ನಗರದ ಪಾರ್ಶ್ವನಾಥ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್

ಚಿತ್ರದುರ್ಗ ಜೂ. 18 ನಗರದ ಪಾಶ್ರ್ವನಾಥ ವಿದ್ಯಾ ಸಂಸ್ಥೆಯಲ್ಲಿ ಬುಧವಾರ ಶಾಲಾ ಮಕ್ಕಳಿಗೆ ಅಕ್ಷರ ಅಭ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಾಯಿತು. 
ಭಾರತೀಯ ಸಂಸ್ಕøತಿ ಪ್ರಕಾರ ಶಿಕ್ಷಣದ ಆರಂಭವು ಪ್ರತಿಯೊಂದು ಮಗುವಿನ ಜೀವನದಲ್ಲಿ ಮಹತ್ತರವಾದ ಕಾರ್ಯವಾಗಿದೆ. ಈ ಹಿನ್ನಲೆಯಲ್ಲಿ ಪ್ರಯಾಣವನ್ನು ಶುಭದೊಂದಿಗೆ ಆರಂಭ ಮಾಡಲಾಗುವುದು. ಅಕ್ಷರ ಅಭ್ಯಾಸವನ್ನು ಮಾಡಿಸುವುದರ ಮೂಲಕ ಜ್ಞಾನ ದೇವತೆಯಾದ ಸರಸ್ವತಿಯ ಆರ್ಶೀವಾದವನ್ನು ಪಡೆದು ವಿದ್ಯೆ ಆರಂಭಿಸುವ ಧಾರ್ಮಿಕ ಕಾರ್ಯವನ್ನು ನಡೆಸಲಾಯಿತು. 
ಈ ಸಂದರ್ಭದಲ್ಲಿ ಮಕ್ಕಳ ಪೋಷಕರು ಭಾಗವಹಿಸುವುದರ ಮೂಲಕ ಸರಸ್ವತಿ ಪೂಜೆಯನ್ನು ನಡೆಸಿ ಮಕ್ಕಳ ಕೈಯಿಂದ ಅಕ್ಷರ ಅಭ್ಯಾಸವನ್ನು ಮಾಡಿಸಿದರು. ತಮ್ಮ ಮಗುವಿನ ಮುಂದಿನ ವಿದ್ಯಾಭ್ಯಾಸ ಯಾವುದೇ ತೊಂದರೆ ಇಲ್ಲದೆ ಸರಾಗವಾಗಿ ನಡೆಯಲಿ ಎಂದು ಪ್ರಾರ್ಥಿಸಿದರು. 
ಈ ಸಮಯದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಉತ್ತಮ್‍ಚಂದ್ ಸುರಾನ , ಕಾರ್ಯದರ್ಶಿ ಸುರೇಶ್‍ಕುಮಾರ್ ಸಿಸೋಡಿಯಾ , ಹಾಗೂ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಾಜಿಮಾ ಸ್ವಾಲೆಹಾ, ಶ್ರೀಮತಿ ಶಾಂತಕುಮಾರಿ, ಶಿಕ್ಷಕರು ಪೋಷಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *