ಕೇರಳ: ಶಬರಿಮಲೆಯಿಂದ ವಾಪಸಾಗುವಾಗ ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ.

ಶಬರಿಮಲೆಯಿಂದ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಯಾತ್ರಿಕರನ್ನು ಹೊತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಪಲ್ಟಿಯಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ 6 ಗಂಟೆಗೆ ಘಟನೆ ನಡೆದಿದೆ. ಕಿರಿದಾದ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿವೆ. ಶಬರಿಮಲೆಗೆ ಭೇಟಿ ನೀಡಿ ಹಿಂತಿರುಗುತ್ತಿದ್ದ ಕರ್ನಾಟಕದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಳಗ್ಗೆ 6 ಗಂಟೆ ಸುಮಾರಿಗೆ ಅಪಘಾತಕ್ಕೀಡಾಗಿದೆ.

ಬಸ್ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಅಂದಾಜಿಸಲಾಗಿದೆ. ಗಾಯಾಳುಗಳನ್ನು ವಿವಿಧ ವಾಹನಗಳಲ್ಲಿ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಯಿತು. ಸಹ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳು ಕೂಡಲೇ ರಕ್ಷಣಾ ಕಾರ್ಯಗಳನ್ನು ನಡೆಸಿದರು. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಶಬರಿಮಲೆ ಯಾತ್ರಾರ್ಥಿಗಳನ್ನು ಬೇರೆ ರಾಜ್ಯಗಳಿಂದ ಕರೆದೊಯ್ಯುವ ಬಸ್‌ಗಳು ಮತ್ತು ಮಿನಿ ಬಸ್‌ಗಳು ತಾಮರಸ್ಸೆರಿ ಘಾಟ್ ಮೂಲಕ ವೇಗವಾಗಿ ಚಲಿಸುವ ಬಗ್ಗೆ ದೂರುಗಳಿವೆ. ಶಬರಿಮಲೆಗೆ ಗರಿಷ್ಠ ಟ್ರಿಪ್‌ಗಳನ್ನು ಮಾಡಲು, ಬಸ್‌ಗಳು, ಮಿನಿಬಸ್‌ಗಳನ್ನು ಮಕ್ಕಳಿದ್ದರೂ ಕೂಡ ಹೆಚ್ಚಿನ ವೇಗದಲ್ಲಿ ಓಡಿಸಲಾಗುತ್ತದೆ.

ಬೇರೆ ರಾಜ್ಯಗಳ ಚಾಲಕರು ಕೆಲವೊಮ್ಮೆ ಘಾಟ್ ಪ್ರದೇಶದ ಸಂಚಾರ ನಿಯಮಗಳನ್ನು ನಿರ್ಲಕ್ಷಿಸುತ್ತಾರೆ. ಬಸ್ಸಿನಲ್ಲಿ 53 ಮಂದಿ ಪ್ರಯಾಣಿಕರಿದ್ದರು. ಗಾಯಾಳುಗಳನ್ನು ವಿವಿಧ ವಾಹನಗಳಲ್ಲಿ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಇಬ್ಬರು ಮಕ್ಕಳು ಸೇರಿದಂತೆ 25 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು ಸವಾಲಿನ ಸಂಗತಿಯಾಗಿರುವುದರಿಂದ, ಇತರ ರಾಜ್ಯಗಳ ವಾಹನಗಳು ಘಾಟ್ ಮೂಲಕ ಹಾದು ಹೋಗುವಾಗ ಕನಿಷ್ಠ ನಿಯಮಗಳನ್ನು ಪಾಲಿಸುವ ಬಗ್ಗೆ ಬೇಡಿಕೆ ಕೇಳಿಬರುತ್ತಿದೆ.

Source : https://tv9kannada.com/national/kerala-bus-carrying-sabarimala-pilgrims-from-karnataka-overturns-in-wayanad-kannada-news-nyr-937007.html

Leave a Reply

Your email address will not be published. Required fields are marked *