ಕರ್ನಾಟಕದಲ್ಲಿ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಚಾಮರಾಜನಗರ ಜಿಲ್ಲೆಗೆ ಎಸ್.ಪಿ.ಯಾಗಿ ಡಾ ಕವಿತಾ ಬಿ.ಟಿ ನೇಮಕ.

ಚಿತ್ರದುರ್ಗ ಜು. 03 : ರಾಜ್ಯ ಆಡಳಿತ ಸುಧಾರಣೆಗಾಗಿ, ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ವರ್ಗಾವಣೆಯ ಸರ್ಜರಿ ಮಾಡಿದೆ. ರಾಜ್ಯದಲ್ಲಿ 25 ಐಪಿಎಸ್ ಆಫೀಸರ್‍ಗಳ ವರ್ಗಾವಣೆಯನ್ನು ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಪ್ರಮುಖ ಹುದ್ದೆಯನ್ನು ಅಲಂಕರಿಸಿದವರನ್ನು ಬೇರೆಡೆಗೆ ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳು ಒಂದು ವಾರದಲ್ಲಿ ನೂತನ ಜವಾಬ್ದಾರಿಯನ್ನು ಹೊರಲಿದ್ದಾರೆ. ಈ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಡಾ ಕವಿತಾ ಬಿ.ಟಿ. ಇವರನ್ನು  ಚಾಮರಾಜನಗರ ಜಿಲ್ಲೆಯ ರಕ್ಷಣಾಧಿಕಾರಿಗಳಾಗಿ ವರ್ಗಾವಣೆ ಮಾಡಲಾಗಿದೆ.

ಚಾಮರಾಜ ನಗರಕ್ಕೆ ನೂತನ ರಕ್ಷಣಾಧಿಕಾರಿಗಳಾಗಿ ನೇಮಕವಾಗಿರುವ ಡಾ.ಬಿ.ಟಿ.ಕವಿತಾರವರಿಗೆ ಶ್ರೀ ಗುರು ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಶ್ರೀಗಳು, ಮಾಜಿ ಸಚಿವರಾದ ಹೆಚ್.ಅಂಜನೇಯ, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಆದಿ ಜಾಂಬವ ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಹಾಗೂ ಆದಿ ಜಾಂಬವ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಟಿ.ಮಂಜುನಾಥ್ ಅಭಿನಂದಿಸಿ, ಶುಭ ಕೋರಿ ತಮ್ಮ ಆಧಿಕಾರವಧಿಯಲ್ಲಿ ಉತ್ತಮವಾದ ಕೆಲಸವನ್ನು ಮಾಡಲಿ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಕಾಪಾಡಿ, ನೊಂದ ಜನರಿಗೆ ನ್ಯಾಯವನ್ನು ಒದಗಿಸಲಿ ಎಂದು ಹಾರೈಸಿದ್ದಾರೆ.

Leave a Reply

Your email address will not be published. Required fields are marked *