Skip to content
  • Tuesday, July 8, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • WTC Final 2023: ‘ನಾವು ಮೊದಲ ದಿನವೇ ಸೋತೆವು’! ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ
Sports

WTC Final 2023: ‘ನಾವು ಮೊದಲ ದಿನವೇ ಸೋತೆವು’! ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ

June 12, 2023
samagrasuddi

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ. ಅತಿ ಹೆಚ್ಚು ಕ್ರಿಕೆಟ್ ನೋಡುವ ಜನಸಂಖ್ಯೆ. ಹೆಚ್ಚು ಸಂಭಾವನೆ, ನಿರೀಕ್ಷೆಗೂ ಮೀರಿದ ಸೌಲಭ್ಯ ಪಡೆಯುವ ಟೀಂ ಇಂಡಿಯಾಕ್ಕೆ ಕಳೆದ 10 ವರ್ಷಗಳಿಂದ ಒಂದೇ ಒಂದು ಐಸಿಸಿ ಪ್ರಶಸ್ತಿಯನ್ನು ಗೆಲ್ಲಲಾಗಿಲ್ಲ. ಡಬ್ಲ್ಯುಟಿಸಿ ಫೈನಲ್​ನಲ್ಲಿ ಆಸೀಸ್ ವಿರುದ್ಧ ಸೋತ ಭಾರತ ಮತ್ತೊಮ್ಮೆ ಖಾಲಿ ಕೈಯಲ್ಲಿ ತವರಿಗೆ ಮರಳುತ್ತಿದೆ. ಇದೀಗ ಟೀಂ ಇಂಡಿಯಾದ ಸೋಲಿನ ಬಗ್ಗೆ ಮಾತನಾಡಿರುವ ಬಿಸಿಸಿಐ ಅಧ್ಯಕ್ಷ ರೋಜರ್ ಭಿನ್ನಿ, ಸೋಲಿಗೆ ವಿಚಿತ್ರ ಕಾರಣ ನೀಡಿದ್ದಾರೆ.ಓವಲ್‌ನಲ್ಲಿ ನಡೆದ ಫೈನಲ್‌ನ ಕೊನೆಯ ದಿನವಾದ ಜೂನ್ 11 ಭಾನುವಾರದಂದು ಭಾರತ ತಂಡ ಕೇವಲ 234 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಆಸ್ಟ್ರೇಲಿಯಾ ನೀಡಿದ್ದ 444 ರನ್‌ಗಳ ಗುರಿಯ ಮುಂದೆ ಟೀಂ ಇಂಡಿಯಾ 209 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಈ ಸೋಲಿನ ನಂತರ ತಂಡದ ಸೋಲಿನ ಬಗ್ಗೆ ಮಾತನಾಡಿರುವ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಸ್ಟೀವ್ ಸ್ಮಿತ್ ಮತ್ತು ಟ್ರಾವಿಸ್ ಹೆಡ್ ನಡುವಿನ ಜೊತೆಯಾಟವೇ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ವರದಿ ಪ್ರಕಾರ, ಮೊದಲ ದಿನವೇ ಪಂದ್ಯ ಭಾರತದ ಕೈಯಿಂದ ಜಾರಿತು. ಸ್ಮಿತ್ ಮತ್ತು ಹೆಡ್ ದ್ವಿಶತಕದ ಜೊತೆಯಾಟ ಆಡಿಲ್ಲದಿದ್ದರೆ, ಪಂದ್ಯದಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿರುತ್ತಿದ್ದವು ಎಂದು ಬಿನ್ನಿ ಹೇಳಿದ್ದಾರೆ. ವಾಸ್ತವವಾಗಿ ಬಿನ್ನಿ ನೀಡಿರುವ ಹೇಳಿಕೆ ಅಸಂಬದ್ಧವಾಗಿದೆ ಎಂದೇ ಹೇಳಬಹುದು. ಏಕೆಂದರೆ ಆಸ್ಟ್ರೇಲಿಯಾ ಕೂಡ ಟೀಂ ಇಂಡಿಯಾದಂತೆಯೇ ತಮ್ಮ ಅಗ್ರ ಕ್ರಮಾಂಕದ ವಿಕೆಟ್ಗಳನ್ನು ಬೇಗನೆ ಕಳೆದುಕೊಂಡಿತು. ಆದರೆ ಮಧ್ಯಮ ಕ್ರಮಾಂಕ ಆಸೀಸ್ ತಂಡದ ಕೈ ಹಿಡಿಯಿತು. ಆದರೆ ಟೀಂ ಇಂಡಿಯಾದಲ್ಲಿ ಆ ಹೋರಾಟ ನೋಡಲಿಲ್ಲ. ಅದೇ ರೀತಿ, ಎರಡನೇ ಇನ್ನಿಂಗ್ಸ್‌ನಲ್ಲಿಯೂ ಆಸೀಸ್ ತಂಡದ ಬ್ಯಾಟ್ಸ್‌ಮನ್‌ಗಳ ನಡುವೆ ಪ್ರಮುಖ ಜೊತೆಯಾಟ ಕಂಡುಬಂತು. ಆದರೆ ಟೀಂ ಇಂಡಿಯಾ ಅಂತಹ ಜೊತೆಯಾವನ್ನು ನಡೆಸಲೇ ಇಲ್ಲ.ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 469 ರನ್ ಗಳಿಸಿದ್ದು, ಮೊದಲ ದಿನವೇ 327 ರನ್ ಕಲೆಹಾಕಿತು. ಇದರಲಿ ಬಹುಪಾಲು ಸ್ಮಿತ್ ಮತ್ತು ಟ್ರಾವಿಸ್ ಹೆಡ್ ನಡುವೆ ನಡೆದ 285 ರನ್​ಗಳ ಜೊತೆಯಾಟವೇ ಪ್ರಮುಖವಾಗಿತ್ತು.ಇನ್ನು ಭವಿಷ್ಯದ ಪಂದ್ಯಾವಳಿ ಬಗ್ಗೆ ಮಾತನಾಡಿದ ಬಿನ್ನಿ, ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಬಗ್ಗೆ ಗಮನಹರಿಸುವಂತೆ ಟೀಂ ಇಂಡಿಯಾವನ್ನು ಕೇಳಿಕೊಂಡಿದ್ದಾರೆ. ಭವಿಷ್ಯದಲ್ಲಿ ವಿಶ್ವಕಪ್​ನಂತಹ ದೊಡ್ಡ ಪಂದ್ಯಾವಳಿ ಇದೆ. ಆದ್ದರಿಂದ ನಾವು ಉತ್ಸಾಹ ಕಳೆದುಕೊಳ್ಳಬಾರದು. ತವರಿನಲ್ಲಿ ವಿಶ್ವಕಪ್ ಆಡುತ್ತಿರುವುದರಿಂದ ನಮ್ಮ ತಂಡ ಉತ್ತಮ ಪ್ರದರ್ಶನ ನೀಡಬೇಕು ಎಂದು ಬಿನ್ನಿ ಹೇಳಿದರು.

source https://tv9kannada.com/photo-gallery/cricket-photos/wtc-final-2023-bcci-president-roger-binny-on-indias-humiliating-defeat-in-wtc-final-psr-599377.html

Tags: Cricket, samagrasuddi, ಸಮಗ್ರ ಸುದ್ದಿ

Post navigation

KL Rahul: ಬಡ ವಿದ್ಯಾರ್ಥಿಯ ಶಿಕ್ಷಣಕ್ಕೆ ಬೆಳಕಾದ ಕನ್ನಡಿಗ ಕೆ.ಎಲ್. ರಾಹುಲ್ : ನೆರವಿನ ಸೇತುವೆಯಾದ ಹುಬ್ಬಳ್ಳಿಯ ಗೆಳೆಯರು
KL Rahul injury update: ಜೂ.13ರಿಂದ ಸಮರಾಭ್ಯಾಸ ಶುರು; ಟೀಂ ಇಂಡಿಯಾಕ್ಕೆ ರಾಹುಲ್ ಎಂಟ್ರಿ ಯಾವಾಗ?

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities Health

🫀 ಸಾಲುಸಾಲು ಹೃದಯಾಘಾತದ ಸಾವು: ಸರ್ಕಾರದಿಂದ 8 ಮಹತ್ವದ ನಿರ್ಧಾರಗಳು.

July 8, 2025
samagrasuddi

July 8 : ಇತ್ತೀಚೆಗೆ ರಾಜ್ಯದಲ್ಲಿ ಯೌವನದಲ್ಲಿಯೇ ಹೃದಯಾಘಾತದಿಂದ ಅಕಾಲಿಕ ಸಾವುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ತೀವ್ರ ಗಂಭೀರತೆ ಪ್ರದರ್ಶಿಸಿ 8 ಮಹತ್ವದ ಆರೋಗ್ಯ ಸಂಬಂಧಿತ ನಿರ್ಧಾರಗಳನ್ನು ಪ್ರಕಟಿಸಿದೆ. ಆರೋಗ್ಯ ಸಚಿವ ಡಾ. ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಈ ನಿರ್ಧಾರಗಳನ್ನು…

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi
Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi

You may Missed

Cities Health

🫀 ಸಾಲುಸಾಲು ಹೃದಯಾಘಾತದ ಸಾವು: ಸರ್ಕಾರದಿಂದ 8 ಮಹತ್ವದ ನಿರ್ಧಾರಗಳು.

July 8, 2025
samagrasuddi
Health

ಕ್ಷೇಮ-ಕುಶಲ: ನೇತ್ರರಕ್ಷಣೆಯ ಕಡೆಗೆ ನಿಮ್ಮ ನೋಟ ಇರಲಿ.

July 8, 2025
samagrasuddi
Health

Protein Rich Food: ಪ್ರೊಟೀನ್ ಆಹಾರಗಳೆಂದರೆ ಯಾವುವು ಗೊತ್ತೇ?

July 7, 2025
samagrasuddi
Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ಜು.10ರಂದು ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ “ಗುರು ಪೂರ್ಣಿಮಾ” ಆಚರಣೆ
  • ಜುಲೈ 13 ರಂದು ಚಿತ್ರದುರ್ಗದಲ್ಲಿ ಗಾಣಿಗರ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ವಾರ್ಷಿಕ ಮಹಾಸಭೆ
  • ಚಿತ್ರದುರ್ಗ ನಗರಸಭೆ ಉಪಾಧ್ಯಕ್ಷೆ ಜಿ.ಎಸ್. ಶ್ರೀದೇವಿ ರಾಜೀನಾಮೆ.
  • ಶಿವರಾಜ್ ತಗಂಡಗಿಯವರ ಘೋಷಣೆ: ಸುಳ್ಳು ಕಮಿಷನ್ ಆರೋಪ ಹಾಕಿದ ಗಾಣಿಗ ಸ್ವಾಮಿಗೆ ಕ್ರಿಮಿನಲ್ ಮೊಕದ್ದಮೆ.
  • 🛑 ಬುಧವಾರ ಭಾರತ್ ಬಂದ್ : 25 ಕೋಟಿಗೂ ಅಧಿಕ ಕಾರ್ಮಿಕರು ಸಜ್ಜು | ದೇಶವ್ಯಾಪಿ ಪ್ರತಿಭಟನೆಗೆ ಕರೆ 🛑
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress