ಕ್ವಿಟ್ ಇಂಡಿಯಾ ಚಳವಳಿ ನಡೆದು 80 ವರ್ಷಗಳಾಗಿವೆ. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ತಿರುವು ನೀಡಿದ ಈ ಚಳವಳಿ ಆರಂಭವಾಗಿದ್ದು, ಆಗಸ್ಟ್ 8 ರಂದು. ಮಹಾತ್ಮ ಗಾಂಧಿ ಅವರು ಈ ಚಳವಳಿಯನ್ನು ಮುಂಬಯಿಯಲ್ಲಿ ತಮ್ಮ 50 ಮಂದಿ ಬೆಂಬಲಿಗರೊಂದಿಗೆ ಆರಂಭಿಸಿದ್ದರು. ಭಾರತ ಬಿಟ್ಟು ತೊಲಗಿ ಚಳವಳಿಯು ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ನಡೆಯಿತು.
ಭಾರತದ ಇತಿಹಾಸದಲ್ಲಿಯೇ ಆಗಸ್ಟ್ ತಿಂಗಳು ಹಲವು ಮೈಲುಗಲ್ಲಿಗೆ ನಾಂದಿ ಹಾಡಿದ ವಿಶೇಷ ತಿಂಗಳಾಗಿದೆ. ಭಾರತವನ್ನು ಬ್ರಿಟಿಷರ ಆಳ್ವಿಕೆಯಿಂದ ಮುಕ್ತ ಗೊಳಿಸಲು ಆಗಸ್ಟ್ 8,1942ರಲ್ಲಿ ಮಹಾತ್ಮ ಗಾಂಧಿ ಅವರು ಕ್ವಿಟ್ ಇಂಡಿಯಾ ಚಳುವಳಿಯನ್ನು ಆರಂಭಿಸಿದರು. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ವಿಟ್ ಇಂಡಿಯಾ ಚಳುವಳಿ ಅತಿ ಮಹತ್ವದ್ದಾಗಿದೆ.
ಭಾರತದ ಪಾಲಿಗೆ ಆಗಸ್ಟ್ ತಿಂಗಳು ಕ್ರಾಂತಿಯ ತಿಂಗಳಾಗಿದೆ. ಆಗಸ್ಟ್ 8 ನಾವು ಎಂದು ಮರೆಯಲಾಗದ ಕ್ರಾಂತಿಯ ದಿನವಾಗಿದೆ. ಬ್ರಿಟಿಷರಿಗೆ ಈ ದಿನ ಭಾರತವನ್ನು ಬಿಟ್ಟು ತೊಲಗಿ ಎಂದು ಎಚ್ಚರಿಕೆಯನ್ನು ಕೊಟ್ಟ ದಿನವಾಗಿದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಸಹ ಇದೇ ತಿಂಗಳಲ್ಲಿ. ಹಾಗಾಗಿ ಈ ತಿಂಗಳು ಭಾರತೀಯರ ಪಾಲಿಗೆ ವಿಶೇಷ ದಿನಾವಾಗಿದೆ.
ಕ್ವಿಟ್ ಇಂಡಿಯಾ ಚಳವಳಿ ನಡೆದು 80 ವರ್ಷಗಳಾಗಿವೆ. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ತಿರುವು ನೀಡಿದ ಈ ಚಳವಳಿ ಆರಂಭವಾಗಿದ್ದು, ಆಗಸ್ಟ್ 8 ರಂದು. ಮಹಾತ್ಮ ಗಾಂಧಿ ಅವರು ಈ ಚಳವಳಿಯನ್ನು ಮುಂಬಯಿಯಲ್ಲಿ ತಮ್ಮ 50 ಮಂದಿ ಬೆಂಬಲಿಗರೊಂದಿಗೆ ಆರಂಭಿಸಿದ್ದರು. ಭಾರತ ಬಿಟ್ಟು ತೊಲಗಿ ಚಳವಳಿಯು ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ನಡೆಯಿತು. ಇದರ ಗುರಿ ಬ್ರಿಟಿಷ್ ಸರ್ಕಾರದಿಂದ ಭಾರತದ ಸ್ವಾತಂತ್ರ್ಯ ಪಡೆಯುವುದಾಗಿತ್ತು.
1942, ಆಗಸ್ಟ್ 8ರಂದು ಮುಂಬಯಿಯ ಗೊವಾಳಿಯ ಮೈದಾನ(ಇಂದಿನ ಹೆಸರು- ಆಗಸ್ಟ್ ಕ್ರಾಂತಿ ಮೈದಾನ)ದಲ್ಲಿ ಗಾಂಧೀಜಿಯವರು ‘ಮಾಡು ಇಲ್ಲವೆ ಮಡಿ’ ಘೋಷಣೆಯೊಂದಿಗೆ ಈ ಚಳವಳಿ ನಡೆಸುವುದಾಗಿ ಕರೆ ನೀಡಿದರು. ಆಗಸ್ಟ್ 9 ರಿಂದ ಚಳವಳಿ ಆರಂಭವಾಯಿತು. ದೇಶಾದ್ಯಂತ ಈ ಕರೆ ಮಿಂಚಿನ ಸಂಚಾರ ಉಂಟು ಮಾಡಿತು. ಕೊನೆಗೆ ಬ್ರಿಟಿಷರು ಗಾಂಧೀಜಿಯವರನ್ನು ಬಂಧಿಸಿ ಅಗಾಖಾನ್ ಅರಮನೆಯಲ್ಲಿ ಗೃಹಬಂಧನದಲ್ಲಿಟ್ಟಿದ್ದರು.
ಮಹಾತ್ಮ ಗಾಂಧೀಜಿ ಅವರನ್ನ ಬ್ರಿಟಿಷರ ಬಂಧನ ಮಾಡಿದ ನಂತರ, ಜೆ.ಪಿ. ನಾರಾಯಣ್, ಲೋಹಿಯಾ, ಅರುಣಾ ಆಸಿಫ್ ಅಲಿ ಚಳವಳಿಯಲ್ಲಿ ಪ್ರಮುಖ ಪಾತ್ರವಹಿಸಿದರು. ಚಳುವಳಿಯ ತೀಕ್ಷ್ಣತೆಯನ್ನು ಅರಿತ ಬ್ರಿಟಿಷರು, ಬಹುತೇಕ ಪ್ರಮುಖ ನಾಯಕರನ್ನು ಜೈಲಿಗಟ್ಟಿದರು. ನಾಯಕರಿಲ್ಲದೆಯೇ ಚಳುವಳಿ ಉಗ್ರ ಸ್ವರೂಪವನ್ನು ಕಂಡಿದ್ದು ಈ ಚಳುವಳಿಯ ಹೆಗ್ಗಳಿಕೆ.
ಇಡೀ ದೇಶದಲ್ಲಿ ಕ್ರಾಂತಿಯ ಅಲೆ ಎದ್ದಿತ್ತು. ದೇಶದ ಮೂಲೆ ಮೂಲೆಯಲ್ಲೂ ಈ ಘೋಷಣೆಯು ಜನರನ್ನು ಬಡಿದೆಬ್ಬಿಸಿತು. ಕೃಷಿಕರು ಬಹು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಈ ಚಳವಳಿಯ ಬಹು ಮುಖ್ಯ ಅಂಶವಾಗಿತ್ತು. ಬ್ರಿಟಿಷರ ದಬ್ಬಾಳಿಕೆಯು ದೇಶದ ಜನರ ಕಣಕಣದಲ್ಲೂ ರಕ್ತ ಕುದಿಯುವಂತೆ ಮಾಡಿತ್ತು . ಕ್ವಿಟ್ ಇಂಡಿಯಾ ಚಳವಳಿಯ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬ್ರಿಟಿಷ್ರಲ್ಲಿ ನಡುಕ ಉಂಟು ಮಾಡಿತು. ಅದರ ಪರಿಣಾಮವೇ ಐದು ವರ್ಷದ ಬಳಿಕ 1947ರ ಆಗಸ್ಟ್ 15ರಂದು ಭಾರತಕ್ಕೆ ಸ್ವಾತಂತ್ರ್ಯ ದಕ್ಕಿತು.
ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ಆಗಸ್ಟ್ 9 ರಂದು ಭಾರತ ಬಿಟ್ಟು ತೊಲಗಿ ಎಂಬ ಘೋಷಣೆ ಪ್ರತಿಧ್ವನಿಸಿತು. ಬ್ರಿಟಿಷರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ನಡುವೆ ಘರ್ಷೆಣೆ ನಡೆಯಿತು. ಈ ಹೋರಟ ವಿಕೋಪಕ್ಕೆ ತಿರುಗಿ ಹೋರಾಟದಲ್ಲಿ ಭಾಗಿಯಾಗಿದ್ದ ಹಲವು ನಾಯಕರನ್ನು ಜೀವಂತವಾಗಿ ಸುಟ್ಟು ಹಾಕಲಾಯಿತು.
1942 ಸೆಪ್ಟಂಬರ್ 27ರಂದು ಈಸೂರಿನ ವೀರಭದ್ರೆಶ್ವೇರ ದೇವಾಲಯದ ಮೇಲೆ ಪ್ರತ್ಯೇಕ ಧ್ವಜವನ್ನು ಹಾರಿಸಲಾಯಿತು. ಈಸೂರು ಸ್ವತಂತ್ರ್ಯ ಗ್ರಾಮ ಎಂದು ಘೋಷಣೆ ಮಾಡಲಾಯಿತು. “ಮಾಡು ಇಲ್ಲವೆ ಮಡಿ” ಎಂಬ ಗಾಂಧೀಜಿಯವರ ಕರೆಗೆ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಸೇರಿದಂತೆ, ಭಾರತದ ಮೂಲೆ ಮೂಲೆಯಿಂದ ಹಲವು ಮಂದಿ ಈ ಹೋರಾಟಕ್ಕೆ ಬೆಂಬಲ ನೀಡಿದರು. ಬ್ರಿಟಿಷರ ವಿರುದ್ಧದ ಈ ಹೋರಾಟದಲ್ಲಿ ಹಲವು ಮಂದಿ ಹುತಾತ್ಮರಾದರು.
Views: 21