ಮೂಲಕ ಬೆಂಗಳೂರನ್ನು ಕಟ್ಟಿದ ರೀತಿ, ಜೊತೆಗೆ ಉದ್ಯೋಗ ಸೃಷ್ಠಿಗೆ ಅಗತ್ಯ ಯೋಜನೆ ರೂಪಿಸಿದ ದೂರದೃಷ್ಟಿ ರಾಜಕಾರಣಿ.
ಅವರು ಬೆಂಗಳೂರನ್ನು ಐಟಿ-ಬಿಟಿ ಹೆಬ್ಬಾಗಿಲು ಆಗಿಸುವಲ್ಲಿ ಶ್ರಮಿಸಿದ್ದು ವಿಶೇಷ ಎಂದರು.

ಅತ್ಯುತ್ತಮ ಸಂಸದೀಯ ಹಿರಿಯ ಪಟು ಆಗಿದ್ದರು. ಸಮಾಜವಾದಿ ಹಿನ್ನೆಲೆಯಿಂದ ಬಂದ ಎಸ್.ಎಂ.ಕೃಷ್ಣ, ಇಂದಿರಾಗಾಂಧಿ ಅವರ
ಜನಪರ ಆಡಳಿತಕ್ಕೆ ಆಕರ್ಷಿತರಾಗಿ ಕಾಂಗ್ರೆಸ್ ಸೇರಿ ಲೋಕಸಭೆ, ವಿಧಾನಸಭೆ ಸದಸ್ಯರು, ಸ್ಪೀಕರ್, ಮಂತ್ರಿ, ಮುಖ್ಯಮಂತ್ರಿ,
ರಾಜ್ಯಪಾಲ, ಕೇಂದ್ರ ಸಚಿವ ಸೇರಿ ರಾಷ್ಟ್ರದ ಬಹುತೇಕ ಎಲ್ಲ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮರ್ಥವಾಗಿ ನಿಭಾಯಿಸಿದ ಖ್ಯಾತಿ
ಅವರಿಗೆ ಸಲ್ಲುತ್ತದೆ. ಕೆಂಗಲ್ ಹನುಮಂತಯ್ಯ ವಿಧಾನಸಭೆ ಕಟ್ಟಿದರೆ, ಎಸ್.ಎಂ.ಕೃಷ್ಣ ವಿಕಾಸಸೌಧ ನಿರ್ಮಾಣ ಮಾಡುವ ಮೂಲಕ
ದೂರದೃಷ್ಟಿಯ ರಾಜಕಾರಣಿ ಎಂಬುದನ್ನು ತಮ್ಮ ಆಡಳಿತದ ಮೂಲಕ ದೃಢಪಡಿಸಿದ ರಾಜಕಾರಣಿ ಯಾಗಿದ್ದರು.

ಕಾಡುಗಳ್ಳ ವೀರಪ್ಪನ್ ನಾಡಿನ ವರನಟ ಡಾ.ರಾಜಕುಮಾರ್ ಅವರನ್ನು ಅಪಹರಣ ಮಾಡಿದ ಸಂದರ್ಭ ಆ ಸವಾಲನ್ನು ಮೆಟ್ಟಿನಿಂತು
ಕನ್ನಡದ ಕಣ್ಮಣಿಯನ್ನು ನಾಡಿಗೆ ಕರೆತಂದಿದ್ದು ಇತಿಹಾಸದ ಪುಟಗಳಲ್ಲಿ ದಾಖಲಾಗುವಂತ ಘಟನೆ. ಇಂತಹ ಅಪರೂಪದ
ರಾಜಕಾರಣಿಯ ಮಾಗದರ್ಶನ ನಾಡಿಗೆ ಇನ್ನಷ್ಟು ಕಾಲ ಬೇಕಿತ್ತು ಎಂದು ಸಂತಾಪ ವ್ಯಕ್ತಪಡಿಸಿದರು.

ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ನಾಯಕನನ್ನು
ಕಳೆದುಕೊಂಡಿದೆ. ಮಿತ ಭಾಷಿ, ಸೌಮ್ಯ ಸ್ವಭಾವದ ಎಸ್. ಎಂ. ಕೃಷ್ಣ ಅವರು ಸುಮಾರು ಆರು ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ
ರಾಜ್ಯಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಅವರಿಗೆ ಅಶ್ರುಪೂರ್ಣ
ಶ್ರದ್ಧಾಂಜಲಿ ಸಲ್ಲಿಸುತ್ತಾ, ಅಗಲಿದ ಆ ಹಿರಿಯ ಚೇತನಕ್ಕೆ ದೇವರು ಉತ್ತಮ ಸದ್ಗತಿಯನ್ನು ದಯಪಾಲಿಸಲಿ ಅವರ ಕುಟುಂಬದ
ಸದಸ್ಯರು, ಅಪಾರ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮೋಹನ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ
ಭಾರ್ಗವಿ ದ್ರಾವಿಡ್, ಸಾಂಸ್ಕøತಿಕ ಪ್ರಕೋಷ್ಠ ಜಿಲ್ಲಾ ಸಂಚಾಲಕ ಮೊರಾರ್ಜಿ, ಸಂವಿಧಾನ ಸಂಮಾನ್ ಅಭಿಯಾನದ ಜಿಲ್ಲಾ ಸಹ
ಸಂಚಾಲಕ, ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್‍ನ ಅಧ್ಯಕ್ಷ
ಯೋಗೀಶ್ ಸಹ್ಯಾದ್ರಿ, ಕಾರ್ಯಾಲಯದ ಕಾರ್ಯದರ್ಶಿ ಶಂಭು ಎಸ್.ಸಿ.ಮೋರ್ಚಾದ ಜಿಲ್ಲಾ ಉಪಾಧಕ್ಷ ಪರಶುರಾಮ್, ಚಳ್ಳಕೆರೆ
ರೈತ ಮೋರ್ಚಾದ ಅಧ್ಯಕ್ಷ ನವೀನ್ ಮಹಾಂತೇಶ್ ಸೇರಿದಂತೆ ಇತರರು ಭಾಗವಹಿಸಿದರು.

Leave a Reply

Your email address will not be published. Required fields are marked *