ಬೆಂಗಳೂರು: ರಾಜ್ಯದ ಜನತೆಗೆ ಇಂದು ಸಂಜೆಯೊಳಗೆ ಕರೆಂಟ್ ಶಾಕ್ ಅನ್ನು ಸರ್ಕಾರ ನೀಡಲಿದೆ ಎನ್ನಲಾಗುತ್ತಿತ್ತು. ಅಲ್ಲದೇ ವಿದ್ಯುತ್ ದರ ಪರಿಷ್ಕರಣೆ ಮಾಡಿ ಏರಿಕೆಯ ಬರೆಯನ್ನು ಎಳೆಯಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದರೇ ಕರೆಂಟ್ ಶಾಕ್ ನಲ್ಲಿದ್ದಂತ ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ವಿದ್ಯುತ್ ದರ ಭಾರೀ ಇಳಿಕೆ ಮಾಡಲಾಗಿದೆ.

ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ. ಲೋಕಸಭೆ ಚುನಾವಣೆ ಬೆನ್ನಲ್ಲೇ ಗ್ರಾಹಕರಿಗೆ ಬಂಪರ್ ಕೊಡುಗೆ ನೀಡಿದೆ. 100 ಯೂನಿಟ್ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್ 1ರಿಂದಲೇ ಅನ್ವಯವಾಗಲಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1