ಕಾಂಗ್ರೆಸ್ ಸರ್ಕಾರದ ಸಾಧನೆಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಬಾಕಿ ಇದೆ: ನಾಗರಾಜ್ ಬೇದ್ರೇ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಮೇ. 20 ರಾಜ್ಯ ಸರ್ಕಾರ ಕಳೆದ 2 ವರ್ಷಗಳಲ್ಲಿ ಮಾಡಿ ಸಾಧನೆಯನ್ನು ರಾಜ್ಯದ ಜನತೆಗೆ ತೋರಿಸುವುದಕ್ಕೆ ಬಳ್ಳಾರಿಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಸಡೆಸಿದೆ. ಆದರೆ ಬೆಂಗಳೂರು ಮಹಾನಗರದಲ್ಲಿ ಸುರಿದ ಭಾರಿ ಮಳೆಗೆ ಈ ಕಾಂಗ್ರೆಸ್ ಸರ್ಕಾರದ ಸಾಧನೆಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ಸಾಧನೆ ಚಿತ್ರ ಬಾಕಿ ಇದೆ ಎಂದು ಚಿತ್ರದುರ್ಗ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು ಬೆಂಗಳೂರು ಮಹಾನಗರದಿಂದ ಕೋಟ್ಯಂತರ ತೆರಿಗೆ ಹಣ ಸಂಗ್ರಹವಾದರೂ,
ಬೆಂಗಳೂರಿನಲ್ಲಿ ಯಾವುದೇ ಒಂದು ಅಭಿವೃದ್ಧಿ ಕಾರ್ಯ ಉಸ್ತುವಾರಿಯಾದ ಡಿ.ಕೆ ಶಿವಕುಮಾರ್ ಮಾಡಿರುವುದಿಲ್ಲ. ಆದರೆ ಇವರು
ಒಂದು ವಾರದಿಂದ ಪ್ರಚಾರದ ಸಲುವಾಗಿ ದಿನಪತ್ರಿಕೆಗಳಲ್ಲಿ ಜಾಹಿರಾತು ನೀಡುತ್ತಿರುವುದೇ ಇವರ ಸಾಧನೆಯಾಗಿದೆ ಎಂದು
ಟೀಕಿಸಿದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Views: 16

Leave a Reply

Your email address will not be published. Required fields are marked *