Yash Dayal: ಕೋಮು ದ್ವೇಷ ಹರಡಿ, ಬಳಿಕ ಕ್ಷಮೆ ಕೇಳಿದ ಯಶ್ ದಯಾಳ್

ಗುಜರಾತ್ ಟೈಟಾನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದ ಫೋಟೋವೊಂದು ಇದೀಗ ವಿವಾದಕ್ಕೀಡಾಗಿದೆ.ಇತ್ತೀಚೆಗೆ ದೆಹಲಿಯಲ್ಲಿ ಸಾಹಿಲ್ ಖಾನ್ ಎಂಬಾತ 16 ವರ್ಷದ ಬಾಲಕಿ ಸಾಕ್ಷಿಯನ್ನು 20 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದ. ಈ ಕೊಲೆಗೆ ಸಂಬಂಧಿಸಿದಂತೆ ದ್ವೇಷ ಹರಡುವ ಫೋಟೋವೊಂದನ್ನು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಯಶ್ ದಯಾಳ್ ಹಂಚಿಕೊಂಡಿದ್ದರು.ಸಮಾಜದಲ್ಲಿ ಕೋಮು ದ್ವೇಷ ಬಿತ್ತುವಂತಹ ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಆಟಗಾರನ ವಿರುದ್ಧ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಯಶ್ ದಯಾಳ್ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯನ್ನು ಡಿಲೀಟ್ ಮಾಡಿದ್ದಾರೆ. ಇದೀಗ ಈ ಫೋಟೋಗೆ ಸಂಬಂಧಿಸಿದಂತೆ ಯಶ್ ದಯಾಳ್ ಕ್ಷಮೆಯಾಚಿಸಿದ್ದಾರೆ. ಗೆಳೆಯರೇ, ಈ ಸ್ಟೋರಿಗಾಗಿ ಕ್ಷಮಾಪಣೆ. ತಪ್ಪಾಗಿ ಈ ಪೋಸ್ಟ್ ಮಾಡಲಾಗಿದ್ದು, ದಯವಿಟ್ಟು ಯಾರು ಕೂಡ ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ಪ್ರತಿ ಸಮುದಾಯ ಮತ್ತು ಸಮಾಜದ ಬಗ್ಗೆ ನನಗೆ ಗೌರವವಿದೆ" ಎಂದು ದಯಾಳ್ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.ಅಂದಹಾಗೆ ಕಳೆದ ಸೀಸನ್​ನಿಂದ ಐಪಿಎಲ್ ಆಡುತ್ತಿರುವ ಯಶ್ ದಯಾಳ್ ಎಲ್ಲರಿಗೂ ಚಿರಪರಿಚಿತರಾಗಿದ್ದು ಈ ಬಾರಿಯ ಐಪಿಎಲ್​ ಮೂಲಕ ಎಂಬುದು ವಿಶೇಷ. ಅದು ಕೂಡ ರಿಂಕು ಸಿಂಗ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ನಿಂದ ಎಂಬುದು ಮತ್ತೊಂದು ವಿಶೇಷ.
ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 204 ರನ್ ಪೇರಿಸಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು.ಇತ್ತ 20ನೇ ಓವರ್​ನಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಉಮೇಶ್ ಯಾದವ್ ಸಿಂಗಲ್ ತೆಗೆದಿದ್ದರು. ಉಳಿದ 5 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿದ್ದರು.ಕೊನೆಯ ಓವರ್​ನಲ್ಲಿ 5 ಸಿಕ್ಸ್ ಹೊಡೆಸಿಕೊಂಡ ಬಳಿಕ ಖಿನ್ನತೆಗೆ ಒಳಗಾಗಿದ್ದ ಯಶ್ ದಯಾಳ್ 8 ಕೆ.ಜಿಗಳನ್ನು ಕಳೆದುಕೊಂಡು ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಒಂದು ಪಂದ್ಯದಲ್ಲಿ ಮಾತ್ರ ಅವರು ಕಣಕ್ಕಿಳಿದಿದ್ದರು. ಇದೀಗ ಕೋಮು ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳುವ ಮೂಲಕ ಯಶ್ ದಯಾಳ್ ಮತ್ತೆ ಸುದ್ದಿಯಾಗಿದ್ದಾರೆ.

source https://tv9kannada.com/photo-gallery/cricket-photos/yash-dayal-faces-wrath-for-spreading-hate-post-kannada-news-zp-594764.html

Leave a Reply

Your email address will not be published. Required fields are marked *