ಇಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶ್ವಕಪ್ನ 25ನೇ ಪಂದ್ಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ.

ಬೆಂಗಳೂರು: ಏಕದಿನವಿಶ್ವಕಪ್ ಸರಣಿಯ 25ನೇ ಪಂದ್ಯ ಇಂದು ಹಾಲಿ ವಿಶ್ವಚಾಂಪಿಯನ್ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಟೂರ್ನಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಎರಡು ತಂಡಗಳು ತಲಾ ಒಂದು ಪಂದ್ಯವನ್ನು ಮಾತ್ರವೇ ಗೆದ್ದು ಮೂರಲ್ಲಿ ಸೋಲು ಕಂಡಿವೆ. ಸದ್ಯ ಅಂಕಪಟ್ಟಿಯಲ್ಲಿ ಶ್ರೀಲಂಕಾ 7ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 8ನೇ ಸ್ಥಾನದಲ್ಲಿದೆ. ಸೆಮಿಸ್ ರೇಸ್ನಲ್ಲಿ ಉಳಿಯಲು ಇಂದಿನ ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ.
ಪಿಚ್ ವರದಿ: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸಂಪೂರ್ಣ ಬ್ಯಾಟಿಂಗ್ ಪಿಚ್ ಆಗಿದೆ. ಇಲ್ಲಿ ಬೌಂಡರಿ ಲೆಂತ್ಕೂಡ ಚಿಕ್ಕದಾಗಿದ್ದು ಹೆಚ್ಚಿನ ರನ್ ಹರಿಸಬಹುದಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣವನ್ನು ಬ್ಯಾಟ್ಸ್ಮನ್ಗಳ ಸ್ವರ್ಗ ಎನ್ನಲಾಗುತ್ತದೆ. ಉಳಿದಂತೆ ಬೌಲಿಂಗ್ನಲ್ಲಿ ಸ್ಪಿನ್ನರ್ಗಳಿಗೆ ಸಹಾಯಕವಾಗಿರಲಿದೆ. ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಹಿಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ರನ್ ಮಳೆ ಹರಿಸಿದ್ದವು. ಇಂದಿನ ಪಂದ್ಯದಲ್ಲೂ ದೊಡ್ಡ ಮಟ್ಟದ ಸ್ಕೋರ್ ದಾಖಲಾಗುವ ಸಾಧ್ಯತೆ ಇದೆ.
ಚಿನ್ನಸ್ವಾಮಿ ಕ್ರೀಡಾಂಗಣ ಅಂಕಿ – ಅಂಶ: ಈ ಮೈದಾನದಲ್ಲಿ ಈವರೆಗೂಒಟ್ಟು 39 ಏಕದಿನ ಪಂದ್ಯಗಳು ನಡೆದಿವೆ. ಈ ಪೈಕಿ ಮೊದಲು ಬ್ಯಾಟ್ ಮಾಡಿದ ತಂಡ 15 ಬಾರಿ ಗೆದ್ದರೆ, ಚೇಸಿಂಗ್ ಮಾಡಿರುವ ತಂಡಗಳು 20 ಬಾರಿ ಗೆಲುವು ದಾಖಲಿಸಿವೆ. ಮೊದಲ ಇನಿಂಗ್ಸ್ನ ಸರಾಸರಿ ಸ್ಕೋರ್ 235 ಆಗಿದ್ದು, ಎರಡನೇ ಇನಿಂಗ್ಸ್ನ ಸರಾಸರಿ ಸ್ಕೋರ್ 218 ಆಗಿರಲಿದೆ. ಚಿನ್ನಸ್ವಾಮಿಯಲ್ಲಿ ದಾಖಲಾದ ಹೈಸ್ಕೋರ್ 383 ಆಗಿದ್ದು, ಲೋ ಸ್ಕೋರ್ 166 ಆಗಿದೆ.
ಹವಮಾನ ವರದಿ: ಬೆಂಗಳೂರಿನಲ್ಲಿ ಇಂದಿನ ತಾಪಮಾನ ಗರಿಷ್ಠ 31ಡಿಗ್ರಿ ಸೆಲ್ಸಿಯಸ್ ಇದ್ದೆ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಳೆ ಬರುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.
ಹೆಡ್ ಟೂ ಹೆಡ್: ಇಂಗ್ಲೆಂಡ್ ಮತ್ತು ಶ್ರೀಲಂಕಾ ಏಕದಿನ ಕ್ರಿಕೆಟ್ನಲ್ಲಿ ಈವರೆಗೂ ಒಟ್ಟು 78 ಪಂದ್ಯಗಳನ್ನು ಆಡಿವೆ. ಇದರಲ್ಲಿ ಇಂಗ್ಲೆಂಡ್ 38 ಪಂದ್ಯಗಳಲ್ಲಿ ಗೆದ್ದರೆ, ಶ್ರೀಲಂಕಾ 36 ಪಂದ್ಯಗಳಲ್ಲಿ ಗೆದ್ದಿದೆ. 3 ಪಂದ್ಯಗಳು ರದ್ದುಗೊಂಡಿದ್ದು, 1 ಪಂದ್ಯ ಟೈ ಆಗಿದೆ. ವಿಶ್ವಕಪ್ನಲ್ಲಿ ಎರಡು ತಂಡಗಳು 11 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಇಂಗ್ಲೆಂಡ್ 6 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, ಶ್ರೀಲಂಕಾ 5ರಲ್ಲಿ ಗೆದ್ದಿದೆ.
ಸಂಭಾವ್ಯ ತಂಡಗಳು ಇಂಗ್ಲೆಂಡ್: ಡೇವಿಡ್ ಮಲನ್, ಜಾನಿ ಬೇರ್ಸ್ಟೋ , ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್/ಲಿಯಾಮ್ ಲಿವಿಂಗ್ಸ್ಟೋನ್, ಜೋಸ್ ಬಟ್ಲರ್ (ನಾಯಕ ಮತ್ತು ವಿ.ಕೀ), ಡೇವಿಡ್ ವಿಲ್ಲಿ/ಮೊಯಿನ್ ಅಲಿ, ಕ್ರಿಸ್ ವೋಕ್ಸ್/ಸ್ಯಾಮ್ ಕರ್ರಾನ್, ಆದಿಲ್ ರಶೀದ್, ಗಸ್ ಅಟ್ಕಿನ್ಸನ್, ಮಾರ್ಕ್ ವುಡ್
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಕುಸಲ್ ಮೆಂಡಿಸ್, ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಏಂಜೆಲೊ ಮ್ಯಾಥ್ಯೂಸ್, ದುಶಾನ್ ಹೇಮಂತ/ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಕಸುನ್ ರಜಿತ, ದಿಲ್ಶಾನ್ ಮಧುಶಂಕ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1