Skip to content
  • Sunday, July 6, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • WTC Final: ಟೀಮ್ ಇಂಡಿಯಾ ಬಳಗಕ್ಕೆ ಎಂಟ್ರಿ ಕೊಟ್ಟ ಯಶಸ್ವಿ ಜೈಸ್ವಾಲ್
Sports

WTC Final: ಟೀಮ್ ಇಂಡಿಯಾ ಬಳಗಕ್ಕೆ ಎಂಟ್ರಿ ಕೊಟ್ಟ ಯಶಸ್ವಿ ಜೈಸ್ವಾಲ್

May 28, 2023
samagrasuddi

WTC Final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಳಗಕ್ಕೆ ಯುವ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿದೆ. ಇಂಗ್ಲೆಂಡ್​ನ ಓವಲ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಈ ಹಿಂದೆ ರುತುರಾಜ್ ಗಾಯಕ್ವಾಡ್ ಅವರನ್ನು ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು.ಆದರೀಗ ರುತುರಾಜ್ ಗಾಯಕ್ವಾಡ್ ವೈಯುಕ್ತಿಕ ಕಾರಣಗಳಿಂದಾಗಿ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬದಲಿ ಮೀಸಲು ಆಟಗಾರನಾಗಿ ಯಶಸ್ವಿ ಜೈಸ್ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.ಜೂನ್ 7 ರಿಂದ ಶುರುವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಫೈನಲ್ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ಪ್ರಮುಖ ಆಟಗಾರರು ಇಂಗ್ಲೆಂಡ್​ಗೆ ಪ್ರಯಾಣಿಸಿದ್ದಾರೆ. ಇನ್ನು ಐಪಿಎಲ್​ ಫೈನಲ್ ಪಂದ್ಯದ ಬಳಿಕ ಇತರೆ ಆಟಗಾರರು ತೆರಳಲಿದ್ದಾರೆ.ಹಾಗೆಯೇ ಮೀಸಲು ಆಟಗಾರರಾಗಿ ಸೂರ್ಯಕುಮಾರ್ ಯಾದವ್ ಮುಖೇಶ್ ಕುಮಾರ್ ಹಾಗೂ ರುತುರಾಜ್ ಗಾಯಕ್ವಾಡ್ ತಂಡವನ್ನು ಸೇರಿಕೊಳ್ಳಬೇಕಿತ್ತು. ಆದರೀಗ ವೈಯುಕ್ತಿಕ ಕಾರಣಗಳಿಂದಾಗಿ ರುತುರಾಜ್ ಹಿಂದೆ ಸರಿದಿದ್ದಾರೆ.ಹೀಗಾಗಿ ಕೋಚ್ ರಾಹುಲ್ ದ್ರಾವಿಡ್ ಅವರು ಬದಲಿ ಆಟಗಾರನನ್ನು ಆಯ್ಕೆ ಮಾಡುವಂತೆ ಆಯ್ಕೆದಾರರಿಗೆ ಕರೆ ಮಾಡಿ ತಿಳಿಸಿದ್ದಾರೆ. ಅದರಂತೆ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅದೃಷ್ಟ ಖುಲಾಯಿಸಿದ್ದು, ಶೀಘ್ರದಲ್ಲೇ ಅವರು ಲಂಡನ್​ಗೆ ತೆರಳಲಿದ್ದಾರೆ ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಐಪಿಎಲ್ 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಮುಂಬೈ ಮೂಲದ ಯಶಸ್ವಿ ಜೈಸ್ವಾಲ್ 14 ಪಂದ್ಯಗಳಲ್ಲಿ 48.08 ಸರಾಸರಿಯಲ್ಲಿ 625 ರನ್ ಗಳಿಸಿ ಮಿಂಚಿದ್ದರು. ಹಾಗೆಯೇ ಕಳೆದ ಸೀಸನ್ ರಣಜಿ ಟ್ರೋಫಿಯಲ್ಲಿ ಜೈಸ್ವಾಲ್ 5 ಪಂದ್ಯಗಳಲ್ಲಿ 404 ರನ್ ಗಳಿಸಿ ಅಬ್ಬರಿಸಿದ್ದರು. ಹೀಗಾಗಿ ಎಡಗೈ ದಾಂಡಿಗನನ್ನು ಮೀಸಲು ಆಟಗಾರನಾಗಿ ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ.ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

source https://tv9kannada.com/photo-gallery/cricket-photos/wtc-final-yashasvi-jaiswal-replaces-ruturaj-gaikwad-in-team-india-kannada-news-zp-588863.html

Tags: Cricket, IFTTT, IPL, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

T20 Records: ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಬ್ಯಾಟರ್​ಗಳು ಯಾರು ಗೊತ್ತಾ?
IPL 2023: ಇಂದಿನ ಫೈನಲ್ ಪಂದ್ಯದಲ್ಲಿ ಸೃಷ್ಟಿಯಾಗಲ್ಲಿರುವ ಪ್ರಮುಖ 7 ದಾಖಲೆಗಳಿವು

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ನರೇನಹಾಳ್ ಗ್ರಾಮದಲ್ಲಿ ಭಾರತೀಯ ಯೋಗ ಶಿಕ್ಷಣ ಬಾಲಗೋಕುಲ ಕಾರ್ಯಕ್ರಮ:
  • “IND vs ENG”: ಗಿಲ್ ಶತಕ, ಸಿರಾಜ್- ಆಕಾಶ್ ಮಾರಕ ದಾಳಿ; ದಿನದಾಟದಂತ್ಯಕ್ಕೆ ಇಂಗ್ಲೆಂಡ್ 72/3
  • “Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?
  • “Horoscope Today 06 July”: ಇಂದು ಈ ರಾಶಿಯವರಿಗೆ ಪುಣ್ಯ ಕರ್ಮಗಳನ್ನು ಮಾಡಲು ಅನಿರೀಕ್ಷಿತ ಅವಕಾಶ.
  • ನೀರಜ್ ಚೋಪ್ರಾ ಪ್ರಧಾನದ ಆಕರ್ಷಣೆ: ಬೆಂಗ್ಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಎನ್ ಸಿ ಕ್ಲಾಸಿಕ್ ಸ್ಪರ್ಧೆ
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress