Skip to content
  • Saturday, July 5, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • WTC Final 2023: ರೋಹಿತ್ ಶರ್ಮಾಗೆ ಗಾಯ: ಯಾರಾಗ್ತಾರೆ ಉಪ ನಾಯಕ?
Sports

WTC Final 2023: ರೋಹಿತ್ ಶರ್ಮಾಗೆ ಗಾಯ: ಯಾರಾಗ್ತಾರೆ ಉಪ ನಾಯಕ?

June 6, 2023
samagrasuddi

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಗಾಯವಾಗಿದೆ. ಅಂತಿಮ ದಿನದ ಅಭ್ಯಾಸದ ವೇಳೆ ಹಿಟ್​ಮ್ಯಾನ್ ಅವರ ಹೆಬ್ಬೆರಳಿಗೆ ಗಾಯವಾಗಿದ್ದು, ಇದರ ಬೆನ್ನಲ್ಲೇ ಅವರು ಪ್ರಾಕ್ಟೀಸ್​ ಅನ್ನು ಅಂತ್ಯಗೊಳಿಸಿದರು.ಇದಾಗ್ಯೂ ಅವರ ಫೈನಲ್ ಪಂದ್ಯದಿಂದ ಹೊರಗುಳಿಯುವುದಿಲ್ಲ ಎಂದು ತಿಳಿದು ಬಂದಿದೆ. ಗಾಯವು ಗಂಭೀರವಲ್ಲದ ಕಾರಣ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧ ಆಡಲಿದ್ದಾರೆ. ಆದರೆ ಹೆಬ್ಬೆರಳಿಗೆ ಗಾಯವಾಗಿರುವುದರಿಂದ ಮುನ್ನೆಚ್ಚರಿಕೆ ಸಲುವಾಗಿ ಫೀಲ್ಡಿಂಗ್ ವೇಳೆ ಕೆಲ ಕಾಲ ಹೊರಗುಳಿಯುವ ಸಾಧ್ಯತೆಯಿದೆ.ಒಂದು ವೇಳೆ ರೋಹಿತ್ ಶರ್ಮಾ ಫೀಲ್ಡಿಂಗ್ ವೇಳೆ ಮೈದಾನದಿಂದ ಹೊರಗುಳಿದರೆ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಬರುವುದು ಸಹಜ. ಏಕೆಂದರೆ ಈ ಹಿಂದೆ ಉಪನಾಯಕರಾಗಿದ್ದ ಕೆಎಲ್ ರಾಹುಲ್ ಹಾಗೂ ಜಸ್​ಪ್ರೀತ್ ಬುಮ್ರಾ ಪ್ರಸ್ತುತ ತಂಡದಲ್ಲಿಲ್ಲ. ಇತ್ತ ಬಿಸಿಸಿಐ ಕೂಡ ಈ ಬಾರಿ ತಂಡವನ್ನು ಪ್ರಕಟಿಸಿದಾಗ ಉಪನಾಯಕನನ್ನು ಹೆಸರಿಸಿಲ್ಲ. ಹೀಗಾಗಿಯೇ ಹಿಟ್​ಮ್ಯಾನ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಯಾರು ಮುನ್ನಡೆಸುತ್ತಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಸಿಗುವ ಉತ್ತರ, ಅದು ಟೀಮ್ ಇಂಡಿಯಾ ನಾಯಕನ ನಿರ್ಧಾರ. ಅಂದರೆ ರೋಹಿತ್ ಶರ್ಮಾ ಮೈದಾನದಿಂದ ಹೊರ ಹೋಗುವ ಮುನ್ನ ತಂಡವನ್ನು ಯಾರು ಮುನ್ನಡೆಸಬೇಕೆಂದು ನಿರ್ಧರಿಸಿ ಅವರಿಗೆ ಜವಾಬ್ದಾರಿವಹಿಸಲಿದ್ದಾರೆ.ಈ ಹಿಂದೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದ ವೇಳೆ ರೋಹಿತ್ ಶರ್ಮಾ ಕೆಲ ಕಾಲ ಮೈದಾನದಿಂದ ಹೊರಗಿದ್ದರು. ಈ ವೇಳೆ ತಂಡವನ್ನು ಚೇತೇಶ್ವರ ಪೂಜಾರ ಮುನ್ನಡೆಸಿದ್ದರು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದ ನಡುವೆ ರೋಹಿತ್ ಶರ್ಮಾ ಹೊರಗುಳಿದರೆ ಚೇತೇಶ್ವರ ಪೂಜಾರ ಅವರನ್ನು ಹಂಗಾಮಿ ನಾಯಕರನ್ನಾಗಿ ನೇಮಿಸಬಹುದು. ಏಕೆಂದರೆ ಪೂಜಾರ ಇಂಗ್ಲೆಂಡ್​ನ ಕೌಂಟಿ ಟೂರ್ನಿಯಲ್ಲಿ ಸಸೆಕ್ಸ್ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದ್ದಾರೆ. ಹಾಗೆಯೇ ಪ್ರಸ್ತುತ ತಂಡದಲ್ಲಿ ಅಜಿಂಕ್ಯ ರಹಾನೆ ಕೂಡ ಇದ್ದು, ಪೂಜಾರ ಅಥವಾ ರಹಾನೆ ಟೀಮ್ ಇಂಡಿಯಾದ ಹಂಗಾಮಿ ನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

source https://tv9kannada.com/photo-gallery/cricket-photos/wtc-final-2023-who-will-be-captain-if-rohit-sharma-misses-out-kannada-news-zp-595608.html

Tags: Cricket, samagrasuddi, WTC Final 2023, ಸಮಗ್ರ ಸುದ್ದಿ

Post navigation

WTC Final 2023: ಭಾರತಕ್ಕೆ ಸೋಲುಣಿಸಿ ಕಪ್ ಗೆಲ್ಲುತ್ತೇವೆ: ಸ್ಟೀವ್ ಸ್ಮಿತ್
WTC 2023 Final, IND vs AUS: ಇಂದಿನಿಂದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್: ಭಾರತ-ಆಸ್ಟ್ರೇಲಿಯಾ ನಡುವೆ ರೋಚಕ ಕಾದಾಟ

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
Health

ಪ್ರತಿನಿತ್ಯ ಈ 3 ಹಣ್ಣುಗಳ ಸೇವನೆಯಿಂದ ಮುಖದ ಸೊಕ್ಕು ಮಾಯ, ಚರ್ಮದ ಹೊಳಪು ಪಳ ಪಳ! | “Facial Wrinkles”

July 3, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ನೀರಜ್ ಚೋಪ್ರಾ ಪ್ರಧಾನದ ಆಕರ್ಷಣೆ: ಬೆಂಗ್ಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಎನ್ ಸಿ ಕ್ಲಾಸಿಕ್ ಸ್ಪರ್ಧೆ
  • 📝 ಎಸ್‌ಎಸ್‌ಎಲ್‌ಸಿ ಬ್ಲೂಪ್ರಿಂಟ್‌ನಲ್ಲಿ ಎಲ್ಲಾ ಮಾದರಿ ಅಂಕಗಳ ಪ್ರಶ್ನೆ
  • “WCL 2025”: ಯುವರಾಜ್ ಸಿಂಗ್ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕೆ; ಮೊದಲ ಎದುರಾಳಿ ಪಾಕಿಸ್ತಾನ.
  • ಭಾರತ – ಇಂಗ್ಲೆಂಡ್ 2ನೇ ಟೆಸ್ಟ್‌: ಆಕಾಶ್‌ – ಸಿರಾಜ್‌ ದಾಳಿಗೆ ಕುಸಿದ ಆಂಗ್ಲರು – ಇಬ್ಬರೂ ವೇಗಿಗಳು ಕಬಳಿಸಿದ ವಿಕೆಟ್ ಎಷ್ಟು?
  • ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress